Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಿಂಗ್​ ನೆರೆ ಮನೆಯವನನ್ನು ಅರೆಸ್ಟ್​ ಮಾಡಿದ ಪೊಲೀಸರು; ಇದಕ್ಕಿದೆ ಡ್ರಗ್ಸ್​ ಲಿಂಕ್​

31 ವರ್ಸದ ಸಾಹಿಲ್​ ಷಾ ಅಲಿಯಾಸ್ ಫ್ಲಾಕೋ ಬಂಧಿತ ವ್ಯಕ್ತಿ. ಸುಶಾಂತ್​ ಪಕ್ಕದ ಮನೆಯಲ್ಲಿ ಈತ ವಾಸವಾಗಿದ್ದ. ಸುಶಾಂತ್​ ಮರಣಾ ನಂತರ ಸಾಹಿಲ್ ನಾಪತ್ತೆಯಾಗಿದ್ದ.

ಸುಶಾಂತ್​ ಸಿಂಗ್​ ನೆರೆ ಮನೆಯವನನ್ನು ಅರೆಸ್ಟ್​ ಮಾಡಿದ ಪೊಲೀಸರು; ಇದಕ್ಕಿದೆ ಡ್ರಗ್ಸ್​ ಲಿಂಕ್​
ಸುಶಾಂತ್​ ಸಿಂಗ್​ ರಜಪೂತ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 29, 2022 | 2:32 PM

ನಟ ಸುಶಾಂತ್​ ಸಿಂಗ್ ರಜಪೂತ್ (Sushant Singh Rajput) ​​ ಸಾವಿನ ಪ್ರಕರಣದಲ್ಲಿ ಇನ್ನೂ ಹಲವು ಪ್ರಶ್ನೆಗಳು ಹಾಗೆಯೇ ಉಳಿದುಕೊಂಡಿವೆ. ಸುಶಾಂತ್​ ಸಿಂಗ್​ ರಜಪೂತ್​ ಅವರದ್ದು ಹತ್ಯೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಸುಶಾಂತ್​ ನಿಧನದ ನಂತರದಲ್ಲಿ ಅವರ ಪ್ರೇಯಸಿ ರಿಯಾ ಚಕ್ರವರ್ತಿ (Rhea Chakraborty) ಹೆಸರು ಮುಂಚೂಣಿಗೆ ಬಂದಿತ್ತು. ‘ಸುಶಾಂತ್​ ಖಾತೆಯಿಂದ ರಿಯಾ ಹಣ ವರ್ಗಾವಣೆ ಮಾಡಿಕೊಳ್ಳುತ್ತಿದ್ದರು. ಸುಶಾಂತ್​ ಸಾವಿಗೆ ಅವರೇ ಕಾರಣ’ ಎನ್ನುವ ಆರೋಪಗಳನ್ನು ಮಾಡಲಾಯಿತು. ಈ ಮಧ್ಯೆ ಸುಶಾಂತ್​ ಸಾವಿಗೂ, ಡ್ರಗ್​ ವಿಚಾರಕ್ಕೂ ನಂಟು ಇದೆ ಎಂಬ ವಿಚಾರ ಬೆಳಕಿಗೆ ಬಂತು. ಈ ಬಗ್ಗೆಯೂ ತನಿಖೆ ನಡೆಯುತ್ತಿದೆ. ಈಗ ಈ ಪ್ರಕರಣಕ್ಕೆ ಸಂಬಂಧಿಸಿ ಡ್ರಗ್​ ಪೆಡ್ಲರ್ ಒಬ್ಬನನ್ನು ಬಂಧಿಸಲಾಗಿದೆ. ಈತ ಸುಶಾಂತ್​ ನೆರೆ ಮನೆಯವನಾಗಿದ್ದ ಎನ್ನಲಾಗಿದೆ.

31 ವರ್ಸದ ಸಾಹಿಲ್​ ಷಾ ಅಲಿಯಾಸ್ ಫ್ಲಾಕೋ ಬಂಧಿತ ವ್ಯಕ್ತಿ. ಸುಶಾಂತ್​ ಪಕ್ಕದ ಮನೆಯಲ್ಲಿ ಈತ ವಾಸವಾಗಿದ್ದ. ಸುಶಾಂತ್​ ಮರಣಾ ನಂತರ ಸಾಹಿಲ್ ನಾಪತ್ತೆಯಾಗಿದ್ದ. ಈಗ ದುಬೈನಿಂದ ಬರುವಾಗ ಆತನನ್ನು ಬಂಧಿಸಲಾಗಿದೆ.  ಈತ ನೀಡುವ ಮಾಹಿತಿ ತನಿಖೆ ದೃಷ್ಟಿಯಲ್ಲಿ ಬಹಳ ಮಹತ್ವ ಪಡೆದುಕೊಳ್ಳಲಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಸುಶಾಂತ್ ಸಾವಿಗೆ ಸಂಬಂಧಿಸಿದಂತೆ ನಡೆದ ವಿಚಾರಣೆ ವೇಳೆ ಡ್ರಗ್​ ವಿಚಾರ ಬೆಳಕಿಗೆ ಬಂದಿತ್ತು. ಹಲವರನ್ನು ಕರೆದು ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಸಾಹಿಲ್ ಹೆಸರು ಕೇಳಿಬಂದಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ. ಕಳೆದ ವರ್ಷ ಗಾಂಜಾ ವಶಪಡಿಸಿಕೊಂಡ ಪ್ರಕರಣ ಮತ್ತು 2020ರಲ್ಲಿ ಸುಶಾಂತ್ ಸಾವಿನ ಪ್ರಕರಣದಲ್ಲಿ ಸಾಹಿಲ್​ ವಿಚಾರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ 9 ತಿಂಗಳಿಂದ ಸಾಹಿಲ್​ ತಲೆಮರೆಸಿಕೊಂಡು ಓಡಾಡುತ್ತಿದ್ದ. ಎನ್​ಸಿಬಿ ಅಧಿಕಾರಿಗಳು ಈತನಿಗಾಗಿ ಹುಡುಕಾಟ ನಡೆಸಿದ್ದರು. ಜೂನ್​ 2021ರಂದು ತನ್ನನ್ನು ಬಂಧಿಸದಂತೆ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ. ಎನ್​ಸಿಬಿ ಅಧಿಕಾರಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆ ಬಳಿಕ ಸಾಹಿಲ್​ ಸಲ್ಲಿಕೆ ಮಾಡಿದ್ದ ಅರ್ಜಿ ರಿಜೆಕ್ಟ್​ ಆಗಿತ್ತು.

2021ರ ಏಪ್ರಿಲ್​ನಲ್ಲಿ ಎನ್‌ಸಿಬಿ ನಿರ್ದೇಶಕ ಸಮೀರ್ ವಾಂಖೆಡೆ ಅವರು ಸಾಹಿಲ್​ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದರು. ‘ಕರಣ್ ಅರೋರಾ ಮತ್ತು ಅಬ್ಬಾಸ್ ಲಖಾನಿಗೆ ಡ್ರಗ್ಸ್ ಸರಬರಾಜು ಮಾಡಿದ್ದು ಸಾಹಿಲ್​. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಣ್ ಮತ್ತು ಅಬ್ಬಾಸ್ ಇಬ್ಬರನ್ನೂ ಬಂಧಿಸಲಾಗಿತ್ತು’ ಎಂದಿದ್ದರು ಅವರು.

ಹಿಂದಿ ಧಾರಾವಾಹಿಯ ಮೂಲಕ ಪರಿಚಿತರಾದ ಸುಶಾಂತ್ ಸಿಂಗ್ ನಂತರ ಬಾಲಿವುಡ್​ಗೆ ಕಾಲಿಟ್ಟರು. ಎಂ.ಎಸ್. ಧೋನಿ ಬಯೋಪಿಕ್ ಸಿನಿಮಾದ ಮೂಲಕ ಅವರು ಖ್ಯಾತಿ ಹೆಚ್ಚಿಸಿಕೊಂಡರು. ಅವರಿಗೆ ಬಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಇತ್ತು. ಆದರೆ, 2020ರ ಜೂನ್ 14 ರಂದು ಅವರು ಆತ್ಮಹತ್ಯೆ ಮಾಡಿಕೊಂಡರು. ಇಂದಿಗೂ ಕೂಡ ಅವರದ್ದು ಸಾವೋ ಅಥವಾ ಆತ್ಮಹತ್ಯೆಯೋ ಎನ್ನುವುದು ನಿಗೂಢವಾಗಿಯೇ ಇದೆ. ಈ ಬಗ್ಗೆ ತನಿಖೆ ಪ್ರಗತಿಯಲ್ಲಿದೆ. ಅವರ ಜನ್ಮದಿನದಂದು ಕೆಲವರು ಸುಶಾಂತ್​ ಸಿಂಗ್​ಗೆ ನ್ಯಾಯ ಒದಗಿಸುವಂತೆ ಮನವಿ ಇಟ್ಟಿದ್ದಾರೆ.

ಇದನ್ನೂ ಓದಿ: ಸುಶಾಂತ್​ ಪ್ರೇಯಸಿ ರಿಯಾ ಚಕ್ರವರ್ತಿ ಧರಿಸಿದ ಈ ಲೆಹೆಂಗಾ ಬೆಲೆ ಕೇಳಿ ಕಣ್ಣರಳಿಸಿದ ಫ್ಯಾನ್ಸ್​

Sushant Birthday: ಸುಶಾಂತ್​ ವಿಡಿಯೋ ಹಂಚಿಕೊಂಡು ಮಿಸ್​ ಯೂ ಎಂದ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ