AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುನೀಲ್​ ಶೆಟ್ಟಿ ಮಕ್ಕಳ ಮದುವೆ ಬಗ್ಗೆ ಸುಳ್ಳು ಸುದ್ದಿ; ಗಾಸಿಪ್ ಹಬ್ಬಿಸಿದವರಿಗೆ ಕ್ಲಾಸ್​ ತೆಗೆದುಕೊಂಡ ಸ್ಟಾರ್​ ನಟ

ಮಕ್ಕಳ ಮದುವೆ ಕುರಿತು ಪ್ರಕಟವಾಗಿರುವ ಗಾಸಿಪ್​ ನೋಡಿ ಸುನೀಲ್​ ಶೆಟ್ಟಿಗೆ ಬೇಸರ ಆಗಿದೆ. ಆ ಬಗ್ಗೆ ಅವರು ಟ್ವಿಟರ್​ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.

ಸುನೀಲ್​ ಶೆಟ್ಟಿ ಮಕ್ಕಳ ಮದುವೆ ಬಗ್ಗೆ ಸುಳ್ಳು ಸುದ್ದಿ; ಗಾಸಿಪ್ ಹಬ್ಬಿಸಿದವರಿಗೆ ಕ್ಲಾಸ್​ ತೆಗೆದುಕೊಂಡ ಸ್ಟಾರ್​ ನಟ
ಸುನೀಲ್​ ಶೆಟ್ಟಿ ಫ್ಯಾಮಿಲಿ
Follow us
TV9 Web
| Updated By: ಮದನ್​ ಕುಮಾರ್​

Updated on: Jan 22, 2022 | 12:05 PM

ನಟ ಸುನೀಲ್​ ಶೆಟ್ಟಿ (Suniel Shetty) ಅವರಿಗೆ ಚಿತ್ರರಂಗದಲ್ಲಿ ಈಗಲೂ ಸಖತ್​ ಬೇಡಿಕೆ ಇದೆ. ಸಿನಿಮಾಗಳ ಆಯ್ಕೆಯಲ್ಲಿ ಅವರು ತುಂಬ ಚ್ಯೂಸಿ ಆಗಿದ್ದಾರೆ. ಬಾಲಿವುಡ್​ ಚಿತ್ರಗಳ ಜೊತೆಜೊತೆಗೆ ಅವರು ದಕ್ಷಿಣ ಭಾರತದ ಸಿನಿಮಾಗಳ ಕಡೆಗೂ ಮುಖ ಮಾಡಿದ್ದಾರೆ. ಈ ನಡುವೆ ಅವರಿಗಿಂತಲೂ ಹೆಚ್ಚಾಗಿ ಅವರ ಮಕ್ಕಳು ಸದ್ದು ಮಾಡುತ್ತಿದ್ದಾರೆ. ಸುನೀಲ್​ ಶೆಟ್ಟಿ ಪುತ್ರಿ ಆಥಿಯಾ ಶೆಟ್ಟಿ (Athiya Shetty) ಈಗಾಗಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಪುತ್ರ ಅಹಾನ್​ ಶೆಟ್ಟಿ (Ahan Shetty) ಕೂಡ ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ್ದಾರೆ. ಮಕ್ಕಳ ಸಿನಿ ಜರ್ನಿ ಬಗ್ಗೆ ಸುನೀಲ್​ ಶೆಟ್ಟಿ ಅವರಿಗೆ ಯಾವುದೇ ತಕರಾರು ಇಲ್ಲ. ಆದರೆ ಮಕ್ಕಳ ಖಾಸಗಿ ಜೀವನದ ಬಗ್ಗೆ ಅನೇಕ ಅಂಕೆ-ಕಂತೆಗಳು ಹರಿದಾಡುತ್ತಿವೆ. ಇದು ಸುನೀಲ್ ಶೆಟ್ಟಿ ಬೇಸರಕ್ಕೆ ಕಾರಣ ಆಗಿದೆ. ಅದರಲ್ಲೂ ಮಕ್ಕಳ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಗಾಸಿಪ್​ಗಳು ಹಬ್ಬಿವೆ. ಆ ಕುರಿತು ಸುನೀಲ್​ ಶೆಟ್ಟಿ ಇತ್ತೀಚೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಗಾಸಿಪ್​ ಹಬ್ಬಿಸಿದವರ ವಿರುದ್ಧ ಅವರು ಗರಂ ಆಗಿದ್ದಾರೆ.

ಆಥಿಯಾ ಶೆಟ್ಟಿ ಅವರು ಕ್ರಿಕೆಟರ್​ ಕೆ.ಎಲ್​. ರಾಹುಲ್​ ಜೊತೆ ಡೇಟಿಂಗ್​ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಅವರಿಬ್ಬರು ಜೊತೆಯಾಗಿರುವ ಅನೇಕ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿವೆ. ಅದೇ ರೀತಿ ಅಹಾನ್​ ಶೆಟ್ಟಿ ಅವರು ಮಾಡೆಲ್​ ಕಮ್​ ಫ್ಯಾಷನ್​ ಡಿಸೈನರ್​ ತಾನಿಯಾ ಶ್ರಾಫ್​ ಜೊತೆ ಡೇಟಿಂಗ್​ ಮಾಡುತ್ತಿದ್ದಾರೆ. ಇವರ ಮದುವೆ ಬಗ್ಗೆ ಇತ್ತೀಚೆಗೆ ಒಂದು ಸುದ್ದಿ ಜೋರಾಗಿ ಹಬ್ಬಿತ್ತು.

‘ಬಾಲಿವುಡ್​ ಹಂಗಾಮ’ ನ್ಯೂಸ್​ ಪೋರ್ಟಲ್​ನಲ್ಲಿ ಸುನೀಲ್​ ಶೆಟ್ಟಿ ಮಕ್ಕಳ ಮದುವೆಯ ಕುರಿತು ಒಂದು ವರದಿ ಪ್ರಕಟ ಆಗಿದೆ. 2022ರಲ್ಲಿಯೇ ಇಬ್ಬರೂ ಮಕ್ಕಳಿಗೆ ಸುನೀಲ್​ ಶೆಟ್ಟಿ ಮದುವೆ ಮಾಡಲಿದ್ದಾರೆ ಎಂಬ ಮಾಹಿತಿ ಅದರಲ್ಲಿ ಇದೆ. ಅದನ್ನು ಕಂಡು ಸುನೀಲ್​ ಶೆಟ್ಟಿಗೆ ಬೇಸರ ಆಗಿದೆ. ಆ ಬಗ್ಗೆ ಅವರು ಟ್ವಿಟರ್​ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.

‘ಈ ಸುದ್ದಿ ನೋಡಿ ಅಚ್ಚರಿಪಡಬೇಕೋ ಅಥವಾ ನೊಂದುಕೊಳ್ಳಬೇಕೋ ತಿಳಿದಿಲ್ಲ. ಸತ್ಯವನ್ನು ತಿಳಿಯದೇ ಇಂಥ ಸುದ್ದಿ ಪ್ರಕಟಿಸುವ ಅವಶ್ಯಕತೆ ಏನು ಎಂಬುದು ಅರ್ಥವಾಗುತ್ತಿಲ್ಲ. ಇಂಥ ಬೇಜವಾಬ್ದಾರಿಯುತ ಲೇಖನಗಳಿಂದ ಪತ್ರಿಕೋದ್ಯಮದ ಮೇಲಿನ ವಿಶ್ವಾಸಾರ್ಹತೆಗೆ ಧಕ್ಕೆ ಆಗುತ್ತದೆ’ ಎಂದು ಸುನೀಲ್​ ಶೆಟ್ಟಿ ಟ್ವೀಟ್​ ಮಾಡಿದ್ದಾರೆ.

ಅದೇನೇ ಇರಲಿ, ಅವರ ಮಕ್ಕಳು ಮಾತ್ರ ತಮ್ಮ ಫೋಟೋಗಳನ್ನು ಮುಲಾಜಿಲ್ಲದೇ ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಅಹಾನ್​ ಶೆಟ್ಟಿ ನಟನೆಯ ‘ತಡಪ್​’ ಸಿನಿಮಾ ಇತ್ತೀಚೆಗೆ ತೆರೆಕಂಡಿತು. ಅದರ ಪ್ರೀಮಿಯರ್​ ಶೋಗೆ ತಾನಿಯಾ ಶ್ರಾಫ್​ ಕೂಡ ಆಗಮಿಸಿದ್ದರು.

ಇದನ್ನೂ ಓದಿ:

ಸುನೀಲ್ ಶೆಟ್ಟಿ ಪುತ್ರಿ ಆಥಿಯಾಗೂ ಎದುರಾಗಿತ್ತು ಬಾಡಿ ಶೇಮಿಂಗ್; ಅನುಭವಿಸಿದ ಕಷ್ಟಗಳನ್ನು ಎಳೆಎಳೆಯಾಗಿ ತೆರೆದಿಟ್ಟ ನಟಿ

ಕೊನೆಗೂ ಸುನೀಲ್ ಶೆಟ್ಟಿ ಕುಟುಂಬದೊಂದಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ರಾಹುಲ್; ಆಥಿಯಾ ಜತೆ ಭರ್ಜರಿ ಪೋಸ್

ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು