ಮದುವೆ ಸೀರೆಯನ್ನು ಮತ್ತೆ ಧರಿಸಿದ ಆಲಿಯಾ ಭಟ್​ಗೆ ಸುಹಾನಾ ಖಾನ್​ ಹೇಳಿದ್ದೇನು? ವಿಡಿಯೋ ವೈರಲ್​

ಶಾರುಖ್​ ಖಾನ್​ ಅವರ ಪುತ್ರಿ ಸುಹಾನಾ ಖಾನ್​ ‘ದಿ ಆರ್ಚೀಸ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಈ ಸಲುವಾಗಿ ಮಾಧ್ಯಮಗಳಿಗೆ ಸಂದರ್ಶನ ನೀಡುವಾಗ ಆಲಿಯಾ ಭಟ್​ ಬಗ್ಗೆ ಅವರು ಮಾತನಾಡಿದ್ದಾರೆ. ಅವರ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಮದುವೆ ಸೀರೆಯನ್ನು ಮತ್ತೆ ಧರಿಸಿದ ಆಲಿಯಾ ಭಟ್​ಗೆ ಸುಹಾನಾ ಖಾನ್​ ಹೇಳಿದ್ದೇನು? ವಿಡಿಯೋ ವೈರಲ್​
ಆಲಿಯಾ ಭಟ್​, ಸುಹಾನಾ ಖಾನ್​
Follow us
|

Updated on:Nov 29, 2023 | 11:28 AM

ಸಾಮಾನ್ಯವಾಗಿ ಸೆಲೆಬ್ರಿಟಿಗಳು ಒಮ್ಮೆ ಧರಿಸಿದ ಬಟ್ಟೆಯನ್ನು ಮತ್ತೊಮ್ಮೆ ಧರಿಸುವುದಿಲ್ಲ. ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಪ್ರತಿ ಬಾರಿಯೂ ಹೊಸ ಬಟ್ಟೆಯನ್ನು ಅವರು ಧರಿಸುತ್ತಾರೆ. ಆದರೆ ಕೆಲವು ಸೆಲೆಬ್ರಿಟಿಗಳು, ಕೆಲವೊಮ್ಮೆ ಈ ಅಲಿಖಿತ ನಿಯಮವನ್ನು ಮುರಿಯುತ್ತಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಎಂದರೆ ನಟಿ ಆಲಿಯಾ ಭಟ್​ (Alia Bhatt). ಇತ್ತೀಚೆಗೆ ಅವರು ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಬರುವಾಗ ಮದುವೆ ಸೀರೆಯನ್ನು ಧರಿಸಿದ್ದರು. ಈ ಬಗ್ಗೆ ಶಾರುಖ್​ ಖಾನ್ ಅವರ ಪುತ್ರಿ ಸುಹಾನಾ ಖಾನ್​ (Suhana Khan) ಪ್ರತಿಕ್ರಿಯೆ ನೀಡಿದ್ದಾರೆ. ಆಲಿಯಾ ಭಟ್​ ಅವರ ನಡೆಯನ್ನು ಸುಹಾನಾ ಶ್ಲಾಘಿಸಿದ್ದಾರೆ.

‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದಲ್ಲಿನ ನಟನೆಗೆ ಆಲಿಯಾ ಭಟ್​ ಅವರಿಗೆ ‘ಅತ್ಯುತ್ತಮ ನಟಿ’ ರಾಷ್ಟ್ರ ಪ್ರಶಸ್ತಿ ಸಿಕ್ಕಿತು. ಅದನ್ನು ಸ್ವೀಕರಿಸಲು ಅವರು ಮದುವೆಯ ಸೀರೆ ಧರಿಸಿ ಬಂದಿದ್ದರು. ಆ ವಿಷಯದ ಬಗ್ಗೆ ಈಗ ಚರ್ಚೆ ಆಗುತ್ತಿದೆ. ಒಮ್ಮೆ ಧರಿಸಿದ ಬಟ್ಟೆಯನ್ನು ಪುನಃ ಧರಿಸುವ ಮೂಲಕ ಆಲಿಯಾ ಭಟ್​ ಅವರು ಬೇರೆಲ್ಲರಿಗೂ ಮಾದರಿ ಆಗುತ್ತಿದ್ದಾರೆ ಎಂದು ಸುಹಾನಾ ಖಾನ್​ ಅಭಿಪ್ರಾಯಪಟ್ಟಿದ್ದಾರೆ.

Deepfake: ರಶ್ಮಿಕಾ ಮಂದಣ್ಣ, ಕಾಜೋಲ್​ ಬಳಿಕ ನಟಿ ಆಲಿಯಾ ಭಟ್​ಗೆ ಶುರುವಾಯ್ತು ಡೀಪ್​ಫೇಕ್​ ಕಾಟ

‘ಅಷ್ಟು ಪ್ರಭಾವಿ ಆಗಿರುವ ನಟಿಯೊಬ್ಬರು, ಮದುವೆ ಸೀರೆಯನ್ನು ಪುನಃ ಧರಿಸುವ ಮೂಲಕ ತುಂಬ ಅಗತ್ಯವಾಗಿರುವ ಸಂದೇಶವನ್ನು ನೀಡಿದ್ದಾರೆ. ಸುಸ್ಥಿರತೆ ಬಗ್ಗೆ ಆಲಿಯಾ ಭಟ್​ ಅವರು ಇಂಥ ನಿರ್ಧಾರ ತೆಗೆದುಕೊಂಡಿದ್ದಾರೆ. ಆಲಿಯಾ ಭಟ್​ ಅವರು ಬಟ್ಟೆಯನ್ನು ಮರುಬಳಕೆ ಮಾಡುತ್ತಾರೆ ಎಂಬುದಾದರೆ ನಾವು ಕೂಡ ಪಾರ್ಟಿಗೆ ಹಳೇ ಬಟ್ಟೆಯನ್ನೇ ಪುನಃ ಧರಿಸಬಹುದು. ಪ್ರತಿ ಬಾರಿ ಹೊಸ ಬಟ್ಟೆ ಖರೀದಿಸುವ ಅವಶ್ಯಕತೆ ಇಲ್ಲ’ ಎಂದು ಸುಹಾನಾ ಖಾನ್​ ಹೇಳಿದ್ದಾರೆ.

ಸುಹಾನಾ ಖಾನ್​ ಅವರು ಈ ರೀತಿ ಹೇಳಿದ್ದರ ಹಿಂದೆ ಪರಿಸರ ಕಾಳಜಿ ಇದೆ. ಸೆಲೆಬ್ರಿಟಿಗಳ ಬಳಿ ಬೇಕಾದಷ್ಟು ಹಣ ಇರುತ್ತದೆ. ಹಾಗೆಂದ ಮಾತ್ರಕ್ಕೆ ಪತಿ ಬಾರಿಯೂ ಹೊಸ ಹೊಸ ಬಟ್ಟೆ ಖರೀದಿಸಿದರೆ ಪರಿಸರಕ್ಕೆ ಹಾನಿ ಆಗುತ್ತದೆ. ಆ ಬಗ್ಗೆ ಸುಹಾನಾ ಮಾತನಾಡಿದ್ದಾರೆ. ‘ನಮಗೆ ಇದು ಅರಿವಾಗುವುದಿಲ್ಲ. ಆದರೆ ಹೊಸ ಬಟ್ಟೆ ತಯಾರಿಸುವುದರಿಂದ ತ್ಯಾಜ್ಯ ಸೃಷ್ಟಿ ಆಗುತ್ತದೆ. ಅದರಿಂದ ಪರಿಸರ ಮತ್ತು ಜೀವವೈವಿಧ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಇದು ತುಂಬ ಮುಖ್ಯ’ ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:27 am, Wed, 29 November 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ