AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sudipto Sen: ‘ದಿ ಕೇರಳ ಸ್ಟೋರಿ​ 2’ ಮಾಡಲು ನಿರ್ದೇಶಕರಿಗೆ ಆಫರ್​; ಇದರಲ್ಲಿ ತೋರಿಸಲಿರುವ ವಿಷಯ ಏನು?

The Kerala Story 2: ‘ದಿ ಕೇರಳ ಸ್ಟೋರಿ’ ಸಿನಿಮಾಗೆ ನಿರ್ದೇಶನ ಮಾಡಿದ ಬಳಿಕ ಸುದೀಪ್ತೋ ಸೇನ್​ ಅವರ ಜನಪ್ರಿಯತೆ ಹೆಚ್ಚಾಗಿದೆ. ಇತ್ತೀಚೆಗೆ ಅವರು ಚಲಿಸುತ್ತಿದ್ದ ವಾಹನ ಅಪಘಾತಕ್ಕೆ ಒಳಗಾದ ಬಗ್ಗೆ ವರದಿ ಆಗಿತ್ತು.

Sudipto Sen: ‘ದಿ ಕೇರಳ ಸ್ಟೋರಿ​ 2’ ಮಾಡಲು ನಿರ್ದೇಶಕರಿಗೆ ಆಫರ್​; ಇದರಲ್ಲಿ ತೋರಿಸಲಿರುವ ವಿಷಯ ಏನು?
ದಿ ಕೇರಳ ಸ್ಟೋರಿ ಸಿನಿಮಾ ಪೋಸ್ಟರ್, ಸುದೀಪ್ತೋ ಸೇನ್
ಮದನ್​ ಕುಮಾರ್​
|

Updated on: May 15, 2023 | 7:27 PM

Share

ದೇಶಾದ್ಯಂತ ಚರ್ಚೆ ಹುಟ್ಟುಹಾಕಿರುವ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ನೂರಾರು ಕೋಟಿ ರೂಪಾಯಿ ಗಳಿಸಿ ಮುನ್ನುತ್ತಿದೆ. ಚಿತ್ರಮಂದಿರಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಅಷ್ಟರಲ್ಲಾಗಲೇ ಈ ಸಿನಿಮಾದ ಸೀಕ್ವೆಲ್​ ಬಗ್ಗೆ ಸುದ್ದಿ ಕೇಳಿಬಂದಿದೆ. ಅದಾ ಶರ್ಮಾ (Adah Sharma) ನಟನೆಯ ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಕೇವಲ ಮಹಿಳೆಯರ ಬ್ರೇನ್​ವಾಶ್​ ಬಗ್ಗೆ ತೋರಿಸಲಾಗಿದೆ. ಆದರೆ ಹುಡುಗರ ಬ್ರೇನ್​ವಾಶ್​​ ಬಗ್ಗೆ ಯಾಕೆ ತೋರಿಸಿಲ್ಲ ಎಂದು ಅನೇಕರು ಪ್ರಶ್ನೆ ಎತ್ತಿದ್ದಾರೆ. ನಿರ್ದೇಶಕ ಸುದೀಪ್ತೋ ಸೇನ್​ (Sudipto Sen) ಅವರನ್ನು ಈ ಕುರಿತು ಕೆಲವರು ಪ್ರಶ್ನಿಸಿದ್ದಾರಂತೆ. ಹುಡುಗರನ್ನು ಬ್ರೇನ್​ವಾಶ್​ ಮಾಡಿದ್ದರ ಕುರಿತು ಸೀಕ್ವೆಲ್​ ಮಾಡುವಂತೆ ಅವರಿಗೆ ಆಫರ್​ ನೀಡಲಾಗಿದೆ. ಹಾಗಾಗಿ ‘ದಿ ಕೇರಳ ಸ್ಟೋರಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

‘ದಿ ಕೇರಳ ಸ್ಟೋರಿ’ ಸಿನಿಮಾಗೆ ನಿರ್ದೇಶನ ಮಾಡಿದ ಬಳಿಕ ಸುದೀಪ್ತೋ ಸೇನ್​ ಅವರ ಜನಪ್ರಿಯತೆ ಹೆಚ್ಚಾಗಿದೆ. ಇತ್ತೀಚೆಗೆ ಅವರು ಚಲಿಸುತ್ತಿದ್ದ ವಾಹನ ಅಪಘಾತಕ್ಕೆ ಒಳಗಾದ ಬಗ್ಗೆ ವರದಿ ಆಗಿತ್ತು. ಆ ಸುದ್ದಿ ಕೇಳಿ ಅಭಿಮಾನಿಗಳಿಗೆ ಶಾಕ್​ ಆಯಿತು. ಆದರೆ ನಟಿ ಅದಾ ಶರ್ಮಾ ಮತ್ತು ನಿರ್ದೇಶಕ ಸುದೀಪ್ತೋ ಸೇನ್​ ಅವರಿಗೆ ಯಾವುದೇ ಗಂಭೀರ ಗಾಯ ಆಗಿಲ್ಲ ಎಂದು ತಿಳಿದುಬಂದಿದೆ.

ಇದನ್ನು ಓದಿ: The Kerala Story: ‘ದಿ ಕೇರಳ ಸ್ಟೋರಿ’ ಕಲೆಕ್ಷನ್​ನಲ್ಲಿ ದಿಢೀರ್​ ಏರಿಕೆ; 113 ಕೋಟಿ ರೂಪಾಯಿ ತಲುಪಿದ ಒಟ್ಟು ಗಳಿಕೆ

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
Image
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Image
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
Image
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

‘ದಿ ಕೇರಳ ಸ್ಟೋರಿ’ ಚಿತ್ರದ ಬಗ್ಗೆ ಕೊಲ್ಲೂರಿನಲ್ಲಿ ಪ್ರಚಾರ

ಅನೇಕ ಕಾರಣಗಳಿಂದಾಗಿ ‘ದಿ ಕೇರಳ ಸ್ಟೋರಿ’ ಸಿನಿಮಾ ವಿವಾದ ಸೃಷ್ಟಿ ಮಾಡಿದೆ. ಹಿಂದೂಪರ ಸಂಘಟನೆಗಳು ಈ ಚಿತ್ರಕ್ಕೆ ಬೆಂಬಲ ಸೂಚಿಸಿವೆ. ಆದರೆ ಇದೊಂದು ಪ್ರೊಪೊಗಾಂಡ ಸಿನಿಮಾ ಎಂದು ಅನೇಕರು ಟೀಕಿಸಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಗಳಿಸಿದೆ. ‘ದಿ ಕೇರಳ ಸ್ಟೋರಿ’ ಚಿತ್ರದ ಬಗ್ಗೆ ಕೊಲ್ಲೂರಿನಲ್ಲಿ ಪ್ರಚಾರ ಮಾಡಲಾಗುತ್ತಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆವರಣದಲ್ಲಿ ಈ ಚಿತ್ರಕ್ಕೆ ಸಂಬಂಧಿಸಿದ ಬ್ಯಾನರ್​ ಇರಿಸಲಾಗಿದೆ. ಇಂಗ್ಲಿಷ್​ ಮತ್ತು ಮಲಯಾಳಂ ಭಾಷೆಯಲ್ಲಿ ಬರೆದಿರುವ ಬ್ಯಾನರ್​ಗಳನ್ನು ಇರಿಸಲಾಗಿದ್ದು, ಕೊಲ್ಲೂರಿಗೆ ಬರುವ ಪ್ರವಾಸಿಗರ ಗಮನ ಸೆಳೆಯಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲೂ ಈ ಬ್ಯಾನರ್​ಗಳು ವೈರಲ್​ ಆಗಿವೆ.

ಇದನ್ನು ಓದಿ: The Kerala Story: ವಿದೇಶದಲ್ಲೂ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ; ಆಸ್ಟ್ರೇಲಿಯಾದಲ್ಲಿ ಭರ್ಜರಿ ಓಪನಿಂಗ್​

‘ದಿ ಕೇರಳ ಸ್ಟೋರಿ’ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಬಂಗಾರದ ಬೆಳೆ ತೆಗೆದಿದೆ. ಈ ಸಿನಿಮಾದ ಬಾಕ್ಸ್​ ಆಫೀಸ್​ ಬೇಟೆ ಮುಂದುವರಿದಿದೆ. ಸತತ 11 ದಿನಗಳ ಕಾಲ ಈ ಚಿತ್ರ ಯಶಸ್ವಿ ಪ್ರದರ್ಶನ ಕಂಡಿದೆ. ಇಂದಿಗೂ ಕೂಡ ಹಲವು ಕಡೆಗಳಲ್ಲಿ ಹೌಸ್​ಫುಲ್​ ಆಗುತ್ತಿದೆ. ಅದರ ಪರಿಣಾಮವಾಗಿ ಚಿತ್ರಕ್ಕೆ ಉತ್ತಮ ಕಮಾಯಿ ಆಗಿದೆ. ಅಚ್ಚರಿ ಎಂದರೆ 2ನೇ ಭಾನುವಾರ ಈ ಸಿನಿಮಾಗೆ ಅತಿ ಹೆಚ್ಚು ಹಣ ಹರಿದುಬಂದಿದೆ. ಮೇ 14ರಂದು ಬರೋಬ್ಬರಿ 23 ಕೋಟಿ ರೂಪಾಯಿ ಗಳಿಸಿದೆ. ಅಲ್ಲಿಗೆ ಚಿತ್ರದ ಒಟ್ಟು ಕಲೆಕ್ಷನ್​ 136.74 ಕೋಟಿ ರೂಪಾಯಿ ತಲುಪಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ