AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swara Bhaskar: ಕಾಂಟ್ರವರ್ಸಿ ನಟಿ ಸ್ವರಾ ಭಾಸ್ಕರ್​ಗೆ ಅವಕಾಶಗಳೇ ಇಲ್ಲ; ಮುಕ್ತವಾಗಿ ಹೇಳಿಕೊಂಡ ಬಾಲಿವುಡ್​ ಬೆಡಗಿ

ಸ್ವರಾ ಭಾಸ್ಕರ್​ ಅವರು ಮೊದಲಿನಿಂದಲೂ ಕೇಂದ್ರ ಸರ್ಕಾರದ ಕೆಲವು ವಿಚಾರಗಳನ್ನು ವಿರೋಧಿಸುತ್ತಾ ಬಂದಿದ್ದಾರೆ. ಬಾಲಿವುಡ್​ನಲ್ಲೂ ಅನೇಕರನ್ನು ಅವರು ಎದುರು ಹಾಕಿಕೊಂಡಿದ್ದಾರೆ.

Swara Bhaskar: ಕಾಂಟ್ರವರ್ಸಿ ನಟಿ ಸ್ವರಾ ಭಾಸ್ಕರ್​ಗೆ ಅವಕಾಶಗಳೇ ಇಲ್ಲ; ಮುಕ್ತವಾಗಿ ಹೇಳಿಕೊಂಡ ಬಾಲಿವುಡ್​ ಬೆಡಗಿ
ಸ್ವರಾ ಭಾಸ್ಕರ್
TV9 Web
| Updated By: ಮದನ್​ ಕುಮಾರ್​|

Updated on:Dec 06, 2022 | 8:37 AM

Share

ನಟಿ ಸ್ವರಾ ಭಾಸ್ಕರ್​ (Swara Bhaskar) ಅವರು ಆಗೊಮ್ಮೆ ಈಗೊಮ್ಮೆ ವಿವಾದ ಮಾಡಿಕೊಳ್ಳುತ್ತಾರೆ. ಸಮಾಜದ ಆಗುಹೋಗುಗಳಿಗೆ ಅವರು ಪ್ರತಿಕ್ರಿಯೆ ನೀಡುತ್ತಾರೆ. ತಮಗೆ ಅನಿಸಿದ್ದನ್ನು ನೇರವಾಗಿ ಹೇಳುವಲ್ಲಿ ಅವರು ಎಂದಿಗೂ ಹಿಂದೇಟು ಹಾಕಿಲ್ಲ. ಆ ಕಾರಣದಿಂದ ಅವರನ್ನು ಅನೇಕರು ದ್ವೇಷಿಸುತ್ತಾರೆ. ಸೋಶಿಯಲ್​ ಮೀಡಿಯಾದಲ್ಲಿ ಸ್ವರಾ ಭಾಸ್ಕರ್​ ಅವರನ್ನು ಸಾಕಷ್ಟು ಟ್ರೋಲ್​ (Troll) ಮಾಡಲಾಗುತ್ತದೆ. ಅಷ್ಟೇ ಅಲ್ಲದೇ ಅವರಿಗೆ ಸಿನಿಮಾ ಅವಕಾಶಗಳು ಕೂಡ ತಪ್ಪಿಹೋಗುತ್ತಿವೆ. ಈ ಬಗ್ಗೆ ಸ್ವತಃ ಸ್ವರಾ ಭಾಸ್ಕರ್​ ಮಾತನಾಡಿದ್ದಾರೆ. ‘ಟೈಮ್ಸ್​ ಆಫ್​ ಇಂಡಿಯಾ’ಗೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ಕುರಿತು ಹೇಳಿಕೊಂಡಿದ್ದಾರೆ. ತಮ್ಮ ಕೈಯಲ್ಲಿ ಸದ್ಯಕ್ಕೆ ಒಳ್ಳೆಯ ಅವಕಾಶಗಳೇ ಇಲ್ಲ ಎಂದು ಅವರು ಬಾಯಿ ಬಿಟ್ಟಿದ್ದಾರೆ.

ಸ್ವರಾ ಭಾಸ್ಕರ್​ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 2009ರಲ್ಲಿ. ‘ತನು ವೆಡ್ಸ್​ ಮನು’, ‘ಪ್ರೇಮ್​ ರಥನ್​ ಧನ್​ ಪಾಯೋ’, ‘ಅನಾರ್ಕಲಿ ಆಫ್​ ಆರಾ’, ‘ವೀರೇ ದಿ ವೆಡ್ಡಿಂಗ್​’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರಿಗೆ ಹೇಳಿಕೊಳ್ಳುವಂತಹ ಅವಕಾಶಗಳು ಸಿಗುತ್ತಿಲ್ಲ. ‘ನನಗೆ ಅತಿ ಇಷ್ಟವಾಗಿರುವ ನಟನೆಯ ವಿಚಾರದಲ್ಲೇ ನಾನು ರಿಸ್ಕ್​ ತೆಗೆದುಕೊಂಡೆ’ ಎಂದು ಸ್ವರಾ ಭಾಸ್ಕರ್​ ಹೇಳಿದ್ದಾರೆ.

‘ನಾನು ಸಮರ್ಥ ನಟಿ. ನನ್ನ ಪ್ರತಿಭೆಗೆ ತಕ್ಕಂತಹ ಅವಕಾಶಗಳು ಬರುತ್ತಿಲ್ಲ. ನನ್ನ ಟ್ರ್ಯಾಕ್​ ರೆಕಾರ್ಡ್​ ಚೆನ್ನಾಗಿದೆ. 6-7 ಸೂಪರ್​ ಹಿಟ್​ ಸಿನಿಮಾಗಳಲ್ಲಿ ನಟಿಸಿದ್ದೇನೆ. ವೆಬ್​ ಸೀರಿಸ್​ಗಳಲ್ಲೂ ಕಾಣಿಸಿಕೊಂಡಿದ್ದೇನೆ. ಕೆಟ್ಟ ವಿಮರ್ಶೆ ಎಂದಿಗೂ ಪಡೆದಿಲ್ಲ. ಚಾನ್ಸ್​ ಸಿಗದೇ ಇರಲು ಏನಾದರೂ ಕಾರಣ ಇರಬೇಕಿತ್ತು. ಆದರೆ ಅವಕಾಶ ಇಲ್ಲ ಎಂಬುದಂತೂ ಸ್ಪಷ್ಟವಾಗಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
Swara Bhasker: ‘ದಿ ಕಾಶ್ಮೀರ್​ ಫೈಲ್ಸ್​’ ಕೆಟ್ಟ ಸಿನಿಮಾ ಎಂಬ ಹೇಳಿಕೆಗೆ ಸಹಮತ ಸೂಚಿಸಿದ ನಟಿ ಸ್ವರಾ ಭಾಸ್ಕರ್​
Image
Swara Bhaskar: ಸಲ್ಮಾನ್​ ಖಾನ್​ ಬಳಿಕ ನಟಿ ಸ್ವರಾ ಭಾಸ್ಕರ್​ಗೆ ಕೊಲೆ ಬೆದರಿಕೆ; ಸಾವರ್ಕರ್​ ಬಗ್ಗೆ ಮಾತಾಡಿದ್ದಕ್ಕೆ ಆಕ್ರೋಶ
Image
‘ಸಲ್ಮಾನ್​ ಖಾನ್​ಗೆ ತಂಗಿ ಆಗಲು ಯಾರಿಗೂ ಇಷ್ಟವಿಲ್ಲ’; ತೆರೆ ಹಿಂದಿನ ಸತ್ಯ ತೆರೆದಿಟ್ಟ ನಟಿ ಸ್ವರಾ ಭಾಸ್ಕರ್​

ಇದನ್ನೂ ಓದಿ: Swara Bhasker: ‘ದಿ ಕಾಶ್ಮೀರ್​ ಫೈಲ್ಸ್​’ ಕೆಟ್ಟ ಸಿನಿಮಾ ಎಂಬ ಹೇಳಿಕೆಗೆ ಸಹಮತ ಸೂಚಿಸಿದ ನಟಿ ಸ್ವರಾ ಭಾಸ್ಕರ್​

ಸ್ವರಾ ಭಾಸ್ಕರ್​ ಅವರು ಮೊದಲಿನಿಂದಲೂ ಕೇಂದ್ರ ಸರ್ಕಾರದ ಕೆಲವು ವಿಚಾರಗಳನ್ನು ವಿರೋಧಿಸುತ್ತಾ ಬಂದಿದ್ದಾರೆ. ಬಾಲಿವುಡ್​ನಲ್ಲೂ ಅನೇಕರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಕುರಿತಂತೆ ಇತ್ತೀಚೆಗೆ ನಡಾವ್​ ಲಪಿಡ್​ ನೀಡಿದ ಹೇಳಿಕೆ ವಿವಾದ ಉಂಟು ಮಾಡಿತ್ತು. ಆಗ ನಡಾವ್​ ಲಪಿಡ್​ ಹೇಳಿಕೆಯನ್ನು ಸ್ವರಾ ಭಾಸ್ಕರ್​ ಬೆಂಬಲಿಸಿದ್ದರು. ಆ ಕಾರಣದಿಂದಲೂ ಅವರು ಟ್ರೋಲ್​ ಆಗುತ್ತಿದ್ದಾರೆ.

ಇದನ್ನೂ ಓದಿ: Swara Bhaskar: ಸಲ್ಮಾನ್​ ಖಾನ್​ ಬಳಿಕ ನಟಿ ಸ್ವರಾ ಭಾಸ್ಕರ್​ಗೆ ಕೊಲೆ ಬೆದರಿಕೆ; ಸಾವರ್ಕರ್​ ಬಗ್ಗೆ ಮಾತಾಡಿದ್ದಕ್ಕೆ ಆಕ್ರೋಶ

ಇತ್ತೀಚೆಗೆ ಸ್ವರಾ ಭಾಸ್ಕರ್​ ಅವರು ‘ಭಾರತ್ ಜೋಡೋ’ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ರಾಹುಲ್​ ಗಾಂಧಿ ಜೊತೆ ಮಧ್ಯ ಪ್ರದೇಶದಲ್ಲಿ ಅವರು ಹೆಜ್ಜೆ ಹಾಕಿ ಸುದ್ದಿ ಆಗಿದ್ದರು. ಸದ್ಯ ಒಂದೆರಡು ಸಿನಿಮಾಗಳು ಅವರ ಕೈಯಲ್ಲಿವೆ. ನಿರೀಕ್ಷಿತ ಮಟ್ಟದಲ್ಲಿ ಅವಕಾಶ ಬರುತ್ತಿಲ್ಲ ಎಂಬ ಬೇಸರ ಅವರದ್ದು.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:37 am, Tue, 6 December 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ