AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕೇರಳ ಸ್ಟೋರಿ 2’ ಚಿತ್ರದಲ್ಲಿ ಲೈಂಗಿಕ ಹಗರಣದ ಕಥೆ ಇರುತ್ತಾ? ಸ್ಪಷ್ಟನೆ ನೀಡಿದ ನಿರ್ದೇಶಕ

ನೈಜ ಘಟನೆಯನ್ನು ಆಧಾರವಾಗಿ ಇಟ್ಟುಕೊಂಡು ಸಿನಿಮಾ ಮಾಡುವ ನಿರ್ದೇಶಕ ಸುದೀಪ್ತೋ ಸೇನ್​ ಅವರು ಈಗ ‘ದಿ ಕೇರಳ ಸ್ಟೋರಿ 2’ ಚಿತ್ರಕ್ಕೆ ತಯಾರಿ ನಡೆಸಿದ್ದಾರೆ. ಸ್ಕ್ರಿಪ್ಟ್​ ಕೆಲಸ ಶುರುವಾಗಿದೆ. ಈ ಸಿನಿಮಾದ ಕಥಾವಸ್ತು ಏನು ಎಂಬ ಬಗ್ಗೆ ಪ್ರೇಕ್ಷಕರಿಗೆ ಕುತೂಹಲ ಇದೆ. ಕೆಲವರು ಈ ಕುರಿತು ಗಾಸಿಪ್​ ಹರಡಿಸಿದ್ದಾರೆ. ಆದರೆ ಈ ಬಗ್ಗೆ ನಿರ್ದೇಶಕರಿಂದಲೇ ಸ್ಪಷ್ಟನೆ ಸಿಕ್ಕಿದೆ.

‘ದಿ ಕೇರಳ ಸ್ಟೋರಿ 2’ ಚಿತ್ರದಲ್ಲಿ ಲೈಂಗಿಕ ಹಗರಣದ ಕಥೆ ಇರುತ್ತಾ? ಸ್ಪಷ್ಟನೆ ನೀಡಿದ ನಿರ್ದೇಶಕ
ದಿ ಕೇರಳ ಸ್ಟೋರಿ
ಮದನ್​ ಕುಮಾರ್​
|

Updated on: Sep 25, 2024 | 5:21 PM

Share

ನಿರ್ದೇಶಕ ಸುದೀಪ್ತೋ ಸೇನ್​ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾ ಮೂಲಕ ಭಾರಿ ಖ್ಯಾತಿ ಪಡೆದುಕೊಂಡರು. ಬಾಕ್ಸ್​ ಆಫೀಸ್​ನಲ್ಲಿ ಆ ಸಿನಿಮಾ 240 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿತ್ತು. ಈಗ ಆ ಸಿನಿಮಾಗೆ ಸೀಕ್ವೆಲ್​ ಸಿದ್ಧವಾಗುತ್ತಿದೆ. ಹಾಗಾದರೆ, ‘ದಿ ಕೇರಳ ಸ್ಟೋರಿ 2’ ಸಿನಿಮಾದಲ್ಲಿ ಯಾವ ಕಹಾನಿ ಇರಲಿದೆ ಎಂಬ ಕೌತುಕ ಪ್ರೇಕ್ಷಕರ ಮನದಲ್ಲಿ ಮೂಡಿದೆ. ಅದಕ್ಕೆ ತಕ್ಕಂತೆ ಕೆಲವು ಗಾಸಿಪ್​ಗಳು ಕೂಡ ಹರಿದಾಡಲು ಆರಂಭಿಸಿವೆ. ಆ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಸುದೀಪ್ತೋ ಸೇನ್​ ಅವರು ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ ಮಲಯಾಳಂ ಚಿತ್ರರಂಗದ ಲೈಂಗಿಕ ಹಗರಣಗಳು ಬೆಳಕಿಗೆ ಬಂದವು. ಅದಕ್ಕೆಲ್ಲ ಕಾರಣ ಆಗಿದ್ದು ‘ಹೇಮಾ ಕಮಿಟಿ’ ನೀಡಿದ ವರದಿ. ಮಾಲಿವುಡ್​ನಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬುದನ್ನು ಈ ಸಮಿತಿಯ ವರದಿ ಒತ್ತಿ ಹೇಳಿದೆ. ಅದರಲ್ಲಿನ ವಿವರಗಳನ್ನೇ ಇಟ್ಟುಕೊಂಡು ನಿರ್ದೇಶಕ ಸುದೀಪ್ತೋ ಸೇನ್ ಅವರು ‘ದಿ ಕೇರಳ ಸ್ಟೋರಿ 2’ ಸಿನಿಮಾವನ್ನು ಮಾಡುತ್ತಾರೆ ಎಂಬ ಗಾಸಿಪ್​ ಹಬ್ಬಿದೆ. ಆದರೆ ಅದನ್ನು ಅವರು ತಳ್ಳಿಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಸುದೀಪ್ತೋ ಸೇನ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಇಂಥ ಸುದ್ದಿ ಎಲ್ಲಿಂದ ಹಬ್ಬಿದೆಯೋ ನನಗೆ ಗೊತ್ತಿಲ್ಲ. ಅದು ನಿಜವಲ್ಲ. ಸುದ್ದಿಗಳನ್ನು ನೋಡಿದ ಬಳಿಕ ನನಗೆ ಮತ್ತು ನಿರ್ಮಾಪಕ ವಿಪುಲ್​ ಅವರಿಗೆ ನಗು ಬಂತು. ಸಿನಿಮಾಗೆ ಸೀಕ್ವೆಲ್​ ಬರುವುದು ನಿಜ. ಈಗಾಗಲೇ ಸ್ಕ್ರಿಪ್ಟ್​ ಕೆಲಸ ನಡೆಯುತ್ತಿದೆ. ಆದರೆ ಹೇಮಾ ಸಮಿತಿಯ ವರದಿಗೂ ನಮ್ಮ ಸಿನಿಮಾಗೂ ಯಾವುದೇ ಸಂಬಂಧ ಇಲ್ಲ’ ಎಂದು ಸುದೀಪ್ತೋ ಸೇನ್​ ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊನೆಗೆ ಬಂದು ಮೀಟೂ ಅಂದವರ ಮೇಲೆ ಮೊದಲು ಕೇಸ್ ಹಾಕಬೇಕು: ಕೆ. ಮಂಜು

ಚಿತ್ರರಂಗದಲ್ಲಿ ಕಾಸ್ಟಿಂಗ್​ ಕೌಚ್​ ಇದೆ ಎಂಬುದು ಅನೇಕರ ದೂರು. ಇಂಥ ಪಿಡುಗಿನಿಂದ ಮಹಿಳೆಯರಿಗೆ ತೊಂದರೆ ಆಗುತ್ತಿದೆ. ಲೈಂಗಿಕ ಕಿರುಕುಳ ಅನುಭವಿಸಿದ ಅನೇಕ ಮಹಿಳೆಯರು ಈಗಾಗಲೇ ಮೀಟೂ ಅಭಿಯಾನದಲ್ಲಿ ಕಹಿ ಸತ್ಯಗಳನ್ನು ಬಯಲಿಗೆ ಎಳೆದಿದ್ದಾರೆ. ಬೇರೆ ಬೇರೆ ಭಾಷೆಯ ಚಿತ್ರರಂಗಗಳಲ್ಲೂ ವಿಶೇಷ ಕಮಿಟಿ ಮೂಲಕ ತನಿಖೆ ಆಗಬೇಕು ಎಂಬ ಒತ್ತಾಯ ಕೇಳಿಬಂದಿದೆ. ಮಲಯಾಳಂ ಚಿತ್ರರಂಗದ ಅನೇಕರ ಹೆಸರಿಗೆ ಕಪ್ಪು ಚುಕ್ಕಿ ಅಂಟಿದೆ. ಆದರೆ ಆ ವಿಷಯವನ್ನು ಇಟ್ಟುಕೊಂಡು ಸುದೀಪ್ತೋ ಸೇನ್ ಅವರು ಸಿನಿಮಾ ಮಾಡುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ