AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದುಕೊಂಡಂತೆ ನಡೆಯಲಿಲ್ಲ ಲೆಕ್ಕಾಚಾರ? ‘ಟೈಗರ್ 3’ ವಿಚಾರದಲ್ಲಿ ತಪ್ಪು ಮಾಡಿದ್ರಾ ಸಲ್ಲು?

ರಿಲೀಸ್ ಆದ ಒಂದೇ ವಾರದಲ್ಲಿ ಗಳಿಕೆ 200 ಕೋಟಿ ರೂಪಾಯಿ ಸಮೀಪಿಸುವುದು ಎಂದರೆ ಅದು ಸಣ್ಣ ಮಾತಲ್ಲ. ಇದನ್ನು ದೊಡ್ಡ ಯಶಸ್ಸು ಎಂದೇ ಕರೆಯಲಾಗುತ್ತದೆ. ಆದರೆ, ಇದಕ್ಕೂ ಹೆಚ್ಚಿನ ಗಳಿಕೆ ಮಾಡುವ ಅವಕಾಶ ನಿರ್ಮಾಪಕರ ಬಳಿ, ಸಲ್ಮಾನ್ ಖಾನ್ ಬಳಿ ಇತ್ತು. ಆದರೆ, ಅದನ್ನು ಅವರು ಕೈ ಚೆಲ್ಲಿದ್ದಾರೆ.

ಅಂದುಕೊಂಡಂತೆ ನಡೆಯಲಿಲ್ಲ ಲೆಕ್ಕಾಚಾರ? ‘ಟೈಗರ್ 3’ ವಿಚಾರದಲ್ಲಿ ತಪ್ಪು ಮಾಡಿದ್ರಾ ಸಲ್ಲು?
ಟೈಗರ್​ 3
ರಾಜೇಶ್ ದುಗ್ಗುಮನೆ
|

Updated on: Nov 17, 2023 | 7:04 AM

Share

ಸಲ್ಮಾನ್ ಖಾನ್ ಹಾಗೂ ಕತ್ರಿನಾ ಕೈಫ್ (Katrina Kaif) ನಟನೆಯ ‘ಟೈಗರ್ 3’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಯಶಸ್ಸು ಕಂಡಿದೆ. ಯಶ್ ರಾಜ್ ಫಿಲ್ಮ್ಸ್ ಭಾನುವಾರ ಸಿನಿಮಾ ರಿಲೀಸ್ ಮಾಡಿ ಹೊಸ ಪ್ರಯತ್ನಕ್ಕೆ ಕೈ ಹಾಕಿತ್ತು. ಈ ಪ್ರಯೋಗ ಪೂರ್ತಿ ಯಶಸ್ಸು ಕಂಡಿದೆ ಎಂದು ಹೇಳಲು ಸಾಧ್ಯವಿಲ್ಲ ಅನ್ನೋದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ. ಅದಕ್ಕೆ ಅವರು ವಿವರಣೆಯನ್ನೂ ನೀಡುತ್ತಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಟೈಗರ್ 3’ ಕಲೆಕ್ಷನ್

‘ಟೈಗರ್ 3’ ಸಿನಿಮಾದ ಭಾರತದ ಗಳಿಕೆ 186 ಕೋಟಿ ರೂಪಾಯಿ ಆಗಿದೆ. ಭಾನುವಾರ 44.5 ಕೋಟಿ ರೂಪಾಯಿ, ಸೋಮವಾರ 59 ಕೋಟಿ ರೂಪಾಯಿ, ಮಂಗಳವಾರ 44 ಕೋಟಿ ರೂಪಾಯಿ, ಬುಧವಾರ 21 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಗುರುವಾರ ಸಿನಿಮಾದ ಕಲೆಕ್ಷನ್ 17 ಕೋಟಿ ರೂಪಾಯಿ ಆಗಿದೆ. ಈ ಮೂಲಕ ಸಿನಿಮಾದ ಗಳಿಕೆ 200 ಕೋಟಿ ರೂಪಾಯಿ ಸಮೀಪಿಸಿದೆ.

ಪಂಡಿತರ ಲೆಕ್ಕಾಚಾರ ಏನು?

ರಿಲೀಸ್ ಆದ ಒಂದೇ ವಾರದಲ್ಲಿ ಗಳಿಕೆ 200 ಕೋಟಿ ರೂಪಾಯಿ ಸಮೀಪಿಸುವುದು ಎಂದರೆ ಅದು ಸಣ್ಣ ಮಾತಲ್ಲ. ಇದನ್ನು ದೊಡ್ಡ ಯಶಸ್ಸು ಎಂದೇ ಕರೆಯಲಾಗುತ್ತದೆ. ಆದರೆ, ಇದಕ್ಕೂ ಹೆಚ್ಚಿನ ಗಳಿಕೆ ಮಾಡುವ ಅವಕಾಶ ನಿರ್ಮಾಪಕರ ಬಳಿ, ಸಲ್ಮಾನ್ ಖಾನ್ ಬಳಿ ಇತ್ತು. ಆದರೆ, ಅದನ್ನು ಅವರು ಕೈ ಚೆಲ್ಲಿದ್ದಾರೆ.

ಇದನ್ನೂ ಓದಿ: SSE Side B Review: ‘ಸೈಡ್​ ಎ’ ಬಳಿಕ ಮನು, ಪ್ರಿಯಾ ಬದುಕು ಬದಲಾದರೂ ‘ಸೈಡ್​ ಬಿ’ ಲಯ ಬದಲಾಗಿಲ್ಲ 

ಶುಕ್ರವಾರ ಸಿನಿಮಾ ರಿಲೀಸ್ ಆಗೋದು ವಾಡಿಕೆ. ‘ಟೈಗರ್ 3’ ಸಿನಿಮಾ ಭಾನುವಾರ ರಿಲೀಸ್ ಆಗಿತ್ತು. ಆದರೆ, ಈ ಸಿನಿಮಾ ಭಾನುವಾರದ ಬದಲು ಶುಕ್ರವಾರ ರಿಲೀಸ್ ಆಗಿದ್ದರೆ ಹೆಚ್ಚಿನ ಲಾಭ ಆಗುತ್ತಿತ್ತು. ಶುಕ್ರವಾರ ಸಿನಿಮಾ ರಿಲೀಸ್ ಆದರೆ ಮೊದಲ ದಿನ ಜನರು ದೊಡ್ಡ ಸಂಖ್ಯೆಯಲ್ಲಿ ಸಿನಿಮಾ ನೋಡುತ್ತಿದ್ದರು. ಶನಿವಾರ ಹಾಗೂ ಭಾನುವಾರವಂತೂ ಭರ್ಜರಿ ಗಳಿಕೆ ಆಗುತ್ತಿತ್ತು. ದೀಪಾವಳಿ ಹಿನ್ನೆಲೆಯಲ್ಲಿ ಸೋಮವಾರ ಹಾಗೂ ಮಂಗಳವಾರ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಥಿಯೇಟರ್​ಗೆ ನುಗ್ಗುತ್ತಿದ್ದರು. ಇದು ಸಿನಿಮಾಗೆ ಬೋನಸ್ ಆಗುತ್ತಿತ್ತು. ಈಗಾಗಲೇ ಸಿನಿಮಾದ ಕಲೆಕ್ಷನ್ 250 ಕೋಟಿ ರೂಪಾಯಿ ದಾಟಿರುತ್ತಿತ್ತು ಅನ್ನೋದು ಅನೇಕರ ಅಭಿಪ್ರಾಯ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ