AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಕೆಯ ಬಣ್ಣ ಬಯಲು ಮಾಡ್ತೀನಿ’: ಜೈಲಿನಿಂದಲೇ ಎಚ್ಚರಿಕೆ ಸಂದೇಶ ನೀಡಿದ ಸುಕೇಶ್​ ಚಂದ್ರಶೇಖರ್​

‘ಇಷ್ಟು ದಿನ ನಾನು ನಿನ್ನನ್ನು ರಕ್ಷಿಸುತ್ತಿದ್ದೆ. ಈಗ ಸುಮ್ಮನಿರುವುದಿಲ್ಲ. ಕಾನೂನಿನ ಪ್ರಕಾರ ಎಲ್ಲ ಸಾಕ್ಷಿ ಬಹಿರಂಗ ಮಾಡುತ್ತೇನೆ’ ಎಂದು ಸುಕೇಶ್​ ಚಂದ್ರಶೇಖರ್​ ಗರಂ ಆಗಿದ್ದಾನೆ. ಮೂಲಗಳ ಪ್ರಕಾರ, ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಸುಕೇಶ್​ ಚಂದ್ರಶೇಖರ್​ ಕಡೆಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಉಡುಗೊರೆಗಳನ್ನು ಸ್ವೀಕರಿಸಿದ್ದಾರೆ.

‘ಆಕೆಯ ಬಣ್ಣ ಬಯಲು ಮಾಡ್ತೀನಿ’: ಜೈಲಿನಿಂದಲೇ ಎಚ್ಚರಿಕೆ ಸಂದೇಶ ನೀಡಿದ ಸುಕೇಶ್​ ಚಂದ್ರಶೇಖರ್​
ಜಾಕ್ವೆಲಿನ್​ ಫರ್ನಾಂಡಿಸ್​, ಸುಕೇಶ್​ ಚಂದ್ರಶೇಖರ್​
ಮದನ್​ ಕುಮಾರ್​
|

Updated on: Dec 22, 2023 | 5:52 PM

Share

ಖ್ಯಾತ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ವಂಚಕ ಸುಕೇಶ್​ ಚಂದ್ರಶೇಖರ್​ (Sukesh Chandrasekhar) ಸಹವಾಸದಿಂದ ತೊಂದರೆಗೆ ಸಿಲುಕಿದ್ದಾರೆ. 200 ಕೋಟಿ ರೂಪಾಯಿ ವಂಚನೆ ಕೇಸ್​ನಲ್ಲಿ ಜೈಲು ಸೇರಿರುವ ಸುಕೇಶ್​ ಈಗಾಗಲೇ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಹಲವು ಬಾರಿ ಪತ್ರಗಳನ್ನು ಬರೆದಿದ್ದಾನೆ. ಈಗ ಆತ ತುಂಬ ಖಾರವಾಗಿ ಹೊಸ ಲೆಟರ್​ ಕಳಿಸಿದ್ದಾನೆ ಎಂದು ವರದಿ ಆಗಿದೆ. ನಟಿಯ ನಿಜವಾದ ಬಣ್ಣ ಬಯಲು ಮಾಡುವುದಾಗಿ ಸುಕೇಶ್​ ಎಚ್ಚರಿಕೆಯ ಸಂದೇಶ ರವಾನಿಸಿದ್ದಾನೆ. ವಂಚನೆ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೈಬಿಡುವಂತೆ ಕೋರಿ ಜಾಕ್ವೆಲಿನ್​ ಫರ್ನಾಂಡಿಸ್​ (Jacqueline Fernandez) ಅವರು ಇತ್ತೀಚೆಗೆ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅದರ ಬೆನ್ನಲ್ಲೇ ಸುಕೇಶ್​ ಚಂದ್ರಶೇಖರ್​ ಈ ರೀತಿ ಎಚ್ಚರಿಕೆ ಸಂದೇಶ ನೀಡಿದ್ದಾನೆ.

ಸುಕೇಶ್​ ಚಂದ್ರಶೇಖರ್​ ಕಡೆಯಿಂದ ತಮಗೆ ಯಾವುದೇ ಪತ್ರಗಳು ಬರಬಾರದು ಎಂದು ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಕೋರ್ಟ್​ನಲ್ಲಿ ಮನವಿ ಸಲ್ಲಿಸಿದ್ದರು. ಆ ವಿಚಾರ ತಿಳಿದ ಬಳಿಕ ಸುಕೇಶ್​ಗೆ ನೋವಾಗಿದೆಯಂತೆ. ‘ಇಷ್ಟು ದಿನಗಳ ಕಾಲ ನಾನು ನಿನ್ನನ್ನು ರಕ್ಷಿಸುತ್ತಿದ್ದೆ. ಈಗ ನಾನು ಸುಮ್ಮನಿರುವುದಿಲ್ಲ. ಕಾನೂನಿನ ಪ್ರಕಾರ ಎಲ್ಲ ಸಾಕ್ಷಿಯನ್ನು ಬಹಿರಂಗ ಮಾಡುತ್ತೇನೆ’ ಎಂದು ಸುಕೇಶ್​ ಚಂದ್ರಶೇಖರ್​ ಗರಂ ಆಗಿದ್ದಾನೆ.

ಇದನ್ನೂ ಓದಿ: ಜಾಕ್ವೆಲಿನ್ ಫರ್ನಾಂಡಿಸ್​​ಗೆ ಮತ್ತೆ ಶುರುವಾಯ್ತು ಸಂಕಷ್ಟ

ಮೂಲಗಳ ಪ್ರಕಾರ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಸುಕೇಶ್​ ಚಂದ್ರಶೇಖರ್​ ಕಡೆಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಉಡುಗೊರೆಗಳನ್ನು ಸ್ವೀಕರಿಸಿದ್ದಾರೆ. 52 ಲಕ್ಷ ರೂಪಾಯಿ ಬೆಲೆಯ ಕುದುರೆ, 9 ಲಕ್ಷ ರೂಪಾಯಿಯ ಪರ್ಷಿಯನ್​ ಬೆಕ್ಕನ್ನು ಕೂಡ ಅವರು ಪಡೆದುಕೊಂಡಿದ್ದಾರೆ. ನಟಿಯ ಸಲುವಾಗಿ ತಾನು ಅನೇಕ ಬಾರಿ ಹಣ ಖರ್ಚು ಮಾಡಿರುವುದಾಗಿ ಸುಕೇಶ್​ ಹೇಳಿಕೊಂಡಿದ್ದಾರೆ.

ಜಾಕ್ವೆಲಿನ್​ ಫರ್ನಾಂಡಿಸ್​ ಮತ್ತು ಸುಕೇಶ್​ ಚಂದ್ರಶೇಖರ್​ ಅವರು ತುಂಬ ಆಪ್ತವಾಗಿದ್ದರು. ಅವರಿಬ್ಬರು ಇಂಟಿಮೇಟ್​ ಆಗಿ ಕ್ಲಿಕ್ಕಿಸಿಕೊಂಡಿದ್ದ ಕೆಲವು ಫೋಟೋಗಳು ವೈರಲ್​ ಆಗಿದ್ದವು. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾಕ್ವೆಲಿನ್​ ಫರ್ನಾಂಡಿಸ್​ ಅವರನ್ನು ತನಿಖೆಗೆ ಒಳಪಡಿಸಿದ್ದಾರೆ. ಎಫ್​ಐಆರ್​ ಮತ್ತು ಚಾರ್ಜ್​ಶೀಟ್​ನಲ್ಲಿ ಅವರ ಹೆಸರನ್ನು ಸೇರಿಸಲಾಗಿದೆ. ಈ ಪ್ರಕರಣದಿಂದ ತಮ್ಮನ್ನು ಹೊರಗೆ ಇಡಬೇಕು ಎಂದು ಅವರು ದೆಹಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?