AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಪ್ರಮುಖ ಆರೋಪಿ ರಿಯಾ ಚಕ್ರವರ್ತಿಗೆ ಹಾಲಿವುಡ್​ನಿಂದ ಆಫರ್​?

ರಿಯಾ ಚಕ್ರವರ್ತಿ ಹಾಲಿವುಡ್​ಗೆ ಕಾಲಿಡುತ್ತಾರೆ ಎಂಬ ಗುಸುಗುಸು ಕೇಳಿಬರುತ್ತಿದ್ದಂತೆಯೇ ಸುಶಾಂತ್​ ಸಿಂಗ್​ ರಜಪೂತ್​ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಆರೋಪ ಹೊತ್ತ ನಟಿಗೆ ಹಾಲಿವುಡ್​ ಮಂದಿ ಮಣೆ ಹಾಕುತ್ತಿರುವುದನ್ನು ಸುಶಾಂತ್​ ಫ್ಯಾನ್ಸ್​ ಸಹಿಸುತ್ತಿಲ್ಲ.

ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಪ್ರಮುಖ ಆರೋಪಿ ರಿಯಾ ಚಕ್ರವರ್ತಿಗೆ ಹಾಲಿವುಡ್​ನಿಂದ ಆಫರ್​?
ಸುಶಾಂತ್​ ಸಿಂಗ್​ ರಜಪೂತ್​, ರಿಯಾ ಚಕ್ರವರ್ತಿ
TV9 Web
| Edited By: |

Updated on: Jul 26, 2021 | 8:21 AM

Share

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ (Sushant Singh Rajput) ನಿಧನರಾದ ಬಳಿಕ ಅವರ ಪ್ರೇಯಸಿ ರಿಯಾ ಚಕ್ರವರ್ತಿ (Rhea Chakraborty) ಜೀವನದಲ್ಲಿ ಬಿರುಗಾಳಿ ಬೀಸಿತು. ಸುಶಾಂತ್​ ಇಹಲೋಹ ತ್ಯಜಿಸಿ ಒಂದು ವರ್ಷಕ್ಕೂ ಅಧಿಕ ಸಮಯ ಆಗಿದ್ದರೂ ಕೂಡ ರಿಯಾ ನಾರ್ಮಲ್​ ಜೀವನಕ್ಕೆ ಹೊಂದಿಕೊಳ್ಳಲು ಇಂದಿಗೂ ಸಾಧ್ಯವಾಗಿಲ್ಲ. ಹೋದಲ್ಲಿ ಬಂದಲ್ಲಿ ಅವರು ಸುಶಾಂತ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿ ಆಗುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಂತೂ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡಲಾಗುತ್ತಿದೆ. ಈ ನಡುವೆ ರಿಯಾ ಚಕ್ರವರ್ತಿಗೆ ಹಾಲಿವುಡ್ (Hollywood) ಸಿನಿಮಾಗಳಿಂದ ಆಫರ್​ ಬರುತ್ತಿದೆ ಎಂಬ ಸುದ್ದಿ ಕೇಳಿಬರುತ್ತಿದೆ.

ರಿಯಾ ಚಕ್ರವರ್ತಿ ಬಾಲಿವುಡ್​ನಲ್ಲಿ ಮಾಡಿರುವುದು ಮೂರು ಮತ್ತೊಂದು ಸಿನಿಮಾ ಮಾತ್ರ. ಇನ್ನೇನು ಚಿತ್ರರಂಗದಲ್ಲಿ ಭದ್ರವಾಗಿ ನೆಲೆ ಕಂಡುಕೊಳ್ಳಬೇಕು ಎಂಬಷ್ಟರಲ್ಲಿ ಅವರ ಜೀವನದಲ್ಲಿ ದುರಂತ ನಡೆಯಿತು. ಈಗ ಅವರು ಜೊತೆಗೆ ಹಾಲಿವುಡ್​ನ ಕೆಲವು ಕಾಸ್ಟಿಂಗ್​ ಏಜೆನ್ಸಿಗಳು ಮಾತುಕತೆ ನಡೆಸುತ್ತಿವೆ ಎಂಬ ಮಾಹಿತಿ ಹರಿದಾಡುತ್ತಿದೆ. ಆದರೆ ಯಾವುದೇ ಪ್ರಾಜೆಕ್ಟ್​ಗಳನ್ನೂ ರಿಯಾ ಇನ್ನೂ ಒಪ್ಪಿಕೊಂಡಿಲ್ಲ. ಶೀಘ್ರದಲ್ಲೇ ಅವರು ದೊಡ್ಡ ಸುದ್ದಿ ನೀಡಲಿದ್ದಾರೆ ಎನ್ನಲಾಗುತ್ತಿದೆ.

ರಿಯಾ ಚಕ್ರವರ್ತಿ ಹಾಲಿವುಡ್​ಗೆ ಕಾಲಿಡುತ್ತಾರೆ ಎಂಬ ಗುಸುಗುಸು ಕೇಳಿಬರುತ್ತಿದ್ದಂತೆಯೇ ಸುಶಾಂತ್​ ಸಿಂಗ್​ ರಜಪೂತ್​ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಸುಶಾಂತ್​ ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಇನ್ನೂ ತಿಳಿದುಬಂದಿಲ್ಲ. ಸುಶಾಂತ್​ ಕುಟುಂಬದವರ ಆರೋಪದ ಪ್ರಕಾರ ರಿಯಾ ಅವರೇ ಸುಶಾಂತ್​ ಸಾವಿಗೆ ಕಾರಣ. ಹಾಗಾಗಿ ಅಂಥ ನಟಿಗೆ ಹಾಲಿವುಡ್​ ಮಂದಿ ಮಣೆ ಹಾಕುತ್ತಿರುವುದನ್ನು ಸುಶಾಂತ್​ ಫ್ಯಾನ್ಸ್​ ಸಹಿಸುತ್ತಿಲ್ಲ.

‘ದೀಪಿಕಾ ಪಡುಕೋಣೆ ಅವರಂತಹ ಟಾಪ್​ ನಟಿಯರೇ ಹಾಲಿವುಡ್​ನಲ್ಲಿ ಏನೂ ಸಾಧಿಸಲಾಗದೇ ವಾಪಸ್​ ಬಂದರು. ಇನ್ನು ರಿಯಾ ಚಕ್ರವರ್ತಿ ಏನು ಮಾಡಲು ಸಾಧ್ಯ? ಸುಶಾಂತ್​ ಕಾರಣದಿಂದ ಇಂದಿಗೂ ರಿಯಾಗೆ ಅವಕಾಶಗಳು ಸಿಗುತ್ತಿವೆ. ಸಾವಿಗೆ ನ್ಯಾಯ ಕೊಡಿಸುವ ವಿಚಾರದಲ್ಲಿ ರಾಜೀ ಆಗುವುದೇ ಇಲ್ಲ’ ಎಂದು ಜನರು ಕಮೆಂಟ್​ ಮಾಡುತ್ತಿದ್ದಾರೆ. ಅಂತಿಮವಾಗಿ ಇದಕ್ಕೆಲ್ಲ ರಿಯಾ ಏನು ಉತ್ತರ ನೀಡುತ್ತಾರೆ ಎಂಬ ಕುತೂಹಲ ಈಗ ಸೃಷ್ಟಿ ಆಗಿದೆ.

ಬಾಲಿವುಡ್​ನಲ್ಲಿ ಇಮ್ರಾನ್​ ಹಷ್ಮಿ ಮತ್ತು ಅಮಿತಾಭ್​ ಬಚ್ಚನ್​ ಜೊತೆಗೆ ‘ಚೆಹ್ರೆ’ ಸಿನಿಮಾದಲ್ಲಿ ರಿಯಾ ಚಕ್ರವರ್ತಿ ನಟಿಸುತ್ತಿದ್ದಾರೆ. ಆ ಸಿನಿಮಾ ಕೂಡ ಸುಶಾಂತ್​ ಅಭಿಮಾನಿಗಳಿಂದ ವಿರೋಧ ಎದುರಿಸುತ್ತಿದೆ. 2020ರ ಜೂನ್​ 14ರಂದು ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ಸುಶಾಂತ್​ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿತ್ತು. ಅಂದಿನಿಂದಲೂ ಅವರ ಅಭಿಮಾನಿಗಳು ರಿಯಾ ಅವರನ್ನು ದ್ವೇಷಿಸುತ್ತಿದ್ದಾರೆ.

ಇದನ್ನೂ ಓದಿ:

ಸುಶಾಂತ್​ ಸಿಂಗ್​ ಸ್ಥಾನ ತುಂಬಲು ಬಂದ ಮಹಾಭಾರತದ ಅರ್ಜುನ; ಫ್ಯಾನ್ಸ್​ ಇದನ್ನು ಒಪ್ತಾರಾ?

Sushant Singh Rajput: ಸುಶಾಂತ್​ ವಾಸವಾಗಿದ್ದ ಮನೆ ಈಗ ಬಾಡಿಗೆಗೆ ಲಭ್ಯ; ತಿಂಗಳ ಬಾಡಿಗೆ ಅಬ್ಬಬ್ಬಾ ಇಷ್ಟೊಂದಾ?

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!