AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

410 ಕೋಟಿ ರೂಪಾಯಿ ದಾಟಿದರೂ ನಿಂತಿಲ್ಲ ‘ಗದರ್​ 2’ ಅಬ್ಬರ: ಸನ್ನಿ ಡಿಯೋಲ್​ಗೆ ಖುಷಿಯೋ ಖುಷಿ

ಮಲ್ಟಿಪ್ಲೆಕ್ಸ್​ಗಳಲ್ಲಿ ‘ಗದರ್​ 2’ ಚಿತ್ರ ಚೆನ್ನಾಗಿ ಪ್ರದರ್ಶನ ಕಂಡಿದೆ. ಅದಕ್ಕಿಂತಲೂ ಉತ್ತಮವಾಗಿ ಸಿಂಗಲ್​ ಸ್ಕ್ರೀನ್​ ಚಿತ್ರಮಂದಿರಗಳಲ್ಲಿ ಈ ಸಿನಿಮಾ ಅಬ್ಬರಿಸಿದೆ. ತುಂಬ ಮಾಸ್​ ಆಗಿ ಮೂಡಿಬಂದಿರುವ ಈ ಚಿತ್ರವನ್ನು ಆ್ಯಕ್ಷನ್​ ಪ್ರಿಯರು ಇಷ್ಟಪಟ್ಟಿದ್ದಾರೆ. ಮತ್ತೆ ಮತ್ತೆ ಚಿತ್ರಮಂದಿರಕ್ಕೆ ಬಂದು ಜನರು ಈ ಸಿನಿಮಾವನ್ನು ನೋಡುತ್ತಿದ್ದಾರೆ.

410 ಕೋಟಿ ರೂಪಾಯಿ ದಾಟಿದರೂ ನಿಂತಿಲ್ಲ ‘ಗದರ್​ 2’ ಅಬ್ಬರ: ಸನ್ನಿ ಡಿಯೋಲ್​ಗೆ ಖುಷಿಯೋ ಖುಷಿ
ಗದರ್ 2
Follow us
ಮದನ್​ ಕುಮಾರ್​
|

Updated on: Aug 24, 2023 | 4:53 PM

ಕಳೆದ 2 ವಾರದಿಂದಲೂ ‘ಗದರ್​ 2’ ಸಿನಿಮಾ (Gadar 2 Movie) ಬಗ್ಗೆಯೇ ಹೆಚ್ಚು ಚರ್ಚೆ ಆಗುತ್ತಿದೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಮಾಡಿದ ಮೋಡಿಯೇ ಇದಕ್ಕೆಲ್ಲ ಕಾರಣ. ಸನ್ನಿ ಡಿಯೋಲ್​ (Sunny Deol), ಅಮೀಷಾ ಪಟೇಲ್​ ನಟನೆಯ ಈ ಸಿನಿಮಾಗೆ ಅನಿಲ್​ ಶರ್ಮಾ ನಿರ್ದೇಶನ ಮಾಡಿದ್ದಾರೆ. ಅವರಿಗೆ ಈ ಚಿತ್ರದಿಂದ ದೊಡ್ಡ ಗೆಲುವು ಸಿಕ್ಕಿದೆ. ಒಂದಷ್ಟು ದಿನಗಳ ಕಾಲ ಸೈಲೆಂಟ್​ ಆಗಿದ್ದ ಬಾಲಿವುಡ್​ ಬಾಕ್ಸ್​ ಆಫೀಸ್​ಗೆ ಈ ಸಿನಿಮಾದಿಂದ ಹೊಸ ಚೈತನ್ಯ ಸಿಕ್ಕಂತೆ ಆಗಿದೆ. ಬಿಡುಗಡೆಯಾಗಿ 13 ದಿನಗಳು ಕಳೆದಿದ್ದರೂ ಕೂಡ ‘ಗದರ್​ 2’ ಸಿನಿಮಾದ ಕ್ರೇಜ್​ ಹಾಗೆಯೇ ಮುಂದುವರಿದಿದೆ. ಈ ಸಿನಿಮಾದ ಒಟ್ಟು ಕಲೆಕ್ಷನ್​ (Gadar 2 Collection) ಈಗ 410 ಕೋಟಿ ರೂಪಾಯಿ ದಾಟಿದೆ. ಇನ್ನೂ ಒಂದಷ್ಟು ದಿನಗಳ ಕಾಲ ಈ ಸಿನಿಮಾ ಅತ್ತುತ್ತಮವಾಗಿ ಪ್ರದರ್ಶನ ಕಾಣುವುದು ಗ್ಯಾರಂಟಿ ಆಗಿದೆ. ಇದರಿಂದ ಸನ್ನಿ ಡಿಯೋಲ್​ ಅವರಿಗೆ ತುಂಬ ಖುಷಿ ಆಗಿದೆ.

ಮೊದಲ ವೀಕೆಂಡ್​ನಲ್ಲಿ ಮಾತ್ರವಲ್ಲದೇ ಎರಡನೇ ವೀಕೆಂಡ್​ನಲ್ಲೂ ‘ಗದರ್​ 2’ ಸಿನಿಮಾ ಅಬ್ಬರಿಸಿತು. ಈಗ ಮೂರನೇ ವೀಕೆಂಡ್​ನಲ್ಲಿ ಯಾವ ರೀತಿ ಕಮಾಲ್​ ಮಾಡಲಿದೆ ಎಂಬುದನ್ನು ಕಾದುನೋಡಬೇಕು. ವಾರದ ದಿನಗಳಲ್ಲಿ ಕೂಡ ಈ ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್​ ಮಾಡುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದೆ. ಬಹು ವರ್ಷಗಳ ಬಳಿಕ ನಟ ಸನ್ನಿ ಡಿಯೋಲ್​ ಅವರು ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ್ದಾರೆ. ಅವರ ಮುಂಬರುವ ಸಿನಿಮಾಗಳ ಮೇಲೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳುವಂತೆ ಆಗಿದೆ.

ತರಣ್​ ಆದರ್ಶ್​ ಟ್ವೀಟ್​:

ಆಗಸ್ಟ್​ 11ರಂದು ‘ಗದರ್​ 2’ ಸಿನಿಮಾ ಬಿಡುಗಡೆ ಆಯಿತು. ಅದೇ ದಿನ ಅಕ್ಷಯ್​ ಕುಮರ್​ ನಟನೆಯ ‘ಒಎಂಜಿ 2’ ಸಿನಿಮಾ ಕೂಡ ಬಿಡುಗಡೆ ಆಗಿತ್ತು. ಒಂದು ದಿನ ಮೊದಲು ‘ಜೈಲರ್​’ ಚಿತ್ರದ ತೆರೆಕಂಡು ಉತ್ತಮವಾದ ರೆಸ್ಪಾನ್ಸ್​ ಪಡೆದುಕೊಂಡಿತ್ತು. ಅಂಥ ದೊಡ್ಡ ಸಿನಿಮಾಗಳಿಗೂ ಪೈಪೋಟಿ ನೀಡುವ ಮೂಲಕ ‘ಗದರ್ 2’ ಸಿನಿಮಾ ನೂರಾರು ಕೋಟಿ ರೂಪಾಯಿ ಕಮಾಯಿ ಮಾಡಿ ಮುನ್ನುಗ್ಗಿದೆ. ಈ ಸಿನಿಮಾ 500 ಕೋಟಿ ರೂಪಾಯಿ ತನಕವೂ ಕಲೆಕ್ಷನ್​ ಮಾಡುವ ಸಾಮರ್ಥ್ಯ ಹೊಂದಿದೆ ಎಂದು ಟ್ರೇಡ್​ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ‘ಸಿನಿಮಾ ಹಿಟ್ ಆದ ಬಳಿಕ ಸನ್ನಿ ಡಿಯೋಲ್​ಗೆ ಸೊಕ್ಕು ಬಂತು’; ನಟನ ವರ್ತನೆಗೆ ಆಕ್ರೋಶ

ಮಲ್ಟಿಪ್ಲೆಕ್ಸ್​ಗಳಲ್ಲಿ ‘ಗದರ್​ 2’ ಚಿತ್ರ ಚೆನ್ನಾಗಿ ಪ್ರದರ್ಶನ ಕಂಡಿದೆ. ಅದಕ್ಕಿಂತಲೂ ಉತ್ತಮವಾಗಿ ಸಿಂಗಲ್​ ಸ್ಕ್ರೀನ್​ ಚಿತ್ರಮಂದಿರಗಳಲ್ಲಿ ಈ ಸಿನಿಮಾ ಅಬ್ಬರಿಸಿದೆ. ತುಂಬ ಮಾಸ್​ ಆಗಿ ಮೂಡಿಬಂದಿರುವ ಈ ಚಿತ್ರವನ್ನು ಆ್ಯಕ್ಷನ್​ ಪ್ರಿಯರು ಇಷ್ಟಪಟ್ಟಿದ್ದಾರೆ. ಮತ್ತೆ ಮತ್ತೆ ಚಿತ್ರಮಂದಿರಕ್ಕೆ ಬಂದು ಜನರು ಈ ಸಿನಿಮಾವನ್ನು ನೋಡುತ್ತಿದ್ದಾರೆ. 2001ರಲ್ಲಿ ‘ಗದರ್​’ ಸಿನಿಮಾ ಹಿಟ್​ ಆಗಿತ್ತು. ಈಗ ಅದರ ಸೀಕ್ವೆಲ್​ ಆಗಿ ‘ಗದರ್​ 2’ ಬಂದಿರುವುದರಿಂದ ಜನರು ಮುಗಿಬಿದ್ದು ಸಿನಿಮಾ ನೋಡಿದ್ದಾರೆ. 13ನೇ ದಿನ ಕೂಡ ಈ ಸಿನಿಮಾಗೆ 10 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ ಎಂಬುದು ಗಮನಾರ್ಹ ವಿಷಯ.

ಇದನ್ನೂ ಓದಿ: ನಿರೀಕ್ಷೆಗೂ ಮೀರಿ ಕಲೆಕ್ಷನ್​ ಮಾಡಿದ ‘ಗದರ್​ 2’; ದುಬೈನಲ್ಲಿ ಸನ್ನಿ ಡಿಯೋಲ್​ ಪಾರ್ಟಿ

ಈ ಶುಕ್ರವಾರ (ಆಗಸ್ಟ್​ 25) ಬಾಲಿವುಡ್​ನಲ್ಲಿ ಹೊಸ ಸಿನಿಮಾಗಳು ತೆರೆಕಾಣುತ್ತಿವೆ. ಆಯುಷ್ಮಾನ್​ ಖುರಾನಾ ನಟನೆಯ ‘ಡ್ರೀಮ್​ ಗರ್ಲ್​ 2’ ಮತ್ತು ನುಸ್ರತ್​ ಬರೂಚಾ ಅಭಿನಯದ ‘ಅಕೇಲಿ’ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾಗಳಿಗೆ ಉತ್ತಮ ರೆಸ್ಪಾನ್ಸ್​ ಸಿಕ್ಕರೆ ‘ಗದರ್ 2’ ಹವಾ ಕಡಿಮೆ ಆಗುವ ಸಾಧ್ಯತೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ