ಪ್ರಭಾವಿ ರಾಜಕಾರಣಿಯಿಂದ ರಿಯಾಗೆ 44 ಬಾರಿ ಕರೆ? ಸುಶಾಂತ್ ಸಿಂಗ್ ಸಾವಿಗೆ ರಾಜಕೀಯದ ಲಿಂಕ್​

| Updated By: ರಾಜೇಶ್ ದುಗ್ಗುಮನೆ

Updated on: Dec 23, 2022 | 7:11 AM

ತನಿಖೆ ನಡೆಯುವ ಸಂದರ್ಭದಲ್ಲಿ ರಿಯಾಗೆ ‘ಎಯು’ ಹೆಸರಿನ  ವ್ಯಕ್ತಿಯಿಂದ 44 ಬಾರಿ ಕರೆ ಬಂದಿದೆ. ಎಯು ಎಂದರೆ ಆದಿತ್ಯ ಉದ್ಧವ್ ಠಾಕ್ರೆ ಎಂದು ಬಿಹಾರ್ ಪೊಲೀಸರು ಹೇಳಿದ್ದಾರೆ. ಇದರಿಂದಾಗಿ ಈ ಪ್ರಕರಣಕ್ಕೆ ಹಾಗೂ ಆದಿತ್ಯ ಠಾಕ್ರೆಗೆ ಲಿಂಕ್ ಆಗಿದೆ.

ಪ್ರಭಾವಿ ರಾಜಕಾರಣಿಯಿಂದ ರಿಯಾಗೆ 44 ಬಾರಿ ಕರೆ? ಸುಶಾಂತ್ ಸಿಂಗ್ ಸಾವಿಗೆ ರಾಜಕೀಯದ ಲಿಂಕ್​
ರಿಯಾ-ಸುಶಾಂತ್-ಆದಿತ್ಯ
Follow us on

ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ನಿಧನ ಹೊಂದಿ ಬಹಳ ಸಮಯ ಕಳೆದಿದೆ. ಇದು ಆತ್ಮಹತ್ಯೆ ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಕೊಲೆ ಎನ್ನುತ್ತಿದ್ದಾರೆ. ಆರಂಭದಲ್ಲಿ ಮುಂಬೈ ಪೊಲೀಸರು ಈ ಪ್ರಕರಣದ ತನಿಖೆ ನಡೆಸಿದರು. ನಂತರ ಪ್ರಕರಣ ಸಿಬಿಐಗೆ (CBI) ಹಸ್ತಾಂತರ ಆಯಿತು. ಸಿಬಿಐ ಈ ಪ್ರಕರಣದಲ್ಲಿ ತನಿಖೆ ನಡೆಸುತ್ತಿದೆ. ಆದಷ್ಟು ಬೇಗ ತನಿಖೆ ಮುಗಿದು ಸುಶಾಂತ್ ಸಿಂಗ್ ಸಾವಿಗೆ ನ್ಯಾಯ ಸಿಗಲಿ ಅನ್ನೋದು ಫ್ಯಾನ್ಸ್ ಬಯಕೆ. ಹೀಗಿರುವಾಗಲೇ ಈ ಪ್ರಕರಣಕ್ಕೆ ರಾಜಕೀಯದ ಜತೆ ನಂಟಿರುವ ವಿಚಾರ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಮಗ ಆದಿತ್ಯ ಠಾಕ್ರೆಗೂ ಈ ಪ್ರಕರಣಕ್ಕೂ ಲಿಂಕ್ ಮಾಡಲಾಗಿದೆ.

ಸುಶಾಂತ್ ಸಿಂಗ್ ರಜಪೂತ್ ಅವರ ಗರ್ಲ್​ಫ್ರೆಂಡ್ ಆಗಿದ್ದ ರಿಯಾ ಚಕ್ರವರ್ತಿ ಈ ಪ್ರಕರಣದ ಪ್ರಮುಖ ಆರೋಪಿ. ಅವರು ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದರು. ಸದ್ಯ ಜಾಮೀನು ಪಡೆದು ಅವರು ಹೊರಗಿದ್ದಾರೆ. ತನಿಖೆ ನಡೆಯುವ ಸಂದರ್ಭದಲ್ಲಿ ರಿಯಾಗೆ ‘ಎಯು’ ಹೆಸರಿನ  ವ್ಯಕ್ತಿಯಿಂದ 44 ಬಾರಿ ಕರೆ ಬಂದಿದೆ. ಎಯು ಎಂದರೆ ಆದಿತ್ಯ ಉದ್ಧವ್ ಠಾಕ್ರೆ ಎಂದು ಬಿಹಾರ್ ಪೊಲೀಸರು ಹೇಳಿದ್ದಾರೆ. ಇದರಿಂದಾಗಿ ಈ ಪ್ರಕರಣಕ್ಕೆ ಹಾಗೂ ಆದಿತ್ಯ ಠಾಕ್ರೆಗೆ ಲಿಂಕ್ ಆಗಿದೆ.

ಶಿವ ಸೇನೆಯ ಏಕನಾಥ್​ ಶಿಂಧೆ ಬಣದ ಎಂಪಿ ರಾಹುಲ್ ಶೆವಾಲೆ ಅವರು ಲೋಕಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ‘ರಿಯಾ ಚಕ್ರವರ್ತಿ ಅವರು ಎಯು ನಿಂದ 44 ಬಾರಿ ಕರೆ ಸ್ವೀಕರಿಸಿದ್ದಾರೆ. ಎಯು ಎಂದರೆ ಆದಿತ್ಯ ಉದ್ಧವ್ ಠಾಕ್ರೆ ಎಂದು ಬಿಹಾರ ಪೊಲೀಸರು ಹೇಳಿದ್ದಾರೆ. ಸಿಬಿಐ ತನಿಖೆ ಯಾವ ಹಂತದಲ್ಲಿದೆ?’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪುಣ್ಯತಿಥಿ: ಮೃತಪಟ್ಟು ಎರಡು ವರ್ಷ ಕಳೆದರೂ ಹೊರಬೀಳಲೇ ಇಲ್ಲ ನಟನ ಸಾವಿನ ರಹಸ್ಯ

ಈ ಹೇಳಿಕೆಯನ್ನು ಆದಿತ್ಯ ತಳ್ಳಿ ಹಾಕಿದ್ದಾರೆ. ‘ಲವ್​ ಯೂ ಮೋರ್ ಎಂದಷ್ಟೇ ನಾನು ಹೇಳಲು ಸಾಧ್ಯ. ತಮ್ಮ ಪಕ್ಷಕ್ಕೆ ಅವರು ನಿಷ್ಠಾಂವತರಾಗಿಲ್ಲ. ಅಂಥವರಿಂದ ಇನ್ನು ಏನನ್ನು ನಿರೀಕ್ಷಿಸಲು ಸಾಧ್ಯ? ಸಿಎಂ ಏಕ​ನಾಥ್​ ಶಿಂಧೆ ವಿರುದ್ಧ ಮಾಡಲಾಗುತ್ತಿರುವ ಆರೋಪವನ್ನು ಮುಚ್ಚಿ ಹಾಕಲು ಈ ರೀತಿಯ ಆರೋಪಗಳನ್ನು ಮಾಡಲಾಗುತ್ತಿದೆ’ ಎಂದಿದ್ದಾರೆ ಅವರು.

2020ರ ಜೂನ್ 14ರಂದು ಸುಶಾಂತ್ ಸಿಂಗ್ ರಜಪೂತ್ ನಿಧನ ಹೊಂದಿದರು. ಮುಂಬೈನ ಫ್ಲಾಟ್​ನಲ್ಲಿ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ. ಈ ಫ್ಲಾಟ್​ಗೆ ಬಾಡಿಗೆ ಬರಲು ಎಲ್ಲರೂ ಹೆದರುತ್ತಿದ್ದಾರೆ ಎಂದು ಇತ್ತೀಚೆಗೆ ವರದಿ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:08 am, Fri, 23 December 22