AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಕಮ್ಮನ ಖಾಸಗಿ ವಿಡಿಯೋ ಲೀಕ್​ ಮಾಡ್ತೀನಿ ಅಂತ ಬೆದರಿಕೆ ಹಾಕಿದ ಸುಕೇಶ್​ ಚಂದ್ರಶೇಖರ್​

ಸುಕೇಶ್​ ಚಂದ್ರಶೇಖರ್​ ಜೊತೆ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಕ್ಲೋಸ್​ ಆಗಿದ್ದರು. ಆದರೆ ಅವರಿಬ್ಬರ ಸಂಬಂಧ ರಹಸ್ಯವಾಗಿ ಉಳಿದುಕೊಂಡಿತ್ತು. ಸುಕೇಶ್​ ಚಂದ್ರಶೇಖರ್​ ಬಂಧನದ ಬಳಿಕ ವಿಚಾರಣೆ ವೇಳೆ ಅನೇಕ ಸತ್ಯಗಳು ಹೊರಬಂದವು. ಈಗ ಖಾಸಗಿ ವಿಡಿಯೋ ಲೀಕ್​ ಮಾಡುವುದಾಗಿ ಸುಕೇಶ್​ ಬೆದರಿಸಿದ್ದಾನೆ. ಅದಕ್ಕೆ ಕಾರಣ ಕೂಡ ಇದೆ.

ರಕ್ಕಮ್ಮನ ಖಾಸಗಿ ವಿಡಿಯೋ ಲೀಕ್​ ಮಾಡ್ತೀನಿ ಅಂತ ಬೆದರಿಕೆ ಹಾಕಿದ ಸುಕೇಶ್​ ಚಂದ್ರಶೇಖರ್​
ಜಾಕ್ವೆಲಿನ್​ ಫರ್ನಾಂಡಿಸ್​, ಸುಕೇಶ್​ ಚಂದ್ರಶೇಖರ್​
ಮದನ್​ ಕುಮಾರ್​
|

Updated on: Jan 05, 2024 | 6:11 PM

Share

‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ರಕ್ಕಮ್ಮನ ಪಾತ್ರ ಮಾಡಿ ಕನ್ನಡದ ಪ್ರೇಕ್ಷಕರಿಗೆ ಪರಿಚಯಗೊಂಡ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ (Jacqueline Fernandez) ಅವರು ಬಾಲಿವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ‘ರಾ.. ರಾ… ರಕ್ಕಮ್ಮ’ ಹಾಡು ಹಿಂದಿ ಪ್ರೇಕ್ಷಕರಿಗೂ ಇಷ್ಟ. ಈ ರಕ್ಕಮ್ಮನಿಗೆ ಈಗ ಸಂಕಷ್ಟ ಹೆಚ್ಚುತ್ತಿದೆ. 200 ಕೋಟಿ ರೂಪಾಯಿ ವಂಚನೆ ಕೇಸ್​ನಲ್ಲಿ ಜೈಲು ಸೇರಿರುವ ಸುಕೇಶ್​ ಚಂದ್ರಶೇಖರ್​ (Sukesh Chandrashekhar) ಕಡೆಯಿಂದ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಬೆದರಿಕೆ ಬಂದಿದೆ. ನಟಿಯ ಖಾಸಗಿ ವಿಡಿಯೋವನ್ನು ಲೀಕ್ (Video Leak)​ ಮಾಡುವುದಾಗಿ ಸುಕೇಶ್​ ಚಂದ್ರಶೇಕರ್​ ಬೆದರಿಕೆ ಹಾಕಿದ್ದಾನೆ.

ಸುಕೇಶ್​ ಚಂದ್ರಶೇಖರ್​ ಜೊತೆ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಕ್ಲೋಸ್​ ಆಗಿದ್ದರು. ಆದರೆ ಅವರಿಬ್ಬರ ಸಂಬಂಧ ರಹಸ್ಯವಾಗಿ ಉಳಿದುಕೊಂಡಿತ್ತು. ಸುಕೇಶ್​ ಚಂದ್ರಶೇಖರ್​ ಬಂಧನದ ಬಳಿಕ ವಿಚಾರಣೆ ವೇಳೆ ಅನೇಕ ಸತ್ಯಗಳು ಹೊರಬಂದವು. ಜಾಕ್ವೆಲಿನ್​ ಫರ್ನಾಂಡಿಸ್​ ಮತ್ತು ಸುಕೇಶ್​ ಚಂದ್ರಶೇಖರ್​ ಆಪ್ತವಾಗಿರುವ ಫೋಟೋಗಳು ಲೀಕ್​ ಆದವು. ಈಗ ವಿಡಿಯೋ ಲೀಕ್​ ಮಾಡುವುದಾಗಿ ಸುಕೇಶ್​ ಬೆದರಿಸಿದ್ದಾನೆ. ಅದಕ್ಕೆ ಕಾರಣ ಕೂಡ ಇದೆ.

ಇದನ್ನೂ ಓದಿ: ‘ಆಕೆಯ ಬಣ್ಣ ಬಯಲು ಮಾಡ್ತೀನಿ’: ಜೈಲಿನಿಂದಲೇ ಎಚ್ಚರಿಕೆ ಸಂದೇಶ ನೀಡಿದ ಸುಕೇಶ್​ ಚಂದ್ರಶೇಖರ್​

ಕೆಲವೇ ದಿನಗಳ ಹಿಂದೆ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಕೋರ್ಟ್​ನಲ್ಲಿ ಒಂದು ಮನವಿ ಸಲ್ಲಿಸಿದ್ದರು. ಸುಕೇಶ್​​ಗೆ ಸಂಬಂಧಿಸಿದ ಕೇಸ್​ನಲ್ಲಿ ತಮ್ಮ ಹೆಸರನ್ನು ಕೈ ಬಿಡಬೇಕು ಎಂದು ಅವರು ಕೋರಿದ್ದರು. ಈ ವಿಷಯ ಗೊತ್ತಾದ ಬಳಿಕ ಸುಕೇಶ್​ ಚಂದ್ರಶೇಖರ್​ಗೆ ಕೋಪ ಬಂದಿದೆ. ಇಷ್ಟು ದಿನಗಳ ಕಾಲ ಜಾಕ್ವೆಲಿನ್​ ಬಗ್ಗೆ ಪ್ರೀತಿಯ ಮಾತುಗಳನ್ನು ಆಡುತ್ತಿದ್ದ ಆತ ಈಗ ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ಸಂದೇಶ ರವಾನಿಸುತ್ತಿದ್ದಾನೆ.

ಇದನ್ನೂ ಓದಿ: ‘ಜೈಲಿನಿಂದ ಬೇಗ ಬರ್ತೀನಿ ಬೇಬಿ’: ಜಾಕ್ವೆಲಿನ್​ ಜನ್ಮದಿನಕ್ಕೆ ಕೈ ಬರಹದ ಪ್ರೇಮಪತ್ರ ರವಾನಿಸಿದ ಸುಕೇಶ್​ ಚಂದ್ರಶೇಖರ್​

ತಮ್ಮ ಮತ್ತು ಜಾಕ್ವೆಲಿನ್​ ಫರ್ನಾಂಡಿಸ್​ ನಡುವೆ ವಿನಿಮಯ ಆದ ವಾಟ್ಸಪ್​ ಸಂದೇಶಗಳನ್ನು ಆತ ಲೀಕ್​ ಮಾಡಿದ್ದಾನೆ. ಇದು ಬರೀ ಟೀಸರ್​ ಮಾತ್ರ. ನೂರಾರು ಚಾಟ್​ಗಳು, ಖಾಸಗಿ ವಿಡಿಯೋಗಳು, ವಾಯ್ಸ್​ ರೆಕಾರ್ಡಿಂಗ್ಸ್​ ಇವೆ. ಇದನ್ನು ತನಿಖಾಧಿಕಾರಿಗಳಿಗೆ ನೀಡದ ಹೊರತು ಬೇರೆ ಯಾವುದೇ ಆಯ್ಕೆ ತನ್ನ ಬಳಿ ಈಗ ಉಳಿದಿಲ್ಲ ಎಂದು ಸುಕೇಶ್​ ಚಂದ್ರಶೇಖರ್​ ಹೇಳಿರುವುದಾಗಿ ವರದಿ ಆಗಿದೆ. ಒಂದು ವೇಳೆ ಆ ರೀತಿಯ ವಿಡಿಯೋಗಳು ಲೀಕ್​ ಆದರೆ ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೆ ಕಿರಿಕಿರಿ ಹೆಚ್ಚಾಗಲಿದೆ. ನಟಿಗೆ ಈಗಾಗಲೇ ಆತ ಅನೇಕ ಲೆಟರ್​ಗಳನ್ನು ಬರೆಯುವ ಮೂಲಕ ಸುದ್ದಿ ಆಗಿದ್ದಾನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು