AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunny Deol: ‘ಗದರ್​ 2’ ಚಿತ್ರ ಘೋಷಿಸಿದ ಸನ್ನಿ ಡಿಯೋಲ್​: ಮೋಷನ್​ ಪೋಸ್ಟರ್​ ಜತೆ ರಿಲೀಸ್​ ಬಗ್ಗೆಯೂ ಸಿಕ್ತು ಮಾಹಿತಿ

Gadar 2: ‘ಗದರ್​’ ಚಿತ್ರಕ್ಕೆ ಅನಿಲ್​ ಶರ್ಮಾ ನಿರ್ದೇಶನ ಮಾಡಿದ್ದರು. ಈಗ ಎರಡನೇ ಪಾರ್ಟ್​ ಕೂಡ ಅವರ ನಿರ್ದೇಶನದಲ್ಲೇ ಮೂಡಿಬರಲಿದೆ. ‘ಗದರ್​’ನಲ್ಲಿ ನಾಯಕಿ ಆಗಿದ್ದ ಅಮೀಷಾ ಪಟೇಲ್​ ಅವರೇ ಮತ್ತೆ ಸನ್ನಿ ಡಿಯೋಲ್​ಗೆ ಜೋಡಿ ಆಗುತ್ತಿದ್ದಾರೆ.

Sunny Deol: ‘ಗದರ್​ 2’ ಚಿತ್ರ ಘೋಷಿಸಿದ ಸನ್ನಿ ಡಿಯೋಲ್​: ಮೋಷನ್​ ಪೋಸ್ಟರ್​ ಜತೆ ರಿಲೀಸ್​ ಬಗ್ಗೆಯೂ ಸಿಕ್ತು ಮಾಹಿತಿ
‘ಗದರ್​ 2’
TV9 Web
| Edited By: |

Updated on: Oct 16, 2021 | 9:58 AM

Share

2001ರಲ್ಲಿ ತೆರೆಕಂಡ ‘ಗದರ್​: ಏಕ್​ ಪ್ರೇಮ್​ ಕಥಾ’ ಚಿತ್ರ ಸೂಪರ್​ ಹಿಟ್​ ಆಗಿತ್ತು. ಆ ಸಿನಿಮಾದಲ್ಲಿ ನಟ ಸನ್ನಿ ಡಿಯೋಲ್​ ಅವರು ಮಿಂಚಿದ್ದರು. ಅದಾಗಿ 20 ವರ್ಷಗಳ ಕಳೆದಿವೆ. ಈಗ ‘ಗದರ್​: ಏಕ್​ ಪ್ರೇಮ್​ ಕಥಾ’ ಸಿನಿಮಾದ ಸೀಕ್ವೆಲ್​ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ದಸರಾ ಹಬ್ಬದ ಶುಭ ಸಂದರ್ಭದಲ್ಲಿ ಸನ್ನಿ ಡಿಯೋಲ್​ ಅವರು ‘ಗದರ್​ 2’ ಚಿತ್ರ ಅನೌನ್ಸ್​ ಮಾಡಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಸನ್ನಿ ಡಿಯೋಲ್​ ಅವರಿಗೆ ಈಗ 64 ವರ್ಷ ವಯಸ್ಸು. ಇತ್ತೀಚಿನ ವರ್ಷಗಳಲ್ಲಿ ಅವರು ನಟನೆಯಲ್ಲಿ ಅಷ್ಟೇನೂ ಸಕ್ರಿಯವಾಗಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾ ಮಾಡುತ್ತಿದ್ದಾರಷ್ಟೇ. ಈ ನಡುವೆ ಅವರು ‘ಗದರ್​ 2’ ಘೋಷಣೆ ಮಾಡಿರುವುದು ಸಿನಿಪ್ರಿಯರಿಗೆ ಅಚ್ಚರಿ ಮೂಡಿಸಿದೆ. ಈ ಚಿತ್ರ 2022ಕ್ಕೆ ಬಿಡುಗಡೆ ಆಗಲಿದೆ ಎಂಬುದನ್ನೂ ಸನ್ನಿ ಡಿಯೋಲ್​ ತಿಳಿಸಿದ್ದಾರೆ.

‘ಗದರ್​ 2’ ಕುರಿತು ಈ ಸಿಹಿ ಸುದ್ದಿಯನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ‘ಎರಡು ದಶಕಗಳ ಬಳಿಕ ಕಾಯುವಿಕೆಗೆ ಕೊನೆಗೂ ಅಂತ್ಯ ಸಿಕ್ಕಿದೆ. ದಸರಾ ಹಬ್ಬದ ಈ ಶುಭ ಸಂದರ್ಭದಲ್ಲಿ ‘ಗದರ್​ 2’ ಚಿತ್ರದ ಮೋಷನ್​ ಪೋಸ್ಟರ್​ ಪ್ರಸ್ತುತ ಪಡಿಸುತ್ತಿದ್ದೇನೆ’ ಎಂದು ಅವರು ಟ್ವಿಟರ್​, ಇನ್​ಸ್ಟಾಗ್ರಾಮ್​ ಮುಂತಾದ ಖಾತೆಗಳಲ್ಲಿ ಪೋಸ್ಟ್​ ಮಾಡಿದ್ದಾರೆ.

‘ಗದರ್​’ ಚಿತ್ರಕ್ಕೆ ಅನಿಲ್​ ಶರ್ಮಾ ನಿರ್ದೇಶನ ಮಾಡಿದ್ದರು. ಈಗ ಎರಡನೇ ಪಾರ್ಟ್​ ಕೂಡ ಅವರ ನಿರ್ದೇಶನದಲ್ಲೇ ಮೂಡಿಬರಲಿದೆ. ‘ಗದರ್​’ನಲ್ಲಿ ನಾಯಕಿ ಆಗಿದ್ದ ಅಮೀಷಾ ಪಟೇಲ್​ ಅವರೇ ಮತ್ತೆ ಸನ್ನಿ ಡಿಯೋಲ್​ಗೆ ಜೋಡಿ ಆಗುತ್ತಿದ್ದಾರೆ. ದೇಶ ವಿಭಜನೆಯ ಹಿನ್ನೆಲೆಯಲ್ಲಿ ‘ಗದರ್​’ ಕಥೆ ಮೂಡಿಬಂದಿತ್ತು. ಈಗ ಅದರ ಸೀಕ್ವೆಲ್​ಗೆ ನಿರ್ದೇಶಕರು ಯಾವ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ ಎಂಬ ಕೌತುಕ ಮನೆ ಮಾಡಿದೆ. ‘ಕಥೆ ಮುಂದುವರಿಯುತ್ತದೆ’ ಎಂದು ಮಾತಿನ ಮೂಲಕ ಸನ್ನಿ ಡಿಯೋಲ್​ ಇನ್ನಷ್ಟು ನಿರೀಕ್ಷೆ ಮೂಡಿಸಿದ್ದಾರೆ.

ಇದನ್ನೂ ಓದಿ:

ಶಾರುಖ್​ ಮಗನನ್ನು ಅರೆಸ್ಟ್​ ಮಾಡಿದ ಎನ್​ಸಿಬಿ ಅಧಿಕಾರಿಗೆ ಈಗ ಹೊಸ ತಲೆನೋವು; ಇದು ಯಾರ ಸಂಚು?

‘ಅದಾನಿ ಬಂದರು ಡ್ರಗ್ಸ್​ ಮತ್ತು ರೈತರ ಕೊಲೆ ಮರೆಮಾಚಲು ಶಾರುಖ್​ ಮಗ ಟಾರ್ಗೆಟ್​’: ವಿಶಾಲ್​ ದದ್ಲಾನಿ

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ