AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಕ್ವೆಲಿನ್​ಗೆ ನೀಡಿದ ಉಡುಗೊರೆ ಲಿಸ್ಟ್​ ತೆಗೆದಿಟ್ಟ ಸುಕೇಶ್​ ಚಂದ್ರಶೇಖರ್; ಅಬ್ಬಬ್ಬಾ ಇಷ್ಟೊಂದಾ?

ಜಾಕ್ವೆಲಿನ್​ ಫರ್ನಾಂಡಿಸ್​ ಜತೆ ಮುಖ್ಯ ಆರೋಪಿ ಸುಕೇಶ್​ ಚಂದ್ರಶೇಖರ್​ ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ.

ಜಾಕ್ವೆಲಿನ್​ಗೆ ನೀಡಿದ ಉಡುಗೊರೆ ಲಿಸ್ಟ್​ ತೆಗೆದಿಟ್ಟ ಸುಕೇಶ್​ ಚಂದ್ರಶೇಖರ್; ಅಬ್ಬಬ್ಬಾ ಇಷ್ಟೊಂದಾ?
ಜಾಕ್ವೆಲಿನ್​​ ಫರ್ನಾಂಡಿಸ್​, ಸುಕೇಶ್​ ಚಂದ್ರಶೇಖರ್​
TV9 Web
| Edited By: |

Updated on: Dec 18, 2021 | 8:02 PM

Share

200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಲುಕಿರುವ ಸುಕೇಶ್​ ಚಂದ್ರಶೇಖರ್​ ಅವರು ಬಾಲಿವುಡ್​ ನಟಿಯರಿಗೆ ಸಂಕಷ್ಟ ತಂದಿಡುತ್ತಿದ್ದಾರೆ. ಅವರ ಸಂಪರ್ಕದಲ್ಲಿದ್ದ ಹೀರೋಯಿನ್​ಗಳ ಅಸಲಿ ಮುಖವನ್ನು ಬಿಚ್ಚಿಡುತ್ತಿದ್ದಾರೆ. ಪ್ರಮುಖವಾಗಿ ಜಾಕ್ವೆಲಿನ್​ ಫರ್ನಾಂಡಿಸ್​ ಬಗ್ಗೆ ಸುಕೇಶ್​ ಸಾಕಷ್ಟು ವಿಚಾರಗಳನ್ನು ತೆರೆದಿಟ್ಟಿದ್ದಾರೆ. ಜಾಕ್ವೆಲಿನ್​ ಅವರಿಗೆ ತಾವು ಸಾಕಷ್ಟು ಗಿಫ್ಟ್​ ಕೊಟ್ಟಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈಗ ಜಾರಿ ನಿರ್ದೇಶನಾಲಯದ (ಇಡಿ) ಎದುರು ಅವರು ಶಾಕಿಂಗ್​ ಹೇಳಿಕೆ ಒಂದನ್ನು ನೀಡಿದ್ದಾರೆ.

ಜಾಕ್ವೆಲಿನ್​ ಫರ್ನಾಂಡಿಸ್​ ಜತೆ ಮುಖ್ಯ ಆರೋಪಿ ಸುಕೇಶ್​ ಚಂದ್ರಶೇಖರ್​ ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು? 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್​ ​ ಕೈವಾಡ ಇದೆಯೋ ಇಲ್ಲವೋ ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ಹೀಗಿರುವಾಗಲೇ ಜಾಕ್ವೆಲಿನ್ ​ಅವರು ಸುಕೇಶ್​ ಜತೆ ಡೇಟಿಂಗ್​ ನಡೆಸುತ್ತಿದ್ದರು ಎಂದಿದ್ದರು. ಈ ಹೇಳಿಕೆ ಸೆನ್ಸೇಶನ್​ ಸೃಷ್ಟಿ ಮಾಡಿತ್ತು. ಹೀಗಿರುವಾಗಲೇ ಫೋಟೋ ಲೀಕ್​ ಆಗಿತ್ತು.

‘ನನಗೆ ಫೆಬ್ರವರಿ ತಿಂಗಳಲ್ಲಿ ಶೇಖರ್​ (ಸುಕೇಶ್​) ಪರಿಚಯ ಆಗಿತ್ತು. ಸಿನಿಮಾದಲ್ಲಿ ನಟಿಸೋ ಆಫರ್​ಅನ್ನು ಆತ ಕೊಟ್ಟಿದ್ದ. ಆತನನ್ನು ನಾನು ನಂಬಿದ್ದೆ. ಇದರ ಜತೆಗೆ ನನ್ನ ಸೋದರ ಸಂಬಂಧಿಗೆ ಆತ ಸಾಲದ ರೂಪದಲ್ಲಿ ಹಣ ನೀಡಿದ್ದ’ ಎಂದು ಜಾಕ್ವೆಲಿನ್​ ಹೇಳಿಕೊಂಡಿದ್ದಾರೆ ಎಂದು ವರದಿ ಆಗಿತ್ತು. ಈಗ ಈ ಬಗ್ಗೆ ಸುಕೇಶ್​ ಮಾತನಾಡಿದ್ದಾರೆ.

‘ನಾನು 15 ಕಿವಿಯೋಲೆ ನೀಡಿದ್ದೇನೆ. ನೆಕ್ಲೆಸ್ ಉಡುಗೊರೆ ಮಾಡಿದ್ದೇನೆ. ದುಬಾರಿ ಬ್ಯಾಗ್ ನೀಡಿದ್ದೇನೆ. ಕಿವಿಯೋಲೆ ಹಾಗೂ ನೆಕ್ಲೆಸ್​ ಬೆಲೆ 7 ಕೋಟಿಗೂ ಅಧಿಕವಾಗಿರಬಹುದು. ಜಾಕ್ವೆಲಿನ್​ ಸಹೋದರಿಗೆ 1.50 ಲಕ್ಷ ಸಾಲ ನೀಡಿದ್ದಾಗಿ ಜಾಕ್ವೆಲಿನ್​ ಹೇಳಿದ್ದಾರೆ. ಅದು ಸುಳ್ಳು. ನಾನು 1.80 ಲಕ್ಷ ಹಣ ಮತ್ತು ಬಿಎಂಡಬ್ಲ್ಯೂ ಎಕ್ಸ್​5 ಉಡುಗೊರೆ ಕೊಟ್ಟಿದ್ದೇನೆ. ಇದರ ಜತೆ ಹಲವು ದುಬಾರಿ ಉಡುಗೊರೆ ಕೊಟ್ಟಿದ್ದೇನೆ’ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ವಿಚಾರಣೆ ವೇಳೆ ಹಲವು ರೋಚಕ ವಿಚಾರ ಬಾಯ್ಬಿಟ್ಟ ಜಾಕ್ವೆಲಿನ್​ ಫರ್ನಾಂಡಿಸ್

ಜಾಕ್ವೆಲಿನ್​ ಫರ್ನಾಂಡಿಸ್​ಗೂ ವಂಚನೆ? 36 ಲಕ್ಷ ರೂ ಬೆಕ್ಕು, 52 ಲಕ್ಷ ರೂ. ಬೆಲೆಯ ಕುದುರೆ ಬಗ್ಗೆ ಬಾಯ್ಬಿಟ್ಟ ನಟಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ