AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಕ್ವೆಲಿನ್​ಗೆ ನೀಡಿದ ಉಡುಗೊರೆ ಲಿಸ್ಟ್​ ತೆಗೆದಿಟ್ಟ ಸುಕೇಶ್​ ಚಂದ್ರಶೇಖರ್; ಅಬ್ಬಬ್ಬಾ ಇಷ್ಟೊಂದಾ?

ಜಾಕ್ವೆಲಿನ್​ ಫರ್ನಾಂಡಿಸ್​ ಜತೆ ಮುಖ್ಯ ಆರೋಪಿ ಸುಕೇಶ್​ ಚಂದ್ರಶೇಖರ್​ ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ.

ಜಾಕ್ವೆಲಿನ್​ಗೆ ನೀಡಿದ ಉಡುಗೊರೆ ಲಿಸ್ಟ್​ ತೆಗೆದಿಟ್ಟ ಸುಕೇಶ್​ ಚಂದ್ರಶೇಖರ್; ಅಬ್ಬಬ್ಬಾ ಇಷ್ಟೊಂದಾ?
ಜಾಕ್ವೆಲಿನ್​​ ಫರ್ನಾಂಡಿಸ್​, ಸುಕೇಶ್​ ಚಂದ್ರಶೇಖರ್​
TV9 Web
| Edited By: |

Updated on: Dec 18, 2021 | 8:02 PM

Share

200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಲುಕಿರುವ ಸುಕೇಶ್​ ಚಂದ್ರಶೇಖರ್​ ಅವರು ಬಾಲಿವುಡ್​ ನಟಿಯರಿಗೆ ಸಂಕಷ್ಟ ತಂದಿಡುತ್ತಿದ್ದಾರೆ. ಅವರ ಸಂಪರ್ಕದಲ್ಲಿದ್ದ ಹೀರೋಯಿನ್​ಗಳ ಅಸಲಿ ಮುಖವನ್ನು ಬಿಚ್ಚಿಡುತ್ತಿದ್ದಾರೆ. ಪ್ರಮುಖವಾಗಿ ಜಾಕ್ವೆಲಿನ್​ ಫರ್ನಾಂಡಿಸ್​ ಬಗ್ಗೆ ಸುಕೇಶ್​ ಸಾಕಷ್ಟು ವಿಚಾರಗಳನ್ನು ತೆರೆದಿಟ್ಟಿದ್ದಾರೆ. ಜಾಕ್ವೆಲಿನ್​ ಅವರಿಗೆ ತಾವು ಸಾಕಷ್ಟು ಗಿಫ್ಟ್​ ಕೊಟ್ಟಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈಗ ಜಾರಿ ನಿರ್ದೇಶನಾಲಯದ (ಇಡಿ) ಎದುರು ಅವರು ಶಾಕಿಂಗ್​ ಹೇಳಿಕೆ ಒಂದನ್ನು ನೀಡಿದ್ದಾರೆ.

ಜಾಕ್ವೆಲಿನ್​ ಫರ್ನಾಂಡಿಸ್​ ಜತೆ ಮುಖ್ಯ ಆರೋಪಿ ಸುಕೇಶ್​ ಚಂದ್ರಶೇಖರ್​ ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು? 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್​ ​ ಕೈವಾಡ ಇದೆಯೋ ಇಲ್ಲವೋ ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ಹೀಗಿರುವಾಗಲೇ ಜಾಕ್ವೆಲಿನ್ ​ಅವರು ಸುಕೇಶ್​ ಜತೆ ಡೇಟಿಂಗ್​ ನಡೆಸುತ್ತಿದ್ದರು ಎಂದಿದ್ದರು. ಈ ಹೇಳಿಕೆ ಸೆನ್ಸೇಶನ್​ ಸೃಷ್ಟಿ ಮಾಡಿತ್ತು. ಹೀಗಿರುವಾಗಲೇ ಫೋಟೋ ಲೀಕ್​ ಆಗಿತ್ತು.

‘ನನಗೆ ಫೆಬ್ರವರಿ ತಿಂಗಳಲ್ಲಿ ಶೇಖರ್​ (ಸುಕೇಶ್​) ಪರಿಚಯ ಆಗಿತ್ತು. ಸಿನಿಮಾದಲ್ಲಿ ನಟಿಸೋ ಆಫರ್​ಅನ್ನು ಆತ ಕೊಟ್ಟಿದ್ದ. ಆತನನ್ನು ನಾನು ನಂಬಿದ್ದೆ. ಇದರ ಜತೆಗೆ ನನ್ನ ಸೋದರ ಸಂಬಂಧಿಗೆ ಆತ ಸಾಲದ ರೂಪದಲ್ಲಿ ಹಣ ನೀಡಿದ್ದ’ ಎಂದು ಜಾಕ್ವೆಲಿನ್​ ಹೇಳಿಕೊಂಡಿದ್ದಾರೆ ಎಂದು ವರದಿ ಆಗಿತ್ತು. ಈಗ ಈ ಬಗ್ಗೆ ಸುಕೇಶ್​ ಮಾತನಾಡಿದ್ದಾರೆ.

‘ನಾನು 15 ಕಿವಿಯೋಲೆ ನೀಡಿದ್ದೇನೆ. ನೆಕ್ಲೆಸ್ ಉಡುಗೊರೆ ಮಾಡಿದ್ದೇನೆ. ದುಬಾರಿ ಬ್ಯಾಗ್ ನೀಡಿದ್ದೇನೆ. ಕಿವಿಯೋಲೆ ಹಾಗೂ ನೆಕ್ಲೆಸ್​ ಬೆಲೆ 7 ಕೋಟಿಗೂ ಅಧಿಕವಾಗಿರಬಹುದು. ಜಾಕ್ವೆಲಿನ್​ ಸಹೋದರಿಗೆ 1.50 ಲಕ್ಷ ಸಾಲ ನೀಡಿದ್ದಾಗಿ ಜಾಕ್ವೆಲಿನ್​ ಹೇಳಿದ್ದಾರೆ. ಅದು ಸುಳ್ಳು. ನಾನು 1.80 ಲಕ್ಷ ಹಣ ಮತ್ತು ಬಿಎಂಡಬ್ಲ್ಯೂ ಎಕ್ಸ್​5 ಉಡುಗೊರೆ ಕೊಟ್ಟಿದ್ದೇನೆ. ಇದರ ಜತೆ ಹಲವು ದುಬಾರಿ ಉಡುಗೊರೆ ಕೊಟ್ಟಿದ್ದೇನೆ’ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ವಿಚಾರಣೆ ವೇಳೆ ಹಲವು ರೋಚಕ ವಿಚಾರ ಬಾಯ್ಬಿಟ್ಟ ಜಾಕ್ವೆಲಿನ್​ ಫರ್ನಾಂಡಿಸ್

ಜಾಕ್ವೆಲಿನ್​ ಫರ್ನಾಂಡಿಸ್​ಗೂ ವಂಚನೆ? 36 ಲಕ್ಷ ರೂ ಬೆಕ್ಕು, 52 ಲಕ್ಷ ರೂ. ಬೆಲೆಯ ಕುದುರೆ ಬಗ್ಗೆ ಬಾಯ್ಬಿಟ್ಟ ನಟಿ

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು