AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೊಮ್ಯಾಟೋ ದರದ ವಿಚಾರದಲ್ಲಿ ಹೇಳಿಕೆ ನೀಡಿ ಟ್ರೋಲ್ ಆದ ಸುನೀಲ್ ಶೆಟ್ಟಿ; ಕೊನೆಗೂ ಕ್ಷಮೆ ಕೇಳಿದ ನಟ

ಟೊಮ್ಯಾಟೋ ಬೆಲೆ ವಿಚಾರದಲ್ಲಿ ವಾರದ ಹಿಂದೆ ಹೇಳಿಕೆ ಒಂದನ್ನು ನೀಡಿದ್ದರು. ಇದನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಈಗ ಈ ವಿಚಾರದಲ್ಲಿ ಸುನೀಲ್ ಶೆಟ್ಟಿ ಅವರು ಕ್ಷಮೆ ಕೇಳಿದ್ದಾರೆ.

ಟೊಮ್ಯಾಟೋ ದರದ ವಿಚಾರದಲ್ಲಿ ಹೇಳಿಕೆ ನೀಡಿ ಟ್ರೋಲ್ ಆದ ಸುನೀಲ್ ಶೆಟ್ಟಿ; ಕೊನೆಗೂ ಕ್ಷಮೆ ಕೇಳಿದ ನಟ
ಸುನೀಲ್ ಶೆಟ್ಟಿ
TV9 Web
| Edited By: |

Updated on:Jul 19, 2023 | 8:18 AM

Share

ಸೆಲೆಬ್ರಿಟಿಗಳು ಮಾತನಾಡುವಾಗ ಸಾಕಷ್ಟು ಎಚ್ಚರಿಕೆಯಿಂದ ಇರಬೇಕು. ಯಾವ ರೀತಿಯಲ್ಲಿ ಹೇಳಿಕೆ ನೀಡಿದರೂ ಅದನ್ನು ಟ್ರೋಲ್ ಮಾಡಲಾಗುತ್ತದೆ. ಬಾಲಿವುಡ್ ನಟ ಸುನೀಲ್ ಶೆಟ್ಟಿಗೂ (Suniel Shetty) ಈಗ ಹಾಗೆಯೇ ಆಗಿದೆ. ಅವರು ನೀಡಿರುವ ಹೇಳಿಕೆ ಅವರಿಗೆ ಮುಳುವಾಗಿದೆ. ಅವರು ಟೊಮ್ಯಾಟೋ ಬೆಲೆ (Tomato Price) ವಿಚಾರದಲ್ಲಿ ವಾರದ ಹಿಂದೆ ಹೇಳಿಕೆ ಒಂದನ್ನು ನೀಡಿದ್ದರು. ಇದನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಈಗ ಈ ವಿಚಾರದಲ್ಲಿ ಸುನೀಲ್ ಶೆಟ್ಟಿ ಅವರು ಕ್ಷಮೆ ಕೇಳಿದ್ದಾರೆ. ನನಗೆ ರೈತರ ಬಗ್ಗೆ ಕಾಳಜಿ ಇದೆ ಎಂದಿದ್ದಾರೆ.

ಸುನೀಲ್ ಶೆಟ್ಟಿ ಹೇಳಿದ್ದೇನು?

ಇತ್ತೀಚೆಗೆ ಟೊಮ್ಯಾಟೋ ಬೆಲೆ ಗಗನಕ್ಕೇರಿದೆ. ಜನಸಾಮಾನ್ಯರು ಅದನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ. ಕೇವಲ ಜನಸಾಮಾನ್ಯರು ಮಾತ್ರವಲ್ಲ ಸೆಲೆಬ್ರಿಟಿಗಳ ಮೇಲೂ ಇದರ ಪ್ರಭಾವ ಉಂಟಾಗಿದೆ. ‘ನನ್ನ ಪತ್ನಿ ಯಾವಾಗಲೂ ತಾಜಾ ತರಕಾರಿಗಳನ್ನು ಖರೀದಿಸಲು ಆದ್ಯತೆ ನೀಡುತ್ತಾಳೆ. ಇತ್ತೀಚಿನ ದಿನಗಳಲ್ಲಿ ಟೊಮ್ಯಾಟೋ ಬೆಲೆ ಗಗನಕ್ಕೇರುತ್ತಿದ್ದು, ಇದು ನಮ್ಮ ಮೇಲೂ ಪರಿಣಾಮ ಬೀರಿದೆ. ನಾನು ಈಗ ಕಡಿಮೆ ಟೊಮ್ಯಾಟೋಗಳನ್ನು ತಿನ್ನುತ್ತಿದ್ದೇನೆ. ಸೂಪರ್‌ಸ್ಟಾರ್ ಆಗಿರುವುದರಿಂದ ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಜನರು ಭಾವಿಸಿರಬಹುದು. ಆದರೆ ಇದು ನಿಜವಲ್ಲ. ನಾವು ಇಂತಹ ಸಮಸ್ಯೆಗಳನ್ನು ಸಹ ಎದುರಿಸಬೇಕಾಗುತ್ತದೆ’ ಎಂದಿದ್ದಾರೆ ಸುನೀಲ್ ಶೆಟ್ಟಿ.

ಟೀಕೆಗೆ ಒಳಗಾಗಿದ್ದ ಸುನೀಲ್ ಶೆಟ್ಟಿ

ಸುನೀಲ್ ಶೆಟ್ಟಿ ಅವರು ಹಣ ಖರ್ಚಾಗುತ್ತದೆ ಎನ್ನುವ ಕಾರಣಕ್ಕೆ ಕಡಿಮೆ ಟೊಮ್ಯಾಟೋ ತಿನ್ನುತ್ತೇನೆ ಎಂದಿದ್ದರು. ಅವರು ಸಾಮಾನ್ಯ ರೀತಿಯಲ್ಲೇ ಇದ್ದನ್ನು ಹೇಳಿದ್ದರು. ಆದರೆ ಕೆಲವರು ಇದನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ‘ಟೊಮ್ಯಾಟೋ ಬೆಲೆ ಜಾಸ್ತಿ ಆಗಿರುವುದರಿಂದ ರೈತರಿಗೆ ಸಹಾಯ ಆಗಿದೆ. ಇದು ಸುನೀಲ್ ಶೆಟ್ಟಿ ಅವರ ಗಮನದಲ್ಲಿಲ್ಲ. ಅವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ’ ಎಂದೆಲ್ಲ ಟೀಕೆ ಮಾಡಲಾಗಿತ್ತು.

ಇದನ್ನೂ ಓದಿ: ಸುನೀಲ್ ಶೆಟ್ಟಿ ಅಳಿಯನ್ನಾಗುತ್ತಿರುವ ಕೆಎಲ್ ರಾಹುಲ್ ಎಷ್ಟು ಕೋಟಿಯ ಒಡೆಯ ಗೊತ್ತಾ?

ಸ್ಪಷ್ಟನೆ ನೀಡಿದ ಸುನೀಲ್ ಶೆಟ್ಟಿ

‘ನಾನು ನಮ್ಮ ರೈತರನ್ನು ಪ್ರಾಮಾಣಿಕವಾಗಿ ಬೆಂಬಲಿಸುತ್ತೇನೆ. ಅವರ ಬಗ್ಗೆ ನನಗೆ ಕೆಟ್ಟ ಆಲೋಚನೆ ಬರುವುದಿಲ್ಲ. ಅವರ ಬೆಂಬಲದೊಂದಿಗೆ ನಾನು ಕೆಲಸ ಮಾಡಿದ್ದೇನೆ. ರೈತರು ನನ್ನ ಜೀವನದ ಪ್ರಮುಖ ಭಾಗ. ಹೋಟೆಲ್ ಉದ್ಯಮಿಯಾಗಿ ಅವರೊಂದಿಗೆ ನನ್ನ ಸಂಪರ್ಕ ಯಾವಾಗಲೂ ಇರುತ್ತದೆ. ನನ್ನ ಯಾವುದೇ ಹೇಳಿಕೆಗಳು ಅವರಿಗೆ ನೋವುಂಟು ಮಾಡಿದ್ದರೆ, ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ನನ್ನ ಕನಸಿನಲ್ಲಿಯೂ ಅವರ ವಿರುದ್ಧ ಮಾತನಾಡಲು ನಾನು ಯೋಚಿಸುವುದಿಲ್ಲ. ದಯವಿಟ್ಟು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ. ಈ ವಿಷಯದಲ್ಲಿ ನಾನು ಹೆಚ್ಚಿಗೆ ಏನನ್ನೂ ಹೇಳಲಾರೆ’ ಎಂದಿದ್ದಾರೆ ಸುನೀಲ್ ಶೆಟ್ಟಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:48 am, Wed, 19 July 23

ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ