AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಜನರ ಪ್ರೀತಿ ಕಂಡು ಸನ್ನಿ ಲಿಯೋನ್ ಮೂಕವಿಸ್ಮಿತ; ಇವರಿಗೆ ಗೌರವ ಸೂಚಿಸಲು ವಿಶೇಷ ನಿರ್ಧಾರ

ಮಂಡ್ಯ ತಾಲೂಕಿನ ಕೊಮ್ಮೇರಹಳ್ಳಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಗ್ರಾಮದ ಹೆಬ್ಬಾಗಿನಲ್ಲಿ 20 ಅಡಿಗೂ ಉದ್ದದ ಸನ್ನಿ ಫ್ಲೆಕ್ಸ್ ಅಳವಡಿಕೆ ಮಾಡಲಾಗಿತ್ತು. ಈ ಬಗ್ಗೆ ಸನ್ನಿ ಸಂತಸಗೊಂಡಿದ್ದಾರೆ.

ಮಂಡ್ಯ ಜನರ ಪ್ರೀತಿ ಕಂಡು ಸನ್ನಿ ಲಿಯೋನ್ ಮೂಕವಿಸ್ಮಿತ; ಇವರಿಗೆ ಗೌರವ ಸೂಚಿಸಲು ವಿಶೇಷ ನಿರ್ಧಾರ
ಸನ್ನಿ
TV9 Web
| Edited By: |

Updated on:May 16, 2022 | 9:12 PM

Share

ಮೇ 13ರಂದು ಸನ್ನಿ ಲಿಯೋನ್​ ಅವರು (Sunny Leone) ಬರ್ತ್​ಡೇ ಆಚರಿಸಿಕೊಂಡಿದ್ದರು. ಮಂಡ್ಯದಲ್ಲಿ ಸನ್ನಿ ಲಿಯೋನ್ ಬರ್ತ್ ಡೇ ಜೋರಾಗಿ ನಡೆದಿತ್ತು. ಅಭಿಮಾನಿಗಳಿಂದ ರಕ್ತದಾನ ಶಿಬಿರ ಆಯೋಜನೆಗೊಂಡಿತ್ತು. ಈ ವೇಳೆ ಅನೇಕರು ರಕ್ತ ನೀಡಿ, ಜೀವ ಉಳಿಸಿ ಎನ್ನುವ ಸಂದೇಶ ಕೊಟ್ಟರು. ಇನ್ನು, ಅಭಿಮಾನಿಗಳಿಗೆ ಬಾಡೂಟ ಆಯೋಜನೆ ಮಾಡಲಾಗಿತ್ತು. ಸನ್ನಿ ಬರ್ತ್​ಡೇ ದಿನ (Sunny Leone Birthday) ಬಾಡೂಟ ಸವಿದು ಫ್ಯಾನ್ಸ್ ಖುಷಿಯಾದರು. ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸುದ್ದಿ ಅನೇಕ ಮಾಧ್ಯಮಗಳಲ್ಲಿ ಪ್ರಕಟಗೊಂಡಿತ್ತು. ಇದು ಸನ್ನಿ ಕಣ್ಣಿಗೂ ಬಿದ್ದಿದೆ. ಮಂಡ್ಯದ ಅಭಿಮಾನಿಗಳು ತೋರಿದ ಪ್ರೀತಿಗೆ ಸನ್ನಿ ಲಿಯೋನ್ ಮೂಕವಿಸ್ಮಿತರಾಗಿದ್ದಾರೆ.

ಒಂದು ಕಾಲದಲ್ಲಿ ನೀಲಿ ಚಿತ್ರ ಲೋಕದಲ್ಲಿ ಸನ್ನಿ ಕೆಲಸ ಮಾಡಿದ್ದರು. ನಂತರ ಅವರು ಬಾಲಿವುಡ್​ಗೆ ಕಾಲಿಟ್ಟು ಬೇರೆ ಇಮೇಜ್​ ಪಡೆದುಕೊಂಡರು. ಸ್ಟಾರ್​ ಹೀರೋಗಳ ಸಿನಿಮಾಗಳಲ್ಲಿ ಐಟಂ ಡ್ಯಾನ್ಸ್​ ಮಾಡಿ ಫೇಮಸ್​ ಆದರು. ಅನೇಕ ಚಿತ್ರಗಳಿಗೆ ಅವರು ಹೀರೋಯಿನ್​ ಆಗಿಯೂ ನಟಿಸಿದರು. ಸಿನಿಮಾ ಕೆಲಸಗಳ ಮಧ್ಯೆ ಅವರು ಹಲವು ಸಾಮಾಜಿಕ ಕೆಲಸಗಳನ್ನು ಮಾಡಿ ಗುರುತಿಸಿಕೊಂಡಿದ್ದಾರೆ. ಸನ್ನಿ ಲಿಯೋನ್​ ಮತ್ತು ಅವರ ಪತಿ ಡೇನಿಯಲ್​ ವೆಬರ್​ ಅವರು ಅನಾಥ ಹೆಣ್ಣು ಮಗುವನ್ನು ದತ್ತು ಪಡೆದುಕೊಂಡಿದ್ದಾರೆ. ಆ ಮಗುವಿಗೆ ನಿಶಾ ಕೌರ್ ಎಂದು ಹೆಸರು ಇಟ್ಟಿದ್ದಾರೆ. ಇನ್ನೂ ಹಲವು ಒಳ್ಳೆಯ ಕೆಲಸಗಳು ಅವರಿಂದ ಆಗಿವೆ. ಸನ್ನಿ ಅವರ ಈ ಕಾರ್ಯಕ್ಕೆ ಮಂಡ್ಯದಲ್ಲಿ ಅಭಿಮಾನಿ ಬಳಗವೇ ಹುಟ್ಟಿಕೊಂಡಿದೆ.

ಇದನ್ನೂ ಓದಿ
Image
Sunny Leone Birthday: ಮಾದಕ ತಾರೆ ಸನ್ನಿ ಲಿಯೋನ್​ ಜನ್ಮದಿನ: ಪಡ್ಡೆಗಳ ಫೇವರಿಟ್​ ನಟಿ ಬಗ್ಗೆ ಇಲ್ಲಿದೆ ಕೆಲವು ಇಂಟರೆಸ್ಟಿಂಗ್​ ವಿಷಯ
Image
‘ನೀವು ಮಗಳನ್ನು ದತ್ತು ಪಡೆದಿದ್ದು ಪಬ್ಲಿಸಿಟಿ ಗಿಮಿಕ್​’; ಅಭಿಮಾನಿ ಮಾತಿಗೆ ಸನ್ನಿ ಲಿಯೋನ್​ ಉತ್ತರ ಏನು?
Image
‘ದಯವಿಟ್ಟು ತಪ್ಪು ತಿಳಿಯಬೇಡಿ’; ಮಧ್ಯರಾತ್ರಿ ಆದ ಬಳಿಕ ಸನ್ನಿ ಲಿಯೋನ್​ ಮನೆಗೆ ಹೋಗಿದ್ದ ಖ್ಯಾತ ಗಾಯಕ
Image
ನಿಮ್ಮ ಪರ್ಸನಲ್​ ಮೆಸೇಜ್​ ಬೇರೆ ಯಾರೂ ಓದಬಾರದು ಎಂದರೆ ಏನು ಮಾಡ್ಬೇಕು? ಇಲ್ಲಿದೆ ಸನ್ನಿ ಲಿಯೋನ್​ ಉಪಾಯ

ಮಂಡ್ಯ ತಾಲೂಕಿನ ಕೊಮ್ಮೇರಹಳ್ಳಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಗ್ರಾಮದ ಹೆಬ್ಬಾಗಿನಲ್ಲಿ 20 ಅಡಿಗೂ ಉದ್ದದ ಸನ್ನಿ ಫ್ಲೆಕ್ಸ್ ಅಳವಡಿಕೆ ಮಾಡಲಾಗಿತ್ತು. ‘ಬಡಮಕ್ಕಳ ತಾಯಿ, ಅಭಿಮಾನಿಗಳ ದೇವತೆ’ ಎಂದು ಸನ್ನಿ ಅವರನ್ನು ಬಣ್ಣಿಸಲಾಗಿತ್ತು. ಈ ಫ್ಲೆಕ್ಸ್ ಫೋಟೋ ಕೂಡ ವೈರಲ್ ಆಗಿತ್ತು. ಈ ಬಗ್ಗೆ ಸನ್ನಿ ಸಂತಸ ಹೊರಹಾಕಿದ್ದಾರೆ.

‘ಇದು ನಂಬಲು ಅಸಾಧ್ಯ. ನಿಮಗೆ ಗೌರವ ಸೂಚಿಸಲು ನಾನೂ ಹೋಗಿ ರಕ್ತದಾನ ಮಾಡುತ್ತೇನೆ. ತುಂಬಾ ಧನ್ಯವಾದಗಳು. ನಿಜವಾಗಿಯೂ ನೀವೆಲ್ಲರೂ ನನಗೆ ತುಂಬಾ ವಿಶೇಷವಾದ ಭಾವನೆ ಮೂಡಿಸುತ್ತೀರಿ. ಲವ್​ ಯೂ’ ಎಂದು ಟ್ವೀಟ್ ಮಾಡಿದ್ದಾರೆ ಸನ್ನಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:25 pm, Mon, 16 May 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ