AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sushmita Sen: ಜಿಮ್​ಗೆ ಹೋದ್ರೂ ಹೃದಯಾಘಾತ ತಪ್ಪಲಿಲ್ಲ; ಜನರಿಗೆ ಸುಶ್ಮಿತಾ ಸೇನ್​ ಹೇಳಿದ ಎಚ್ಚರಿಕೆ ಮಾತು ಏನು?

Sushmita Sen | Heart Attack: ಹೃದಯಾಘಾತ ಆದ ಬಳಿಕ ಮೊದಲ ಬಾರಿ ಇನ್​ಸ್ಟಾಗ್ರಾಮ್​ನಲ್ಲಿ ಲೈವ್​ ಬಂದಿದ್ದ ಸುಶ್ಮಿತಾ ಸೇನ್​ ಅವರು ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಸರ್ಜರಿ ನಂತರ ಅವರು ಚೇತರಿಸಿಕೊಂಡಿದ್ದಾರೆ.

Sushmita Sen: ಜಿಮ್​ಗೆ ಹೋದ್ರೂ ಹೃದಯಾಘಾತ ತಪ್ಪಲಿಲ್ಲ; ಜನರಿಗೆ ಸುಶ್ಮಿತಾ ಸೇನ್​ ಹೇಳಿದ ಎಚ್ಚರಿಕೆ ಮಾತು ಏನು?
ಸುಶ್ಮಿತಾ ಸೇನ್
ಮದನ್​ ಕುಮಾರ್​
|

Updated on: Mar 05, 2023 | 10:24 AM

Share

ಕೆಲವೇ ದಿನಗಳ ಹಿಂದೆ ನಟಿ ಸುಶ್ಮಿತಾ ಸೇನ್ (Sushmita Sen)​ ಅವರಿಗೆ ಹೃದಯಾಘಾತ ಆಗಿತ್ತು. ಆ ವಿಚಾರವನ್ನು ಅವರು ಕೊಂಚ ತಡವಾಗಿ ಬಹಿರಂಗಪಡಿಸಿದರು. ಅಚ್ಚರಿ ಏನೆಂದರೆ ಅವರ ಹೃದಯದಲ್ಲಿ ಶೇಕಡ 90ರಷ್ಟು ಬ್ಲಾಕೇಜ್​ ಇತ್ತು. ಹಾಗಿದ್ದರೂ ಅವರು ಅಚ್ಚರಿಯ ರೀತಿಯಲ್ಲಿ ಬದುಕುಳಿದರು. ಸುಶ್ಮಿತಾ ಸೇನ್​ ಅವರದ್ದು ಶಿಸ್ತಿನ ಜೀವನ ಶೈಲಿ. ಎಂದಿಗೂ ಅವರು ವರ್ಕೌಟ್​ ಮಾಡೋದು ತಪ್ಪಿಸೋದಿಲ್ಲ. ಹಾಗಿದ್ದರೂ ಕೂಡ ಅವರಿಗೆ ಹಾರ್ಟ್​ ಅಟ್ಯಾಕ್​ (Heart Attack) ಆಯಿತು. ಪುನೀತ್ ರಾಜ್​ಕುಮಾರ್​, ಸಿದ್ದಾರ್ಥ್​ ಶುಕ್ತಾ ಸೇರಿದಂತೆ ಅನೇಕರು ಫಿಟ್​ ಆಗಿದ್ದರೂ ಕೂಡ ಹೃದಯಾಘಾತದಿಂದ ನಿಧನರಾದರು. ‘ಜಿಮ್​ಗೆ (Gym) ಹೋದರೂ ಹಾರ್ಟ್​ ಅಟ್ಯಾಕ್​ ತಪ್ಪಿದ್ದಲ್ಲ’ ಎಂದು ಗೊಣಗುವವರಿಗೆ ಸುಶ್ಮಿತಾ ಸೇನ್​ ಕೆಲವು ಕಿವಿಮಾತು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಫಿಟ್​ ಆಗಿರುವ ಸೆಲೆಬ್ರಿಟಿಗಳು ಹೃದಯಾಘಾತಕ್ಕೆ ಒಳಗಾದಾಗ ಇಂತಹ ಮಾತುಗಳು ಕೇಳಿಬರುತ್ತವೆ. ‘ಎಷ್ಟೇ ಫಿಟ್ನೆಸ್​ ಕಾಪಾಡಿಕೊಂಡರೂ ಹೃದಯಾಘಾತ ತಪ್ಪಿಸೋಕೆ ಆಗಲ್ಲ. ಹಾಗಿದ್ದ ಮೇಲೆ ಯಾಕೆ ವರ್ಕೌಟ್​ ಮಾಡಬೇಕು? ಸುಮ್ಮನೇ ಇರೋದೇ ಒಳ್ಳೆಯದು’ ಅಂತ ಕೆಲವರು ಮಾತನಾಡಿಕೊಳ್ಳುತ್ತಾರೆ. ಆದರೆ ಅದು ಸರಿಯಲ್ಲ ಎಂದು ಸುಶ್ಮಿಕಾ ಸೇನ್​ ಹೇಳಿದ್ದಾರೆ.

ಇದನ್ನೂ ಓದಿ
Image
ಜಿಮ್ ಮಾಡುತ್ತಿದ್ದ ವೇಳೆ ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
Image
Pradeep Patwardhan: ಹೃದಯಾಘಾತದಿಂದ ನಟ ಪ್ರದೀಪ್​ ಪಟವರ್ಧನ್​ ನಿಧನ; ಸಂತಾಪ ಸೂಚಿಸಿದ ಮಹಾರಾಷ್ಟ್ರ ಸಿಎಂ
Image
Hemalatha Death: ಗುಬ್ಬಿ ವೀರಣ್ಣ ಪುತ್ರಿ, ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಲತಾ ಹೃದಯಾಘಾತದಿಂದ ನಿಧನ
Image
Surekha Death: ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ ಹೃದಯಾಘಾತದಿಂದ ನಿಧನ

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಹೃದಯಾಘಾತಕ್ಕೆ ಒಳಗಾದ ವ್ಯಕ್ತಿ; ಅಲ್ಲೇ ಇದ್ದ ಸೋನು ಸೂದ್ ಮಾಡಿದ್ದೇನು?

‘ನಿಮ್ಮಲ್ಲಿ ಬಹುತೇಕ ಜನರು ಜಿಮ್​​ಗೆ ಹೋಗೋದನ್ನು ನಿಲ್ಲಿಸುತ್ತೀರಿ ಅಂತ ನನಗೆ ಗೊತ್ತು. ಜಿಮ್​ಗೆ ಹೋದರೂ ಆಕೆಗೆ ಏನೂ ಉಪಯೋಗ ಆಗಲಿಲ್ಲ ನೋಡು ಅಂತ ಮಾತಾಡಿಕೊಳ್ತೀರಿ. ಆದರೆ ಅದು ಸರಿಯಲ್ಲ. ವರ್ಕೌಟ್ ಮಾಡುವುದು ನನಗೆ ಉಪಯೋಗಕ್ಕೆ ಬಂದಿದೆ. ನಾನು ಬದುಕುಳಿದಿದ್ದು ಭೀಕರ ಹೃದಯಾಘಾತದಿಂದ. ನನ್ನ ಹೃದಯದಲ್ಲಿ ಶೇಕಡ 95ರಷ್ಟು ಬ್ಲಾಕೇಜ್​ ಇತ್ತು. ನನ್ನ ಜೀವನದಲ್ಲಿ ಕ್ರಿಯಾಶೀಲತೆ ಇದ್ದಿದ್ದರಿಂದಲೇ ನಾನು ಬದುಕಿದೆ’ ಎಂದಿದ್ದಾರೆ ಸುಶ್ಮಿತಾ ಸೇನ್​.

ಇನ್​ಸ್ಟಾಗ್ರಾಮ್​ನಲ್ಲಿ ಲೈವ್​ ಬಂದಿದ್ದ ಸುಶ್ಮಿತಾ ಸೇನ್​ ಅವರು ಈ ಎಲ್ಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಸರ್ಜರಿ ಬಳಿಕ ಅವರು ಸಾಕಷ್ಟು ಚೇತರಿಸಿಕೊಂಡಿದ್ದಾರೆ. ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ. ತಮಗೆ ಸಹಾಯ ಮಾಡಿದ ಎಲ್ಲರಿಗೂ ಸುಶ್ಮಿತಾ ಸೇನ್​ ಧನ್ಯವಾದ ಅರ್ಪಿಸಿದ್ದಾರೆ. ​

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!