AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಕೆಯ ಬಣ್ಣ ಬಯಲು ಮಾಡ್ತೀನಿ’: ಜೈಲಿನಿಂದಲೇ ಎಚ್ಚರಿಕೆ ಸಂದೇಶ ನೀಡಿದ ಸುಕೇಶ್​ ಚಂದ್ರಶೇಖರ್​

‘ಇಷ್ಟು ದಿನ ನಾನು ನಿನ್ನನ್ನು ರಕ್ಷಿಸುತ್ತಿದ್ದೆ. ಈಗ ಸುಮ್ಮನಿರುವುದಿಲ್ಲ. ಕಾನೂನಿನ ಪ್ರಕಾರ ಎಲ್ಲ ಸಾಕ್ಷಿ ಬಹಿರಂಗ ಮಾಡುತ್ತೇನೆ’ ಎಂದು ಸುಕೇಶ್​ ಚಂದ್ರಶೇಖರ್​ ಗರಂ ಆಗಿದ್ದಾನೆ. ಮೂಲಗಳ ಪ್ರಕಾರ, ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಸುಕೇಶ್​ ಚಂದ್ರಶೇಖರ್​ ಕಡೆಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಉಡುಗೊರೆಗಳನ್ನು ಸ್ವೀಕರಿಸಿದ್ದಾರೆ.

‘ಆಕೆಯ ಬಣ್ಣ ಬಯಲು ಮಾಡ್ತೀನಿ’: ಜೈಲಿನಿಂದಲೇ ಎಚ್ಚರಿಕೆ ಸಂದೇಶ ನೀಡಿದ ಸುಕೇಶ್​ ಚಂದ್ರಶೇಖರ್​
ಜಾಕ್ವೆಲಿನ್​ ಫರ್ನಾಂಡಿಸ್​, ಸುಕೇಶ್​ ಚಂದ್ರಶೇಖರ್​
ಮದನ್​ ಕುಮಾರ್​
|

Updated on: Dec 22, 2023 | 5:52 PM

Share

ಖ್ಯಾತ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ವಂಚಕ ಸುಕೇಶ್​ ಚಂದ್ರಶೇಖರ್​ (Sukesh Chandrasekhar) ಸಹವಾಸದಿಂದ ತೊಂದರೆಗೆ ಸಿಲುಕಿದ್ದಾರೆ. 200 ಕೋಟಿ ರೂಪಾಯಿ ವಂಚನೆ ಕೇಸ್​ನಲ್ಲಿ ಜೈಲು ಸೇರಿರುವ ಸುಕೇಶ್​ ಈಗಾಗಲೇ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಹಲವು ಬಾರಿ ಪತ್ರಗಳನ್ನು ಬರೆದಿದ್ದಾನೆ. ಈಗ ಆತ ತುಂಬ ಖಾರವಾಗಿ ಹೊಸ ಲೆಟರ್​ ಕಳಿಸಿದ್ದಾನೆ ಎಂದು ವರದಿ ಆಗಿದೆ. ನಟಿಯ ನಿಜವಾದ ಬಣ್ಣ ಬಯಲು ಮಾಡುವುದಾಗಿ ಸುಕೇಶ್​ ಎಚ್ಚರಿಕೆಯ ಸಂದೇಶ ರವಾನಿಸಿದ್ದಾನೆ. ವಂಚನೆ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೈಬಿಡುವಂತೆ ಕೋರಿ ಜಾಕ್ವೆಲಿನ್​ ಫರ್ನಾಂಡಿಸ್​ (Jacqueline Fernandez) ಅವರು ಇತ್ತೀಚೆಗೆ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅದರ ಬೆನ್ನಲ್ಲೇ ಸುಕೇಶ್​ ಚಂದ್ರಶೇಖರ್​ ಈ ರೀತಿ ಎಚ್ಚರಿಕೆ ಸಂದೇಶ ನೀಡಿದ್ದಾನೆ.

ಸುಕೇಶ್​ ಚಂದ್ರಶೇಖರ್​ ಕಡೆಯಿಂದ ತಮಗೆ ಯಾವುದೇ ಪತ್ರಗಳು ಬರಬಾರದು ಎಂದು ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಕೋರ್ಟ್​ನಲ್ಲಿ ಮನವಿ ಸಲ್ಲಿಸಿದ್ದರು. ಆ ವಿಚಾರ ತಿಳಿದ ಬಳಿಕ ಸುಕೇಶ್​ಗೆ ನೋವಾಗಿದೆಯಂತೆ. ‘ಇಷ್ಟು ದಿನಗಳ ಕಾಲ ನಾನು ನಿನ್ನನ್ನು ರಕ್ಷಿಸುತ್ತಿದ್ದೆ. ಈಗ ನಾನು ಸುಮ್ಮನಿರುವುದಿಲ್ಲ. ಕಾನೂನಿನ ಪ್ರಕಾರ ಎಲ್ಲ ಸಾಕ್ಷಿಯನ್ನು ಬಹಿರಂಗ ಮಾಡುತ್ತೇನೆ’ ಎಂದು ಸುಕೇಶ್​ ಚಂದ್ರಶೇಖರ್​ ಗರಂ ಆಗಿದ್ದಾನೆ.

ಇದನ್ನೂ ಓದಿ: ಜಾಕ್ವೆಲಿನ್ ಫರ್ನಾಂಡಿಸ್​​ಗೆ ಮತ್ತೆ ಶುರುವಾಯ್ತು ಸಂಕಷ್ಟ

ಮೂಲಗಳ ಪ್ರಕಾರ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಸುಕೇಶ್​ ಚಂದ್ರಶೇಖರ್​ ಕಡೆಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಉಡುಗೊರೆಗಳನ್ನು ಸ್ವೀಕರಿಸಿದ್ದಾರೆ. 52 ಲಕ್ಷ ರೂಪಾಯಿ ಬೆಲೆಯ ಕುದುರೆ, 9 ಲಕ್ಷ ರೂಪಾಯಿಯ ಪರ್ಷಿಯನ್​ ಬೆಕ್ಕನ್ನು ಕೂಡ ಅವರು ಪಡೆದುಕೊಂಡಿದ್ದಾರೆ. ನಟಿಯ ಸಲುವಾಗಿ ತಾನು ಅನೇಕ ಬಾರಿ ಹಣ ಖರ್ಚು ಮಾಡಿರುವುದಾಗಿ ಸುಕೇಶ್​ ಹೇಳಿಕೊಂಡಿದ್ದಾರೆ.

ಜಾಕ್ವೆಲಿನ್​ ಫರ್ನಾಂಡಿಸ್​ ಮತ್ತು ಸುಕೇಶ್​ ಚಂದ್ರಶೇಖರ್​ ಅವರು ತುಂಬ ಆಪ್ತವಾಗಿದ್ದರು. ಅವರಿಬ್ಬರು ಇಂಟಿಮೇಟ್​ ಆಗಿ ಕ್ಲಿಕ್ಕಿಸಿಕೊಂಡಿದ್ದ ಕೆಲವು ಫೋಟೋಗಳು ವೈರಲ್​ ಆಗಿದ್ದವು. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾಕ್ವೆಲಿನ್​ ಫರ್ನಾಂಡಿಸ್​ ಅವರನ್ನು ತನಿಖೆಗೆ ಒಳಪಡಿಸಿದ್ದಾರೆ. ಎಫ್​ಐಆರ್​ ಮತ್ತು ಚಾರ್ಜ್​ಶೀಟ್​ನಲ್ಲಿ ಅವರ ಹೆಸರನ್ನು ಸೇರಿಸಲಾಗಿದೆ. ಈ ಪ್ರಕರಣದಿಂದ ತಮ್ಮನ್ನು ಹೊರಗೆ ಇಡಬೇಕು ಎಂದು ಅವರು ದೆಹಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ