AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suhana Khan: ಹಣೆಗೆ ಬಿಂದಿ ಇಟ್ಟುಕೊಂಡು ಪೋಸ್​ ನೀಡಿದ ಶಾರುಖ್​ ಖಾನ್​ ಪುತ್ರಿ ಸುಹಾನಾ ಖಾನ್​; ಫೋಟೋ ವೈರಲ್​

Suhana Khan Viral Photo: ಸುಹಾನಾ ಖಾನ್​ ಅವರು ಕೆಂಪು ಸೀರೆ ಧರಿಸಿದ್ದಾರೆ. ಅದಕ್ಕೆ ಒಪ್ಪುವ ರೀತಿಯಲ್ಲಿ ಕೆಂಪು ಬಿಂದಿ ಇಟ್ಟುಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ವೈರಲ್​ ಆಗಿದೆ.

Suhana Khan: ಹಣೆಗೆ ಬಿಂದಿ ಇಟ್ಟುಕೊಂಡು ಪೋಸ್​ ನೀಡಿದ ಶಾರುಖ್​ ಖಾನ್​ ಪುತ್ರಿ ಸುಹಾನಾ ಖಾನ್​; ಫೋಟೋ ವೈರಲ್​
ಸುಹಾನಾ ಖಾನ್​ ವೈರಲ್​ ಫೋಟೋ
ಮದನ್​ ಕುಮಾರ್​
|

Updated on: Jul 16, 2023 | 3:30 PM

Share

ನಟಿ ಸುಹಾನಾ ಖಾನ್​ (Suhana Khan) ಅವರು ಒಂದಿಲ್ಲೊಂದು ಕಾರಾಣಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಅವರು ನಟಿಸಿದ ಮೊದಲ ಸಿನಿಮಾ ‘ದಿ ಆರ್ಚೀಸ್​’ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಆ ಸಿನಿಮಾ ರಿಲೀಸ್​ ಆಗೋದಕ್ಕಿಂತ ಮುನ್ನವೇ ಸುಹಾನಾ ಖಾನ್​ ಅವರು ಸ್ಟಾರ್​ ನಟಿಯರ ರೀತಿ ಮಿಂಚುತ್ತಿದ್ದಾರೆ. ದಿನದಿಂದ ದಿನಕ್ಕೆ ಶಾರುಖ್​ ಖಾನ್​ (Shah Rukh Khan) ಪುತ್ರಿಯ​ಅಭಿಮಾನಿ ಬಳಗ ಹಿರಿದಾಗುತ್ತಿದೆ. ಇನ್​ಸ್ಟಾಗ್ರಾಮ್​ನಲ್ಲಿ ಸುಹಾನಾ ಖಾನ್​ ಅವರನ್ನು ಸದ್ಯಕ್ಕೆ ಬರೋಬ್ಬರಿ 39 ಲಕ್ಷ ಮಂದಿ ಫಾಲೋ ಮಾಡುತ್ತಿದ್ದಾರೆ. ಅಭಿಮಾನಿಗಳಿಗಾಗಿ ಅವರು ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಶೇರ್​ ಮಾಡಿಕೊಂಡಿರುವ ಒಂದು ಫೋಟೋ ವೈರಲ್​ ಆಗಿದೆ. ಸುಹಾನಾ ಖಾನ್​ ಅವರು ಹಣೆಗೆ ಬಿಂದಿ (Bindi) ಇಟ್ಟುಕೊಂಡು ಪೋಸ್​ ನೀಡಿದ್ದಾರೆ.

ಸುಹಾನಾ ಖಾನ್​ ಅವರು ಕೆಂಪು ಸೀರೆ ಧರಿಸಿದ್ದಾರೆ. ಅದಕ್ಕೆ ಒಪ್ಪುವ ರೀತಿಯಲ್ಲಿ ಕೆಂಪು ಬಿಂದಿ ಇಟ್ಟುಕೊಂಡಿದ್ದಾರೆ. ಕಸಿನ್​ ಮತ್ತು ಗೆಳೆತಿಯ ಜೊತೆ ಸೇರಿ ಅವರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋವನ್ನು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ತಮ್ಮ ಖಾತೆಗಳಲ್ಲಿ ಈ ಫೋಟೋವನ್ನು ಹಂಚಿಕೊಂಡು ಖುಷಿಪಡುತ್ತಿದ್ದಾರೆ.

ಇದನ್ನೂ ಓದಿ: Suhana Khan: ಶಾರುಖ್​ ಖಾನ್​ ಮಗಳು ಸುಹಾನಾ ಖಾನ್​ ವ್ಯಕ್ತಿತ್ವ ಹೇಗಿದೆ? ಎಲ್ಲವನ್ನೂ ವಿವರಿಸಿದ ನೃತ್ಯ ನಿರ್ದೇಶಕ

ಅಚ್ಚುಕಟ್ಟಾಗಿ ಡ್ರೆಸ್​ ಮಾಡಿಕೊಂಡ ಕಾರಣಕ್ಕೆ ಸುಹಾನಾ ಖಾನ್​ ಅವರು ಈ ಮೊದಲು ಕೂಡ ಮೆಚ್ಚುಗೆ ಪಾತ್ರವಾಗಿದ್ದರು. ಅನೇಕ ಜಾಗತಿಕ ಮಟ್ಟದ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಸುಹಾನಾ ಖಾನ್​ ನಡೆದುಕೊಂಡ ರೀತಿಗೆ ಎಲ್ಲರೂ ಭೇಷ್​ ಎಂದಿದ್ದರು. ಆಗ ಶಾರುಖ್​ ಖಾನ್​ ಅವರು ಖುಷಿಯಿಂದ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ‘ಈ ಚಾನ್ಸ್​ ಪಡೆದಿದ್ದಕ್ಕೆ ಅಭಿನಂದನೆಗಳು ಮಗಳೇ. ನಿನ್ನ ಬಟ್ಟೆ, ನಡೆ, ನುಡಿ ಎಲ್ಲವೂ ಉತ್ತಮವಾಗಿದೆ. ನಿನ್ನನ್ನು ಸರಿಯಾಗಿ ಬೆಳೆಸಿದ್ದಕ್ಕೆ ನಾನು ಕ್ರಿಡಿಟ್​ ತೆಗೆದುಕೊಳ್ಳಲೇ? ಲವ್​ ಯೂ’ ಎಂದು ಶಾರುಖ್​ ಖಾನ್​ ಅವರು ಪೋಸ್ಟ್​ ಮಾಡಿದ್ದು ವೈರಲ್​ ಆಗಿತ್ತು.

ಇದನ್ನೂ ಓದಿ: ಬೋಲ್ಡ್ ಫೋಟೋಗಳ ಮೂಲಕ ಗಮನ ಸೆಳೆದ ಶಾರುಖ್ ಮಗಳು ಸುಹಾನಾ ಖಾನ್

ಸುಹಾನಾ ಖಾನ್​ ನಟನೆಯ ಮೊದಲ ಸಿನಿಮಾ ‘ದಿ ಆರ್ಚೀಸ್​’ ಚಿತ್ರಮಂದಿರದಲ್ಲಿ ಬಿಡುಗಡೆ ಆಗುವುದಿಲ್ಲ. ಅದು ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಗಲಿದೆ. ಆದರೆ ಸುಹಾನಾ ಅಭಿನಯಿಸುವ 2ನೇ ಸಿನಿಮಾ ಅದ್ದೂರಿಯಾಗಿ ಥಿಯೇಟರ್​ನಲ್ಲಿ ತೆರೆಕಾಣಬೇಕು ಎಂದು ಫ್ಯಾನ್ಸ್ ಬಯಸಿದ್ದಾರೆ. ಆ ಚಿತ್ರಕ್ಕೆ ಶಾರುಖ್​ ಖಾನ್​ ಅವರು ಬಂಡವಾಳ ಹೂಡುವ ಸಾಧ್ಯತೆ ಇದೆ ಎಂದು ಇತ್ತೀಚೆಗೆ ವರದಿ ಆಗಿತ್ತು. ಹೆಚ್ಚಿನ ಅಪ್​ಡೇಟ್​ ತಿಳಿಯಲು ಸಿನಿಪ್ರಿಯರು ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ