Sushant Singh Rajput: ‘ಸುಶಾಂತ್​ ಮೃತದೇಹ ಕಂಡಾಗಲೇ ಅದು ಆತ್ಮಹತ್ಯೆ ಅಲ್ಲ ಅಂತ ಗೊತ್ತಾಗಿತ್ತು’: ಸಹೋದರಿ ಸ್ಫೋಟಕ ಹೇಳಿಕೆ

Sushant Singh Rajput Case: ‘ನಾನು ಕ್ರಿಮಿನಲ್​ ಲಾಯರ್​. ಆತ್ಮಹತ್ಯೆ ಮಾಡಿಕೊಂಡವರ ಅನೇಕ ಕೇಸ್​ಗಳನ್ನು ನಾನು ಕಂಡಿದ್ದೇನೆ’ ಎಂದು ಸುಶಾಂತ್​ ಸಿಂಗ್ ರಜಪೂತ್​ ಸಹೋದರಿ ಪ್ರಿಯಾಂಕಾ ಸಿಂಗ್​ ಹೇಳಿದ್ದಾರೆ.

Sushant Singh Rajput: ‘ಸುಶಾಂತ್​ ಮೃತದೇಹ ಕಂಡಾಗಲೇ ಅದು ಆತ್ಮಹತ್ಯೆ ಅಲ್ಲ ಅಂತ ಗೊತ್ತಾಗಿತ್ತು’: ಸಹೋದರಿ ಸ್ಫೋಟಕ ಹೇಳಿಕೆ
ಸುಶಾಂತ್ ಸಿಂಗ್ ರಜಪೂತ್, ಪ್ರಿಯಾಂಕಾ ಸಿಂಗ್, ರಿಯಾ ಚಕ್ರವರ್ತಿ
Follow us
| Updated By: ಮದನ್​ ಕುಮಾರ್​

Updated on:Jul 15, 2022 | 8:57 AM

ನಟ ಸುಶಾಂತ್​ ಸಿಂಗ್​ ರಜಪೂತ್​ (Sushant Singh Rajput) ಅವರನ್ನು ಕಳೆದುಕೊಂಡಿದ್ದು ನೋವಿನ ಸಂಗತಿ. ಅವರು ಇಲ್ಲ ಎಂಬ ನೋವು ಪ್ರತಿದಿನವೂ ಕುಟುಂಬದವರನ್ನು ಮತ್ತು ಆಪ್ತರನ್ನು ಕಾಡುತ್ತಿದೆ. ಅವರ ಸಾವಿಗೆ ನ್ಯಾಯ ಕೊಡಿಸಬೇಕು ಎಂದು ಅಭಿಮಾನಿಗಳಿಗೆ ಇಂದಿಗೂ ಹೋರಾಟ ಮಾಡುತ್ತಲೇ ಇದ್ದಾರೆ. ಸುಶಾಂತ್​ ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಇನ್ನೂ ಅಂತಿಮ ನಿರ್ಧಾರಕ್ಕೆ ಬರಲಾಗಿಲ್ಲ. ಅಂತಿಮವಾಗಿ ಕೋರ್ಟ್​ ಯಾವ ತೀರ್ಪು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ. ಈ ನಡುವೆ ಸುಶಾಂತ್​ ಸಿಂಗ್​ ರಜಪೂತ್​ ಸಹೋದರಿ ಪ್ರಿಯಾಂಕಾ ಸಿಂಗ್​ (Priyanka Singh) ಅವರು ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ವೃತ್ತಿಯಲ್ಲಿ ಲಾಯರ್​ ಆಗಿರುವ ಅವರು ತಮ್ಮ ಸಹೋದರನ ಸಾವಿನ ಬಗ್ಗೆ ಹಲವು ವಿವರಗಳನ್ನು ಹಂಚಿಕೊಂಡಿದ್ದಾರೆ. ರಿಯಾ ಚಕ್ರವರ್ತಿ (Rhea Chakraborty) ಮೇಲೆ ಕೆಲವು ಆರೋಪಗಳನ್ನು ಅವರು ಹೊರಿಸಿದ್ದಾರೆ.

2020ರ ಜೂನ್​ 14ರಂದು ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ಸುಶಾಂತ್​ ಸಿಂಗ್​ ರಜಪೂತ್​ ಅವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ ಆಗಿತ್ತು. ಆ ಘಟನೆಯನ್ನು ಪ್ರಿಯಾಂಕಾ ಸಿಂಗ್​ ಅವರು ಮತ್ತೆ ಈಗ ನೆನಪು ಮಾಡಿಕೊಂಡಿದ್ದಾರೆ. ‘ಇಂಡಿಯಾ ನ್ಯೂಸ್​’ಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರಗಳನ್ನು ತಿಳಿಸಿದ್ದಾರೆ.

‘ನಾನು ಕ್ರಿಮಿನಲ್​ ಲಾಯರ್​. ವರದಕ್ಷಿಣೆ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡವರ ಅನೇಕ ಕೇಸ್​ಗಳನ್ನು ನಾನು ಕಂಡಿದ್ದೇನೆ. ಕಣ್ಣುಗಳು ಹೊರಗೆ ಬಂದಿರುತ್ತವೆ. ನಾಲಿಗೆ ಹೊರಚಾಚಿರುತ್ತದೆ. ನನ್ನ ಸಹೋದರನ ದೇಹದಲ್ಲಿ ಆ ರೀತಿ ಏನೂ ಆಗಿರಲಿಲ್ಲ. ಕೆಲವು ದಿನಗಳ ಬಳಿಕ ನಾನು ಆ ರೂಮ್​ಗೆ ಹೋಗಿ ನೋಡಿದೆ. ಬೆಡ್​ ಮತ್ತು ಫ್ಯಾನ್​ ನಡುವೆ ಸುಶಾಂತ್​ನ ಎತ್ತರದಷ್ಟು​ ಅಂತರ ಕೂಡ ಇರಲಿಲ್ಲಿ’ ಎಂದು ಪ್ರಿಯಾಂಕಾ ಸಿಂಗ್​ ಹೇಳಿದ್ದಾರೆ.

ಇದನ್ನೂ ಓದಿ
Image
ಸುಶಾಂತ್​ ಸಿಂಗ್​ ನೆರೆ ಮನೆಯವನನ್ನು ಅರೆಸ್ಟ್​ ಮಾಡಿದ ಪೊಲೀಸರು; ಇದಕ್ಕಿದೆ ಡ್ರಗ್ಸ್​ ಲಿಂಕ್​
Image
‘ಪಾರ್ಟಿ ಮಾಡಿ ದುಡ್ಡು ಖರ್ಚು ಮಾಡಲು ಮದುವೆ ಆದೆ’; ಸುಶಾಂತ್​ ಮಾಜಿ ಪ್ರೇಯಸಿಯ ಅಚ್ಚರಿಯ ಹೇಳಿಕೆ
Image
Sushant Birthday: ಸುಶಾಂತ್​ ವಿಡಿಯೋ ಹಂಚಿಕೊಂಡು ಮಿಸ್​ ಯೂ ಎಂದ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ
Image
ರಾತ್ರಿ ಸುಶಾಂತ್​ ಜತೆ ವೈನ್​ ಕುಡಿಯುತ್ತ, ಸೋಲಿಗೆ ಕಾರಣ ಹುಡುಕಿದ್ದ ಘಟನೆ ನೆನಪಿಸಿಕೊಂಡ ಕೃತಿ ಸನೋನ್​

‘2019ರಲ್ಲಿ ರಿಯಾ ಚಕ್ರವರ್ತಿ ಬಂದ ಬಳಿಕ ಸುಶಾಂತ್​ ಜೀವನ ಹಾಳಾಗಲು ಶುರು ಆಯಿತು. ನನ್ನ ಮತ್ತು ಆತನ ನಡುವೆ ಭಿನ್ನಾಭಿಪ್ರಾಯ ಮೂಡಲು ಶುರುವಾಗಿದ್ದೇ ಆಗ. ನಂತರದ 6 ದಿನಗಳಲ್ಲಿ ಇಷ್ಟೆಲ್ಲ ಆಯಿತು. ಯಾರೋ ಬೇಕಂತಲೇ ಸುಶಾಂತ್​ ಬದುಕಿನಲ್ಲಿ ರಿಯಾಳ ಎಂಟ್ರಿ ಆಗುವಂತೆ ಮಾಡಿದ್ದರು’ ಎಂಬುದು ಪ್ರಿಯಾಂಕಾ ಸಿಂಗ್​ ಅಭಿಪ್ರಾಯ.

ರಿಯಾ ವಿರುದ್ಧ ಚಾರ್ಜ್​ಶೀಟ್​:

ಸುಶಾಂತ್​ ಸಿಂಗ್​ ರಜಪೂತ್​ ಸಾವಿಗೆ ಸಂಬಂಧಿಸಿದ ಡ್ರಗ್ಸ್​ ಪ್ರಕರಣದಲ್ಲಿ ಎನ್​ಸಿಬಿ ಇತ್ತೀಚೆಗೆ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದೆ. ಅದರ ಅನ್ವಯ, ರಿಯಾ ಚಕ್ರವರ್ತಿ ಅವರ ಮೇಲೆ ಹಲವು ಆರೋಪಗಳನ್ನು ಮಾಡಲಾಗಿದೆ. ಸುಶಾಂತ್​ ಸಿಂಗ್​ ರಜಪೂತ್​ಗೆ ಗಾಂಜಾ ಮುಂತಾದ ಮಾದಕ ವಸ್ತುಗಳನ್ನು ಪೂರೈಸಿದ್ದೇ ರಿಯಾ ಚಕ್ರವರ್ತಿ ಎಂದು ಉಲ್ಲೇಖ ಮಾಡಲಾಗಿದೆ. ಇದರಿಂದ ಅವರಿಗೆ ಸಂಕಷ್ಟ ಎದುರಾಗಿದೆ. ಒಂದು ವೇಳೆ ಆರೋಪ ಸಾಬೀತಾದರೆ ರಿಯಾ ಚಕ್ರವರ್ತಿಗೆ 10 ವರ್ಷ ಜೈಲು ಶಿಕ್ಷೆ ಆಗುವ ಸಾಧ್ಯತೆ ಇದೆ.

Published On - 8:57 am, Fri, 15 July 22

ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು