AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜಯ್ ಕಪೂರ್ ಸತ್ತ ಮೇಲೆ ಆಸ್ತಿ ವಿವಾದ; ನಮಗೂ ಪಾಲು ಕೊಡಿ ಎಂದು ಕೋರ್ಟ್​ಗೆ ಹೋದ ಕರೀಶ್ಮಾ ಮಕ್ಕಳು

ಸಂಜಯ್ ಕಪೂರ್ ಅವರ ನಿಧನದ ನಂತರ ಅವರ 30,000 ಕೋಟಿ ರೂಪಾಯಿ ಆಸ್ತಿಯ ಮೇಲೆ ವಿವಾದ ಉದ್ಭವಿಸಿದೆ. ಮಾಜಿ ಪತ್ನಿ ಕರೀಶ್ಮಾ ಕಪೂರ್ ಅವರ ಮಕ್ಕಳು ತಮ್ಮ ಪಾಲಿನ ಆಸ್ತಿಗಾಗಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಸಂಜಯ್ ಕಪೂರ್ ಅವರ ವಿಲ್ ನಕಲಿ ಎಂದು ಕರೀಶ್ಮಾ ಆರೋಪಿಸಿದ್ದಾರೆ.

ಸಂಜಯ್ ಕಪೂರ್ ಸತ್ತ ಮೇಲೆ ಆಸ್ತಿ ವಿವಾದ; ನಮಗೂ ಪಾಲು ಕೊಡಿ ಎಂದು ಕೋರ್ಟ್​ಗೆ ಹೋದ ಕರೀಶ್ಮಾ ಮಕ್ಕಳು
ಸಂಜಯ್ ಕಪೂರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 10, 2025 | 9:35 AM

Share

ಸಂಜಯ್ ಕಪೂರ್ (Sanjay Kapoor) ಅವರು ಇತ್ತೀಚೆಗೆ ನಿಧನ ಹೊಂದಿದರು. ಲಂಡನ್​ನಲ್ಲಿ ಪೊಲೋ ಆಟ ಆಡುವಾಗ ಹೃದಯಾಘಾತ ಆಯಿತು. ಜೇನು ನೊಣ ನುಂಗಿದ್ದು ಅವರ ಸಾವಿಗೆ ಕಾರಣ ಎಂದೆಲ್ಲ ವರದಿಗಳಾದರೂ ಅದು ಸುಳ್ಳು ಎಂಬುದು ಆ ಬಳಿಕ ಗೊತ್ತಾಯಿತು. ಹೃದಯಾಘಾತವೇ ಅವರ ಸಾವಿಗೆ ಕಾರಣ ಆಗಿದೆ. ಈಗ ಸಂಜಯ್ ಕಪೂರ್ ಅವರ ಆಸ್ತಿಯ ಮೇಲೆ ಎಲ್ಲರ ಕಣ್ಣು ಬಿದ್ದಿದೆ. ಮಾಜಿ ನಟಿ ಕರೀಶ್ಮಾ ಕಪೂರ್ ಮತ್ತು ಸಂಜಯ್ ವಿವಾಹ ಆಗಿ ವಿಚ್ಛೇದನ ಪಡೆದಿದ್ದರು. ಈಗ ಕರೀಶ್ಮಾ ಮಕ್ಕಳು ಈಗ ಸಂಜಯ್ ಆಸ್ತಿಯಲ್ಲಿ ಪಾಲು ಬೇಕು ಎಂದು ಕೇಳಿದ್ದಾರೆ. ಇದಕ್ಕಾಗಿ ಕೋರ್ಟ್ ಮೆಟ್ಟಿಲು ಕೂಡ ಏರಿದ್ದಾರೆ.

ಸಂಜಯ್  ಕಪೂರ್ ವಿಲ್ ಬರೆದಿಟ್ಟಿದ್ದರು ಎನ್ನಲಾಗಿದೆ. ಈ ವಿಲ್​ ಫೇಕ್ ಎಂಬುದು ಕರೀಶ್ಮಾ ಆರೋಪ. ಈ ಕಾರಣದಿಂದಲೇ ಚಿಕ್ಕ ಮಕ್ಕಳನ್ನು ಮುಂದೆ ಬಿಟ್ಟು ಕೋರ್ಟ್​ನಲ್ಲಿ ಕೇಸ್ ಹಾಕಿಸಿದ್ದಾರೆ. ‘ನಿಜವಾದ ವಿಲ್​ನ ಅವರು ತೋರಿಸಿಲ್ಲ. ಈಗ ತೋರಿಸಿರುವ ವಿಲ್ ಫೋರ್ಜರಿ ಆಗಿದೆ’ ಎಂದು ಆರೋಪಿಸಲಾಗಿದೆ. ಕರೀಶ್ಮಾ ಕಪೂರ್ ಮಕ್ಕಳು ಕೋರ್ಟ್​ ಬಳಿ ಒಂದು ಮನವಿ ಮಾಡಿದ್ದಾರೆ. ಸಂಜಯ್ ಕಪೂರ್ ಪತ್ನಿ ಪ್ರಿಯಾ ಸಚ್​​ದೇವ್ ಅವರು ಆಸ್ತಿ ಬಳಕೆ ಮಾಡದಂತೆ ಕೋರಿದ್ದಾರೆ. ಕರೀಶ್ಮಾಗೆ ಇಬ್ಬರು ಮಕ್ಕಳು. ಸಮೀರಾಗೆ 20 ವರ್ಷ ಹಾಗೂ ಕಿಯಾನ್​ಗೆ 12 ವರ್ಷ.

ಸಂಜಯ್ ಕಪೂರ್ ಜೂನ್ 11ರಂದು ನಿಧನ ಹೊಂದದಿರು. ಅವರು 30 ಸಾವಿರ ಕೋಟಿ ರೂಪಾಯಿ ಆಸ್ತಿ. ಈ ಮೊದಲು ಕರೀಶ್ಮಾ ಅವರು ಆಸ್ತಿಯಲ್ಲಿ ಪಾಲು ಪಡೆಯಲು ಮಾರ್ಗ ಹುಡುಕುತ್ತಿದ್ದಾರೆ ಎಂದು ವರದಿ ಆಗಿತ್ತು. ಇನ್ನು, ಸಂಜಯ್ ಮೂರನೇ ಪತ್ನಿ ಪ್ರಿಯಾ ಸಚ್​ದೇವ್ ಕೂಡ ಆಸ್ತಿ ಎಲ್ಲ ತಮ್ಮದೇ ಎನ್ನುತ್ತಿದ್ದಾರೆ.

ಇದನ್ನೂ ಓದಿ
Image
Video: ‘ತಡ ಮಾಡದೇ ಮಗು ಮಾಡಿಕೊಳ್ಳಿ’ ಎಂದು ಸಲಹೆ; ಓಕೆ ಎಂದ ಅನುಶ್ರೀ
Image
ರಜನಿಕಾಂತ್ ಉದಾಹರಣೆ ನೀಡಿ ಅಮಿತಾಭ್ ಬಚ್ಚನ್​​ಗೆ ಪಾಠ ಮಾಡಿದ ನೆಟ್ಟಿಗರು
Image
‘ಸು ಫ್ರಮ್ ಸೋ’ ಒಟಿಟಿಗೆ ಬಂದರೂ ಥಿಯೇಟರ್​ನಲ್ಲಿ ನಿಂತಿಲ್ಲ ಕಲೆಕ್ಷನ್
Image
ಸುಧಾರಾಣಿ ಬಿಗ್ ಬಾಸ್​ಗೆ ಬರ್ತಾರೆ ಎಂದವರಿಗೆ ಉತ್ತರಿಸಿದ ನಟಿ

ಇದನ್ನೂ ಓದಿ: ಸಂಜಯ್ ಕಪೂರ್  ಆಸ್ತಿ ಮೇಲೆ ಮೂವರು ಪತ್ನಿಯರ ಕಣ್ಣು

ಸಂಜಯ್ ಕಪೂರ್ ಸಹೋದರಿ ಮಂದಿರಾ ಕಪೂರ್ ಅವರು ಒಂದು ಗಂಭೀರ ಆರೋಪ ಮಾಡಿದ್ದಾರೆ. ಪ್ರಿಯಾ ಸಚ್​ದೇವ್ ಅವರು ತಮ್ಮ ತಾಯಿ ಬಳಿ ಒತ್ತಾಯ ಪೂರ್ವಕವಾಗಿ ಆಸ್ತಿ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ವಿಚಾರ ಕೂಡ ಚರ್ಚೆಗೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್