AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಬಗ್ಗೆ ಹಬ್ಬಿದ ಎಲ್ಲಾ ವದಂತಿಗೆ ಸ್ಪಷ್ಟನೆ ನೀಡಿದ ನಟ ಸನ್ನಿ ಡಿಯೋಲ್

ಸನ್ನಿ ಡಿಯೋಲ್ ನಟನೆಯ ‘ಗದರ್ 2’ ಸಿನಿಮಾ ಆಗಸ್ಟ್ 11ರಂದು ರಿಲೀಸ್ ಆಯಿತು. ಈ ಚಿತ್ರ ಎರಡು ವಾರ ಕಳೆಯುವುದರೊಳಗೆ ಸುಮಾರು 400 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಯಾವ ಸ್ಟಾರ್ ಹೀರೋಗೂ ಕಡಿಮೆ ಇಲ್ಲ ಅನ್ನೋದನ್ನು ಅವರು ಸಾಬೀತು ಮಾಡಿದ್ದಾರೆ.

ತಮ್ಮ ಬಗ್ಗೆ ಹಬ್ಬಿದ ಎಲ್ಲಾ ವದಂತಿಗೆ ಸ್ಪಷ್ಟನೆ ನೀಡಿದ ನಟ ಸನ್ನಿ ಡಿಯೋಲ್
ಗದರ್ 2
ರಾಜೇಶ್ ದುಗ್ಗುಮನೆ
|

Updated on: Aug 22, 2023 | 6:30 AM

Share

ಒಂದು ಸಿನಿಮಾ ಹಿಟ್ ಆದ ಬಳಿಕ ಚಿತ್ರದಲ್ಲಿ ನಟಿಸಿದ ಎಲ್ಲಾ ಕಲಾವಿದರ ವೃತ್ತಿ ಜೀವನಕ್ಕೆ ಮೈಲೇಜ್ ಸಿಗುತ್ತದೆ. ಇದರ ಜೊತೆಗೆ ಒಂದಷ್ಟು ವದಂತಿಗಳು ಕೂಡ ಹುಟ್ಟಿಕೊಳ್ಳುತ್ತವೆ. ಈಗ ಸನ್ನಿ ಡಿಯೋಲ್ (Sunny Deol) ಅವರಿಗೂ ಹಾಗೇಯೇ ಆಗಿದೆ. ‘ಗದರ್ 2’ ಸಿನಿಮಾದಿಂದ ಅವರ ಖ್ಯಾತಿ ಹೆಚ್ಚಾಗಿದೆ. ಜೊತೆಗೆ ಒಂದಷ್ಟು ವದಂತಿಗಳು ಹುಟ್ಟಿಕೊಂಡಿವೆ. ‘ಸನ್ನಿ ಡಿಯೋಲ್​ಗೆ ಹಲವು ಆಫರ್​ಗಳು ಬರುತ್ತಿವೆ. ಆದರೆ, ಇವೆಲ್ಲ ಬದಿಗಿಟ್ಟು ಬಾರ್ಡರ್ ಸೀಕ್ವೆಲ್​ನಲ್ಲಿ ಅವರು ನಟಿಸುತ್ತಿದ್ದಾರೆ’ ಎಂದು ವರದಿ ಆಗಿತ್ತು. ಈ ಬಗ್ಗೆ ಸನ್ನಿ ಡಿಯೋಲ್ ಸ್ಪಷ್ಟನೆ ನೀಡಿದ್ದಾರೆ.

ಸನ್ನಿ ಡಿಯೋಲ್ ನಟನೆಯ ‘ಗದರ್ 2’ ಸಿನಿಮಾ ಆಗಸ್ಟ್ 11ರಂದು ರಿಲೀಸ್ ಆಯಿತು. ಈ ಚಿತ್ರ ಎರಡು ವಾರ ಕಳೆಯುವುದರೊಳಗೆ ಸುಮಾರು 400 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಯಾವ ಸ್ಟಾರ್ ಹೀರೋಗೂ ಕಡಿಮೆ ಇಲ್ಲ ಅನ್ನೋದನ್ನು ಅವರು ಸಾಬೀತು ಮಾಡಿದ್ದಾರೆ. ಆ್ಯಕ್ಷನ್ ಪ್ರಿಯರಿಗೆ ಸಿನಿಮಾ ಇಷ್ಟವಾಗಿದೆ. ಈಗ ಸನ್ನಿ ತಮ್ಮ ಬಗ್ಗೆ ಹುಟ್ಟಿಕೊಂಡ ಸುಳ್ಳು ಸುದ್ದಿಗೆ ಸ್ಪಷ್ಟನೆ ನೀಡಿದ್ದಾರೆ.

‘ನಾನು ಕೆಲವು ಸಿನಿಮಾಗಳನ್ನು ಒಪ್ಪಿಕೊಂಡಿದ್ದೇನೆ ಎಂದು ಹಲವು ಕಡೆಗಳಲ್ಲಿ ವರದಿ ಆಗಿದೆ. ಆದರೆ ನನ್ನ ಗಮನ ಸದ್ಯ ‘ಗದರ್ 2’ ಚಿತ್ರದ ಮೇಲೆ ಮಾತ್ರ ಇದೆ. ನಿಮ್ಮ ಪ್ರೀತಿಯನ್ನು ಸ್ವೀಕರಿಸುವುದರಲ್ಲಿ ಬ್ಯುಸಿ ಇದ್ದೇನೆ. ನಾನು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ನಾನು ಒಂದು ವಿಶೇಷ ವಿಷಯವನ್ನು ಶೀಘ್ರವೇ ಘೋಷಿಸುವೆ. ಅಲ್ಲಿಯವರೆಗೆ ನೀವು ಪ್ರೀತಿ ತೋರಿಸುತ್ತಿರಿ’ ಎಂದಿದ್ದಾರೆ ಸನ್ನಿ ಡಿಯೋಲ್.

ಇದನ್ನೂ ಓದಿ: ಸನ್ನಿ ಡಿಯೋಲ್ ಮನೆ ಹರಾಜನ್ನು ಹಿಂಪಡೆದ ಬ್ಯಾಂಕ್; ತಾಂತ್ರಿಕ ಸಮಸ್ಯೆಯ ಕಾರಣ ನೀಡಿದ ಅಧಿಕಾರಿಗಳು

ಸನ್ನಿ ಡಿಯೋಲ್ ಅವರ ಮುಂಬೈನ ಜುಹುದಲ್ಲಿರುವ ಬಂಗಲೆ ಹರಾಜಿಗೆ ಬಂದಿದೆ. ಮಾಡಿರುವ 56 ಕೋಟಿ ರೂಪಾಯಿ ಸಾಲವನ್ನು ತೀರಿಸದ ಕಾರಣ ಈ ಮನೆ ಹರಾಜಿಗೆ ಇಡಲು ಬ್ಯಾಂಕ್ ಆಫ್ ಬರೋಡಾ ಮುಂದಾಗಿತ್ತು. ಆದರೆ, ತಾಂತ್ರಿಕ ಸಮಸ್ಯೆಯ ಕಾರಣ ನೀಡಿ ಸದ್ಯ ಈ ಹರಾಜು ಪ್ರಕ್ರಿಯೆಯನ್ನು ಹಿಂಪಡೆಯಲಾಗಿದೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಸನ್ನಿ ಡಿಯೋಲ್ ಅವರ ಈ ಬಂಗಲೆ ಸಾಕಷ್ಟು ಐಷಾರಾಮಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?