AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

56 ಕೋಟಿ ರೂಪಾಯಿ ಸಾಲ; ಸನ್ನಿ ಡಿಯೋಲ್ ಬಂಗಲೆ ಹರಾಜಿಗಿಟ್ಟ ಬ್ಯಾಂಕ್ ಅಧಿಕಾರಿಗಳು

ಸನ್ನಿ ಡಿಯೋಲ್ ಅವರು ಮುಂಬೈನ ಜುಹುದಲ್ಲಿ ‘ಸನ್ನಿ ವಿಲ್ಲಾ’ ಹೆಸರಿನ ಬಂಗಲೆ ಹೊಂದಿದ್ದಾರೆ. ಈ ಬಂಗಲೆ ಹರಾಜಿಗೆ ಬಂದಿದೆ. ಸದ್ಯ ಬಂದಿರುವ ನೋಟಿಸ್ ಪ್ರಕಾರ, ಸನ್ನಿ ಅವರು ಬ್ಯಾಂಕ್ ಆಫ್ ಬರೋಡಾದಿಂದ 55.99 ಕೋಟಿ ರೂಪಾಯಿ ಸಾಲ ಪಡೆದಿದ್ದರು. ಆದರೆ, ಇದನ್ನು ಅವರು ಹಿಂದಿರುಗಿಸಿಲ್ಲ.

56 ಕೋಟಿ ರೂಪಾಯಿ ಸಾಲ; ಸನ್ನಿ ಡಿಯೋಲ್ ಬಂಗಲೆ ಹರಾಜಿಗಿಟ್ಟ ಬ್ಯಾಂಕ್ ಅಧಿಕಾರಿಗಳು
ಸನ್ನಿ
ರಾಜೇಶ್ ದುಗ್ಗುಮನೆ
|

Updated on:Aug 21, 2023 | 8:08 AM

Share

‘ಗದರ್ 2’ ಚಿತ್ರದಿಂದ ಸನ್ನಿ ಡಿಯೋಲ್ (Sunny Deol) ದೊಡ್ಡ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ‘ಸನ್ನಿಗೆ ಸಾಲು ಸಾಲು ಆಫರ್​ಗಳು ಕೂಡ ಬರುತ್ತಿವೆ. ಅವರ ಸಂಭಾವನೆ ಹೆಚ್ಚಾಗಿದೆ’ ಎಂದೆಲ್ಲ ವರದಿ ಆಗಿದೆ. ಆದರೆ, ನಿಜ ವಿಚಾರ ಆ ರೀತಿ ಇಲ್ಲ. ‘ಗದರ್ 2’ (Gadar 2) ಹಿಟ್ ಆದರೂ ಸನ್ನಿಗೆ ಸಿಕ್ಕಿರುವ ಸಂಭಾವನೆ ಕಡಿಮೆ ಎಂದೇ ಹೇಳಲಾಗುತ್ತಿದೆ. ಇದಕ್ಕೆ ಕಾರಣ ಅವರ ಮನೆಯನ್ನು ಬ್ಯಾಂಕ್​ನವರು ಹರಾಜಿಗೆ ಇಟ್ಟಿರುವುದು. 55 ಕೋಟಿ ರೂಪಾಯಿ ಸಾಲ ಇರುವುದರಿಂದ ಮನೆ ಹರಾಜಿಗೆ ಬಂದಿದೆ. ಸೆಪ್ಟೆಂಬರ್ 25ರಂದು ಈ ಹರಾಜು ಪ್ರಕ್ರಿಯೆ ನಡೆಯಲಿದೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ.

ಸನ್ನಿ ಡಿಯೋಲ್ ಅವರು ಮುಂಬೈನ ಜುಹುದಲ್ಲಿ ‘ಸನ್ನಿ ವಿಲ್ಲಾ’ ಹೆಸರಿನ ಬಂಗಲೆ ಹೊಂದಿದ್ದಾರೆ. ಈ ಬಂಗಲೆ ಹರಾಜಿಗೆ ಬಂದಿದೆ. ಸದ್ಯ ಬಂದಿರುವ ನೋಟಿಸ್ ಪ್ರಕಾರ, ಸನ್ನಿ ಅವರು ಬ್ಯಾಂಕ್ ಆಫ್ ಬರೋಡಾದಿಂದ 55.99 ಕೋಟಿ ರೂಪಾಯಿ ಸಾಲ ಪಡೆದಿದ್ದರು. ಆದರೆ, ಇದನ್ನು ಅವರು ಹಿಂದಿರುಗಿಸಿಲ್ಲ. ಈ ಕಾರಣಕ್ಕೆ ಅವರ ಮನೆಯನ್ನು ಹರಾಜಿಗೆ ಇಡಲಾಗಿದೆ.

ಸನ್ನಿ ಡಿಯೋಲ್ ಕಚೇರಿ ಇದೇ ಬಂಗಲೆಯಲ್ಲಿದೆ. ಇಲ್ಲಿ ಒಂದು ಪ್ರಿವ್ಯೂ ಥಿಯೇಟರ್ ಹಾಗೂ ಪೋಸ್ಟ್ ಪ್ರೊಡಕ್ಷನ್ ಮಾಡಲು ಎರಡು ಸ್ಟುಡಿಯೋ ಇದೆ. 80ರ ದಶಕದಲ್ಲಿ ಇದನ್ನು ಕಟ್ಟಲಾಗಿದೆ. ಸದ್ಯ ಇದನ್ನು ಬ್ಯಾಂಕ್​ನವರು ಹರಾಜು ಹಾಕಲಿದ್ದಾರೆ. ವರ್ಚುವಲ್ ಹರಾಜು ನಡೆಯಲಿದೆ. ಹೆಚ್ಚಿನ ಮೊತ್ತಕ್ಕೆ ಬಿಡ್ ಮಾಡಿದವರಿಗೆ ಬಂಗಲೆ ಸಿಗಲಿದೆ. ಆ ಬಳಿಕ ಬ್ಯಾಂಕ್​ ಆಫ್ ಬರೋಡಾದವರು ಜಿಲ್ಲಾ ಮ್ಯಾಜಿಸ್ಟ್ರೇಟ್​ಗೆ ಮಾಹಿತಿ ನೀಡಲಿದ್ದಾರೆ. ಅವರಿಂದ ಒಪ್ಪಿಗೆ ಸಿಕ್ಕ ಬಳಿಕ ಪ್ರಾಪರ್ಟಿ ಖರೀದಿದಾರರ ಕೈ ಸೇರಲಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಒಪ್ಪಿಗೆ ಸಿಕ್ಕ ಬಳಿಕ ಪ್ರಾಪರ್ಟಿ ಹಸ್ತಾಂತರಕ್ಕೆ ಒಂದು ತಿಂಗಳಿಂದ ಒಂದು ವರ್ಷ ಸಮಯ ಹಿಡಿಯಲಿದೆ.

ಇದನ್ನೂ ಓದಿ: 300 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಗದರ್ 2’ ಸಿನಿಮಾ; ‘ಕೆಜಿಎಫ್ 2’, ‘ಪಠಾಣ್’ ದಾಖಲೆ ಉಡೀಸ್

ಸನ್ನಿ ಡಿಯೋಲ್ ಅವರು ಈ ಮೊದಲು ‘ಘಾಯಲ್ ಒನ್ಸ್ ಅಗೇನ್’ (2016) ಸಿನಿಮಾ ನಿರ್ದೇಶನ ಮಾಡಿದ್ದರು. ಇದನ್ನು ಅವರ ತಂದೆ ಧರ್ಮೇಂದ್ರ ನಿರ್ಮಾಣ ಮಾಡಿದ್ದರು. ಇದಕ್ಕೆ ಹಣ ಹೊಂದಿಸಲು ಅವರು ಈ ಮನೆಯನ್ನು ಅಡ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಸನ್ನಿ ಡಿಯೋಲ್ ವಕ್ತಾರ ಸುತ್ತೋಲೆ ಬಿಡುಗಡೆ ಮಾಡಿದ್ದು, ಪ್ರಾಪರ್ಟಿ ಹರಾಜಿಗೆ ಬರದಂತೆ ನೋಡಿಕೊಳ್ಳುತ್ತೇವೆ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:47 am, Mon, 21 August 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು