300 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಗದರ್ 2’ ಸಿನಿಮಾ; ‘ಕೆಜಿಎಫ್ 2’, ‘ಪಠಾಣ್’ ದಾಖಲೆ ಉಡೀಸ್

ಮೊದಲ ಶುಕ್ರವಾರ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತದೆ. ಎರಡನೇ ಶುಕ್ರವಾರ ಎನ್ನುವಾಗ ಸಿನಿಮಾದ ಅಬ್ಬರ ಕೊಂಚ ಕಡಿಮೆ ಆಗಿರುತ್ತದೆ. ಆದರೆ, ‘ಗದರ್ 2’ ಚಿತ್ರಕ್ಕೆ ಇದು ಅನ್ವಯ ಆಗುವುದಿಲ್ಲ. ಆಗಸ್ಟ್ 11ರಿಂದ ಇಲ್ಲಿಯವರೆಗೆ ಸಿನಿಮಾ ಭರ್ಜರಿ ಗಳಿಕೆ ಮಾಡುತ್ತಿದೆ. ಈ ಮೂಲಕ ಸಿನಿಮಾ ಸಖತ್ ಕಮಾಯಿ ಮಾಡುತ್ತಿದೆ.

300 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಗದರ್ 2’ ಸಿನಿಮಾ; ‘ಕೆಜಿಎಫ್ 2’, ‘ಪಠಾಣ್’ ದಾಖಲೆ ಉಡೀಸ್
ಯಶ್-ಸನ್ನಿ ಡಿಯೋಲ್-ಶಾರುಖ್ ಖಾನ್
Follow us
|

Updated on:Aug 19, 2023 | 10:39 AM

ಸನ್ನಿ ಡಿಯೋಲ್ ನಟನೆಯ ‘ಗದರ್ 2’ ಸಿನಿಮಾ (Gadar 2 Movie) ಬಾಕ್ಸ್ ಆಫೀಸ್​ನಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರದ ಅಬ್ಬರ ಕಡಿಮೆ ಆಗುತ್ತಿಲ್ಲ. ಭಾರತದ ಬಾಕ್ಸ್ ಆಫೀಸ್​ನಲ್ಲಿ ಕೇವಲ ಎಂಟು ದಿನಕ್ಕೆ ಈ ಚಿತ್ರ 300 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ‘ಗದರ್ 2’ ಯಶ್ ನಟನೆಯ ‘ಕೆಜಿಎಫ್ 2’ ಹಾಗೂ ಶಾರುಖ್ ಖಾನ್ ನಟನೆಯ ‘ಪಠಾಣ್’ ಚಿತ್ರ (Pathaan Movie) ಮಾಡಿದ್ದ ದಾಖಲೆಯನ್ನು ಉಡೀಸ್ ಮಾಡಿದೆ. ಶನಿವಾರ (ಆಗಸ್ಟ್ 19) ಹಾಗೂ ನಾಳೆ (ಆಗಸ್ಟ್ 20) ಚಿತ್ರಕ್ಕೆ ಮತ್ತಷ್ಟು ಕಲೆಕ್ಷನ್ ಆಗಲಿದೆ.

ಮೊದಲ ಶುಕ್ರವಾರ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತದೆ. ಎರಡನೇ ಶುಕ್ರವಾರ ಎನ್ನುವಾಗ ಸಿನಿಮಾದ ಅಬ್ಬರ ಕೊಂಚ ಕಡಿಮೆ ಆಗಿರುತ್ತದೆ. ಆದರೆ, ‘ಗದರ್ 2’ ಚಿತ್ರಕ್ಕೆ ಇದು ಅನ್ವಯ ಆಗುವುದಿಲ್ಲ. ಆಗಸ್ಟ್ 11ರಿಂದ ಇಲ್ಲಿಯವರೆಗೆ ಸಿನಿಮಾ ಭರ್ಜರಿ ಗಳಿಕೆ ಮಾಡುತ್ತಿದೆ. ಈ ಮೂಲಕ ಸಿನಿಮಾ ಸಖತ್ ಕಮಾಯಿ ಮಾಡುತ್ತಿದೆ.

ಶುಕ್ರವಾರ ಈ ಸಿನಿಮಾ 20 ಕೋಟಿ ರೂಪಾಯಿ ಬಾಚಿಕೊಂಡಿದೆ. ಸಿನಿಮಾ ರಿಲೀಸ್ ಆದ ಎರಡನೇ ಶುಕ್ರವಾರ   ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿರೋದು ‘ಗದರ್ 2’ ಚಿತ್ರದ ಹೆಚ್ಚುಗಾರಿಕೆ. ಈ ಮೊದಲು ರಿಲೀಸ್ ಆದ ‘ದಿ ಕಾಶ್ಮೀರ್ ಫೈಲ್ಸ್’(19 ಕೋಟಿ ರೂಪಾಯಿ), ‘ದಂಗಲ್’ (18 ಕೋಟಿ ರೂಪಾಯಿ), ‘ಪಿಕೆ’ (15 ಕೋಟಿ ರೂಪಾಯಿ), ‘ಕೆಜಿಎಫ್ 2’ (11.25) ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಇದನ್ನು ‘ಗದರ್ 2’ ಹಿಂದಿಕ್ಕಿದೆ.

ಇದನ್ನೂ ಓದಿ: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಬರೆಯುತ್ತಿರುವ ‘ಗದರ್​ 2’; ನಿಲ್ಲುತ್ತಲೇ ಇಲ್ಲ ಸನ್ನಿ ಡಿಯೋಲ್​ ಅಬ್ಬರ

ಸನ್ನಿ ಡಿಯೋಲ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆದರೆ, ಅವರಿಗೆ ಇಷ್ಟು ದೊಡ್ಡ ಮಟ್ಟದ ಯಶಸ್ಸು ಸಿಕ್ಕಿರಲಿಲ್ಲ. ‘ಗದರ್ 2’ ಚಿತ್ರದ ಮೂಲಕ ಅವರು ಅತಿ ದೊಡ್ಡ ಗೆಲುವು ಕಂಡಿದ್ದಾರೆ. ಈ ಗೆಲುವಿನಿಂದ ಅವರಿಗೆ ಬರೋ ಆಫರ್​ಗಳ ಸಂಖ್ಯೆ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:36 am, Sat, 19 August 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ