AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುಶಾಂತ್​ ಸಾವಿನಲ್ಲಿ ಅನೇಕ ವಿಚಾರ ಹೊಂದಿಕೆ ಆಗುತ್ತಿಲ್ಲ’: ಸಹೋದರಿ ಶಾಕಿಂಗ್​ ಹೇಳಿಕೆ

ನಟ ಸುಶಾಂತ್​ ಸಿಂಗ್ ರಜಪೂತ್​ ಅವರನ್ನು ಅಭಿಮಾನಿಗಳು ಈಗಲೂ ಮಿಸ್​ ಮಾಡಿಕೊಳ್ಳುತ್ತಾರೆ. ಅವರ ಸಾವಿಗೆ ಕಾರಣವಾದ ಸಂಗತಿ ಏನು ಎಂಬ ಸತ್ಯ ಇನ್ನೂ ಗೌಪ್ಯವಾಗಿಯೇ ಉಳಿದಿದೆ. ಅಭಿಮಾನಿಗಳು ಮಾತ್ರವಲ್ಲದೇ ಕುಟುಂಬದವರಿಗೂ ಸುಶಾಂತ್​ ಸಾವಿನ ಹಿಂದಿರುವ ರಹಸ್ಯ ಏನು ಎಂಬುದು ತಿಳಿದಿಲ್ಲ. ಹಾಗಾಗಿ ಅವರ ಸಹೋದರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಸುಶಾಂತ್​ ಸಾವಿನಲ್ಲಿ ಅನೇಕ ವಿಚಾರ ಹೊಂದಿಕೆ ಆಗುತ್ತಿಲ್ಲ’: ಸಹೋದರಿ ಶಾಕಿಂಗ್​ ಹೇಳಿಕೆ
ಸುಶಾಂತ್​ ಸಿಂಗ್ ರಜಪೂತ್​
ಮದನ್​ ಕುಮಾರ್​
|

Updated on: Mar 06, 2024 | 5:21 PM

Share

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ (Sushant Singh Rajput) ಅವರು ನಿಧನರಾಗಿ ಮೂರೂವರೆ ವರ್ಷ ಕಳೆದಿದೆ. ಇಂದಿಗೂ ಕೂಡ ಅವರ ಸಾವಿನ ರಹಸ್ಯ ಬಯಲಾಗಿಲ್ಲ. ಸುಶಾಂತ್​ ಸಾವಿನ ಹಿಂದೆ ಕೆಲವರ ಕೈವಾಡ ಇದೆ ಎಂಬ ಆರೋಪ ಇದೆ. ಅದು ಕೇವಲ ಆತ್ಮಹತ್ಯೆ ಎಂದು ಕೂಡ ಕೆಲವರು ಹೇಳುತ್ತಾರೆ. ಸುಶಾಂತ್​ ನಿಧನಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಹಾಗಾಗಿ ಅವರ ಸಹೋದರಿ ಶ್ವೇತಾ ಸಿಂಗ್​ ಕೀರ್ತಿ (Shweta Singh Kirti) ಕೆಲವು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಸಹೋದರನ ಸಾವಿನ ಹಿಂದಿರುವ ಸತ್ಯವನ್ನು ಬಹಿರಂಗ ಮಾಡಿ ಎಂದು ಸಿಬಿಐಗೆ (CBI) ಶ್ವೇತಾ ಒತ್ತಾಯಿಸಿದ್ದಾರೆ.

2020ರ ಜೂನ್​ 14ರಂದು ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ಸುಶಾಂತ್​ ಸಿಂಗ್ ರಜಪೂತ್​ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಯಿತು. ಆ ಸುದ್ದಿ ತಿಳಿದ ಬಳಿಕ ಅಭಿಮಾನಿಗಳಿಗೆ ಆಘಾತ ಆಯಿತು. ಯಾವಾಗಲೂ ಪಾಸಿಟಿವ್​ ಆಗಿ ಮಾತನಾಡುತ್ತಿದ್ದ ಸುಶಾಂತ್​ ಸಿಂಗ್ ರಜಪೂತ್​ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಹೇಗೆ ಸಾಧ್ಯ ಎಂಬುದು ಎಲ್ಲರ ಪ್ರಶ್ನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಇನ್ನೂ ನಡೆಯುತ್ತಿದೆ.

ಮಾಧ್ಯಮವೊಂದಕ್ಕೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಶ್ವೇತಾ ಸಿಂಗ್ ಕೀರ್ತಿ ಅವರು ಕೆಲವು ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ‘ನಾನು ತನಿಖೆ ಮಾಡುವ ವ್ಯಕ್ತಿ ಅಲ್ಲ. ಅಣ್ಣನ ಫ್ಲಾಟ್​ಗೆ ಹೋಗಲು ನನಗೆ ಅನುಮತಿ ನೀಡಿರಲಿಲ್ಲ. ಘಟನೆ ನಡೆದ ಫ್ಲಾಟ್​ ನಾನು ನೋಡಿಲ್ಲ. ಆಗಿದ್ದು ಏನು ಎಂಬುದನ್ನು ಸಿಬಿಐ ಹೇಳಬೇಕು. ಸಾಕ್ಷಿ ನೀಡಿ, ನಮಗೂ ಸತ್ಯ ತಿಳಿಯಲು ಬಿಡಿ’ ಎಂದು ಶ್ವೇತಾ ಸಿಂಗ್ ಕೀರ್ತಿ ಹೇಳಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಅಂತಿಮ ದರ್ಶನಕ್ಕೆ ಹೋಗಲಿಲ್ಲವೇಕೆ? ಮಾಜಿ ಗರ್ಲ್​ಫ್ರೆಂಡ್ ಅಂಕಿತಾ ಕೊಟ್ಟರು ಕಾರಣ

‘ಬೆಡ್​ ಮತ್ತು ಫ್ಯಾನ್​ ನಡುವೆ ಹೆಚ್ಚು ಅಂತರ ಇರಲಿಲ್ಲ. ರೂಮ್​ನ ಕೀ ಮಿಸ್ ಆಗಿದೆ ಅಂತ ಅಪಾರ್ಟ್​ಮೆಂಟ್​ನವರು ಹೇಳಿದರು. ಯಾಕೆ ಆ ರೀತಿ ಆಯ್ತ? ಆ ಕೀ ಎಲ್ಲಿಗೆ ಹೋಯ್ತು? ಸುಶಾಂತ್​ ಎಂದಿಗೂ ತನ್ನ ರೂಮ್​ ಬಾಗಿಲು ಹಾಕಿಕೊಳ್ಳುತ್ತಿರಲಿಲ್ಲ. ಅದೇ ದಿನ ಸುತ್ತಮುತ್ತಲಿನ ಎಲ್ಲ ಸಿಸಿಟಿವಿ ಕ್ಯಾಮೆರಾಗಳು ಕೆಲಸ ಮಾಡುತ್ತಿರಲ್ಲ. ಈ ರೀತಿ ಅನೇಕ ಸಂಗತಿಗಳಿಗೆ ಅರ್ಥವೇ ಇಲ್ಲ’ ಎಂದು ಶ್ವೇತಾ ಸಿಂಗ್​ ಕೀರ್ತಿ ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಂಕಿತಾಗೆ ಸುಶಾಂತ್​ ಉಡುಗೊರೆಯಾಗಿ ನೀಡಿದ್ದ ಮುದ್ದಿನ ಶ್ವಾನ ಸ್ಕಾಚ್​ ನಿಧನ

ಸುಶಾಂತ್​ ಸಿಂಗ್ ರಜಪೂತ್​ ಅವರು ಬಾಲಿವುಡ್​ನಲ್ಲಿ ಭದ್ರವಾದ ಭವಿಷ್ಯ ಕಟ್ಟಿಕೊಳ್ಳುವ ಕನಸು ಕಂಡಿದ್ದರು. ನಿಧನಕ್ಕೂ ಮುನ್ನ ನಟಿ ರಿಯಾ ಚಕ್ರವರ್ತಿ ಜೊತೆ ಅವರು ರಿಲೇಷನ್​ಶಿಪ್​ನಲ್ಲಿ ಇದ್ದರು. ಸುಶಾಂತ್ ನಿಧನದ ಬಳಿಕ ರಿಯಾ ಅವರನ್ನು ಬಂಧಿಸಲಾಗಿತ್ತು. ಬಳಿಕ ಅವರು ಜಾಮೀನು ಪಡೆದು ಹೊರಬಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ