AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಾಕ್ವೆಲಿನ್​ ಜತೆ ಸಂಬಂಧ ಇದ್ದಿದ್ದು ನಿಜ; ಆದರೆ ನಾನು ವಂಚಕ ಅಲ್ಲ’: ಸುಕೇಶ್​ ಚಂದ್ರಶೇಖರ್​ ಹೊಸ ಪುರಾಣ

ಆರೋಪ ಸಾಬೀತು ಆಗುವುದಕ್ಕೂ ಮುನ್ನವೇ ಸುಕೇಶ್​ ಚಂದ್ರಶೇಖರ್​ ಅವರನ್ನು ವಂಚಕ ಎಂದು ಜನರು ಕರೆಯುತ್ತಿರುವುದು ಸರಿಯಲ್ಲ ಎಂದು ಅವರ ಪರ ವಕೀಲರು ಖಂಡಿಸಿದ್ದಾರೆ. ಈ ಪ್ರಕರಣದಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ಕೂಡ ಸಂಕಷ್ಟ ಎದುರಿಸುತ್ತಿದ್ದಾರೆ.

‘ಜಾಕ್ವೆಲಿನ್​ ಜತೆ ಸಂಬಂಧ ಇದ್ದಿದ್ದು ನಿಜ; ಆದರೆ ನಾನು ವಂಚಕ ಅಲ್ಲ’: ಸುಕೇಶ್​ ಚಂದ್ರಶೇಖರ್​ ಹೊಸ ಪುರಾಣ
ಜಾಕ್ವೆಲಿನ್​ ಫರ್ನಾಂಡಿಸ್​, ಸುಕೇಶ್​ ಚಂದ್ರಶೇಖರ್​
TV9 Web
| Edited By: |

Updated on: Jan 01, 2022 | 2:37 PM

Share

ನಟಿ ಜಾಕ್ವೆಲಿನ್​ ಫರ್ನಾಂಡಿಸ್​ (Jacqueline Fernandez) ಅವರು ಅನವಶ್ಯಕವಾಗಿ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿರುವ ಸುಕೇಶ್​ ಚಂದ್ರಶೇಖರ್​ (Sukesh Chandrasekhar) ಜೊತೆಗೆ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಡೇಟಿಂಗ್​ ಮಾಡುತ್ತಿದ್ದರು ಎಂಬುದಕ್ಕೆ ಫೋಟೋಗಳು ಸಾಕ್ಷಿ ಒದಗಿಸುತ್ತಿವೆ. ಜಾಕ್ವೆಲಿನ್​ಗೆ ಸುಕೇಶ್​ ಚಂದ್ರಶೇಖರ್​ ಅವರು ಕೋಟ್ಯಂತರ ರೂಪಾಯಿ ಮೌಲ್ಯದ ಉಡುಗೊರೆಗಳನ್ನು ಕೊಟ್ಟಿದ್ದು ಕೂಡ ಬಯಲಾಗಿದೆ. ಈ ಎಲ್ಲ ವಿಚಾರಗಳ ಕುರಿತಂತೆ ತನಿಖೆ ವೇಳೆ ಸುಕೇಶ್​​ ಬಾಯಿ ಬಿಟ್ಟಿದ್ದಾರೆ. ಆದರೆ ಅವರನ್ನು ವಂಚಕ ಎಂದು ಕರೆಯುತ್ತಿರುವುದನ್ನು ಸುಕೇಶ್ ಪರ ಪಕೀಲರು ಖಂಡಿಸಿದ್ದಾರೆ. ಈ ಕುರಿತು ಅವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

‘ಜಾಕ್ವೆಲಿನ್​ ಫರ್ನಾಂಡಿಸ್​ ಜೊತೆಗೆ ಸುಕೇಶ್​ ಚಂದ್ರಶೇಖರ್​ ಅವರು ರಿಲೇಷನ್​ಶಿಪ್​ನಲ್ಲಿ ಇದ್ದಿದ್ದು ನಿಜ. ಆದರೆ ಅದು ಅವರ ವೈಯಕ್ತಿಕ ವಿಚಾರ. ಅವರ ಮೇಲಿರುವ ಆರೋಪಗಳಿಗೂ, ಈ ವೈಯಕ್ತಿಕ ರಿಲೇಷನ್​ಶಿಪ್​ಗೂ ಯಾವುದೇ ಸಂಬಂಧ ಇಲ್ಲ. ನ್ಯಾಯಾಲಯದಲ್ಲಿ ಇನ್ನೂ ಯಾವುದೇ ಆರೋಪ ಸಾಬೀತು ಆಗಿಲ್ಲ. ಅದಕ್ಕೂ ಮುನ್ನವೇ ಅವರನ್ನು ವಂಚಕ ಅಥವಾ ದರೋಡೆಕೋರ ಎಂದೆಲ್ಲ ಜನರು ಕರೆಯುತ್ತಿರುವುದು ಸರಿಯಲ್ಲ’ ಎಂದು ಸುಕೇಶ್​ ಚಂದ್ರಶೇಖರ್​ ಪರ ವಕೀಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಟ್ಟಾರೆ ಈ ಪ್ರಕರಣದಿಂದಾಗಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಷ್ಟು ದಿನ ಆರಾಮಾಗಿ ದೇಶ-ವಿದೇಶ ಸುತ್ತಿಕೊಂಡಿದ್ದ ಅವರು ಈಗ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಕಣ್ಗಾವಲಿನಲ್ಲಿ ಇದ್ದಾರೆ. ಇಡಿ ಅಧಿಕಾರಿಗಳ ಅನುಮತಿ ಇಲ್ಲದೇ ಅವರು ಭಾರತ ಬಿಟ್ಟು ತೆರಳುವಂತಿಲ್ಲ. ಇದರಿಂದ ಜಾಕ್ವೆಲಿನ್​ ಫರ್ನಾಂಡಿಸ್​ಗೆ ತೊಂದರೆ ಆಗಿದೆ.

ತಮ್ಮ ಮೇಲೆ ಹೇರಿರುವ ಈ ನಿರ್ಬಂಧವನ್ನು ತೆರವುಗೊಳಿಸುವಂತೆ ಕೋರಿ ಜಾಕ್ವೆಲಿನ್​ ಅವರು ಮನವಿ ಸಲ್ಲಿಸಿದ್ದರು. ಆದರೆ ಅದನ್ನು ಜಾರಿ ನಿರ್ದೇಶನಾಲಯ ತಳ್ಳಿ ಹಾಕಿದೆ. ಇದರಿಂದ ಜಾಕ್ವೆಲಿನ್​ಗೆ ಪೇಚಾಟ ಶುರುವಾಗಿದೆ. ನಟನೆ ಮಾತ್ರವಲ್ಲದೇ ಮಾಡೆಲಿಂಗ್​ನಲ್ಲೂ ಅವರು ಸಕ್ರಿಯರಾಗಿದ್ದಾರೆ. ಅನೇಕ ಬ್ರ್ಯಾಂಡ್​ಗಳ ಜತೆ ಈ ಮೊದಲೇ ಒಪ್ಪಂದ ಮಾಡಿಕೊಂಡಿದ್ದಾರೆ. ಆ ಕೆಲಸಗಳ ಸಲುವಾಗಿ ಅವರು ವಿದೇಶಕ್ಕೆ ತೆರಳುವುದು ಅನಿವಾರ್ಯ ಆಗಿದೆ. ಹಾಗಿದ್ದರೂ ಕೂಡ ಜಾರಿ ನಿರ್ದೇಶನಾಲಯದಿಂದ ಅವರಿಗೆ ಅನುಮತಿ ಸಿಗುತ್ತಿಲ್ಲ. ಇದರಿಂದಾಗಿ ಅವರ ಆದಾಯಕ್ಕೆ ಪೆಟ್ಟು ಬಿದ್ದರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ:

ಜಾಕ್ವೆಲಿನ್​ಗೆ 36 ಲಕ್ಷ ರೂಪಾಯಿ ಬೆಲೆಯ ಬೆಕ್ಕನ್ನು ಗಿಫ್ಟ್​ ನೀಡಿದ್ದ ಬಹುಕೋಟಿ ವಂಚನೆ ಆರೋಪಿ ಸುಕೇಶ್​

ಜಾಕ್ವೆಲಿನ್​​ಗಾಗಿ ಬರೋಬ್ಬರಿ ₹ 500 ಕೋಟಿ ಬಜೆಟ್​ನ ಸೂಪರ್​ಹೀರೋ​ ಚಿತ್ರ ನಿರ್ಮಿಸುವುದಾಗಿ ಭರವಸೆ ನೀಡಿದ್ದ ವಂಚಕ ಸುಕೇಶ್

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ