AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunny Deol: ‘ಗದರ್​ 2’ ಚಿತ್ರ ಘೋಷಿಸಿದ ಸನ್ನಿ ಡಿಯೋಲ್​: ಮೋಷನ್​ ಪೋಸ್ಟರ್​ ಜತೆ ರಿಲೀಸ್​ ಬಗ್ಗೆಯೂ ಸಿಕ್ತು ಮಾಹಿತಿ

Gadar 2: ‘ಗದರ್​’ ಚಿತ್ರಕ್ಕೆ ಅನಿಲ್​ ಶರ್ಮಾ ನಿರ್ದೇಶನ ಮಾಡಿದ್ದರು. ಈಗ ಎರಡನೇ ಪಾರ್ಟ್​ ಕೂಡ ಅವರ ನಿರ್ದೇಶನದಲ್ಲೇ ಮೂಡಿಬರಲಿದೆ. ‘ಗದರ್​’ನಲ್ಲಿ ನಾಯಕಿ ಆಗಿದ್ದ ಅಮೀಷಾ ಪಟೇಲ್​ ಅವರೇ ಮತ್ತೆ ಸನ್ನಿ ಡಿಯೋಲ್​ಗೆ ಜೋಡಿ ಆಗುತ್ತಿದ್ದಾರೆ.

Sunny Deol: ‘ಗದರ್​ 2’ ಚಿತ್ರ ಘೋಷಿಸಿದ ಸನ್ನಿ ಡಿಯೋಲ್​: ಮೋಷನ್​ ಪೋಸ್ಟರ್​ ಜತೆ ರಿಲೀಸ್​ ಬಗ್ಗೆಯೂ ಸಿಕ್ತು ಮಾಹಿತಿ
‘ಗದರ್​ 2’
TV9 Web
| Updated By: ಮದನ್​ ಕುಮಾರ್​|

Updated on: Oct 16, 2021 | 9:58 AM

Share

2001ರಲ್ಲಿ ತೆರೆಕಂಡ ‘ಗದರ್​: ಏಕ್​ ಪ್ರೇಮ್​ ಕಥಾ’ ಚಿತ್ರ ಸೂಪರ್​ ಹಿಟ್​ ಆಗಿತ್ತು. ಆ ಸಿನಿಮಾದಲ್ಲಿ ನಟ ಸನ್ನಿ ಡಿಯೋಲ್​ ಅವರು ಮಿಂಚಿದ್ದರು. ಅದಾಗಿ 20 ವರ್ಷಗಳ ಕಳೆದಿವೆ. ಈಗ ‘ಗದರ್​: ಏಕ್​ ಪ್ರೇಮ್​ ಕಥಾ’ ಸಿನಿಮಾದ ಸೀಕ್ವೆಲ್​ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ದಸರಾ ಹಬ್ಬದ ಶುಭ ಸಂದರ್ಭದಲ್ಲಿ ಸನ್ನಿ ಡಿಯೋಲ್​ ಅವರು ‘ಗದರ್​ 2’ ಚಿತ್ರ ಅನೌನ್ಸ್​ ಮಾಡಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಸನ್ನಿ ಡಿಯೋಲ್​ ಅವರಿಗೆ ಈಗ 64 ವರ್ಷ ವಯಸ್ಸು. ಇತ್ತೀಚಿನ ವರ್ಷಗಳಲ್ಲಿ ಅವರು ನಟನೆಯಲ್ಲಿ ಅಷ್ಟೇನೂ ಸಕ್ರಿಯವಾಗಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾ ಮಾಡುತ್ತಿದ್ದಾರಷ್ಟೇ. ಈ ನಡುವೆ ಅವರು ‘ಗದರ್​ 2’ ಘೋಷಣೆ ಮಾಡಿರುವುದು ಸಿನಿಪ್ರಿಯರಿಗೆ ಅಚ್ಚರಿ ಮೂಡಿಸಿದೆ. ಈ ಚಿತ್ರ 2022ಕ್ಕೆ ಬಿಡುಗಡೆ ಆಗಲಿದೆ ಎಂಬುದನ್ನೂ ಸನ್ನಿ ಡಿಯೋಲ್​ ತಿಳಿಸಿದ್ದಾರೆ.

‘ಗದರ್​ 2’ ಕುರಿತು ಈ ಸಿಹಿ ಸುದ್ದಿಯನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ‘ಎರಡು ದಶಕಗಳ ಬಳಿಕ ಕಾಯುವಿಕೆಗೆ ಕೊನೆಗೂ ಅಂತ್ಯ ಸಿಕ್ಕಿದೆ. ದಸರಾ ಹಬ್ಬದ ಈ ಶುಭ ಸಂದರ್ಭದಲ್ಲಿ ‘ಗದರ್​ 2’ ಚಿತ್ರದ ಮೋಷನ್​ ಪೋಸ್ಟರ್​ ಪ್ರಸ್ತುತ ಪಡಿಸುತ್ತಿದ್ದೇನೆ’ ಎಂದು ಅವರು ಟ್ವಿಟರ್​, ಇನ್​ಸ್ಟಾಗ್ರಾಮ್​ ಮುಂತಾದ ಖಾತೆಗಳಲ್ಲಿ ಪೋಸ್ಟ್​ ಮಾಡಿದ್ದಾರೆ.

‘ಗದರ್​’ ಚಿತ್ರಕ್ಕೆ ಅನಿಲ್​ ಶರ್ಮಾ ನಿರ್ದೇಶನ ಮಾಡಿದ್ದರು. ಈಗ ಎರಡನೇ ಪಾರ್ಟ್​ ಕೂಡ ಅವರ ನಿರ್ದೇಶನದಲ್ಲೇ ಮೂಡಿಬರಲಿದೆ. ‘ಗದರ್​’ನಲ್ಲಿ ನಾಯಕಿ ಆಗಿದ್ದ ಅಮೀಷಾ ಪಟೇಲ್​ ಅವರೇ ಮತ್ತೆ ಸನ್ನಿ ಡಿಯೋಲ್​ಗೆ ಜೋಡಿ ಆಗುತ್ತಿದ್ದಾರೆ. ದೇಶ ವಿಭಜನೆಯ ಹಿನ್ನೆಲೆಯಲ್ಲಿ ‘ಗದರ್​’ ಕಥೆ ಮೂಡಿಬಂದಿತ್ತು. ಈಗ ಅದರ ಸೀಕ್ವೆಲ್​ಗೆ ನಿರ್ದೇಶಕರು ಯಾವ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ ಎಂಬ ಕೌತುಕ ಮನೆ ಮಾಡಿದೆ. ‘ಕಥೆ ಮುಂದುವರಿಯುತ್ತದೆ’ ಎಂದು ಮಾತಿನ ಮೂಲಕ ಸನ್ನಿ ಡಿಯೋಲ್​ ಇನ್ನಷ್ಟು ನಿರೀಕ್ಷೆ ಮೂಡಿಸಿದ್ದಾರೆ.

ಇದನ್ನೂ ಓದಿ:

ಶಾರುಖ್​ ಮಗನನ್ನು ಅರೆಸ್ಟ್​ ಮಾಡಿದ ಎನ್​ಸಿಬಿ ಅಧಿಕಾರಿಗೆ ಈಗ ಹೊಸ ತಲೆನೋವು; ಇದು ಯಾರ ಸಂಚು?

‘ಅದಾನಿ ಬಂದರು ಡ್ರಗ್ಸ್​ ಮತ್ತು ರೈತರ ಕೊಲೆ ಮರೆಮಾಚಲು ಶಾರುಖ್​ ಮಗ ಟಾರ್ಗೆಟ್​’: ವಿಶಾಲ್​ ದದ್ಲಾನಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ