Sudipto Sen: ‘ದಿ ಕೇರಳ ಸ್ಟೋರಿ​ 2’ ಮಾಡಲು ನಿರ್ದೇಶಕರಿಗೆ ಆಫರ್​; ಇದರಲ್ಲಿ ತೋರಿಸಲಿರುವ ವಿಷಯ ಏನು?

The Kerala Story 2: ‘ದಿ ಕೇರಳ ಸ್ಟೋರಿ’ ಸಿನಿಮಾಗೆ ನಿರ್ದೇಶನ ಮಾಡಿದ ಬಳಿಕ ಸುದೀಪ್ತೋ ಸೇನ್​ ಅವರ ಜನಪ್ರಿಯತೆ ಹೆಚ್ಚಾಗಿದೆ. ಇತ್ತೀಚೆಗೆ ಅವರು ಚಲಿಸುತ್ತಿದ್ದ ವಾಹನ ಅಪಘಾತಕ್ಕೆ ಒಳಗಾದ ಬಗ್ಗೆ ವರದಿ ಆಗಿತ್ತು.

Sudipto Sen: ‘ದಿ ಕೇರಳ ಸ್ಟೋರಿ​ 2’ ಮಾಡಲು ನಿರ್ದೇಶಕರಿಗೆ ಆಫರ್​; ಇದರಲ್ಲಿ ತೋರಿಸಲಿರುವ ವಿಷಯ ಏನು?
ದಿ ಕೇರಳ ಸ್ಟೋರಿ ಸಿನಿಮಾ ಪೋಸ್ಟರ್, ಸುದೀಪ್ತೋ ಸೇನ್
Follow us
|

Updated on: May 15, 2023 | 7:27 PM

ದೇಶಾದ್ಯಂತ ಚರ್ಚೆ ಹುಟ್ಟುಹಾಕಿರುವ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ನೂರಾರು ಕೋಟಿ ರೂಪಾಯಿ ಗಳಿಸಿ ಮುನ್ನುತ್ತಿದೆ. ಚಿತ್ರಮಂದಿರಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಅಷ್ಟರಲ್ಲಾಗಲೇ ಈ ಸಿನಿಮಾದ ಸೀಕ್ವೆಲ್​ ಬಗ್ಗೆ ಸುದ್ದಿ ಕೇಳಿಬಂದಿದೆ. ಅದಾ ಶರ್ಮಾ (Adah Sharma) ನಟನೆಯ ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಕೇವಲ ಮಹಿಳೆಯರ ಬ್ರೇನ್​ವಾಶ್​ ಬಗ್ಗೆ ತೋರಿಸಲಾಗಿದೆ. ಆದರೆ ಹುಡುಗರ ಬ್ರೇನ್​ವಾಶ್​​ ಬಗ್ಗೆ ಯಾಕೆ ತೋರಿಸಿಲ್ಲ ಎಂದು ಅನೇಕರು ಪ್ರಶ್ನೆ ಎತ್ತಿದ್ದಾರೆ. ನಿರ್ದೇಶಕ ಸುದೀಪ್ತೋ ಸೇನ್​ (Sudipto Sen) ಅವರನ್ನು ಈ ಕುರಿತು ಕೆಲವರು ಪ್ರಶ್ನಿಸಿದ್ದಾರಂತೆ. ಹುಡುಗರನ್ನು ಬ್ರೇನ್​ವಾಶ್​ ಮಾಡಿದ್ದರ ಕುರಿತು ಸೀಕ್ವೆಲ್​ ಮಾಡುವಂತೆ ಅವರಿಗೆ ಆಫರ್​ ನೀಡಲಾಗಿದೆ. ಹಾಗಾಗಿ ‘ದಿ ಕೇರಳ ಸ್ಟೋರಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

‘ದಿ ಕೇರಳ ಸ್ಟೋರಿ’ ಸಿನಿಮಾಗೆ ನಿರ್ದೇಶನ ಮಾಡಿದ ಬಳಿಕ ಸುದೀಪ್ತೋ ಸೇನ್​ ಅವರ ಜನಪ್ರಿಯತೆ ಹೆಚ್ಚಾಗಿದೆ. ಇತ್ತೀಚೆಗೆ ಅವರು ಚಲಿಸುತ್ತಿದ್ದ ವಾಹನ ಅಪಘಾತಕ್ಕೆ ಒಳಗಾದ ಬಗ್ಗೆ ವರದಿ ಆಗಿತ್ತು. ಆ ಸುದ್ದಿ ಕೇಳಿ ಅಭಿಮಾನಿಗಳಿಗೆ ಶಾಕ್​ ಆಯಿತು. ಆದರೆ ನಟಿ ಅದಾ ಶರ್ಮಾ ಮತ್ತು ನಿರ್ದೇಶಕ ಸುದೀಪ್ತೋ ಸೇನ್​ ಅವರಿಗೆ ಯಾವುದೇ ಗಂಭೀರ ಗಾಯ ಆಗಿಲ್ಲ ಎಂದು ತಿಳಿದುಬಂದಿದೆ.

ಇದನ್ನು ಓದಿ: The Kerala Story: ‘ದಿ ಕೇರಳ ಸ್ಟೋರಿ’ ಕಲೆಕ್ಷನ್​ನಲ್ಲಿ ದಿಢೀರ್​ ಏರಿಕೆ; 113 ಕೋಟಿ ರೂಪಾಯಿ ತಲುಪಿದ ಒಟ್ಟು ಗಳಿಕೆ

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
Image
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Image
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
Image
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

‘ದಿ ಕೇರಳ ಸ್ಟೋರಿ’ ಚಿತ್ರದ ಬಗ್ಗೆ ಕೊಲ್ಲೂರಿನಲ್ಲಿ ಪ್ರಚಾರ

ಅನೇಕ ಕಾರಣಗಳಿಂದಾಗಿ ‘ದಿ ಕೇರಳ ಸ್ಟೋರಿ’ ಸಿನಿಮಾ ವಿವಾದ ಸೃಷ್ಟಿ ಮಾಡಿದೆ. ಹಿಂದೂಪರ ಸಂಘಟನೆಗಳು ಈ ಚಿತ್ರಕ್ಕೆ ಬೆಂಬಲ ಸೂಚಿಸಿವೆ. ಆದರೆ ಇದೊಂದು ಪ್ರೊಪೊಗಾಂಡ ಸಿನಿಮಾ ಎಂದು ಅನೇಕರು ಟೀಕಿಸಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಗಳಿಸಿದೆ. ‘ದಿ ಕೇರಳ ಸ್ಟೋರಿ’ ಚಿತ್ರದ ಬಗ್ಗೆ ಕೊಲ್ಲೂರಿನಲ್ಲಿ ಪ್ರಚಾರ ಮಾಡಲಾಗುತ್ತಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆವರಣದಲ್ಲಿ ಈ ಚಿತ್ರಕ್ಕೆ ಸಂಬಂಧಿಸಿದ ಬ್ಯಾನರ್​ ಇರಿಸಲಾಗಿದೆ. ಇಂಗ್ಲಿಷ್​ ಮತ್ತು ಮಲಯಾಳಂ ಭಾಷೆಯಲ್ಲಿ ಬರೆದಿರುವ ಬ್ಯಾನರ್​ಗಳನ್ನು ಇರಿಸಲಾಗಿದ್ದು, ಕೊಲ್ಲೂರಿಗೆ ಬರುವ ಪ್ರವಾಸಿಗರ ಗಮನ ಸೆಳೆಯಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲೂ ಈ ಬ್ಯಾನರ್​ಗಳು ವೈರಲ್​ ಆಗಿವೆ.

ಇದನ್ನು ಓದಿ: The Kerala Story: ವಿದೇಶದಲ್ಲೂ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ; ಆಸ್ಟ್ರೇಲಿಯಾದಲ್ಲಿ ಭರ್ಜರಿ ಓಪನಿಂಗ್​

‘ದಿ ಕೇರಳ ಸ್ಟೋರಿ’ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಬಂಗಾರದ ಬೆಳೆ ತೆಗೆದಿದೆ. ಈ ಸಿನಿಮಾದ ಬಾಕ್ಸ್​ ಆಫೀಸ್​ ಬೇಟೆ ಮುಂದುವರಿದಿದೆ. ಸತತ 11 ದಿನಗಳ ಕಾಲ ಈ ಚಿತ್ರ ಯಶಸ್ವಿ ಪ್ರದರ್ಶನ ಕಂಡಿದೆ. ಇಂದಿಗೂ ಕೂಡ ಹಲವು ಕಡೆಗಳಲ್ಲಿ ಹೌಸ್​ಫುಲ್​ ಆಗುತ್ತಿದೆ. ಅದರ ಪರಿಣಾಮವಾಗಿ ಚಿತ್ರಕ್ಕೆ ಉತ್ತಮ ಕಮಾಯಿ ಆಗಿದೆ. ಅಚ್ಚರಿ ಎಂದರೆ 2ನೇ ಭಾನುವಾರ ಈ ಸಿನಿಮಾಗೆ ಅತಿ ಹೆಚ್ಚು ಹಣ ಹರಿದುಬಂದಿದೆ. ಮೇ 14ರಂದು ಬರೋಬ್ಬರಿ 23 ಕೋಟಿ ರೂಪಾಯಿ ಗಳಿಸಿದೆ. ಅಲ್ಲಿಗೆ ಚಿತ್ರದ ಒಟ್ಟು ಕಲೆಕ್ಷನ್​ 136.74 ಕೋಟಿ ರೂಪಾಯಿ ತಲುಪಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.