AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gangubai Kathiawadi: ‘ಗಂಗೂಬಾಯಿ ಕಾಠಿಯಾವಾಡಿ’ಗೆ ಹೊಸ ಸಂಕಷ್ಟ; ಚಿತ್ರದ ಹೆಸರು ಬದಲಿಸುವಂತೆ ಸುಪ್ರೀಂ ಸೂಚನೆ

Alia Bhatt | Sanjay Leela Bhansali: ಆಲಿಯಾ ಭಟ್ ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಶೀರ್ಷಿಕೆಯನ್ನು ಬದಲಿಸುವಂತೆ ಸುಪ್ರೀಂ ಕೋರ್ಟ್ ಚಿತ್ರತಂಡಕ್ಕೆ ಸೂಚಿಸಿದೆ. ಫೆಬ್ರವರಿ 25ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲು ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಈ ಚಿತ್ರ ಸಿದ್ಧವಾಗಿದೆ.

Gangubai Kathiawadi: ‘ಗಂಗೂಬಾಯಿ ಕಾಠಿಯಾವಾಡಿ’ಗೆ ಹೊಸ ಸಂಕಷ್ಟ; ಚಿತ್ರದ ಹೆಸರು ಬದಲಿಸುವಂತೆ ಸುಪ್ರೀಂ ಸೂಚನೆ
‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದಲ್ಲಿ ಆಲಿಯಾ ಭಟ್
TV9 Web
| Updated By: shivaprasad.hs|

Updated on:Feb 23, 2022 | 8:05 PM

Share

ಆಲಿಯಾ ಭಟ್ (Alia Bhatt) ವೃತ್ತಿಬದುಕಿನ ದೊಡ್ಡ ಪರೀಕ್ಷೆಯೊಂದಕ್ಕೆ ಸಜ್ಜಾಗುತ್ತಿದ್ದಾರೆ. ದೊಡ್ಡ ಬಜೆಟ್​​ನಲ್ಲಿ ತಯಾರಾಗಿರುವ, ಖ್ಯಾತ ತಾರೆಯರು ಬಣ್ಣ ಹಚ್ಚಿರುವ ‘ಗಂಗೂಬಾಯಿ ಕಾಠಿಯಾವಾಡಿ’ (Gangubai Kathiawadi) ಈ ವಾರ ಅಂದರೆ ಫೆಬ್ರವರಿ 25ರಂದು ತೆರೆಗೆ ಬರಲು ಸಜ್ಜಾಗಿದೆ. ಈಗಾಗಲೇ ಹಲವು ಬಾರಿ ವಿವಾದಕ್ಕೆ ಒಳಗಾಗಿರುವ ಚಿತ್ರಕ್ಕೆ ಹೊಸ ಸಮಸ್ಯೆಯೊಂದು ಎದುರಾಗಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್ ಶಾಸಕರೊಬ್ಬರು ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಹೆಸರು ಬದಲಾಯಿಸಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ಮೊರೆ ಹೋಗಿದ್ದರು. ಇದೀಗ ಸುಪ್ರೀಂ ಕೋರ್ಟ್ ಈ ಪ್ರಕರಣಕ್ಕೆ ಪ್ರತಿಕ್ರಿಯಿಸಿದ್ದು, ಚಿತ್ರದ ಹೆಸರು ಬದಲಾವಣೆ ಮಾಡುವಂತೆ ಸೂಚನೆ ನೀಡಿದೆ. ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಈ ಚಿತ್ರದ ವಿರುದ್ಧ ಕಾಂಗ್ರೆಸ್ ಪಕ್ಷದ ಶಾಸಕ ಅಮಿನ್ ಪಟೇಲ್ ಮಂಗಳವಾರ ಅರ್ಜಿ ಸಲ್ಲಿಸಿದ್ದರು. ಕಾಮಾಠಿಪುರವನ್ನು ರೆಡ್ ಲೈಟ್ ಏರಿಯಾ ಎಂದು ತೋರಿಸಿರುವುದಲ್ಲದೇ ಕಾಠಿಯಾವಾಡಿ ಸಮುದಾಯವನ್ನು ಕೀಳಾಗಿ ತೋರಿಸಲಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದರು.

ಬರಹಗಾರ ಹುಸೇನ್ ಜೈದಿ ಬರೆದಿರುವ ‘ಮಾಫಿಯಾ ಕ್ವೀನ್ಸ್ ಆಫ್ ಮುಂಬೈ’ ಪುಸ್ತಕವನ್ನು ಆಧರಿಸಿ ಸಂಜಯ್ ಲೀಲಾ ಭನ್ಸಾಲಿ ಚಿತ್ರವನ್ನು ತಯಾರಿಸಿದ್ದಾರೆ. ಆಲಿಯಾ ಭಟ್ ‘ಗಂಗೂಬಾಯಿ ಕಾಠಿಯಾವಾಡಿ’ಯಾಗಿ ಬಣ್ಣಹಚ್ಚಿದ್ದಾರೆ. ಯುವತಿಯೊಬ್ಬಳು ವೇಶ್ಯಾವಾಟಿಕೆ ಜಾಲಕ್ಕೆ ಮಾರಾಟವಾಗಿ ನಂತರ ಕಾಮಾಠಿಪುರದ ಡಾನ್ ಆಗುವ ಕತೆಯನ್ನು ಚಿತ್ರ ಒಳಗೊಂಡಿರಲಿದೆ. ಅಜಯ್ ದೇವಗನ್, ವಿಜಯ್ ರಾಜ್, ಸೀಮಾ ಪಹ್ವಾ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಚಿತ್ರಕ್ಕಿದ್ದ ಉಳಿದ ಅಡೆತಡೆ ನಿವಾರಿಸಿದ ಬಾಂಬೆ ಹೈಕೋರ್ಟ್:

‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ ಎರಡನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಅಲ್ಲದೇ ಚಿತ್ರದ ರಿಲೀಸ್ ಬಗ್ಗೆ ಇದ್ದ ಆತಂಕಗಳನ್ನು ನಿವಾರಿಸಿದೆ. ಯಾವುದೇ ಅಡೆತಡೆಗಳಿಲ್ಲದೆ ಚಿತ್ರವು ಫೆಬ್ರವರಿ 25ರಂದು ತೆರೆಕಾಣಬಹುದು ಎಂದು ಅದು ತನ್ನ ಆದೇಶದಲ್ಲಿ ತಿಳಿಸಿದೆ.

ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಚಿತ್ರಗಳು ಶೀರ್ಷಿಕೆಯ ಕಾರಣದಿಂದ ವಿವಾದವಾಗುತ್ತಿರುವುದು ಇದೇ ಮೊದಲೇನಲ್ಲ. ದೀಪಿಕಾ ಪಡುಕೋಣೆ ನಟನೆಯ ‘ಪದ್ಮಾವತ್’ ಚಿತ್ರಕ್ಕೆ ಮೊದಲು ‘ಪದ್ಮಾವತಿ’ ಎಂದು ಹೆಸರಿಡಲಾಗಿತ್ತು. ವಿರೋಧದ ನಂತರ ‘ಪದ್ಮಾವತ್’ ಎಂದು ಬದಲಿಸಲಾಗಿತ್ತು. ಅದಕ್ಕೂ ಮುನ್ನ ‘ರಾಮ್​ ಲೀಲಾ’ ಚಿತ್ರದ ಶೀರ್ಷಿಕೆಯನ್ನು ವಿರೋಧದ ನಂತರ ‘ಗೋಲಿಯೋಂಕಾ ರಾಸ್​​ಲೀಲಾ ರಾಮ್​-ಲೀಲಾ’ ಎಂದು ಬದಲಿಸಲಾಗಿತ್ತು. ಇದೀಗ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಹೆಸರನ್ನು ಬದಲಿಸುವಂತೆ ಸುಪ್ರೀಂ ಸೂಚಿಸಿದೆ.

ಇದನ್ನೂ ಓದಿ:

NBK107: ತೆಲುಗಿನಲ್ಲೂ ರಿಮೇಕ್ ಆಗುತ್ತಿದೆಯಾ ‘ಮಫ್ತಿ’? ಕುತೂಹಲ ಮೂಡಿಸಿದ ‘ಎನ್​ಬಿಕೆ107’ ಪೋಸ್ಟರ್

‘ಆಲ್ ಓಕೆ’ ಹಾಡುಗಳನ್ನು ಕೇಳಿ ಪುನೀತ್ ಹೇಗೆ ಪ್ರತಿಕ್ರಿಯಿಸುತ್ತಿದ್ದರು? ಅಲೋಕ್ ಹಂಚಿಕೊಂಡ್ರು ಕುತೂಹಲಕರ ವಿಚಾರ

Published On - 8:01 pm, Wed, 23 February 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ