AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯನ್​ ಖಾನ್​ ಇನ್ನೂ ಮಗು ಎಂದು ಹೇಳಿ ಸಂಕಷ್ಟಕ್ಕೆ ಸಿಲುಕಿದ ನಟ ಸುನೀಲ್​ ಶೆಟ್ಟಿ

ರೇವ್​ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಕಾರ್ಡಿಲಿಯಾ ಕ್ರೂಸ್ ಶಿಪ್​ಮೇಲೆ ದಾಳಿ ನಡೆದಿದೆ. ಈ ವೇಳೆ ಆರ್ಯನ್​ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಈಗ ಬಂಧನ ನಡೆದಿದೆ. ಈ ಬಗ್ಗೆ ಮಾಧ್ಯಮಗಳು ನಾನಾ ರೀತಿಯ ವರದಿ ಬಿತ್ತರಿಸುತ್ತಿವೆ.

ಆರ್ಯನ್​ ಖಾನ್​ ಇನ್ನೂ ಮಗು ಎಂದು ಹೇಳಿ ಸಂಕಷ್ಟಕ್ಕೆ ಸಿಲುಕಿದ ನಟ ಸುನೀಲ್​ ಶೆಟ್ಟಿ
ಸುನೀಲ್​ ಶೆಟ್ಟಿ-ಆರ್ಯನ್
TV9 Web
| Edited By: |

Updated on: Oct 03, 2021 | 6:01 PM

Share

ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​​ ಅವರು ಡ್ರಗ್ಸ್​ ಪಾರ್ಟಿಯಲ್ಲಿ ಭಾಗಿಯಾಗಿದ್ದಕ್ಕೆ ಬಂಧನಕ್ಕೆ ಒಳಗಾಗಿದ್ದಾರೆ. ಸಾಕಷ್ಟು ಪ್ರತಿಷ್ಠಿತ ಕುಟುಂಬದವರು ಈ ಕೇಸ್​ನಲ್ಲಿ ಸಿಕ್ಕಿ ಬಿದ್ದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸುನೀಲ್​ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ, ಆರ್ಯನ್​ ಖಾನ್​ ಪರ ವಾದ ಮಂಡಿಸಿದ್ದಾರೆ. ಈ ವಿಚಾರದಲ್ಲಿ ಸುನೀಲ್​ ಶೆಟ್ಟಿ ವಿರುದ್ಧ ನೆಟ್ಟಿಗರು ಆಕ್ರೋಶ ಹೊರ ಹಾಕಿದ್ದಾರೆ.

ಕಾರ್ಡಿಲಿಯಾ ಕ್ರೂಸ್ ಶಿಪ್​ನಲ್ಲಿ ಈ ಪಾರ್ಟಿ ನಡೆಯುತ್ತಿತ್ತು. ಆರ್ಯನ್​ ಖಾನ್​ ಸೇರಿ ಸಾಕಷ್ಟು ಪ್ರತಿಷ್ಠಿತ ಕುಟುಂಬದ ಮಕ್ಕಳು ಈ ಪಾರ್ಟಿಗೆ ಹಾಜರಿ ಹಾಕಿದ್ದರು. ಈ ಪಾರ್ಟಿಗೆ ಎಂಟ್ರಿ ಫೀ 80 ಸಾವಿರ ರೂಪಾಯಿ ಇದೆ ಎನ್ನುವ ಬಗ್ಗೆ ವರದಿಯಾಗಿದೆ. ರೇವ್​ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಕಾರ್ಡಿಲಿಯಾ ಕ್ರೂಸ್ ಶಿಪ್​ಮೇಲೆ ದಾಳಿ ನಡೆದಿದೆ. ಈ ವೇಳೆ ಆರ್ಯನ್​ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಈಗ ಬಂಧನ ನಡೆದಿದೆ. ಈ ಬಗ್ಗೆ ಮಾಧ್ಯಮಗಳು ನಾನಾ ರೀತಿಯ ವರದಿ ಬಿತ್ತರಿಸುತ್ತಿವೆ.

ಈ ಬಗ್ಗೆ ಮಾತನಾಡಿರುವ ಸುನೀಲ್​ ಶೆಟ್ಟಿ, ‘ಎಲ್ಲೇ ದಾಳಿ ನಡೆದರೂ, ಹಲವಾರು ಜನರು ಸಿಕ್ಕಿಬೀಳುತ್ತಾರೆ. ಆದರೆ, ಎಲ್ಲರೂ ತಪ್ಪಿತಸ್ಥರಲ್ಲ. ಈ ಮಗು ಕೂಡ ಡ್ರಗ್ಸ್​ ಸೇವಿಸಿರಬೇಕು ಅಥವಾ ಈ ಮಗು ಕೂಡ ಅದನ್ನು ಮಾಡಿರಬೇಕು ಎಂದು ನಾವು ಊಹಿಸುತ್ತೇವೆ. ಆ ಬಗ್ಗೆ ತನಿಖೆ ನಡೆಯುತ್ತಿದೆ. ಆ ಮಗುವಿಗೆ ಉಸಿರಾಡಲು ಅವಕಾಶ ನೀಡಿ’ ಎಂದು ಸುನೀಲ್​ ಶೆಟ್ಟಿ ಕೋರಿದ್ದಾರೆ.

‘ಬಾಲಿವುಡ್​ನಲ್ಲಿ ಏನೇ ಆದರೂ ಮಾಧ್ಯಮದವರು ನಾನಾ ರೀತಿಯ ಸುದ್ದಿ ಬಿತ್ತರ ಮಾಡುತ್ತಾರೆ ಮತ್ತು ಒಂದು ತೀರ್ಮಾನಕ್ಕೆ ಬಂದು ಬಿಡುತ್ತಾರೆ. ಆ ಮಗುವಿಗೂ ಒಂದು ಅವಕಾಶ ನೀಡಿ. ಸತ್ಯ ಹೊರಬರಲಿ. ಮಗುವಿನ ಬಗ್ಗೆ ಕಾಳಜಿ ತೆಗೆದುಕೊಳ್ಳುವುದು ನಮ್ಮ ಕರ್ತವ್ಯ’ ಎಂದಿದ್ದಾರೆ ಸುನೀಲ್​ ಶೆಟ್ಟಿ.

ಈ ಬಗ್ಗೆ ಸಾಕಷ್ಟು ಜನರು ಆಕ್ರೋಶ ಹೊರಹಾಕಿದ್ದಾರೆ. ‘ಪಾರ್ಟಿ ಮಾಡುವಲ್ಲಿ ಡ್ರಗ್​ ಸಿಕ್ಕಿತ್ತು. ಈಗ ಎನ್​ಸಿಬಿ ಆರ್ಯನ್​​ರನ್ನು ಬಂಧಿಸಿದೆ. ಹೀಗಿರುವಾಗ ಅವರಿಗೆ ಮಗು ಎನ್ನುವುದರಲ್ಲಿ ಅರ್ಥವಿಲ್ಲ. ಸ್ಟಾರ್​ ನಟನ ಮಗ ಎಂಬ ಕಾರಣಕ್ಕೆ ಈ ರೀತಿ ಹೇಳಬಾರದು’ ಎಂದು ಕೆಲವರು ಸುನೀಲ್​ ಶೆಟ್ಟಿಗೆ ಬುದ್ಧಿವಾದ ಹೇಳಿದ್ದಾರೆ.

ಇದನ್ನೂ ಓದಿ: ಡ್ರಗ್ಸ್​ ಕೇಸ್​: ಎನ್​ಸಿಬಿ ಕಚೇರಿಯಲ್ಲಿ ಗಪ್​ಚುಪ್​ ಆಗಿ ಕುಳಿತ ಶಾರುಖ್​ ಪುತ್ರ ಆರ್ಯನ್​ ಖಾನ್​; ಇಲ್ಲಿದೆ ವಿಡಿಯೋ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!