AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಠಾಣ್​’ ಚಿತ್ರಕ್ಕಿಂತಲೂ ಹೆಚ್ಚು ಕಲೆಕ್ಷನ್​ ಮಾಡಿದ ‘ಗದರ್​ 2’; ಏನಿದು ಲೆಕ್ಕಾಚಾರ?

ಭಾರತದಲ್ಲಿ ಅತಿ ಹೆಚ್ಚು ಕಲೆಕ್ಷನ್​ ಮಾಡಿದ ಹಿಂದಿ ಸಿನಿಮಾ ಎಂಬ ಖ್ಯಾತಿ ‘ಗದರ್​ 2’ ಚಿತ್ರಕ್ಕಿದೆ. ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಸಿನಿಮಾವನ್ನೂ ಈ ಚಿತ್ರ ಮೀರಿಸಿದೆ. ಆ ಬಗ್ಗೆ ಟ್ರೇಡ್​ ವಿಶ್ಲೇಷಕ ತರಣ್​ ಆದರ್ಶ್​ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇನ್ನೂ ಅನೇಕ ಕಡೆಗಳಲ್ಲಿ ‘ಗದರ್​ 2’ ಪ್ರದರ್ಶನ ಆಗುತ್ತಿದೆ.

‘ಪಠಾಣ್​’ ಚಿತ್ರಕ್ಕಿಂತಲೂ ಹೆಚ್ಚು ಕಲೆಕ್ಷನ್​ ಮಾಡಿದ ‘ಗದರ್​ 2’; ಏನಿದು ಲೆಕ್ಕಾಚಾರ?
ಸನ್ನಿ ಡಿಯೋಲ್​, ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Sep 28, 2023 | 6:02 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ಬಾಕ್ಸ್​ ಆಫೀಸ್​ ಕಿಂಗ್​ ಎಂಬುದು ಸಾಬೀತಾಗಿದೆ. ಈ ವರ್ಷ ಅವರ ಎರಡು ಸಿನಿಮಾಗಳು (ಪಠಾಣ್​, ಜವಾನ್​) ಬ್ಲಾಕ್​ ಬಸ್ಟರ್​ ಹಿಟ್​ ಆಗಿವೆ. ಹಾಗಂತ ಅವರೊಬ್ಬರೇ ಇಂಥ ಸಾಧನೆ ಮಾಡಿರುವುದಲ್ಲ. ಬಾಲಿವುಡ್​ ನಟ ಸನ್ನಿ ಡಿಯೋಲ್​ ಕೂಡ ಈ ವರ್ಷ ತಮ್ಮ ಸಾಮರ್ಥ್ಯ ಏನು ಎಂಬುದು ತೋರಿಸಿದ್ದಾರೆ. ಅವರು ನಟಿಸಿದ ‘ಗದರ್​ 2’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಭರ್ಜರಿ ಕಮಾಯಿ ಮಾಡಿದೆ. ಅಮೀಷಾ ಪಾಟೇಲ್​, ಸನ್ನಿ ಡಿಯೋಲ್​ (Sunny Deol) ನಟನೆಯ ಈ ಸಿನಿಮಾಗೆ ಜನರು ಮನ ಸೋತಿದ್ದಾರೆ. ‘ಜವಾನ್​’ ಸಿನಿಮಾದ ಅಬ್ಬರದ ನಡುವೆಯೂ ‘ಗದರ್ 2’ ಹವಾ ಮುಂದುವರಿದಿದೆ. ಅಚ್ಚರಿ ಎಂದರೆ ಭಾರತದಲ್ಲಿ ಅತಿ ಹೆಚ್ಚು ಕಲೆಕ್ಷನ್​ ಮಾಡಿದ ಹಿಂದಿ ಸಿನಿಮಾ ಎಂಬ ಖ್ಯಾತಿ ‘ಗದರ್​ 2’ (Gadar 2) ಚಿತ್ರಕ್ಕಿದೆ. ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಸಿನಿಮಾವನ್ನೂ ಈ ಚಿತ್ರ ಮೀರಿಸಿದೆ. ಆ ಬಗ್ಗೆ ಟ್ರೇಡ್​ ವಿಶ್ಲೇಷಕ ತರಣ್​ ಆದರ್ಶ್​ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಭಾರತದ ಬಾಕ್ಸ್​ ಆಫೀಸ್​ನಲ್ಲಿ ‘ಪಠಾಣ್​’ ಸಿನಿಮಾ (ಹಿಂದಿ, ತೆಲುಗು ತಮಿಳು ವರ್ಷನ್​ ಸೇರಿ) ಒಟ್ಟು 543 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಕೇವಲ ಹಿಂದಿ ವರ್ಷನ್​ನಿಂದ ಈ ಸಿನಿಮಾ​ ಗಳಿಸಿದ್ದ 524.53 ಕೋಟಿ ರೂಪಾಯಿ. ಈ ಮೊತ್ತವನ್ನು ‘ಗದರ್​ 2’ ಸಿನಿಮಾದ ಹಿಂದಿ ವರ್ಷನ್​ ಗಳಿಕೆ ಹಿಂದಿಕ್ಕಿದೆ. ‘ಗದರ್​ 2’ ಸಿನಿಮಾಗೆ 524.75 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ಆ ಮೂಲಕ ಭಾರತದಲ್ಲಿ ಅತಿ ಹೆಚ್ಚು ಕಮಾಯಿ ಮಾಡಿದ ಹಿಂದಿ ಸಿನಿಮಾ ಎಂಬ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ. ಇದು ಸನ್ನಿ ಡಿಯೋಲ್​ ಅಭಿಮಾನಿಗಳಿಗೆ ಖುಷಿ ನೀಡಿದೆ.

‘ಗದರ್​ 2’ ಸಿನಿಮಾಗೆ ಅನಿಲ್​ ಶರ್ಮಾ ನಿರ್ದೇಶನ ಮಾಡಿದ್ದಾರೆ. ಆಗಸ್ಟ್​ 11ರಂದು ಬಿಡುಗಡೆ ಆದ ಈ ಸಿನಿಮಾ ಈಗಲೂ ಕೆಲವು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ. 7ನೇ ವೀಕೆಂಡ್​ನಲ್ಲೂ ಈ ಸಿನಿಮಾ 2.75 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಆ ಮೂಲಕ ಇನ್ನೂ ಜನರು ಈ ಚಿತ್ರವನ್ನು ನೋಡುತ್ತಿದ್ದಾರೆ ಎಂಬುದು ಸಾಬೀತಾಗಿದೆ. ನಟಿ ಅಮೀಷಾ ಪಟೇಲ್​ ಅವರಿಗೂ ಈ ಚಿತ್ರದಿಂದ ಭರ್ಜರಿ ಗೆಲುವು ಸಿಕ್ಕಿದೆ. ಹಲವು ವರ್ಷಗಳಿಂದ ನಿರೀಕ್ಷಿತ ಮಟ್ಟದ ಗೆಲುವು ಕಾಣದೇ ಮಂಕಾಗಿದ್ದ ಸನ್ನಿ ಡಿಯೋಲ್​ ಅವರು ಈ ಚಿತ್ರದಿಂದ ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ್ದಾರೆ.

ಸನ್ನಿ ಡಿಯೋಲ್​ ಬಳಿಕ ಅಬ್ಬರಿಸಲು ಸಜ್ಜಾದ ಬಾಬಿ ಡಿಯೋಲ್​; ‘ಅನಿಮಲ್​’ ಪೋಸ್ಟರ್​ ವೈರಲ್​

ಸನ್ನಿ ಡಿಯೋಲ್​ ಅವರು ಸಂಸದ ಕೂಡ ಹೌದು. ಬಹುವರ್ಷಗಳ ಬಳಿಕ ಅವರಿಗೆ ಚಿತ್ರರಂಗದಲ್ಲಿ ಯಶಸ್ಸು ಸಿಕ್ಕಿರುವುದರಿಂದ ರಾಜಕೀಯಕ್ಕಿಂತಲೂ ಹೆಚ್ಚಾಗಿ ಸಿನಿಮಾದಲ್ಲಿ ತೊಡಗಿಕೊಳ್ಳಲು ಅವರು ಈಗ ನಿರ್ಧರಿಸಿದ್ದಾರೆ. ಅವರ ಮುಂಬರುವ ಸಿನಿಮಾಗಳ ಮೇಲೆ ನಿರೀಕ್ಷೆ ಮೂಡಿದೆ. ಅವರ ಸಹೋದರ ಬಾಬಿ ಡಿಯೋಲ್​ ‘ಅನಿಮಲ್​’ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದು, ಆ ಚಿತ್ರ ಡಿಸೆಂಬರ್​ 1ರಂದು ರಿಲೀಸ್​ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?