AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rhea Chakraborty: ಸುಶಾಂತ್​ ಸಿಂಗ್ ರಜಪೂತ್​ ಪುಣ್ಯಸ್ಮರಣೆ: ಅಗಲಿದ ಪ್ರಿಯಕರನ ನೆನಪಿನಲ್ಲಿ ಅಪರೂಪದ ವಿಡಿಯೋ ಹಂಚಿಕೊಂಡ ರಿಯಾ ಚಕ್ರವರ್ತಿ

Sushant Singh Rajput Death Anniversary: ಸುಶಾಂತ್​ ಸಿಂಗ್ ರಜಪೂತ್​​ ಅವರ ಸಾವಿನ ನಂತರ ರಿಯಾ ಚಕ್ರವರ್ತಿ ಸಾಕಷ್ಟು ಕಷ್ಟ ಅನುಭವಿಸಬೇಕಾಯಿತು. ಅವರು ಜೈಲಿಗೂ ಹೋಗಿಬಂದರು. ಇಷ್ಟೆಲ್ಲ ಆದರೂ ಸಹ ಸುಶಾಂತ್​ ಬಗ್ಗೆ ರಿಯಾಗೆ ಇದ್ದ ಭಾವನೆ ಬದಲಾಗಿಲ್ಲ.

Rhea Chakraborty: ಸುಶಾಂತ್​ ಸಿಂಗ್ ರಜಪೂತ್​ ಪುಣ್ಯಸ್ಮರಣೆ: ಅಗಲಿದ ಪ್ರಿಯಕರನ ನೆನಪಿನಲ್ಲಿ ಅಪರೂಪದ ವಿಡಿಯೋ ಹಂಚಿಕೊಂಡ ರಿಯಾ ಚಕ್ರವರ್ತಿ
ಸುಶಾಂತ್​ ಸಿಂಗ್ ರಜಪೂತ್​, ರಿಯಾ ಚಕ್ರವರ್ತಿ
ಮದನ್​ ಕುಮಾರ್​
|

Updated on: Jun 14, 2023 | 3:05 PM

Share

ನಟಿ ರಿಯಾ ಚಕ್ರವರ್ತಿ (Rhea Chakraborty) ಅವರ ಹೆಸರು ಸಿಕ್ಕಾಪಟ್ಟೆ ಪ್ರಚಾರಕ್ಕೆ ಬಂದಿದ್ದೇ ಸುಶಾಂತ್​ ಸಿಂಗ್​ ರಜಪೂತ್​ ನಿಧನದ ನಂತರ. 2020ರ ಜೂನ್​ 14ರಂದು ನೇಣು ಬಿಗಿದ ಸ್ಥಿತಿಯಲ್ಲಿ ಸುಶಾಂತ್​ ದೇಹ ಪತ್ತೆ ಆಗಿತ್ತು. ಆ ಘಟನೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ ರಿಯಾ ಚಕ್ರವರ್ತಿ ಜೊತೆ ಅವರು ಬ್ರೇಕಪ್​ ಮಾಡಿಕೊಂಡಿದ್ದರು. ಬಹುಕಾಲದಿಂದ ಪ್ರೀತಿಸುತ್ತಿದ್ದ ಸುಶಾಂತ್​ ಸಿಂಗ್​ ರಜಪೂತ್​ (Sushant Singh Rajput) ಮತ್ತು ರಿಯಾ ಚಕ್ರವರ್ತಿ ಏಕಾಏಕಿ ಬ್ರೇಕಪ್​ ಮಾಡಿಕೊಳ್ಳಲು ಕಾರಣ ಏನು ಎಂಬುದು ಇಂದಿಗೂ ಸ್ಪಷ್ಟವಾಗಿಲ್ಲ. ಸುಶಾಂತ್​ ಸಾವಿಗೂ (Sushant Singh Rajput Death) ಬ್ರೇಕಪ್​ಗೂ ಏನಾದರೂ ಲಿಂಕ್​ ಇದೆಯೇ ಎಂದು ತಿಳಿಯಲು ತನಿಖೆ ಕೂಡ ನಡೆದಿದೆ. ಅದರ ಅಂತಿಮ ವರದಿ ಇನ್ನಷ್ಟೇ ಬರಬೇಕಿದೆ. ಆದರೆ ರಿಯಾ ಚಕ್ರವರ್ತಿ ಜೊತೆ ಸುಶಾಂತ್​ ಅವರು ಖುಷಿಯಾಗಿ ಇದ್ದರು ಎಂಬುದಕ್ಕೆ ಹಲವು ಫೋಟೋ ಮತ್ತು ವಿಡಿಯೋಗಳು ಸಾಕ್ಷಿ ಆಗಿವೆ. ಆ ಪೈಕಿ ಒಂದು ಅಪರೂಪದ ವಿಡಿಯೋವನ್ನು ರಿಯಾ ಚಕ್ರವರ್ತಿ ಈಗ ಶೇರ್​ ಮಾಡಿಕೊಂಡಿದ್ದಾರೆ.

ಸುಶಾಂತ್​ ಸಿಂಗ್​ ರಜಪೂತ್​ ಅವರ ನಿಧನರಾಗಿ ಇಂದಿಗೆ (ಜೂನ್​ 14) ಮೂರು ವರ್ಷ ಕಳೆದಿದೆ. ಕುಟುಂಬದವರು, ಅಭಿಮಾನಿಗಳು ಹಾಗೂ ಆಪ್ತರು ಅವರನ್ನು ಸಖತ್​ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಬಾಲಿವುಡ್​ನಲ್ಲಿ ಮಿಂಚಿ ಮೆರೆಯಬೇಕಿದ್ದ ಸುಶಾಂತ್​ ಅವರು ಸಾವಿನ ಮನೆಗೆ ತೆರಳಿದ್ದು ಯಾಕೆ ಎಂಬುದು ಸದ್ಯಕ್ಕಂತೂ ನಿಗೂಢ. ಈಗ ಅವರನ್ನು ನೆನಪಿಸಿಕೊಳ್ಳುವ ಸಲುವಾಗಿ ರಿಯಾ ಚಕ್ರವರ್ತಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಅಪರೂಪದ ವಿಡಿಯೋ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರಿಬ್ಬರು ತುಂಬ ಖುಷಿಯಿಂದ ಕಾಲ ಕಳೆಯುತ್ತಿದ್ದ ಕ್ಷಣಗಳು ಸೆರೆಯಾಗಿವೆ. ಇದನ್ನು ನೋಡಿ ನೆಟ್ಟಿಗರು ಹಲವು ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

Rhea Chakraborty: ಸುಶಾಂತ್​ ಸಿಂಗ್​ ರಜಪೂತ್​ಗೆ ಡ್ರಗ್ಸ್​ ನೀಡಿದ್ದೇ ರಿಯಾ ಚಕ್ರವರ್ತಿ: ಎನ್​ಸಿಬಿ ಚಾರ್ಜ್​ಶೀಟ್​ನಲ್ಲಿ ಉಲ್ಲೇಖ

ಸುಶಾಂತ್​ ಸಿಂಗ್ ರಜಪೂತ್​ ಅವರ ಸಾವಿನ ನಂತರ ರಿಯಾ ಚಕ್ರವರ್ತಿ ಸಾಕಷ್ಟು ಕಷ್ಟ ಅನುಭವಿಸಬೇಕಾಯಿತು. ಒಂದು ಕಡೆ ಪ್ರಿಯಕರನ ನಿಧನದ ನೋವು, ಇನ್ನೊಂದು ಕಡೆ ತನಿಖೆಯ ತಲೆಬಿಸಿ. ಮತ್ತೊಂದು ಕಡೆ ಸಮಾಜದ ನಿಂದನೆ. ಸುಶಾಂತ್​ ಸಾವಿಗೆ ರಿಯಾ ಚಕ್ರವರ್ತಿಯೇ ಕಾರಣ ಎಂದು ದೂರು ಕೂಡ ದಾಖಲಾಯಿತು. ಸುಶಾಂತ್​ಗೆ ರಿಯಾ ಅವರೇ ಡ್ರಗ್ಸ್​ ನೀಡುತ್ತಿದ್ದರು ಎಂದು ಕೂಡ ಹೇಳಲಾಯಿತು. ಇಂಥ ಹಲವು ಆರೋಪಗಳನ್ನು ಎದುರಿಸಿದ ಅವರು ಜೈಲಿಗೂ ಹೋಗಿಬಂದರು. ಇಷ್ಟೆಲ್ಲ ಆದರೂ ಸಹ ಸುಶಾಂತ್​ ಬಗ್ಗೆ ರಿಯಾ ಚಕ್ರವರ್ತಿಗೆ ಇದ್ದ ಭಾವನೆ ಬದಲಾಗಿಲ್ಲ. ಹಾಗಾಗಿ ಅವರು ಮಾಜಿ ಪ್ರಿಯಕರನ ನೆನಪಿಗಾಗಿ ಈ ವಿಡಿಯೋ ಹಂಚಿಕೊಂಡಿದ್ದಾರೆ.

ಇನ್ನು, ಸುಶಾಂತ್​ ಸಿಂಗ್​ ರಜಪೂತ್​ ಅವರ ಫ್ಯಾಮಿಲಿಯವರು ಕೂಡ ನಟನ ಪುಣ್ಯ ಸ್ಮರಣೆ ಪ್ರಯುಕ್ತ ಸೋಶಿಯಲ್​ ಮೀಡಿಯಾದಲ್ಲಿ ನಮನ ಸಲ್ಲಿಸಿದ್ದಾರೆ. ಹಳೇ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ‘ಪ್ಲೀಸ್​ ಸುಶಾಂತ್​.. ವಾಪಸ್​ ಬನ್ನಿ’ ಎಂದು ಅಭಿಮಾನಿಗಳು ಎಮೋಷನಲ್​ ಆಗಿ ಕಮೆಂಟ್​ ಮಾಡಿದ್ದಾರೆ. ಸುಶಾಂತ್​ ನಟಿಸಿದ್ದ ಸಿನಿಮಾಗಳನ್ನು ಮತ್ತೆ ವೀಕ್ಷಿಸುವ ಮೂಲಕವೂ ಅವರಿಗೆ ಗೌರವ ಸಲ್ಲಿಸಲಾಗುತ್ತಿದೆ. ಅವರ ಹಳೆಯ ಸಂದರ್ಶನದ ತುಣುಕುಗಳು, ವಿಡಿಯೋಗಳು ವೈರಲ್​ ಆಗಿವೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು