AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಅಪಘಾತದಲ್ಲಿ ಸುಶಾಂತ್​ ಕುಟುಂಬದ 6 ಮಂದಿ ನಿಧನ; ಇನ್ನೂ 4 ಜನರ ಸ್ಥಿತಿ ಗಂಭೀರ

Sushant Singh Rajput: ಸುಶಾಂತ್​ ಸಿಂಗ್​ ರಜಪೂತ್​ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ. ಸ್ಥಳದಲ್ಲೇ 6 ಮಂದಿ ಅಸುನೀಗಿದ್ದಾರೆ.

ರಸ್ತೆ ಅಪಘಾತದಲ್ಲಿ ಸುಶಾಂತ್​ ಕುಟುಂಬದ 6 ಮಂದಿ ನಿಧನ; ಇನ್ನೂ 4 ಜನರ ಸ್ಥಿತಿ ಗಂಭೀರ
ಸುಶಾಂತ್​ ಸಿಂಗ್​ ರಜಪೂತ್​
TV9 Web
| Edited By: |

Updated on:Nov 16, 2021 | 4:13 PM

Share

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ (Sushant Singh Rajput) ಅವರ ಕುಟುಂಬದ 6 ಮಂದಿ ರಸ್ತೆ ಅಪಘಾತದಲ್ಲಿ (Road Accident) ನಿಧನರಾಗಿದ್ದಾರೆ. ಮಂಗಳವಾರ (ನ.16) ಬೆಳಗ್ಗೆ ಈ ಭೀಕರ ಆ್ಯಕ್ಸಿಡೆಂಟ್​ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿರುವ 4 ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯಿಂದ ಸುಶಾಂತ್​ ಅಭಿಮಾನಿಗಳಿಗೆ ತೀವ್ರ ಆಘಾತ ಆಗಿದೆ. ಬಿಹಾರದ ಲಖಿಸರಾಯ್​ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 333ರಲ್ಲಿ ಈ ಅಪಘಾತ ಸಂಭವಿಸಿದೆ. ಸುಶಾಂತ್​ ಕುಟುಂಬದ ಸದಸ್ಯರು (Sushant Singh Rajput Family) ಸೇರಿ ಒಟ್ಟು 10 ಮಂದಿ ಪ್ರಯಾಣಿಸಿದ್ದ ಕಾರು ಮತ್ತು ಟ್ರಕ್​​ ನಡುವೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ 6 ಮಂದಿ ಮೃತಪಟ್ಟಿದ್ದಾರೆ.

ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದರು!

ಸುಶಾಂತ್​ ಸಿಂಗ್​ ರಜಪೂತ್​ ಅವರ ಭಾವ ಒ.ಪಿ. ಸಿಂಗ್​ ಅವರ ಸಹೋದರಿ ನಿಧನರಾಗಿದ್ದರು. ಅವರ ಅಂತಿಮ ಸಂಸ್ಕಾರವನ್ನು ಮುಗಿಸಿದ ಬಳಿಕ ಕುಟುಂಬದವರೆಲ್ಲ ಪಾಟ್ನಾದಿಂದ ಹಿಂದಿರುಗುತ್ತಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿರುವುದು ವಿಷಾದನೀಯ. ‘ಟ್ರಕ್​ ಮತ್ತು ಕಾರಿನ ನಡುವೆ ಭೀಕರವಾಗಿ ಡಿಕ್ಕಿ ಆಗಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕ ಆಗಿದೆ’ ಎಂದು ಘಟನೆ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

6 ಮಂದಿಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಲಖಿಸರಾಯ್​ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಬಾಲಮುಕುಂದ್​ ಸಿಂಗ್​ ಮತ್ತು ದಿಲ್​ ಖುಷ್​ ಸಿಂಗ್​ ಅವರನ್ನು ಪಾಟ್ನಾಗೆ ಕಳಿಸಿ ಹೆಚ್ಚುವರಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನಿಬ್ಬರಿಗೆ ಲಖಿಸರಾಯ್​ ಜಿಲ್ಲಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ. ಮೃತರನ್ನು ಬಾಬಿ ದೇವಿ, ಅನಿತಾ ದೇವಿ, ಲಾಲ್​ಜಿತ್​ ಸಿಂಗ್​, ಅಮಿತ್​ ಶೇಖರ್​, ರಾಮಚಂದ್ರ ಸಿಂಗ್​ ಹಾಗೂ ಚಾಲಕ ಪ್ರೀತಂ ಎಂದು ಗುರುತಿಸಲಾಗಿದೆ.

ನಿಗೂಢವಾಗಿ ಸಾವನ್ನಪ್ಪಿದ್ದ ಸುಶಾಂತ್​:

ಸುಶಾಂತ್​ ಸಿಂಗ್​ ರಜಪೂತ್​ ಅವರು ಬಾಲಿವುಡ್​ನಲ್ಲಿ ಮಿಂಚುತ್ತಿರುವಾಗಲೇ ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ. 2020ರ ಜೂ.14ರಂದು ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆ ಆಗಿತ್ತು. ಅವರ ನಿಧನದ ಬಗ್ಗೆ ಈಗಲೂ ಅನುಮಾನ ಇದೆ. ಅವರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಪ್ರಶ್ನೆಗೆ ಇನ್ನೂ ಸರಿಯಾದ ಉತ್ತರ ಸಿಕ್ಕಿಲ್ಲ. ಸುಶಾಂತ್​ ಸಾವಿಗೆ ನ್ಯಾಯ ಸಿಗಬೇಕು ಎಂದು ಅಭಿಮಾನಿಗಳು ಇಂದಿಗೂ ಸೋಶಿಯಲ್​ ಮೀಡಿಯಾದಲ್ಲಿ ಅಭಿಯಾನ ನಡೆಸುತ್ತಿದ್ದಾರೆ. ಸುಶಾಂತ್​ ನಿಧನದ ನೋವು ಇನ್ನೂ ಹಸಿಯಾಗಿ ಇರುವಾಗಲೇ ಅವರ ಕುಟುಂಬದ 6 ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಮೃತರಾಗಿರುವುದು ಅಭಿಮಾನಿಗಳಿಗೆ ತೀವ್ರ ಆಘಾತ ಮಾಡಿದೆ.

ಇದನ್ನೂ ಓದಿ:

ಸುಶಾಂತ್​ ಮತ್ತು ಸಿದ್ದಾರ್ಥ್​ ಶುಕ್ಲಾ ಸಾವಿನ ನಡುವೆ ಹಲವು ಹೋಲಿಕೆ; ಧ್ವನಿ ಎತ್ತಿದ ನೆಟ್ಟಿಗರು

ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ

Published On - 3:34 pm, Tue, 16 November 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ