AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ನನ್ನ ಜಗತ್ತಲ್ಲ ಅನ್ನೋದು ಅರಿವಾಗಿದೆ’; ರಾಜಕೀಯ ತೊರೆಯುವ ಸೂಚನೆ ಕೊಟ್ಟ ಸನ್ನಿ ಡಿಯೋಲ್

‘ಸಂಸತ್ತಿಗೆ ಹೋಗೋದು ನಿಜವಾಗಿಯೂ ಕಡಿಮೆಯಾಗಿದೆ. ಇದು ಒಳ್ಳೆಯದು ಎಂದು ನಾನು ಹೇಳುತ್ತಿಲ್ಲ. ನಾನು ರಾಜಕೀಯಕ್ಕೆ ಬಂದಾಗ, ಇದು ನನ್ನ ಪ್ರಪಂಚವಲ್ಲ ಎಂದು ನಾನು ಅರಿತುಕೊಂಡೆ’ ಎಂದಿದ್ದಾರೆ ಸನ್ನಿ ಡಿಯೋಲ್. ಈ ಮೂಲಕ ರಾಜಕೀಯ ತೊರೆಯುವ ಸೂಚನೆ ಕೊಟ್ಟಿದ್ದಾರೆ.

‘ಇದು ನನ್ನ ಜಗತ್ತಲ್ಲ ಅನ್ನೋದು ಅರಿವಾಗಿದೆ’; ರಾಜಕೀಯ ತೊರೆಯುವ ಸೂಚನೆ ಕೊಟ್ಟ ಸನ್ನಿ ಡಿಯೋಲ್
ಸನ್ನಿ ಡಿಯೋಲ್
Follow us
ರಾಜೇಶ್ ದುಗ್ಗುಮನೆ
|

Updated on: Sep 11, 2023 | 10:40 AM

ಸನ್ನಿ ಡಿಯೋಲ್ (Sunny Deo) ಅವರು ಚಿತ್ರರಂಗ ಹಾಗೂ ರಾಜಕೀಯ ಎರಡರಲ್ಲೂ ತೊಡಗಿಕೊಂಡಿದ್ದಾರೆ. ನಟನಾಗಿ ಯಶಸ್ಸು ಕಂಡ ಬಳಿಕ ಅವರು ರಾಜಕೀಯಕ್ಕೆ ಕಾಲಿಟ್ಟರು. ಅಲ್ಲಿ ಅವರಿಗೆ ಯಶಸ್ಸು ಸಿಕ್ಕಿತು. ಅವರು ಸಂಸದರಾಗಿ ಆಯ್ಕೆ ಆಗಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಸನ್ನಿ ಡಿಯೋಲ್ ಅವರು ಚಿತ್ರರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿಲ್ಲ. ವರ್ಷಕ್ಕೆ ಒಂದು ಸಿನಿಮಾ ಮಾತ್ರ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅದೇ ರೀತಿ ಅವರು ಸಂಸತ್ತಿನಲ್ಲೂ ಕಾಣಿಸಿದ್ದು ಕಡಿಮೆ. ಈಗ ಅವರು ರಾಜಕೀಯ ತೊರೆಯುವ ಸೂಚನೆ ನೀಡಿದ್ದಾರೆ. ‘ರಾಜಕೀಯ ನನ್ನ ಜಗತ್ತಲ್ಲ’ ಎಂದಿದ್ದಾರೆ.

ಸನ್ನಿ ಡಿಯೋಲ್ ಅವರು ‘ಆಪ್​ ಕಿ ಅದಾಲತ್’ ಶೋನಲ್ಲಿ ಭಾಗಿ ಆಗಿದ್ದರು. ಸಂಸತ್ತಿನಲ್ಲಿ ಹಾಜರಿ ಕಡಿಮೆ ಇರುವುದು ಮತ್ತು 2024ರ ಚುನಾವಣೆ ಬಗ್ಗೆ ಕೇಳಲಾಗಿದೆ. ಇದಕ್ಕೆ ಅವರು ನೇರವಾಗಿ ಉತ್ತರಿಸಿದ್ದಾರೆ. ‘ಸಂಸತ್ತಿಗೆ ಹೋಗೋದು ನಿಜವಾಗಿಯೂ ಕಡಿಮೆಯಾಗಿದೆ. ಇದು ಒಳ್ಳೆಯದು ಎಂದು ನಾನು ಹೇಳುತ್ತಿಲ್ಲ. ನಾನು ರಾಜಕೀಯಕ್ಕೆ ಬಂದಾಗ, ಇದು ನನ್ನ ಪ್ರಪಂಚವಲ್ಲ ಎಂದು ನಾನು ಅರಿತುಕೊಂಡೆ’ ಎಂದಿದ್ದಾರೆ ಸನ್ನಿ.

‘ನಾನು ನನ್ನ ಕ್ಷೇತ್ರಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಮುಂದೆಯೂ ಅದನ್ನು ಮಾಡುತ್ತೇನೆ. ಒಂದೊಮ್ಮೆ ನಾನು ಸಂಸತ್ತಿಗೆ ಹೋದರೂ, ಹೋಗದಿದ್ದರೂ ಅದು ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸದ ಮೇಲೆ ಪರಿಣಾಮ ಬೀರುವುದಿಲ್ಲ. ನಾನು ಸಂಸತ್ತಿಗೆ ಹೋದಾಗ ಸಮಸ್ಯೆಗಳನ್ನು ಎದುರಿಸುತ್ತೇನೆ. ನಟನಾಗಿ ನೀವು ಎಲ್ಲಿಗೆ ಹೋದರೂ ಜನರು ನಿಮ್ಮನ್ನು ಸುತ್ತುವರಿಯುತ್ತಾರೆ. ಇದರಿಂದ ಭದ್ರತಾ ಲೋಪವಾಗುತ್ತದೆ. ನನ್ನ ಕ್ಷೇತ್ರಕ್ಕೆ ನಾನು ಮಾಡಿದ ಕೆಲಸಗಳ ಪಟ್ಟಿ ನನ್ನ ಬಳಿ ಇದೆ. ಮಾಡಿದ ಕೆಲಸವನ್ನು ಪ್ರಚಾರ ಮಾಡುವುದರಲ್ಲಿ ನನಗೆ ಆಸಕ್ತಿ ಇಲ್ಲ. ರಾಜಕೀಯ ನನಗೆ ಸರಿಹೊಂದದ ವೃತ್ತಿ’ ಎಂದಿದ್ದಾರೆ ಅವರು.

2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೀರೇ ಎಂದು ಕೇಳಲಾಯಿತು. ಅದಕ್ಕೆ ‘ಇಲ್ಲ’ ಎನ್ನುವ ಉತ್ತರ ಬಂದಿದೆ. ‘ಪ್ರಧಾನಿ ನರೇಂದ್ರ ಮೋದಿ ಅವರು ನಿಮ್ಮ ಬಳಿ ಸ್ಪರ್ಧೆ ಮಾಡುವಂತೆ ಕೇಳಿದರೆ ಏನು ಮಾಡುತ್ತೀರಿ’ ಎಂದೂ ಕೇಳಲಾಯಿತು. ‘ಸಿನಿಮಾ ಮೂಲಕ ನಾನು ದೇಶ ಸೇವೆ ಮಾಡುತ್ತಿದ್ದೇನೆ ಎಂಬುದು ಮೋದಿ ಅವರಿಗೂ ತಿಳಿದಿದೆ’ ಎಂದಿದ್ದಾರೆ.

ಇದನ್ನೂ ಓದಿ: ಶಾರುಖ್ ಖಾನ್-ಸನ್ನಿ ಡಿಯೋಲ್ ವೈರತ್ವ ಅಂತ್ಯ; ಮುಕ್ತವಾಗಿ ಮಾತನಾಡಿದ ‘ಗದರ್ 2’ ಹೀರೋ

ಸನ್ನಿ ಅವರು 2019ರ ಏಪ್ರಿಲ್​ನಲ್ಲಿ ಬಿಜೆಪಿ ಸೇರಿದರು. ಪಂಜಾಬ್​ನ ಗುರದಾಸ್​ಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದರು. ಅವರ ನಟನೆಯ ‘ಗದರ್ 2’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಗೆದ್ದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ