AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಸೀರೆಯನ್ನು ಮತ್ತೆ ಧರಿಸಿದ ಆಲಿಯಾ ಭಟ್​ಗೆ ಸುಹಾನಾ ಖಾನ್​ ಹೇಳಿದ್ದೇನು? ವಿಡಿಯೋ ವೈರಲ್​

ಶಾರುಖ್​ ಖಾನ್​ ಅವರ ಪುತ್ರಿ ಸುಹಾನಾ ಖಾನ್​ ‘ದಿ ಆರ್ಚೀಸ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಈ ಸಲುವಾಗಿ ಮಾಧ್ಯಮಗಳಿಗೆ ಸಂದರ್ಶನ ನೀಡುವಾಗ ಆಲಿಯಾ ಭಟ್​ ಬಗ್ಗೆ ಅವರು ಮಾತನಾಡಿದ್ದಾರೆ. ಅವರ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಮದುವೆ ಸೀರೆಯನ್ನು ಮತ್ತೆ ಧರಿಸಿದ ಆಲಿಯಾ ಭಟ್​ಗೆ ಸುಹಾನಾ ಖಾನ್​ ಹೇಳಿದ್ದೇನು? ವಿಡಿಯೋ ವೈರಲ್​
ಆಲಿಯಾ ಭಟ್​, ಸುಹಾನಾ ಖಾನ್​
Follow us
ಮದನ್​ ಕುಮಾರ್​
|

Updated on:Nov 29, 2023 | 11:28 AM

ಸಾಮಾನ್ಯವಾಗಿ ಸೆಲೆಬ್ರಿಟಿಗಳು ಒಮ್ಮೆ ಧರಿಸಿದ ಬಟ್ಟೆಯನ್ನು ಮತ್ತೊಮ್ಮೆ ಧರಿಸುವುದಿಲ್ಲ. ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಪ್ರತಿ ಬಾರಿಯೂ ಹೊಸ ಬಟ್ಟೆಯನ್ನು ಅವರು ಧರಿಸುತ್ತಾರೆ. ಆದರೆ ಕೆಲವು ಸೆಲೆಬ್ರಿಟಿಗಳು, ಕೆಲವೊಮ್ಮೆ ಈ ಅಲಿಖಿತ ನಿಯಮವನ್ನು ಮುರಿಯುತ್ತಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಎಂದರೆ ನಟಿ ಆಲಿಯಾ ಭಟ್​ (Alia Bhatt). ಇತ್ತೀಚೆಗೆ ಅವರು ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಬರುವಾಗ ಮದುವೆ ಸೀರೆಯನ್ನು ಧರಿಸಿದ್ದರು. ಈ ಬಗ್ಗೆ ಶಾರುಖ್​ ಖಾನ್ ಅವರ ಪುತ್ರಿ ಸುಹಾನಾ ಖಾನ್​ (Suhana Khan) ಪ್ರತಿಕ್ರಿಯೆ ನೀಡಿದ್ದಾರೆ. ಆಲಿಯಾ ಭಟ್​ ಅವರ ನಡೆಯನ್ನು ಸುಹಾನಾ ಶ್ಲಾಘಿಸಿದ್ದಾರೆ.

‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದಲ್ಲಿನ ನಟನೆಗೆ ಆಲಿಯಾ ಭಟ್​ ಅವರಿಗೆ ‘ಅತ್ಯುತ್ತಮ ನಟಿ’ ರಾಷ್ಟ್ರ ಪ್ರಶಸ್ತಿ ಸಿಕ್ಕಿತು. ಅದನ್ನು ಸ್ವೀಕರಿಸಲು ಅವರು ಮದುವೆಯ ಸೀರೆ ಧರಿಸಿ ಬಂದಿದ್ದರು. ಆ ವಿಷಯದ ಬಗ್ಗೆ ಈಗ ಚರ್ಚೆ ಆಗುತ್ತಿದೆ. ಒಮ್ಮೆ ಧರಿಸಿದ ಬಟ್ಟೆಯನ್ನು ಪುನಃ ಧರಿಸುವ ಮೂಲಕ ಆಲಿಯಾ ಭಟ್​ ಅವರು ಬೇರೆಲ್ಲರಿಗೂ ಮಾದರಿ ಆಗುತ್ತಿದ್ದಾರೆ ಎಂದು ಸುಹಾನಾ ಖಾನ್​ ಅಭಿಪ್ರಾಯಪಟ್ಟಿದ್ದಾರೆ.

Deepfake: ರಶ್ಮಿಕಾ ಮಂದಣ್ಣ, ಕಾಜೋಲ್​ ಬಳಿಕ ನಟಿ ಆಲಿಯಾ ಭಟ್​ಗೆ ಶುರುವಾಯ್ತು ಡೀಪ್​ಫೇಕ್​ ಕಾಟ

‘ಅಷ್ಟು ಪ್ರಭಾವಿ ಆಗಿರುವ ನಟಿಯೊಬ್ಬರು, ಮದುವೆ ಸೀರೆಯನ್ನು ಪುನಃ ಧರಿಸುವ ಮೂಲಕ ತುಂಬ ಅಗತ್ಯವಾಗಿರುವ ಸಂದೇಶವನ್ನು ನೀಡಿದ್ದಾರೆ. ಸುಸ್ಥಿರತೆ ಬಗ್ಗೆ ಆಲಿಯಾ ಭಟ್​ ಅವರು ಇಂಥ ನಿರ್ಧಾರ ತೆಗೆದುಕೊಂಡಿದ್ದಾರೆ. ಆಲಿಯಾ ಭಟ್​ ಅವರು ಬಟ್ಟೆಯನ್ನು ಮರುಬಳಕೆ ಮಾಡುತ್ತಾರೆ ಎಂಬುದಾದರೆ ನಾವು ಕೂಡ ಪಾರ್ಟಿಗೆ ಹಳೇ ಬಟ್ಟೆಯನ್ನೇ ಪುನಃ ಧರಿಸಬಹುದು. ಪ್ರತಿ ಬಾರಿ ಹೊಸ ಬಟ್ಟೆ ಖರೀದಿಸುವ ಅವಶ್ಯಕತೆ ಇಲ್ಲ’ ಎಂದು ಸುಹಾನಾ ಖಾನ್​ ಹೇಳಿದ್ದಾರೆ.

ಸುಹಾನಾ ಖಾನ್​ ಅವರು ಈ ರೀತಿ ಹೇಳಿದ್ದರ ಹಿಂದೆ ಪರಿಸರ ಕಾಳಜಿ ಇದೆ. ಸೆಲೆಬ್ರಿಟಿಗಳ ಬಳಿ ಬೇಕಾದಷ್ಟು ಹಣ ಇರುತ್ತದೆ. ಹಾಗೆಂದ ಮಾತ್ರಕ್ಕೆ ಪತಿ ಬಾರಿಯೂ ಹೊಸ ಹೊಸ ಬಟ್ಟೆ ಖರೀದಿಸಿದರೆ ಪರಿಸರಕ್ಕೆ ಹಾನಿ ಆಗುತ್ತದೆ. ಆ ಬಗ್ಗೆ ಸುಹಾನಾ ಮಾತನಾಡಿದ್ದಾರೆ. ‘ನಮಗೆ ಇದು ಅರಿವಾಗುವುದಿಲ್ಲ. ಆದರೆ ಹೊಸ ಬಟ್ಟೆ ತಯಾರಿಸುವುದರಿಂದ ತ್ಯಾಜ್ಯ ಸೃಷ್ಟಿ ಆಗುತ್ತದೆ. ಅದರಿಂದ ಪರಿಸರ ಮತ್ತು ಜೀವವೈವಿಧ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಇದು ತುಂಬ ಮುಖ್ಯ’ ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:27 am, Wed, 29 November 23

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ