AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲಿನಿಂದ ಬೇಗ ಬರ್ತೀನಿ ಬೇಬಿ’: ಜಾಕ್ವೆಲಿನ್​ ಜನ್ಮದಿನಕ್ಕೆ ಕೈ ಬರಹದ ಪ್ರೇಮಪತ್ರ ರವಾನಿಸಿದ ಸುಕೇಶ್​ ಚಂದ್ರಶೇಖರ್​

Jacqueline Fernandez Birthday: ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಆಪ್ತವಾಗಿದ್ದರು ಎಂಬುದಕ್ಕೆ ಕೆಲವು ಫೋಟೋಗಳೇ ಸಾಕ್ಷಿ ಒದಗಿಸಿವೆ. ಜೈಲಿನಿಂದ ಬಂದ ಬಳಿಕ ಮತ್ತೆ ಜಾಕ್ವೆಲಿನ್​ ಫರ್ನಾಂಡಿಸ್​ ಜೊತೆ ಕಾಲ ಕಳೆಯಲು ಸುಕೇಶ್​ ತೀರ್ಮಾನಿಸಿದ್ದಾನೆ.

‘ಜೈಲಿನಿಂದ ಬೇಗ ಬರ್ತೀನಿ ಬೇಬಿ’: ಜಾಕ್ವೆಲಿನ್​ ಜನ್ಮದಿನಕ್ಕೆ ಕೈ ಬರಹದ ಪ್ರೇಮಪತ್ರ ರವಾನಿಸಿದ ಸುಕೇಶ್​ ಚಂದ್ರಶೇಖರ್​
ಸುಕೇಶ್​ ಚಂದ್ರಶೇಖರ್​, ಜಾಕ್ವೆಲಿನ್​ ಫರ್ನಾಂಡಿಸ್​
ಮದನ್​ ಕುಮಾರ್​
|

Updated on: Aug 11, 2023 | 1:19 PM

Share

ಉದ್ಯಮಿಗಳಿಗೆ ನೂರಾರು ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಜೈಲು ಸೇರಿರುವ ಸುಕೇಶ್​ ಚಂದ್ರಶೇಖರ್​ (Sukesh Chandrasekhar) ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇರುತ್ತಾನೆ. ಈತನ ಜೊತೆ ನಂಟು ಹೊಂದಿದ್ದ ಕಾರಣಕ್ಕೆ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವು ಬಾರಿ ಅವರು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳಿಂದ ವಿಚಾರಣೆಗೆ ಒಳಗಾಗಿದ್ದಾರೆ. ಜೈಲು ಪಾಲಾದರೂ ಕೂಡ ಸುಕೇಶ್​ ಚಂದ್ರಶೇಖರ್​ಗೆ ಜಾಕ್ವೆಲಿನ್​ ಫರ್ನಾಂಡಿಸ್​ (Jacqueline Fernandez) ಮೇಲೆ ಇರುವ ಪ್ರೀತಿ ಕಡಿಮೆ ಆಗಿಲ್ಲ. ಪದೇಪದೇ ಆತ ತನ್ನ ಪ್ರೇಯಸಿಗೆ ಪತ್ರ ಬರೆಯುತ್ತಾನೆ. ಇಂದು (ಆಗಸ್ಟ್​ 11) ಜಾಕ್ವೆಲಿನ್​ ಫರ್ನಾಂಡಿಸ್​ ಅವರ ಹುಟ್ಟುಹಬ್ಬ. ಆ ಪ್ರಯುಕ್ತ ಕೈ ಬರಹದಲ್ಲೇ ಪ್ರೇಮಪತ್ರವನ್ನು (Sukesh Chandrasekhar Love Letter) ಬರೆದು ಕಳಿಸಿದ್ದಾನೆ ಸುಕೇಶ್​ ಚಂದ್ರಶೇಖರ್​. ಸೋಶಿಯಲ್​ ಮೀಡಿಯಾದಲ್ಲಿ ಈ ಪತ್ರ ವೈರಲ್​ ಆಗಿದೆ.

ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಆಪ್ತವಾಗಿದ್ದರು ಎಂಬುದಕ್ಕೆ ಕೆಲವು ಫೋಟೋಗಳೇ ಸಾಕ್ಷಿ ಒದಗಿಸಿವೆ. ಜೈಲಿನಿಂದ ಬಂದ ಬಳಿಕ ಮತ್ತೆ ಜಾಕ್ವೆಲಿನ್​ ಫರ್ನಾಂಡಿಸ್​ ಜೊತೆ ಕಾಲ ಕಳೆಯಲು ಸುಕೇಶ್​ ತೀರ್ಮಾನಿಸಿದ್ದಾನೆ. ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುವ ಸಲುವಾಗಿ ಪತ್ರದಲ್ಲಿ ಪದಗಳ ಜೊತೆ ಚಿತ್ರವನ್ನೂ ಬರೆದು ಕಳಿಸಿದ್ದಾನೆ. ಈ ಮೊದಲು ಕೂಡ ಆತ ಪತ್ರ ಬರೆದು ಸುದ್ದಿಯಾಗಿದ್ದ.

ಇದನ್ನೂ ಓದಿ: ‘ಜಾಕ್ವೆಲಿನ್​ ಜತೆ ಸಂಬಂಧ ಇದ್ದಿದ್ದು ನಿಜ; ಆದರೆ ನಾನು ವಂಚಕ ಅಲ್ಲ’: ಸುಕೇಶ್​ ಚಂದ್ರಶೇಖರ್​ ಹೊಸ ಪುರಾಣ

‘ಶೀಘ್ರದಲ್ಲೇ ಈ ಎಲ್ಲ ತೊಂದರೆಗಳು ಮುಗಿಯಲಿವೆ. ಬೇಗ ಬರುತ್ತೇನೆ. ಮುಂದಿನ ವರ್ಷ ಜನ್ಮದಿನವನ್ನು ಒಟ್ಟಿಗೆ ಆಚರಿಸೋಣ. ಅದನ್ನು ತುಂಬ ವಿಶೇಷವಾಗಿಸುತ್ತೇನೆ ಅಂತ ನಿನಗೆ ನಾನು ಪ್ರಾಮಿಸ್​ ಮಾಡುತ್ತೇನೆ. ಜಗತ್ತಿಗೆ ಹೊಟ್ಟೆಕಿಚ್ಚು ಆಗಬಹುದು. ನನ್ನ ಗೊಂಬೆಯೇ.. ನೀನು ಸ್ಪೆಷಲ್​, ನೀನು ಸೂಪರ್​ ಸ್ಟಾರ್​. ನನ್ನ ಬದುಕಿನ ವಿಶೇಷ ನೀನು. ಈ ದಿನವನ್ನು ಎಂಜಾಯ್​ ಮಾಡು. ಯಾವುದಕ್ಕೂ ಹೆದರಬೇಡ. ನಿನಗಾಗಿ ನಾನಿದ್ದೇನೆ. ನನಗಾಗಿ ಒಂದು ಪೀಸ್​ ಕೇಕ್​ ಹೆಚ್ಚು ತಿನ್ನು’ ಎಂದು ಸುಕೇಶ್​ ಚಂದ್ರಶೇಖರ್​ ಪತ್ರದಲ್ಲಿ ಬರೆದಿದ್ದಾನೆ.

ಇದನ್ನೂ ಓದಿ: Jacqueline Fernandez: ವಂಚನೆ ಆರೋಪಿ ಸುಕೇಶ್​ ತನ್ನ ಕನಸಿನ ಹುಡುಗ ಅಂತ ತಿಳಿದು ಮದುವೆ ಆಗಲು ನಿರ್ಧರಿಸಿದ್ದ ಜಾಕ್ವೆಲಿನ್​

ಸುಕೇಶ್​ ಚಂದ್ರಶೇಖರ್​ ಇಷ್ಟೆಲ್ಲ ಬೊಬ್ಬೆ ಹೊಡೆದುಕೊಳ್ಳುತ್ತಿದ್ದರೂ ಕೂಡ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಅದಕ್ಕೆ ಪ್ರತಿಕ್ರಿಯೆ ನೀಡಿಲ್ಲ. ತಮ್ಮ ಮತ್ತು ಸುಕೇಶ್​ ಚಂದ್ರಶೇಖರ್​ ನಡುವೆ ಈ ರೀತಿಯ ಸಂಬಂಧ ಇಲ್ಲ ಎಂದು ಅವರು ಮೊದಲೇ ಹೇಳಿಕೆ ನೀಡಿದ್ದರು. ಕೇವಲ ವೃತ್ತಿಪರ ಕಾರಣಕ್ಕೆ ಭೇಟಿ ಮಾಡಿದ್ದಾಗಿ ಅವರು ತಿಳಿಸಿದ್ದರು. ಸುಕೇಶ್​ ಚಂದ್ರಶೇಖರ್​ ಜೈಲಿನಿಂದ ಹೊರಬಂದ ಬಳಿಕ ಒಂದಷ್ಟು ಹೊಸ ವಿಚಾರಗಳು ಬಹಿರಂಗ ಆಗುವ ಸಾಧ್ಯತೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು