AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದ್ದಕ್ಕಿದ್ದಂತೆ ಆ್ಯಕ್ಟೀವ್​ ಆಯ್ತು ಸುಶಾಂತ್​ ಸಿಂಗ್​ ಫೇಸ್​ಬುಕ್​ ಖಾತೆ; ಗಾಬರಿಗೊಂಡ ಅಭಿಮಾನಿಗಳು

Sushant Singh Rajput: 2022ರ ಹೊಸ ವರ್ಷದ ಪ್ರಯುಕ್ತ ಸುಶಾಂತ್​ ಸಿಂಗ್​ ರಜಪೂತ್​ ಅವರ ಅಧಿಕೃತ ಫೇಸ್​ಬುಕ್​ ಖಾತೆಯಿಂದ ಎಲ್ಲರಿಗೂ ಶುಭಾಶಯ ಕೋರಲಾಗಿದೆ. ಒಮ್ಮೆಲೇ ಆ ಪೋಸ್ಟ್​​ ನೋಡಿದ ಅಭಿಮಾನಿಗಳು ಶಾಕ್​ ಆದರು.

ಇದ್ದಕ್ಕಿದ್ದಂತೆ ಆ್ಯಕ್ಟೀವ್​ ಆಯ್ತು ಸುಶಾಂತ್​ ಸಿಂಗ್​ ಫೇಸ್​ಬುಕ್​ ಖಾತೆ; ಗಾಬರಿಗೊಂಡ ಅಭಿಮಾನಿಗಳು
ಸುಶಾಂತ್​ ಸಿಂಗ್​ ರಜಪೂತ್
TV9 Web
| Edited By: |

Updated on: Jan 02, 2022 | 5:21 PM

Share

ನಟ ಸುಶಾಂತ್​ ಸಿಂಗ್​ ರಜಪೂತ್ (Sushant Singh Rajput)​ ಅವರು ಅಕಾಲಿಕ ಮರಣ ಹೊಂದಿದ್ದು ನೋವಿನ ಸಂಗತಿ. ಬಾಲಿವುಡ್​ನಲ್ಲಿ ಅನೇಕ ವರ್ಷಗಳ ಕಾಲ ಮಿಂಚಬೇಕಾಗಿದ್ದ ಅವರು ಕೇವಲ 34ನೇ ವಯಸ್ಸಿಗೆ ತಮ್ಮ ಜೀವನ ಅಂತ್ಯ ಮಾಡಿಕೊಂಡರು. ಅವರದ್ದು ಆತ್ಮಹತ್ಯೆಯೋ ಕೊಲೆಯೋ ಎಂಬ ಬಗ್ಗೆ ಇನ್ನೂ ನಿಖರವಾದ ಮಾಹಿತಿ ಸಿಕ್ಕಿಲ್ಲ. ಒಟ್ಟಿನಲ್ಲಿ ಸುಶಾಂತ್​ ಸಾವಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಅವರ ಕುಟುಂಬದವರು ಮತ್ತು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಅಭಿಯಾನ ಮಾಡುತ್ತಲೇ ಇದ್ದಾರೆ. ಈ ನಡುವೆ ಸುಶಾಂತ್​ ಸಿಂಗ್​ ರಜಪೂತ್​ ಅಭಿಮಾನಿಗಳಿಗೆ ಒಮ್ಮೆಲೇ ಗಾಬರಿ ಆಗುವಂತಹ ಘಟನೆ ನಡೆಯಿತು. ಅವರ ಫೇಸ್​ಬುಕ್​ (Sushant Singh Rajput Facebook) ಖಾತೆ ಇದ್ದಕ್ಕಿದ್ದಂತೆ ಆ್ಯಕ್ಟೀವ್​ ಆಯಿತು!

ಹೌದು, 2022ರ ಹೊಸ ವರ್ಷದ ಪ್ರಯುಕ್ತ ಸುಶಾಂತ್​ ಸಿಂಗ್​ ರಜಪೂತ್​ ಅವರ ಅಧಿಕೃತ ಫೇಸ್​ಬುಕ್​ ಖಾತೆಯಿಂದ ಎಲ್ಲರಿಗೂ ಶುಭಾಶಯ ಕೋರಲಾಗಿದೆ. ಒಮ್ಮೆಲೇ ಆ ಪೋಸ್ಟ್​​ ನೋಡಿದ ಅಭಿಮಾನಿಗಳು ಶಾಕ್​ ಆದರು. ನಿಧನರಾಗಿರುವ ಸುಶಾಂತ್​ ಸಿಂಗ್​ ರಜಪೂತ್​ ಅವರ ಫೇಸ್​ಬುಕ್​ ಖಾತೆ ಹೇಗೆ ಆ್ಯಕ್ಟೀವ್​ ಆಯಿತು ಎಂದು ಅಚ್ಚರಿ ಪಟ್ಟರು. ಸ್ವಲ್ಪ ಸುಧಾರಿಸಿಕೊಂಡು ಗಮನಿಸಿದಾಗ ಅಸಲಿ ವಿಷಯ ಗೊತ್ತಾಯಿತು.

ಸುಶಾಂತ್​ ಸಿಂಗ್​ ರಜಪೂತ್​ ಪರವಾಗಿ ಅವರ ಸಹೋದರಿ ಶ್ವೇತಾ ಸಿಂಗ್​ ಕೀರ್ತಿ ಅವರು ಈ ಪೋಸ್ಟ್​ ಮಾಡಿದ್ದಾರೆ. ಅದಕ್ಕೆ ಅಭಿಮಾನಿಗಳು ಹಲವು ರೀತಿಯಲ್ಲಿ ಕಮೆಂಟ್​ ಮಾಡಿದ್ದಾರೆ. ‘ಈ ಪೋಸ್ಟ್​ ನೋಡಿ ಒಮ್ಮೆಲೇ ಎದೆಬಡಿತ ನಿಂತಂಗಾಯಿತು’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಒಟ್ಟಾರೆ ಈ ಸಂದರ್ಭದಲ್ಲಿ ಸುಶಾಂತ್ ಅವರನ್ನು ಅಭಿಮಾನಿಗಳು ಸಖತ್​ ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

ಟ್ರೋಲ್​ ಆಗಿದ್ದ ಸುಶಾಂತ್​ ಸಹೋದರಿ:

ಕೆಲವೇ ದಿನಗಳ ಹಿಂದೆ ಸೋಶಿಯಲ್​ ಮೀಡಿಯಾದಲ್ಲಿ ಬೋಲ್ಡ್​ ಫೋಟೋ ಶೇರ್​ ಮಾಡಿಕೊಂಡಿದ್ದ ಶ್ವೇತಾ ಸಿಂಗ್​ ಕೀರ್ತಿ ಅವರು ಟ್ರೋಲ್​ಗೆ ಒಳಗಾಗಿದ್ದರು. ಸುಶಾಂತ್​ ನಿಧನರಾದ ಬಳಿಕ ಸೋಶಿಯಲ್​ ಮೀಡಿಯಾದಲ್ಲಿ ಒಂದು ಆಂದೋಲನ ಶುರು ಆಯಿತು. #JusticeForSSR ಎಂಬ ಹ್ಯಾಶ್​ಟ್ಯಾಗ್​ ಮೂಲಕ ಲಕ್ಷಾಂತರ ಜನರು ಧ್ವನಿ ಎತ್ತಿದರು. ಸುಶಾಂತ್​ ಸಾವಿಗೆ ನ್ಯಾಯ ಒದಗಿಸಿಕೊಡಬೇಕು ಎಂಬ ಉದ್ದೇಶ ಈ ಆಂದೋಲನದ ಹಿಂದಿದೆ. ಅದರಲ್ಲಿ ಸುಶಾಂತ್​ ಅಭಿಮಾನಿಗಳು ಇಂದಿಗೂ ಭಾಗಿ ಆಗುತ್ತಲೇ ಇದ್ದಾರೆ. ಈ ನಡುವೆ ತಮ್ಮ ನಿಜವಾದ ಉದ್ದೇಶ ಮರೆತು, ಹಾಟ್​ ಫೋಟೋಗಳನ್ನು ಪೋಸ್ಟ್​ ಮಾಡುತ್ತಿರುವ ಸುಶಾಂತ್​ ಸಹೋದರಿ ಶ್ವೇತಾ ಸಿಂಗ್​ ಕೀರ್ತಿ ಅವರನ್ನು ಅಭಿಮಾನಿಗಳು ತರಾಟೆಗೆ ತೆಗೆದುಕೊಂಡಿದ್ದರು.

#JusticeForSSR ಎಂಬ ಅಂದೋಲನ ಎಲ್ಲಿಗೆ ಹೋಯಿತು? ಸುಶಾಂತ್​ ಸಾವಿಗೆ ನ್ಯಾಯ ಕೊಡಿಸುವಲ್ಲಿ ನಿಮ್ಮ ಪ್ರಯತ್ನ ಎತ್ತ ಸಾಗಿದೆ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ. ‘ಅಭಿಮಾನಿಗಳೆಲ್ಲ ಸುಶಾಂತ್​ ನಿಧನಕ್ಕೆ ನ್ಯಾಯ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರ ಸಹೋದರಿ ತನ್ನದೇ ಲೋಕದಲ್ಲಿ ಮುಳುಗಿದ್ದಾರೆ’ ಎಂದು ಜನರು ಕಮೆಂಟ್​ ಮಾಡಿದ್ದರು.

ಇದನ್ನೂ ಓದಿ:

ರಸ್ತೆ ಅಪಘಾತದಲ್ಲಿ ಸುಶಾಂತ್​ ಕುಟುಂಬದ 6 ಮಂದಿ ನಿಧನ; ಇನ್ನೂ 4 ಜನರ ಸ್ಥಿತಿ ಗಂಭೀರ

ಸುಶಾಂತ್​ ಪ್ರೇಯಸಿ ರಿಯಾ ಚಕ್ರವರ್ತಿ ಧರಿಸಿದ ಈ ಲೆಹೆಂಗಾ ಬೆಲೆ ಕೇಳಿ ಕಣ್ಣರಳಿಸಿದ ಫ್ಯಾನ್ಸ್​

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ