AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunny Leone: ಸನ್ನಿ ಲಿಯೋನ್​ ಹೆಸರಲ್ಲಿ ಲೋನ್​ ಪಡೆದ ಖದೀಮ; ಶಾಕ್​ ಆದ ನಟಿ

ಸನ್ನಿ ಲಿಯೋನ್​ ಕೈಯಲ್ಲಿ ಹಲವು ಸಿನಿಮಾಗಳಿವೆ. 2019ರಿಂದ ಈಚೆಗೆ ಅವರ ನಟನೆಯ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಸದ್ಯ, ಹಿಂದಿ, ಮಲಯಾಳಂ ಹಾಗೂ ತಮಿಳು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ.

Sunny Leone: ಸನ್ನಿ ಲಿಯೋನ್​ ಹೆಸರಲ್ಲಿ ಲೋನ್​ ಪಡೆದ ಖದೀಮ; ಶಾಕ್​ ಆದ ನಟಿ
ಸನ್ನಿ ಲಿಯೋನ್
TV9 Web
| Edited By: |

Updated on: Feb 17, 2022 | 6:14 PM

Share

ನಟಿ ಸನ್ನಿ ಲಿಯೋನ್ (Sunny Leone)​ ಅವರಿಗೆ ಬಾಲಿವುಡ್​ನಲ್ಲಿ ದೊಡ್ಡ ಬೇಡಿಕೆ ಇದೆ. ನೀಲಿ ಸಿನಿಮಾಗಳಲ್ಲಿ ಆ್ಯಕ್ಟೀವ್​ ಆಗಿದ್ದ ಅವರು, ನಂತರ ಅದನ್ನು ತೊರೆದು ಬಾಲಿವುಡ್​ಗೆ ಕಾಲಿಟ್ಟರು. ದಕ್ಷಿಣ ಭಾರತದ ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ಕನ್ನಡದ (Sandalwood) ವಿಶೇಷ ಹಾಡಿನಲ್ಲೂ ಸನ್ನಿ ಡ್ಯಾನ್ಸ್​ ಮಾಡಿದ್ದಾರೆ. ಬೇಸರದ ಸಂಗತಿ ಎಂದರೆ ಸನ್ನಿ ಲಿಯೋನ್​ಗೆ  ಮೋಸ ಆಗಿದೆ! ಅವರ ಹೆಸರಲ್ಲಿ ಎರಡು ಸಾವಿರ ರೂಪಾಯಿ ಲೋನ್​ ಪಡೆಯಲಾಗಿದೆ. ಈ ವಿಚಾರವನ್ನು ಕೇಳಿ ಸನ್ನಿ ಲಿಯೋನ್​ ನಿಜಕ್ಕೂ ಶಾಕ್​ ಆಗಿದ್ದಾರೆ. ಈ ಬಗ್ಗೆ ಅವರು ಟ್ವೀಟ್​ ಮಾಡಿ ಬೇಸರ ತೋಡಿಕೊಂಡಿದ್ದಾರೆ. ಸನ್ನಿ ಈ ರೀತಿ ಟ್ವೀಟ್​ ಮಾಡಿದ ಬೆನ್ನಲ್ಲೇ ಅನೇಕರು ಇದೇ ಮಾದರಿಯ ಟ್ವೀಟ್​ ಮಾಡಿದ್ದು, ತಮಗೂ ಮೋಸ ಆಗಿದೆ ಎಂದಿದ್ದಾರೆ.

ಸನ್ನಿ ಲಿಯೋನ್​ ಅವರ ನಕಲಿ ಪಾನ್​ ಕಾರ್ಡ್​ ಬಳಕೆ ಮಾಡಿಕೊಂಡು ಈ ಲೋನ್​ ಪಡೆಯಲಾಗಿದೆ. ಧಾನಿ ಸ್ಟಾಕ್​ ಲಿಮಿಟೆಡ್​ ಪ್ಲಾಟ್​ಫಾರ್ಮ್​​ನಲ್ಲಿ ಈ ಮೊಸ ನಡೆದಿದೆ.  ‘ಯಾವುದೋ ಮೂರ್ಖ ನನ್ನ ಹೆಸರಲ್ಲಿ ಎರಡು ಸಾವಿರ ರೂಪಾಯಿ ಲೋನ್​ ಪಡೆದಿದ್ದಾನೆ! ಸಿಬಿಲ್​ ಸ್ಕೋರ್​ಗೆ ತೊಂದರೆ ಆಗಿದೆ. ಇಂಡಿಯಾಬುಲ್​ ಸೆಕ್ಯೂರಿಟಿ ಲಿಮಿಟೆಡ್​​ನಲ್ಲಿ (ಧಾನಿ ಸ್ಟಾಕ್​ ಈ ಮೊದಲು ಇಂಡಿಯನ್​ ಬುಲ್​ ಸೆಕ್ಯೂರಿಟಿ ಆಗಿತ್ತು)ಈ ಫ್ರಾಡ್​ ನಡೆದಿದೆ’ ಎಂದಿದ್ದಾರೆ ಸನ್ನಿ.

ಗ್ರೋಸರಿ ಮೊದಲಾದ ವಸ್ತು ಖರೀದಿ ಮಾಡಲು 5 ಲಕ್ಷ ರೂಪಾಯಿ ವರೆಗೆ ಲೋನ್​ ನೀಡುವ ಸೇವೆಯನ್ನು ಧಾನಿ ಮಾಡುತ್ತಿದೆ. ಈ ರೀತಿಯಲ್ಲಿ ಟ್ವೀಟ್ ಮಾಡಿದ ನಂತರದಲ್ಲಿ ಸಂಸ್ಥೆ ಸಮಸ್ಯೆಯನ್ನು ಬಗೆಹರಿಸಿದೆ. ಈ ಬಗ್ಗೆಯೂ ಸನ್ನಿ ಟ್ವೀಟ್​ ಮಾಡಿದ್ದು, ‘ಬ್ಯಾಡ್​ ಸಿಬಿಲ್​ ಸ್ಕೋರ್​ ಯಾರಿಗೂ ಇಷ್ಟವಿರುವುದಿಲ್ಲ’ ಎಂದಿದ್ದಾರೆ.  ಈ ರೀತಿಯ ಅನೇಕ ಘಟನೆಗಳು ನಡೆದ ಬಗ್ಗೆ ವರದಿ ಆಗಿವೆ.

ಸನ್ನಿ ಲಿಯೋನ್​ ಕೈಯಲ್ಲಿ ಹಲವು ಸಿನಿಮಾಗಳಿವೆ. 2019ರಿಂದ ಈಚೆಗೆ ಅವರ ನಟನೆಯ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಸದ್ಯ, ಹಿಂದಿ, ಮಲಯಾಳಂ ಹಾಗೂ ತಮಿಳು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ವಿಶೇಷ ಹಾಡಿನಲ್ಲೂ ಅವರು ಹೆಜ್ಜೆ ಹಾಕುತ್ತಿದ್ದಾರೆ.

ಇದನ್ನೂ ಓದಿ: ಕಾಟನ್​ಪೇಟೆಯಲ್ಲಿ ಸನ್ನಿ ಲಿಯೋನ್ ಡಾನ್ಸ್​; ಮತ್ತೆ ಕರ್ನಾಟಕಕ್ಕೆ ಬಂದ ಬಾಲಿವುಡ್​ ನಟಿ  

ಸನ್ನಿ ಲಿಯೋನ್ ಕೈಯಲ್ಲಿವೆ 7 ಸಿನಿಮಾಗಳು; ನಟಿಗೆ ಯಶಸ್ಸು ತಂದುಕೊಡಲಿದೆಯೇ 2022?

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?