AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sushmita Sen: ಜಿಮ್​ಗೆ ಹೋದ್ರೂ ಹೃದಯಾಘಾತ ತಪ್ಪಲಿಲ್ಲ; ಜನರಿಗೆ ಸುಶ್ಮಿತಾ ಸೇನ್​ ಹೇಳಿದ ಎಚ್ಚರಿಕೆ ಮಾತು ಏನು?

Sushmita Sen | Heart Attack: ಹೃದಯಾಘಾತ ಆದ ಬಳಿಕ ಮೊದಲ ಬಾರಿ ಇನ್​ಸ್ಟಾಗ್ರಾಮ್​ನಲ್ಲಿ ಲೈವ್​ ಬಂದಿದ್ದ ಸುಶ್ಮಿತಾ ಸೇನ್​ ಅವರು ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಸರ್ಜರಿ ನಂತರ ಅವರು ಚೇತರಿಸಿಕೊಂಡಿದ್ದಾರೆ.

Sushmita Sen: ಜಿಮ್​ಗೆ ಹೋದ್ರೂ ಹೃದಯಾಘಾತ ತಪ್ಪಲಿಲ್ಲ; ಜನರಿಗೆ ಸುಶ್ಮಿತಾ ಸೇನ್​ ಹೇಳಿದ ಎಚ್ಚರಿಕೆ ಮಾತು ಏನು?
ಸುಶ್ಮಿತಾ ಸೇನ್
Follow us
ಮದನ್​ ಕುಮಾರ್​
|

Updated on: Mar 05, 2023 | 10:24 AM

ಕೆಲವೇ ದಿನಗಳ ಹಿಂದೆ ನಟಿ ಸುಶ್ಮಿತಾ ಸೇನ್ (Sushmita Sen)​ ಅವರಿಗೆ ಹೃದಯಾಘಾತ ಆಗಿತ್ತು. ಆ ವಿಚಾರವನ್ನು ಅವರು ಕೊಂಚ ತಡವಾಗಿ ಬಹಿರಂಗಪಡಿಸಿದರು. ಅಚ್ಚರಿ ಏನೆಂದರೆ ಅವರ ಹೃದಯದಲ್ಲಿ ಶೇಕಡ 90ರಷ್ಟು ಬ್ಲಾಕೇಜ್​ ಇತ್ತು. ಹಾಗಿದ್ದರೂ ಅವರು ಅಚ್ಚರಿಯ ರೀತಿಯಲ್ಲಿ ಬದುಕುಳಿದರು. ಸುಶ್ಮಿತಾ ಸೇನ್​ ಅವರದ್ದು ಶಿಸ್ತಿನ ಜೀವನ ಶೈಲಿ. ಎಂದಿಗೂ ಅವರು ವರ್ಕೌಟ್​ ಮಾಡೋದು ತಪ್ಪಿಸೋದಿಲ್ಲ. ಹಾಗಿದ್ದರೂ ಕೂಡ ಅವರಿಗೆ ಹಾರ್ಟ್​ ಅಟ್ಯಾಕ್​ (Heart Attack) ಆಯಿತು. ಪುನೀತ್ ರಾಜ್​ಕುಮಾರ್​, ಸಿದ್ದಾರ್ಥ್​ ಶುಕ್ತಾ ಸೇರಿದಂತೆ ಅನೇಕರು ಫಿಟ್​ ಆಗಿದ್ದರೂ ಕೂಡ ಹೃದಯಾಘಾತದಿಂದ ನಿಧನರಾದರು. ‘ಜಿಮ್​ಗೆ (Gym) ಹೋದರೂ ಹಾರ್ಟ್​ ಅಟ್ಯಾಕ್​ ತಪ್ಪಿದ್ದಲ್ಲ’ ಎಂದು ಗೊಣಗುವವರಿಗೆ ಸುಶ್ಮಿತಾ ಸೇನ್​ ಕೆಲವು ಕಿವಿಮಾತು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಫಿಟ್​ ಆಗಿರುವ ಸೆಲೆಬ್ರಿಟಿಗಳು ಹೃದಯಾಘಾತಕ್ಕೆ ಒಳಗಾದಾಗ ಇಂತಹ ಮಾತುಗಳು ಕೇಳಿಬರುತ್ತವೆ. ‘ಎಷ್ಟೇ ಫಿಟ್ನೆಸ್​ ಕಾಪಾಡಿಕೊಂಡರೂ ಹೃದಯಾಘಾತ ತಪ್ಪಿಸೋಕೆ ಆಗಲ್ಲ. ಹಾಗಿದ್ದ ಮೇಲೆ ಯಾಕೆ ವರ್ಕೌಟ್​ ಮಾಡಬೇಕು? ಸುಮ್ಮನೇ ಇರೋದೇ ಒಳ್ಳೆಯದು’ ಅಂತ ಕೆಲವರು ಮಾತನಾಡಿಕೊಳ್ಳುತ್ತಾರೆ. ಆದರೆ ಅದು ಸರಿಯಲ್ಲ ಎಂದು ಸುಶ್ಮಿಕಾ ಸೇನ್​ ಹೇಳಿದ್ದಾರೆ.

ಇದನ್ನೂ ಓದಿ
Image
ಜಿಮ್ ಮಾಡುತ್ತಿದ್ದ ವೇಳೆ ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
Image
Pradeep Patwardhan: ಹೃದಯಾಘಾತದಿಂದ ನಟ ಪ್ರದೀಪ್​ ಪಟವರ್ಧನ್​ ನಿಧನ; ಸಂತಾಪ ಸೂಚಿಸಿದ ಮಹಾರಾಷ್ಟ್ರ ಸಿಎಂ
Image
Hemalatha Death: ಗುಬ್ಬಿ ವೀರಣ್ಣ ಪುತ್ರಿ, ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಲತಾ ಹೃದಯಾಘಾತದಿಂದ ನಿಧನ
Image
Surekha Death: ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ ಹೃದಯಾಘಾತದಿಂದ ನಿಧನ

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಹೃದಯಾಘಾತಕ್ಕೆ ಒಳಗಾದ ವ್ಯಕ್ತಿ; ಅಲ್ಲೇ ಇದ್ದ ಸೋನು ಸೂದ್ ಮಾಡಿದ್ದೇನು?

‘ನಿಮ್ಮಲ್ಲಿ ಬಹುತೇಕ ಜನರು ಜಿಮ್​​ಗೆ ಹೋಗೋದನ್ನು ನಿಲ್ಲಿಸುತ್ತೀರಿ ಅಂತ ನನಗೆ ಗೊತ್ತು. ಜಿಮ್​ಗೆ ಹೋದರೂ ಆಕೆಗೆ ಏನೂ ಉಪಯೋಗ ಆಗಲಿಲ್ಲ ನೋಡು ಅಂತ ಮಾತಾಡಿಕೊಳ್ತೀರಿ. ಆದರೆ ಅದು ಸರಿಯಲ್ಲ. ವರ್ಕೌಟ್ ಮಾಡುವುದು ನನಗೆ ಉಪಯೋಗಕ್ಕೆ ಬಂದಿದೆ. ನಾನು ಬದುಕುಳಿದಿದ್ದು ಭೀಕರ ಹೃದಯಾಘಾತದಿಂದ. ನನ್ನ ಹೃದಯದಲ್ಲಿ ಶೇಕಡ 95ರಷ್ಟು ಬ್ಲಾಕೇಜ್​ ಇತ್ತು. ನನ್ನ ಜೀವನದಲ್ಲಿ ಕ್ರಿಯಾಶೀಲತೆ ಇದ್ದಿದ್ದರಿಂದಲೇ ನಾನು ಬದುಕಿದೆ’ ಎಂದಿದ್ದಾರೆ ಸುಶ್ಮಿತಾ ಸೇನ್​.

ಇನ್​ಸ್ಟಾಗ್ರಾಮ್​ನಲ್ಲಿ ಲೈವ್​ ಬಂದಿದ್ದ ಸುಶ್ಮಿತಾ ಸೇನ್​ ಅವರು ಈ ಎಲ್ಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಸರ್ಜರಿ ಬಳಿಕ ಅವರು ಸಾಕಷ್ಟು ಚೇತರಿಸಿಕೊಂಡಿದ್ದಾರೆ. ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ. ತಮಗೆ ಸಹಾಯ ಮಾಡಿದ ಎಲ್ಲರಿಗೂ ಸುಶ್ಮಿತಾ ಸೇನ್​ ಧನ್ಯವಾದ ಅರ್ಪಿಸಿದ್ದಾರೆ. ​

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್