AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಅಪಘಾತದಲ್ಲಿ ಸುಶಾಂತ್​ ಕುಟುಂಬದ 6 ಮಂದಿ ನಿಧನ; ಇನ್ನೂ 4 ಜನರ ಸ್ಥಿತಿ ಗಂಭೀರ

Sushant Singh Rajput: ಸುಶಾಂತ್​ ಸಿಂಗ್​ ರಜಪೂತ್​ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ. ಸ್ಥಳದಲ್ಲೇ 6 ಮಂದಿ ಅಸುನೀಗಿದ್ದಾರೆ.

ರಸ್ತೆ ಅಪಘಾತದಲ್ಲಿ ಸುಶಾಂತ್​ ಕುಟುಂಬದ 6 ಮಂದಿ ನಿಧನ; ಇನ್ನೂ 4 ಜನರ ಸ್ಥಿತಿ ಗಂಭೀರ
ಸುಶಾಂತ್​ ಸಿಂಗ್​ ರಜಪೂತ್​
TV9 Web
| Edited By: |

Updated on:Nov 16, 2021 | 4:13 PM

Share

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ (Sushant Singh Rajput) ಅವರ ಕುಟುಂಬದ 6 ಮಂದಿ ರಸ್ತೆ ಅಪಘಾತದಲ್ಲಿ (Road Accident) ನಿಧನರಾಗಿದ್ದಾರೆ. ಮಂಗಳವಾರ (ನ.16) ಬೆಳಗ್ಗೆ ಈ ಭೀಕರ ಆ್ಯಕ್ಸಿಡೆಂಟ್​ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿರುವ 4 ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯಿಂದ ಸುಶಾಂತ್​ ಅಭಿಮಾನಿಗಳಿಗೆ ತೀವ್ರ ಆಘಾತ ಆಗಿದೆ. ಬಿಹಾರದ ಲಖಿಸರಾಯ್​ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 333ರಲ್ಲಿ ಈ ಅಪಘಾತ ಸಂಭವಿಸಿದೆ. ಸುಶಾಂತ್​ ಕುಟುಂಬದ ಸದಸ್ಯರು (Sushant Singh Rajput Family) ಸೇರಿ ಒಟ್ಟು 10 ಮಂದಿ ಪ್ರಯಾಣಿಸಿದ್ದ ಕಾರು ಮತ್ತು ಟ್ರಕ್​​ ನಡುವೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ 6 ಮಂದಿ ಮೃತಪಟ್ಟಿದ್ದಾರೆ.

ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದರು!

ಸುಶಾಂತ್​ ಸಿಂಗ್​ ರಜಪೂತ್​ ಅವರ ಭಾವ ಒ.ಪಿ. ಸಿಂಗ್​ ಅವರ ಸಹೋದರಿ ನಿಧನರಾಗಿದ್ದರು. ಅವರ ಅಂತಿಮ ಸಂಸ್ಕಾರವನ್ನು ಮುಗಿಸಿದ ಬಳಿಕ ಕುಟುಂಬದವರೆಲ್ಲ ಪಾಟ್ನಾದಿಂದ ಹಿಂದಿರುಗುತ್ತಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿರುವುದು ವಿಷಾದನೀಯ. ‘ಟ್ರಕ್​ ಮತ್ತು ಕಾರಿನ ನಡುವೆ ಭೀಕರವಾಗಿ ಡಿಕ್ಕಿ ಆಗಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕ ಆಗಿದೆ’ ಎಂದು ಘಟನೆ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

6 ಮಂದಿಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಲಖಿಸರಾಯ್​ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಬಾಲಮುಕುಂದ್​ ಸಿಂಗ್​ ಮತ್ತು ದಿಲ್​ ಖುಷ್​ ಸಿಂಗ್​ ಅವರನ್ನು ಪಾಟ್ನಾಗೆ ಕಳಿಸಿ ಹೆಚ್ಚುವರಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನಿಬ್ಬರಿಗೆ ಲಖಿಸರಾಯ್​ ಜಿಲ್ಲಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ. ಮೃತರನ್ನು ಬಾಬಿ ದೇವಿ, ಅನಿತಾ ದೇವಿ, ಲಾಲ್​ಜಿತ್​ ಸಿಂಗ್​, ಅಮಿತ್​ ಶೇಖರ್​, ರಾಮಚಂದ್ರ ಸಿಂಗ್​ ಹಾಗೂ ಚಾಲಕ ಪ್ರೀತಂ ಎಂದು ಗುರುತಿಸಲಾಗಿದೆ.

ನಿಗೂಢವಾಗಿ ಸಾವನ್ನಪ್ಪಿದ್ದ ಸುಶಾಂತ್​:

ಸುಶಾಂತ್​ ಸಿಂಗ್​ ರಜಪೂತ್​ ಅವರು ಬಾಲಿವುಡ್​ನಲ್ಲಿ ಮಿಂಚುತ್ತಿರುವಾಗಲೇ ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ. 2020ರ ಜೂ.14ರಂದು ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆ ಆಗಿತ್ತು. ಅವರ ನಿಧನದ ಬಗ್ಗೆ ಈಗಲೂ ಅನುಮಾನ ಇದೆ. ಅವರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಪ್ರಶ್ನೆಗೆ ಇನ್ನೂ ಸರಿಯಾದ ಉತ್ತರ ಸಿಕ್ಕಿಲ್ಲ. ಸುಶಾಂತ್​ ಸಾವಿಗೆ ನ್ಯಾಯ ಸಿಗಬೇಕು ಎಂದು ಅಭಿಮಾನಿಗಳು ಇಂದಿಗೂ ಸೋಶಿಯಲ್​ ಮೀಡಿಯಾದಲ್ಲಿ ಅಭಿಯಾನ ನಡೆಸುತ್ತಿದ್ದಾರೆ. ಸುಶಾಂತ್​ ನಿಧನದ ನೋವು ಇನ್ನೂ ಹಸಿಯಾಗಿ ಇರುವಾಗಲೇ ಅವರ ಕುಟುಂಬದ 6 ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಮೃತರಾಗಿರುವುದು ಅಭಿಮಾನಿಗಳಿಗೆ ತೀವ್ರ ಆಘಾತ ಮಾಡಿದೆ.

ಇದನ್ನೂ ಓದಿ:

ಸುಶಾಂತ್​ ಮತ್ತು ಸಿದ್ದಾರ್ಥ್​ ಶುಕ್ಲಾ ಸಾವಿನ ನಡುವೆ ಹಲವು ಹೋಲಿಕೆ; ಧ್ವನಿ ಎತ್ತಿದ ನೆಟ್ಟಿಗರು

ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ

Published On - 3:34 pm, Tue, 16 November 21

Follow Us
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ