‘ದಿ ಕೇರಳ ಸ್ಟೋರಿ’ ವಿವಾದ: ರಿಲೀಸ್​ಗೂ ಮುನ್ನ ವರಸೆ ಬದಲಿಸಿದ ನಿರ್ದೇಶಕ ಸುದಿಪ್ತೋ ಸೇನ್

The Kerala Story Controversy: ಸಿನಿಮಾ ರಿಲೀಸ್​ಗೆ ಅಡ್ಡಿ ಉಂಟಾಗಬಹುದು ಎನ್ನುವ ಭಯ ಸುದಿಪ್ತೋ ಸೇನ್​ಗೆ ಕಾಡಿದೆ. ಹೀಗಾಗಿ, ಅವರು ವರಸೆ ಬದಲಿಸಿದ್ದಾರೆ.

‘ದಿ ಕೇರಳ ಸ್ಟೋರಿ’ ವಿವಾದ: ರಿಲೀಸ್​ಗೂ ಮುನ್ನ ವರಸೆ ಬದಲಿಸಿದ ನಿರ್ದೇಶಕ ಸುದಿಪ್ತೋ ಸೇನ್
ದಿ ಕೇರಳ ಸ್ಟೋರಿ ಪೋಸ್ಟರ್
Follow us
|

Updated on: May 04, 2023 | 7:24 AM

ಸಿನಿಮಾಗಳಿಗೆ ವಿವಾದ ಏನೂ ಹೊಸದಲ್ಲ. ಸಣ್ಣಸಣ್ಣ ವಿಚಾರಗಳನ್ನೇ ಇಟ್ಟುಕೊಂಡು ಕಾಂಟ್ರವರ್ಸಿ ಮಾಡಲಾಗುತ್ತದೆ. ಕಾಲ್ಪನಿಕ ಕಥೆ ಆಧರಿಸಿ ಬಂದ ಚಿತ್ರಗಳಲ್ಲೂ ತಪ್ಪನ್ನು ಹುಡುಕಲಾಗುತ್ತದೆ. ಹೀಗಿರುವಾಗ ವಿವಾದಾತ್ಮಕ ವಿಚಾರವನ್ನೇ ಇಟ್ಟುಕೊಂಡು ಸಿನಿಮಾ ಮಾಡಿದರೆ ಕೇಳಬೇಕೆ? ‘ದಿ ಕೇರಳ ಸ್ಟೋರಿ’ ಸಿನಿಮಾ (The Kerala Story) ಈಗ ಅಂಥದ್ದೇ ಸಮಸ್ಯೆ ಎದುರಿಸುತ್ತಿದೆ. ಇದು ಸತ್ಯ ಘಟನೆ ಆಧಾರಿತ ಚಿತ್ರ ಎಂದು ತಂಡ ಹೇಳಿಕೊಂಡಿತ್ತು. ಅಷ್ಟೇ ಅಲ್ಲ, ಕೇರಳದಿಂದ 32 ಸಾವಿರ ಮಹಿಳೆಯರು ಐಸಿಸ್ ಸೇರಿದ್ದಾರೆ ಎಂದು ವಾದಿಸಿತ್ತು. ಆದರೆ ನಿರ್ದೇಶಕ ಸುದಿಪ್ತೋ ಸೇನ್ (Sudipto Sen)  ಈಗ ವರಸೆ ಬದಲಿಸಿದ್ದಾರೆ.

‘ದಿ ಕೇರಳ ಸ್ಟೋರಿ’ಯಲ್ಲಿ ಹೇಳುತ್ತಿರುವುದು ತುಂಬಾನೇ ಸೂಕ್ಷ್ಮ ವಿಚಾರ. ಕೇರಳದಲ್ಲಿ ಕಾಣೆಯಾದ ಕೆಲ ಮಹಿಳೆಯರು ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡು ಐಸಿಸ್ ಸೇರಿದ್ದಾರೆ ಎಂಬುದು ಅನೇಕರ ಆರೋಪ. ಇದೇ ವಿಚಾರ ಇಟ್ಟುಕೊಂಡು ಸುದಿಪ್ತೋ ಸೇನ್ ಸಿನಿಮಾ ಮಾಡಿದ್ದಾರೆ. ಈ ರೀತಿ ಐಸಿಸ್​ ಸೇರಿದವರ ಸಂಖ್ಯೆ 32 ಸಾವಿರ ಇದೆ ಎಂದು ಹೇಳಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.

ಈ ವಿಚಾರದಲ್ಲಿ ಸ್ವತಃ ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ ನೀಡಿದ್ದರು. ಕೇರಳದ ಹೆಸರು ಕೆಡಿಸಲು ಮಾಡಿದ ಸಿನಿಮಾ ಎಂದು ಅಸಮಾಧಾನ ಹೊರಹಾಕಿದ್ದರು. ಇದಲ್ಲದೆ, ಕೇರಳದ ಅನೇಕ ನಾಯಕರು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಈ ಚಿತ್ರಕ್ಕೆ ತಡೆನೀಡಬೇಕು ಎಂದು ಕೋರಿ ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ಕೂಡ ಸಲ್ಲಿಕೆ ಆಯಿತು. ಸಿನಿಮಾ ರಿಲೀಸ್​ಗೆ ಅಡ್ಡಿ ಉಂಟಾಗಬಹುದು ಎನ್ನುವ ಭಯ ಸುದಿಪ್ತೋ ಸೇನ್​ಗೆ ಕಾಡಿದೆ. ಹೀಗಾಗಿ, ಅವರು ವರಸೆ ಬದಲಿಸಿದ್ದಾರೆ.

ಬುಕ್ ಮೈ ಶೋ ಮೊದಲಾದ ಕಡೆಗಳಲ್ಲಿ ಸಿನಿಮಾದ ಕಥೆ ಏನು ಎಂಬುದನ್ನು ಒಂದೆಳೆಯಲ್ಲಿ ವಿವರಿಸುವಾಗ, ‘ಕೇರಳದ 32 ಸಾವಿರ ಮಹಿಳೆಯರು ಐಸಿಸ್ ಸೇರಿದ ಕಥೆ’ ಎಂದು ಬರೆಯಲಾಗಿತ್ತು. ಆದರೆ, ಈಗ 32 ಸಾವಿರದ ಬದಲಿಗೆ ಮೂರು ಎಂದು ಬರೆಯಲಾಗಿದೆ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಸತ್ಯ ಹೇಳುತ್ತಿದ್ದೀರಿ ಎಂದ ಮೇಲೆ ಭಯ ಏಕೆ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ:   ‘ಮೊದಲು ಸಿನಿಮಾ ನೋಡಿ, ಆಮೇಲೆ ಮಾತಾಡಿ’: ‘ದಿ ಕೇರಳ ಸ್ಟೋರಿ’ ವಿವಾದಕ್ಕೆ ಅದಾ ಶರ್ಮಾ ಪ್ರತಿಕ್ರಿಯೆ

ಸುದಿಪ್ತೋ ಸೇನ್ ನಿರ್ದೇಶನದ ಈ ಚಿತ್ರದಲ್ಲಿ ಅದಾ ಶರ್ಮಾ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕಾಶ್ಮೀರಿ ಪಂಡಿತರ ವಲಸೆ ಹಾಗೂ ಹತ್ಯೆ ಆಧರಿಸಿ ಸಿದ್ಧಗೊಂಡ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್​’ ಗೆದ್ದಿತ್ತು. ಈಗ ‘ದಿ ಕೇರಳ ಸ್ಟೋರಿ’ ಕೂಡ ಗೆಲ್ಲಲಿದೆಯೇ ಎನ್ನುವ ಪ್ರಶ್ನೆ ಅನೇಕರನ್ನು ಕಾಡಿದೆ. ಮೇ 5ರಂದು ಸಿನಿಮಾ ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ