AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುನೀಲ್​ ಶೆಟ್ಟಿ ಮಕ್ಕಳ ಮದುವೆ ಬಗ್ಗೆ ಸುಳ್ಳು ಸುದ್ದಿ; ಗಾಸಿಪ್ ಹಬ್ಬಿಸಿದವರಿಗೆ ಕ್ಲಾಸ್​ ತೆಗೆದುಕೊಂಡ ಸ್ಟಾರ್​ ನಟ

ಮಕ್ಕಳ ಮದುವೆ ಕುರಿತು ಪ್ರಕಟವಾಗಿರುವ ಗಾಸಿಪ್​ ನೋಡಿ ಸುನೀಲ್​ ಶೆಟ್ಟಿಗೆ ಬೇಸರ ಆಗಿದೆ. ಆ ಬಗ್ಗೆ ಅವರು ಟ್ವಿಟರ್​ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.

ಸುನೀಲ್​ ಶೆಟ್ಟಿ ಮಕ್ಕಳ ಮದುವೆ ಬಗ್ಗೆ ಸುಳ್ಳು ಸುದ್ದಿ; ಗಾಸಿಪ್ ಹಬ್ಬಿಸಿದವರಿಗೆ ಕ್ಲಾಸ್​ ತೆಗೆದುಕೊಂಡ ಸ್ಟಾರ್​ ನಟ
ಸುನೀಲ್​ ಶೆಟ್ಟಿ ಫ್ಯಾಮಿಲಿ
TV9 Web
| Edited By: |

Updated on: Jan 22, 2022 | 12:05 PM

Share

ನಟ ಸುನೀಲ್​ ಶೆಟ್ಟಿ (Suniel Shetty) ಅವರಿಗೆ ಚಿತ್ರರಂಗದಲ್ಲಿ ಈಗಲೂ ಸಖತ್​ ಬೇಡಿಕೆ ಇದೆ. ಸಿನಿಮಾಗಳ ಆಯ್ಕೆಯಲ್ಲಿ ಅವರು ತುಂಬ ಚ್ಯೂಸಿ ಆಗಿದ್ದಾರೆ. ಬಾಲಿವುಡ್​ ಚಿತ್ರಗಳ ಜೊತೆಜೊತೆಗೆ ಅವರು ದಕ್ಷಿಣ ಭಾರತದ ಸಿನಿಮಾಗಳ ಕಡೆಗೂ ಮುಖ ಮಾಡಿದ್ದಾರೆ. ಈ ನಡುವೆ ಅವರಿಗಿಂತಲೂ ಹೆಚ್ಚಾಗಿ ಅವರ ಮಕ್ಕಳು ಸದ್ದು ಮಾಡುತ್ತಿದ್ದಾರೆ. ಸುನೀಲ್​ ಶೆಟ್ಟಿ ಪುತ್ರಿ ಆಥಿಯಾ ಶೆಟ್ಟಿ (Athiya Shetty) ಈಗಾಗಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಪುತ್ರ ಅಹಾನ್​ ಶೆಟ್ಟಿ (Ahan Shetty) ಕೂಡ ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ್ದಾರೆ. ಮಕ್ಕಳ ಸಿನಿ ಜರ್ನಿ ಬಗ್ಗೆ ಸುನೀಲ್​ ಶೆಟ್ಟಿ ಅವರಿಗೆ ಯಾವುದೇ ತಕರಾರು ಇಲ್ಲ. ಆದರೆ ಮಕ್ಕಳ ಖಾಸಗಿ ಜೀವನದ ಬಗ್ಗೆ ಅನೇಕ ಅಂಕೆ-ಕಂತೆಗಳು ಹರಿದಾಡುತ್ತಿವೆ. ಇದು ಸುನೀಲ್ ಶೆಟ್ಟಿ ಬೇಸರಕ್ಕೆ ಕಾರಣ ಆಗಿದೆ. ಅದರಲ್ಲೂ ಮಕ್ಕಳ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಗಾಸಿಪ್​ಗಳು ಹಬ್ಬಿವೆ. ಆ ಕುರಿತು ಸುನೀಲ್​ ಶೆಟ್ಟಿ ಇತ್ತೀಚೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಗಾಸಿಪ್​ ಹಬ್ಬಿಸಿದವರ ವಿರುದ್ಧ ಅವರು ಗರಂ ಆಗಿದ್ದಾರೆ.

ಆಥಿಯಾ ಶೆಟ್ಟಿ ಅವರು ಕ್ರಿಕೆಟರ್​ ಕೆ.ಎಲ್​. ರಾಹುಲ್​ ಜೊತೆ ಡೇಟಿಂಗ್​ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಅವರಿಬ್ಬರು ಜೊತೆಯಾಗಿರುವ ಅನೇಕ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿವೆ. ಅದೇ ರೀತಿ ಅಹಾನ್​ ಶೆಟ್ಟಿ ಅವರು ಮಾಡೆಲ್​ ಕಮ್​ ಫ್ಯಾಷನ್​ ಡಿಸೈನರ್​ ತಾನಿಯಾ ಶ್ರಾಫ್​ ಜೊತೆ ಡೇಟಿಂಗ್​ ಮಾಡುತ್ತಿದ್ದಾರೆ. ಇವರ ಮದುವೆ ಬಗ್ಗೆ ಇತ್ತೀಚೆಗೆ ಒಂದು ಸುದ್ದಿ ಜೋರಾಗಿ ಹಬ್ಬಿತ್ತು.

‘ಬಾಲಿವುಡ್​ ಹಂಗಾಮ’ ನ್ಯೂಸ್​ ಪೋರ್ಟಲ್​ನಲ್ಲಿ ಸುನೀಲ್​ ಶೆಟ್ಟಿ ಮಕ್ಕಳ ಮದುವೆಯ ಕುರಿತು ಒಂದು ವರದಿ ಪ್ರಕಟ ಆಗಿದೆ. 2022ರಲ್ಲಿಯೇ ಇಬ್ಬರೂ ಮಕ್ಕಳಿಗೆ ಸುನೀಲ್​ ಶೆಟ್ಟಿ ಮದುವೆ ಮಾಡಲಿದ್ದಾರೆ ಎಂಬ ಮಾಹಿತಿ ಅದರಲ್ಲಿ ಇದೆ. ಅದನ್ನು ಕಂಡು ಸುನೀಲ್​ ಶೆಟ್ಟಿಗೆ ಬೇಸರ ಆಗಿದೆ. ಆ ಬಗ್ಗೆ ಅವರು ಟ್ವಿಟರ್​ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.

‘ಈ ಸುದ್ದಿ ನೋಡಿ ಅಚ್ಚರಿಪಡಬೇಕೋ ಅಥವಾ ನೊಂದುಕೊಳ್ಳಬೇಕೋ ತಿಳಿದಿಲ್ಲ. ಸತ್ಯವನ್ನು ತಿಳಿಯದೇ ಇಂಥ ಸುದ್ದಿ ಪ್ರಕಟಿಸುವ ಅವಶ್ಯಕತೆ ಏನು ಎಂಬುದು ಅರ್ಥವಾಗುತ್ತಿಲ್ಲ. ಇಂಥ ಬೇಜವಾಬ್ದಾರಿಯುತ ಲೇಖನಗಳಿಂದ ಪತ್ರಿಕೋದ್ಯಮದ ಮೇಲಿನ ವಿಶ್ವಾಸಾರ್ಹತೆಗೆ ಧಕ್ಕೆ ಆಗುತ್ತದೆ’ ಎಂದು ಸುನೀಲ್​ ಶೆಟ್ಟಿ ಟ್ವೀಟ್​ ಮಾಡಿದ್ದಾರೆ.

ಅದೇನೇ ಇರಲಿ, ಅವರ ಮಕ್ಕಳು ಮಾತ್ರ ತಮ್ಮ ಫೋಟೋಗಳನ್ನು ಮುಲಾಜಿಲ್ಲದೇ ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಅಹಾನ್​ ಶೆಟ್ಟಿ ನಟನೆಯ ‘ತಡಪ್​’ ಸಿನಿಮಾ ಇತ್ತೀಚೆಗೆ ತೆರೆಕಂಡಿತು. ಅದರ ಪ್ರೀಮಿಯರ್​ ಶೋಗೆ ತಾನಿಯಾ ಶ್ರಾಫ್​ ಕೂಡ ಆಗಮಿಸಿದ್ದರು.

ಇದನ್ನೂ ಓದಿ:

ಸುನೀಲ್ ಶೆಟ್ಟಿ ಪುತ್ರಿ ಆಥಿಯಾಗೂ ಎದುರಾಗಿತ್ತು ಬಾಡಿ ಶೇಮಿಂಗ್; ಅನುಭವಿಸಿದ ಕಷ್ಟಗಳನ್ನು ಎಳೆಎಳೆಯಾಗಿ ತೆರೆದಿಟ್ಟ ನಟಿ

ಕೊನೆಗೂ ಸುನೀಲ್ ಶೆಟ್ಟಿ ಕುಟುಂಬದೊಂದಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ರಾಹುಲ್; ಆಥಿಯಾ ಜತೆ ಭರ್ಜರಿ ಪೋಸ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್