AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಬರೆಯುತ್ತಿರುವ ‘ಗದರ್​ 2’; ನಿಲ್ಲುತ್ತಲೇ ಇಲ್ಲ ಸನ್ನಿ ಡಿಯೋಲ್​ ಅಬ್ಬರ

‘ಗದರ್​ 2’ ಚಿತ್ರದ ಖದರ್​ ಸದ್ಯಕ್ಕಂತೂ ನಿಲ್ಲುವಂತೆ ಕಾಣುತ್ತಿಲ್ಲ. 8ನೇ ದಿನ ಕೂಡ ಈ ಸಿನಿಮಾ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಶುಕ್ರವಾರ (ಆ.18) ಸಂಜೆಯೊಳಗೆ 300 ಕೋಟಿ ರೂಪಾಯಿ ಗಡಿದಾಟಿದೆ. ಅಕ್ಷಯ್​ ಕುಮಾರ್​ ನಟನೆಯ ‘ಒಎಂಜಿ 2’, ರಜನಿಕಾಂತ್​ ಅಭಿನಯದ ‘ಜೈಲರ್’ ಸಿನಿಮಾಗಳ ಪೈಪೋಟಿಯನ್ನೂ ಎದುರಿಸಿ ‘ಗದರ್​ 2’ ಚಿತ್ರ ಮುನ್ನುಗ್ಗುತ್ತಿದೆ.

ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಬರೆಯುತ್ತಿರುವ ‘ಗದರ್​ 2’; ನಿಲ್ಲುತ್ತಲೇ ಇಲ್ಲ ಸನ್ನಿ ಡಿಯೋಲ್​ ಅಬ್ಬರ
ಸನ್ನಿ ಡಿಯೋಲ್​
ಮದನ್​ ಕುಮಾರ್​
|

Updated on: Aug 18, 2023 | 7:34 PM

Share

ಬಾಲಿವುಡ್​ನ ‘ಗದರ್​ 2’ ಸಿನಿಮಾ (Gadar 2 Movie) ಇಷ್ಟರಮಟ್ಟಿಗೆ ಕಲೆಕ್ಷನ್​ ಮಾಡುತ್ತದೆ ಎಂದು ಪ್ರಾಯಶಃ ಯಾರೂ ಊಹಿಸಿರಲಿಲ್ಲ. ಕಳೆದ ಕೆಲವು ವರ್ಷಗಳಿಂದ ಹಿಂದಿ ಚಿತ್ರರಂಗದಲ್ಲಿ ಬಹುತೇಕ ಸೈಡ್​ಲೈನ್​ ಆಗಿದ್ದ ಸನ್ನಿ ಡಿಯೋಲ್​ (Sunny Deol) ಅವರು ಈ ಸಿನಿಮಾ ಮೂಲಕ ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಟಾಪ್​ ನಟರ ಪಟ್ಟಿಯಲ್ಲಿ ಈಗ ಅವರ ಹೆಸರು ಕೂಡ ಸೇರ್ಪಡೆ ಆಗಿದೆ. ಗಲ್ಲಾಪೆಟ್ಟಿಗೆಯಲ್ಲಿ ‘ಗದರ್​ 2’ ಅಬ್ಬರ ಜೋರಾಗಿದೆ. ಬಿಡುಗಡೆಯಾಗಿ 8 ದಿನಗಳು ಕಳೆದರೂ ಈ ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್​ ಮಾಡುತ್ತಲೇ ಇದೆ. ಇದರಿಂದ ನಿರ್ಮಾಪಕರಿಗೆ ಸಖತ್​ ಲಾಭ ಆಗಿದೆ. ಎರಡನೇ ವೀಕೆಂಡ್​ನಲ್ಲಿ ಈ ಚಿತ್ರ ಮತ್ತಷ್ಟು ಬಿಸ್ನೆಸ್​ ಮಾಡುವುದು ಖಚಿತವಾಗಿದೆ. ಈಗಾಗಲೇ ‘ಗದರ್​ 2’ ಸಿನಿಮಾದ ಕಲೆಕ್ಷನ್​ (Gadar 2 Collection) 300 ಕೋಟಿ ರೂಪಾಯಿ ದಾಟಿದೆ. ಈ ಚಿತ್ರಕ್ಕೆ ಅನಿಲ್​ ಶರ್ಮಾ ನಿರ್ದೇಶನ ಮಾಡಿದ್ದು, ಅಮೀಷಾ ಪಟೇಲ್​ ಅವರು ನಾಯಕಿಯಾಗಿ ನಟಿಸಿದ್ದಾರೆ.

ಟ್ರೇಡ್​ ವಿಶ್ಲೇಷಕರು ‘ಗದರ್​ 2’ ಸಿನಿಮಾದ ಗೆಲುವುವನ್ನು ‘ಐತಿಹಾಸಿಕ’ ಎಂದು ಬಣ್ಣಿಸಿದ್ದಾರೆ. ಒಂದು ವಾರ ಕಳೆಯುವುದರಲ್ಲಿ 300 ಕೋಟಿ ರೂಪಾಯಿ ಕಮಾಯಿ ಮಾಡುವುದು ಎಂದರೆ ಸುಲಭದ ಮಾತಲ್ಲ. ದಕ್ಷಿಣ ಭಾರತದ ಸಿನಿಮಾಗಳ ಪ್ರಭಾವದ ಎದುರು ಬಾಲಿವುಡ್​ ಚಿತ್ರಗಳ ಮಾರುಕಟ್ಟೆ ಕೊಂಚ ಡಲ್​ ಆಗಿತ್ತು. ಆದರೆ ಈಗ ‘ಗದರ್​ 2’ ಚಿತ್ರದ ಗೆಲುವಿನಿಂದಾಗಿ ಬಿ-ಟೌನ್​ ಅಂಗಳದಲ್ಲಿ ಮತ್ತೆ ಹೊಸ ಚೈತನ್ಯ ಮೂಡಿದಂತಾಗಿದೆ. ನಟ ಸನ್ನಿ ಡಿಯೋಲ್​ ಅವರಿಗೆ ಬೇಡಿಕೆ ಹೆಚ್ಚಾಗಿದೆ.

ಟ್ರೇಡ್​ ವಿಶ್ಲೇಷಕ ತರಣ್​ ಆದರ್ಶ್​ ಟ್ವೀಟ್​:

ಆಗಸ್ಟ್​ 11ರಂದು ‘ಗದರ್​ 2’ ಸಿನಿಮಾ ಬಿಡುಗಡೆ ಆಯಿತು. ಮೊದಲ ದಿನ ಈ ಸಿನಿಮಾ ಬರೋಬ್ಬರಿ 40.10 ಕೋಟಿ ರೂಪಾಯಿ ಗಳಿಸುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿತು. ಎರಡನೇ ದಿನ 43.08 ಕೋಟಿ ರೂಪಾಯಿ ಬಾಚಿಕೊಂಡಿತು. ಮೂರನೇ ದಿನ 51.70 ಕೋಟಿ ರೂಪಾಯಿ ಆದಾಯ ಹರಿದುಬಂತು. 4ನೇ ದಿನ ಸಂಗ್ರಹ ಆಗಿದ್ದು 38.70 ಕೋಟಿ ರೂಪಾಯಿ. 5ನೇ ದಿನವಂತೂ ಬಂಪರ್ ಲಾಟರಿ ಎಂಬಂತೆ ಭರ್ಜರಿಯಾಗಿ 55.40 ಕೋಟಿ ರೂಪಾಯಿ ಕಲೆಕ್ಷನ್​ ಆಯಿತು. ಆರನೇ ದಿನ 32.37 ಕೋಟಿ ರೂಪಾಯಿ ಗಳಿಕೆ ಆಗಿದೆ. 7ನೇ ದಿನ ಆಗಿದ್ದು 23.28 ಕೋಟಿ ರೂಪಾಯಿ.

ಇದನ್ನೂ ಓದಿ: ‘ಗದರ್​ 2’ ಯಶಸ್ಸು ಸಹಿಸದ ಕಿಡಿಗೇಡಿಗಳು; ಚಿತ್ರಮಂದಿರದ ಎದುರು ಬಾಂಬ್​ ಸ್ಫೋಟ

‘ಗದರ್​ 2’ ಚಿತ್ರದ ಖದರ್​ ಇಷ್ಟಕ್ಕೇ ನಿಲ್ಲುವಂತೆ ಕಾಣುತ್ತಿಲ್ಲ. ಶುಕ್ರವಾರ (ಆಗಸ್ಟ್​ 18) ಕೂಡ ಈ ಸಿನಿಮಾ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಶುಕ್ರವಾರ ಸಂಜೆಯೊಳಗೆ 300 ಕೋಟಿ ರೂಪಾಯಿ ಗಡಿದಾಟಿದೆ. ಅಕ್ಷಯ್​ ಕುಮಾರ್​ ನಟನೆಯ ‘ಒಎಂಜಿ 2’, ರಜನಿಕಾಂತ್​ ಅಭಿನಯದ ‘ಜೈಲರ್’ ಸಿನಿಮಾಗಳ ಪೈಪೋಟಿಯನ್ನೂ ಎದುರಿಸಿ ‘ಗದರ್​ 2’ ಚಿತ್ರ ಮುನ್ನುಗ್ಗುತ್ತಿದೆ. ಪ್ರೇಕ್ಷಕರಿಂದ ಬಾಯಿ ಮಾತಿನ ಪ್ರಚಾರ ಚೆನ್ನಾಗಿ ಸಿಕ್ಕಿದ್ದರಿಂದ ಈ ಸಿನಿಮಾಗೆ ಅನುಕೂಲ ಆಗಿದೆ. ಸಾಲು ಸಾಲು ರಜೆ ಬಂದಿದ್ದರ ಲಾಭವನ್ನೂ ಈ ಸಿನಿಮಾ ಪಡೆದುಕೊಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ