AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

300 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಗದರ್ 2’ ಸಿನಿಮಾ; ‘ಕೆಜಿಎಫ್ 2’, ‘ಪಠಾಣ್’ ದಾಖಲೆ ಉಡೀಸ್

ಮೊದಲ ಶುಕ್ರವಾರ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತದೆ. ಎರಡನೇ ಶುಕ್ರವಾರ ಎನ್ನುವಾಗ ಸಿನಿಮಾದ ಅಬ್ಬರ ಕೊಂಚ ಕಡಿಮೆ ಆಗಿರುತ್ತದೆ. ಆದರೆ, ‘ಗದರ್ 2’ ಚಿತ್ರಕ್ಕೆ ಇದು ಅನ್ವಯ ಆಗುವುದಿಲ್ಲ. ಆಗಸ್ಟ್ 11ರಿಂದ ಇಲ್ಲಿಯವರೆಗೆ ಸಿನಿಮಾ ಭರ್ಜರಿ ಗಳಿಕೆ ಮಾಡುತ್ತಿದೆ. ಈ ಮೂಲಕ ಸಿನಿಮಾ ಸಖತ್ ಕಮಾಯಿ ಮಾಡುತ್ತಿದೆ.

300 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಗದರ್ 2’ ಸಿನಿಮಾ; ‘ಕೆಜಿಎಫ್ 2’, ‘ಪಠಾಣ್’ ದಾಖಲೆ ಉಡೀಸ್
ಯಶ್-ಸನ್ನಿ ಡಿಯೋಲ್-ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
|

Updated on:Aug 19, 2023 | 10:39 AM

Share

ಸನ್ನಿ ಡಿಯೋಲ್ ನಟನೆಯ ‘ಗದರ್ 2’ ಸಿನಿಮಾ (Gadar 2 Movie) ಬಾಕ್ಸ್ ಆಫೀಸ್​ನಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರದ ಅಬ್ಬರ ಕಡಿಮೆ ಆಗುತ್ತಿಲ್ಲ. ಭಾರತದ ಬಾಕ್ಸ್ ಆಫೀಸ್​ನಲ್ಲಿ ಕೇವಲ ಎಂಟು ದಿನಕ್ಕೆ ಈ ಚಿತ್ರ 300 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ‘ಗದರ್ 2’ ಯಶ್ ನಟನೆಯ ‘ಕೆಜಿಎಫ್ 2’ ಹಾಗೂ ಶಾರುಖ್ ಖಾನ್ ನಟನೆಯ ‘ಪಠಾಣ್’ ಚಿತ್ರ (Pathaan Movie) ಮಾಡಿದ್ದ ದಾಖಲೆಯನ್ನು ಉಡೀಸ್ ಮಾಡಿದೆ. ಶನಿವಾರ (ಆಗಸ್ಟ್ 19) ಹಾಗೂ ನಾಳೆ (ಆಗಸ್ಟ್ 20) ಚಿತ್ರಕ್ಕೆ ಮತ್ತಷ್ಟು ಕಲೆಕ್ಷನ್ ಆಗಲಿದೆ.

ಮೊದಲ ಶುಕ್ರವಾರ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತದೆ. ಎರಡನೇ ಶುಕ್ರವಾರ ಎನ್ನುವಾಗ ಸಿನಿಮಾದ ಅಬ್ಬರ ಕೊಂಚ ಕಡಿಮೆ ಆಗಿರುತ್ತದೆ. ಆದರೆ, ‘ಗದರ್ 2’ ಚಿತ್ರಕ್ಕೆ ಇದು ಅನ್ವಯ ಆಗುವುದಿಲ್ಲ. ಆಗಸ್ಟ್ 11ರಿಂದ ಇಲ್ಲಿಯವರೆಗೆ ಸಿನಿಮಾ ಭರ್ಜರಿ ಗಳಿಕೆ ಮಾಡುತ್ತಿದೆ. ಈ ಮೂಲಕ ಸಿನಿಮಾ ಸಖತ್ ಕಮಾಯಿ ಮಾಡುತ್ತಿದೆ.

ಶುಕ್ರವಾರ ಈ ಸಿನಿಮಾ 20 ಕೋಟಿ ರೂಪಾಯಿ ಬಾಚಿಕೊಂಡಿದೆ. ಸಿನಿಮಾ ರಿಲೀಸ್ ಆದ ಎರಡನೇ ಶುಕ್ರವಾರ   ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿರೋದು ‘ಗದರ್ 2’ ಚಿತ್ರದ ಹೆಚ್ಚುಗಾರಿಕೆ. ಈ ಮೊದಲು ರಿಲೀಸ್ ಆದ ‘ದಿ ಕಾಶ್ಮೀರ್ ಫೈಲ್ಸ್’(19 ಕೋಟಿ ರೂಪಾಯಿ), ‘ದಂಗಲ್’ (18 ಕೋಟಿ ರೂಪಾಯಿ), ‘ಪಿಕೆ’ (15 ಕೋಟಿ ರೂಪಾಯಿ), ‘ಕೆಜಿಎಫ್ 2’ (11.25) ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಇದನ್ನು ‘ಗದರ್ 2’ ಹಿಂದಿಕ್ಕಿದೆ.

ಇದನ್ನೂ ಓದಿ: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಬರೆಯುತ್ತಿರುವ ‘ಗದರ್​ 2’; ನಿಲ್ಲುತ್ತಲೇ ಇಲ್ಲ ಸನ್ನಿ ಡಿಯೋಲ್​ ಅಬ್ಬರ

ಸನ್ನಿ ಡಿಯೋಲ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆದರೆ, ಅವರಿಗೆ ಇಷ್ಟು ದೊಡ್ಡ ಮಟ್ಟದ ಯಶಸ್ಸು ಸಿಕ್ಕಿರಲಿಲ್ಲ. ‘ಗದರ್ 2’ ಚಿತ್ರದ ಮೂಲಕ ಅವರು ಅತಿ ದೊಡ್ಡ ಗೆಲುವು ಕಂಡಿದ್ದಾರೆ. ಈ ಗೆಲುವಿನಿಂದ ಅವರಿಗೆ ಬರೋ ಆಫರ್​ಗಳ ಸಂಖ್ಯೆ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:36 am, Sat, 19 August 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ