AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ಸಿಂಗ್ ರಜಪೂತ್​ ಜನ್ಮದಿನ; ಅಭಿಮಾನಿಗಳಿಂದ ಎದುರಾಗುತ್ತಿದೆ ಒಂದೇ ಪ್ರಶ್ನೆ

Sushant Singh Rajput Birthday: ಸುಶಾಂತ್ ಸಿಂಗ್ ಅವರು ಮುಂಬೈನ ಫ್ಲ್ಯಾಟ್ ಒಂದರಲ್ಲಿ ಬಾಡಿಗೆಗೆ ಇದ್ದರು. ಅದೇ ಫ್ಲ್ಯಾಟ್​ನಲ್ಲಿ ಅವರು ನೇಣು ಬಿಗಿದುಕೊಂಡು ಮೃತಪಟ್ಟರು. ಇದು ಆತ್ಮಹತ್ಯೆ ಎಂದು ಊಹಿಸಲಾಗಿತ್ತು. ಆದರೆ, ಇದು ಕೊಲೆ ಎನ್ನುವ ಆರೋಪಗಳು ಕೇಳಿ ಬಂದವು.

ಸುಶಾಂತ್ ಸಿಂಗ್ ರಜಪೂತ್​ ಜನ್ಮದಿನ; ಅಭಿಮಾನಿಗಳಿಂದ ಎದುರಾಗುತ್ತಿದೆ ಒಂದೇ ಪ್ರಶ್ನೆ
ಸುಶಾಂತ್ ಸಿಂಗ್
ರಾಜೇಶ್ ದುಗ್ಗುಮನೆ
|

Updated on: Jan 21, 2023 | 9:29 AM

Share

2020ರ ಜೂನ್ 14ರಂದು ನಟ ಸುಶಾಂತ್ ಸಿಂಗ್ (Sushant Singh Rajput) ಮೃತಪಟ್ಟರು. ಚಿತ್ರರಂಗದಲ್ಲಿ ಸ್ಟಾರ್ ಪಟ್ಟ ಪಡೆದಿದ್ದ ಸುಶಾಂತ್​ ಅವರ ಸಾವಿನ ಸುದ್ದಿಯನ್ನು ಸಾಕಷ್ಟು ಜನರಿಗೆ ಅರಗಿಸಿಕೊಳ್ಳಲು ಆಗಲಿಲ್ಲ. ಅವರು ಮೃತಪಟ್ಟು ಎರಡೂವರೆ ವರ್ಷ ಕಳೆದಿದೆ. ಇಂದು (ಜನವರಿ 21) ಸುಶಾಂತ್ ಸಿಂಗ್ ಜನ್ಮದಿನ (Sushant Singh Rajput Birthday). ಅವರನ್ನು ಎಲ್ಲರೂ ನೆನಪಿಸಿಕೊಳ್ಳುತ್ತಿದ್ದಾರೆ. ಅವರ ಸಾವಿನ ರಹಸ್ಯ ಹೊರಬಿದ್ದಿಲ್ಲ ಎನ್ನುವ ಬೇಸರ ಇದೆ. ಸಿಬಿಐ ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಅಂತಿಮ ವರದಿ ಮಾತ್ರ ಬಂದಿಲ್ಲ. ಆದಷ್ಟು ಬೇಗ ಅವರ ಸಾವಿನ ರಹಸ್ಯ ಹೊರ ಬೀಳಲಿ ಅನ್ನುವುದು ಫ್ಯಾನ್ಸ್ ಆಗ್ರಹ.

ಸುಶಾಂತ್ ಸಿಂಗ್ ಅವರು ಮುಂಬೈನ ಫ್ಲ್ಯಾಟ್ ಒಂದರಲ್ಲಿ ಬಾಡಿಗೆಗೆ ಇದ್ದರು. ಅದೇ ಫ್ಲ್ಯಾಟ್​ನಲ್ಲಿ ಅವರು ನೇಣು ಬಿಗಿದುಕೊಂಡು ಮೃತಪಟ್ಟರು. ಇದು ಆತ್ಮಹತ್ಯೆ ಎಂದು ಊಹಿಸಲಾಗಿತ್ತು. ಆದರೆ, ಇದು ಕೊಲೆ ಎನ್ನುವ ಆರೋಪಗಳು ಕೇಳಿ ಬಂದವು. ಬಾಲಿವುಡ್​ನಲ್ಲಿ ಸುಶಾಂತ್ ಅವರನ್ನು ಹೊರಗಿನವರು ಎಂದು ಪರಿಗಣಿಸಲಾಗಿತ್ತು. ಹೀಗಾಗಿ ಅವರಿಗೆ ಕಿರುಕುಳ ನೀಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಯಿತು.

ಈ ಮಧ್ಯೆ ಸುಶಾಂತ್ ಸಿಂಗ್ ರಜಪೂತ್ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಮೇಲೆ ಅನೇಕರು ಗಮನಹರಿಸಿದರು. ಸುಶಾಂತ್ ಖಾತೆಯಿಂದ ಅವರ ಖಾತೆಗೆ ಹಣ ವರ್ಗಾವಣೆ ಆಗಿದೆ ಎನ್ನುವ ಆರೋಪಗಳು ಕೇಳಿ ಬಂದವು. ಅವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಪೊಲೀಸರಿಗೆ ಮಾದಕದ್ರವ್ಯದ ಬಗ್ಗೆ ತಿಳಿಯಿತು. ಈ ಪ್ರಕರಣವನ್ನು ಎನ್​ಸಿಬಿ ಕೂಡ ವಿಚಾರಣೆ ನಡೆಸಿತು.

ಇದನ್ನೂ ಓದಿ: ಮರಣೋತ್ತರ ಪರೀಕ್ಷೆ ವೇಳೆ ಸುಶಾಂತ್ ಸಿಂಗ್ ದೇಹದ ಮೇಲಿತ್ತು ಗಾಯ; ಸತ್ಯ ಮುಚ್ಚಿಟ್ರಾ ವೈದ್ಯರು?

ಆರಂಭದಲ್ಲಿ ಮುಂಬೈ ಪೊಲೀಸರು ಪ್ರಕರಣವನ್ನು ವಿಚಾರಣೆ ಮಾಡಿದ್ದರು. ಪ್ರಕರಣದಲ್ಲಿ  ಒತ್ತಡ ಹೆಚ್ಚಿತು. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದನ್ನು ಪತ್ತೆ ಹಚ್ಚಲು ಅವರಿಂದ ಸಾಧ್ಯವಾಗಲಿಲ್ಲ. ಈ ಮಧ್ಯೆ ನ್ಯಾಯ ಕೊಡಿಸಿ ಎನ್ನುವ ಒತ್ತಾಯ ಅಭಿಮಾನಿಗಳಿಂದ ಹೆಚ್ಚಿತು. ಹೀಗಾಗಿ, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಯಿತು. ಸಿಬಿಐ ಪ್ರಕರಣವನ್ನು ತನಿಖೆ ಮಾಡುತ್ತಿದೆ. ಈ ಪ್ರಕರಣದ ಅಂತಿಮ ವರದಿ ಸಿದ್ಧವಾಗಿಲ್ಲ. ಈ ಪ್ರಕರಣದಲ್ಲಿ ನ್ಯಾಯ ಸಿಗೋದು ಯಾವಾಗ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಈಗಲೂ ಎದುರಾಗುತ್ತಲೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ