ಸುಶಾಂತ್​ ಸಿಂಗ್​ ನೆರೆ ಮನೆಯವನನ್ನು ಅರೆಸ್ಟ್​ ಮಾಡಿದ ಪೊಲೀಸರು; ಇದಕ್ಕಿದೆ ಡ್ರಗ್ಸ್​ ಲಿಂಕ್​

31 ವರ್ಸದ ಸಾಹಿಲ್​ ಷಾ ಅಲಿಯಾಸ್ ಫ್ಲಾಕೋ ಬಂಧಿತ ವ್ಯಕ್ತಿ. ಸುಶಾಂತ್​ ಪಕ್ಕದ ಮನೆಯಲ್ಲಿ ಈತ ವಾಸವಾಗಿದ್ದ. ಸುಶಾಂತ್​ ಮರಣಾ ನಂತರ ಸಾಹಿಲ್ ನಾಪತ್ತೆಯಾಗಿದ್ದ.

ಸುಶಾಂತ್​ ಸಿಂಗ್​ ನೆರೆ ಮನೆಯವನನ್ನು ಅರೆಸ್ಟ್​ ಮಾಡಿದ ಪೊಲೀಸರು; ಇದಕ್ಕಿದೆ ಡ್ರಗ್ಸ್​ ಲಿಂಕ್​
ಸುಶಾಂತ್​ ಸಿಂಗ್​ ರಜಪೂತ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Jan 29, 2022 | 2:32 PM

ನಟ ಸುಶಾಂತ್​ ಸಿಂಗ್ ರಜಪೂತ್ (Sushant Singh Rajput) ​​ ಸಾವಿನ ಪ್ರಕರಣದಲ್ಲಿ ಇನ್ನೂ ಹಲವು ಪ್ರಶ್ನೆಗಳು ಹಾಗೆಯೇ ಉಳಿದುಕೊಂಡಿವೆ. ಸುಶಾಂತ್​ ಸಿಂಗ್​ ರಜಪೂತ್​ ಅವರದ್ದು ಹತ್ಯೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಸುಶಾಂತ್​ ನಿಧನದ ನಂತರದಲ್ಲಿ ಅವರ ಪ್ರೇಯಸಿ ರಿಯಾ ಚಕ್ರವರ್ತಿ (Rhea Chakraborty) ಹೆಸರು ಮುಂಚೂಣಿಗೆ ಬಂದಿತ್ತು. ‘ಸುಶಾಂತ್​ ಖಾತೆಯಿಂದ ರಿಯಾ ಹಣ ವರ್ಗಾವಣೆ ಮಾಡಿಕೊಳ್ಳುತ್ತಿದ್ದರು. ಸುಶಾಂತ್​ ಸಾವಿಗೆ ಅವರೇ ಕಾರಣ’ ಎನ್ನುವ ಆರೋಪಗಳನ್ನು ಮಾಡಲಾಯಿತು. ಈ ಮಧ್ಯೆ ಸುಶಾಂತ್​ ಸಾವಿಗೂ, ಡ್ರಗ್​ ವಿಚಾರಕ್ಕೂ ನಂಟು ಇದೆ ಎಂಬ ವಿಚಾರ ಬೆಳಕಿಗೆ ಬಂತು. ಈ ಬಗ್ಗೆಯೂ ತನಿಖೆ ನಡೆಯುತ್ತಿದೆ. ಈಗ ಈ ಪ್ರಕರಣಕ್ಕೆ ಸಂಬಂಧಿಸಿ ಡ್ರಗ್​ ಪೆಡ್ಲರ್ ಒಬ್ಬನನ್ನು ಬಂಧಿಸಲಾಗಿದೆ. ಈತ ಸುಶಾಂತ್​ ನೆರೆ ಮನೆಯವನಾಗಿದ್ದ ಎನ್ನಲಾಗಿದೆ.

31 ವರ್ಸದ ಸಾಹಿಲ್​ ಷಾ ಅಲಿಯಾಸ್ ಫ್ಲಾಕೋ ಬಂಧಿತ ವ್ಯಕ್ತಿ. ಸುಶಾಂತ್​ ಪಕ್ಕದ ಮನೆಯಲ್ಲಿ ಈತ ವಾಸವಾಗಿದ್ದ. ಸುಶಾಂತ್​ ಮರಣಾ ನಂತರ ಸಾಹಿಲ್ ನಾಪತ್ತೆಯಾಗಿದ್ದ. ಈಗ ದುಬೈನಿಂದ ಬರುವಾಗ ಆತನನ್ನು ಬಂಧಿಸಲಾಗಿದೆ.  ಈತ ನೀಡುವ ಮಾಹಿತಿ ತನಿಖೆ ದೃಷ್ಟಿಯಲ್ಲಿ ಬಹಳ ಮಹತ್ವ ಪಡೆದುಕೊಳ್ಳಲಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಸುಶಾಂತ್ ಸಾವಿಗೆ ಸಂಬಂಧಿಸಿದಂತೆ ನಡೆದ ವಿಚಾರಣೆ ವೇಳೆ ಡ್ರಗ್​ ವಿಚಾರ ಬೆಳಕಿಗೆ ಬಂದಿತ್ತು. ಹಲವರನ್ನು ಕರೆದು ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಸಾಹಿಲ್ ಹೆಸರು ಕೇಳಿಬಂದಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ. ಕಳೆದ ವರ್ಷ ಗಾಂಜಾ ವಶಪಡಿಸಿಕೊಂಡ ಪ್ರಕರಣ ಮತ್ತು 2020ರಲ್ಲಿ ಸುಶಾಂತ್ ಸಾವಿನ ಪ್ರಕರಣದಲ್ಲಿ ಸಾಹಿಲ್​ ವಿಚಾರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ 9 ತಿಂಗಳಿಂದ ಸಾಹಿಲ್​ ತಲೆಮರೆಸಿಕೊಂಡು ಓಡಾಡುತ್ತಿದ್ದ. ಎನ್​ಸಿಬಿ ಅಧಿಕಾರಿಗಳು ಈತನಿಗಾಗಿ ಹುಡುಕಾಟ ನಡೆಸಿದ್ದರು. ಜೂನ್​ 2021ರಂದು ತನ್ನನ್ನು ಬಂಧಿಸದಂತೆ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ. ಎನ್​ಸಿಬಿ ಅಧಿಕಾರಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆ ಬಳಿಕ ಸಾಹಿಲ್​ ಸಲ್ಲಿಕೆ ಮಾಡಿದ್ದ ಅರ್ಜಿ ರಿಜೆಕ್ಟ್​ ಆಗಿತ್ತು.

2021ರ ಏಪ್ರಿಲ್​ನಲ್ಲಿ ಎನ್‌ಸಿಬಿ ನಿರ್ದೇಶಕ ಸಮೀರ್ ವಾಂಖೆಡೆ ಅವರು ಸಾಹಿಲ್​ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದರು. ‘ಕರಣ್ ಅರೋರಾ ಮತ್ತು ಅಬ್ಬಾಸ್ ಲಖಾನಿಗೆ ಡ್ರಗ್ಸ್ ಸರಬರಾಜು ಮಾಡಿದ್ದು ಸಾಹಿಲ್​. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಣ್ ಮತ್ತು ಅಬ್ಬಾಸ್ ಇಬ್ಬರನ್ನೂ ಬಂಧಿಸಲಾಗಿತ್ತು’ ಎಂದಿದ್ದರು ಅವರು.

ಹಿಂದಿ ಧಾರಾವಾಹಿಯ ಮೂಲಕ ಪರಿಚಿತರಾದ ಸುಶಾಂತ್ ಸಿಂಗ್ ನಂತರ ಬಾಲಿವುಡ್​ಗೆ ಕಾಲಿಟ್ಟರು. ಎಂ.ಎಸ್. ಧೋನಿ ಬಯೋಪಿಕ್ ಸಿನಿಮಾದ ಮೂಲಕ ಅವರು ಖ್ಯಾತಿ ಹೆಚ್ಚಿಸಿಕೊಂಡರು. ಅವರಿಗೆ ಬಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಇತ್ತು. ಆದರೆ, 2020ರ ಜೂನ್ 14 ರಂದು ಅವರು ಆತ್ಮಹತ್ಯೆ ಮಾಡಿಕೊಂಡರು. ಇಂದಿಗೂ ಕೂಡ ಅವರದ್ದು ಸಾವೋ ಅಥವಾ ಆತ್ಮಹತ್ಯೆಯೋ ಎನ್ನುವುದು ನಿಗೂಢವಾಗಿಯೇ ಇದೆ. ಈ ಬಗ್ಗೆ ತನಿಖೆ ಪ್ರಗತಿಯಲ್ಲಿದೆ. ಅವರ ಜನ್ಮದಿನದಂದು ಕೆಲವರು ಸುಶಾಂತ್​ ಸಿಂಗ್​ಗೆ ನ್ಯಾಯ ಒದಗಿಸುವಂತೆ ಮನವಿ ಇಟ್ಟಿದ್ದಾರೆ.

ಇದನ್ನೂ ಓದಿ: ಸುಶಾಂತ್​ ಪ್ರೇಯಸಿ ರಿಯಾ ಚಕ್ರವರ್ತಿ ಧರಿಸಿದ ಈ ಲೆಹೆಂಗಾ ಬೆಲೆ ಕೇಳಿ ಕಣ್ಣರಳಿಸಿದ ಫ್ಯಾನ್ಸ್​

Sushant Birthday: ಸುಶಾಂತ್​ ವಿಡಿಯೋ ಹಂಚಿಕೊಂಡು ಮಿಸ್​ ಯೂ ಎಂದ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ