AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ಆಯ್ಕೆ ಬಗ್ಗೆ ಸುಳ್ಳು ಹೇಳಿ ನಗೆಪಾಟಲಿಗೆ ಒಳಗಾದ ‘ಸಾವರ್ಕರ್’ ಚಿತ್ರತಂಡ

ಬಾಲಿವುಡ್​ ನಟ ರಣದೀಪ್​ ಹೂಡಾ ಅವರು ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಆಸ್ಕರ್​ ಸ್ಪರ್ಧೆಯ ವಿಚಾರದಲ್ಲಿ ಈ ಚಿತ್ರದ ನಿರ್ಮಾಪಕರು ಮಾಡಿದ ಒಂದು ಪೋಸ್ಟ್​ನಿಂದ ಗೊಂದಲ ಏರ್ಪಟ್ಟಿತ್ತು. ನಿರ್ಮಾಪಕರು ನೀಡಿದ ಮಾಹಿತಿ ತಪ್ಪು ಎಂಬುದು ಈಗ ಬಯಲಾಗಿದೆ. ನೆಟ್ಟಿಗರು ಈ ಬಗ್ಗೆ ಟೀಕೆ ಮಾಡಿದ್ದಾರೆ.

ಆಸ್ಕರ್ ಆಯ್ಕೆ ಬಗ್ಗೆ ಸುಳ್ಳು ಹೇಳಿ ನಗೆಪಾಟಲಿಗೆ ಒಳಗಾದ ‘ಸಾವರ್ಕರ್’ ಚಿತ್ರತಂಡ
ಸ್ವಾತಂತ್ರ್ಯ ವೀರ್ ಸಾವರ್ಕರ್
ಮದನ್​ ಕುಮಾರ್​
|

Updated on: Sep 25, 2024 | 3:32 PM

Share

ಆಸ್ಕರ್​ ಸ್ಪರ್ಧೆಗೆ ಪ್ರತಿ ವರ್ಷ ಭಾರತದಿಂದ ಒಂದು ಸಿನಿಮಾವನ್ನು ಅಧಿಕೃತವಾಗಿ ಆಯ್ಕೆ ಮಾಡಿ ಕಳಿಸಲಾಗುತ್ತದೆ. ‘ಫಿಲ್ಮ್​ ಫೆಡರೇಷನ್​ ಆಫ್​ ಇಂಡಿಯಾ’ ಮೂಲಕ ಈ ಆಯ್ಕೆ ನಡೆಯುತ್ತದೆ. ಈ ವರ್ಷ ಕಿರಣ್ ರಾವ್​ ನಿರ್ದೇಶನ ಮಾಡಿದ ‘ಲಾಪತಾ ಲೇಡೀಸ್​’ ಸಿನಿಮಾ ಆಯ್ಕೆ ಆಗಿದೆ. ಆದರೆ ತಮ್ಮ ಸಿನಿಮಾ ಕೂಡ ಅಧಿಕೃತವಾಗಿ ಸಲ್ಲಿಕೆ ಆಗಿದೆ ಎಂದು ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಚಿತ್ರತಂಡದವರು ಸುಳ್ಳು ಹೇಳಿದ್ದಾರೆ. ಇದರಿಂದ ಚಿತ್ರತಂಡದವರು ನಗೆಪಾಟಲಿಗೆ ಒಳಗಾಗಿದ್ದಾರೆ.

ಸೋಮವಾರ (ಸೆ.23) ಆಸ್ಕರ್​ ಸ್ಪರ್ಧೆಗೆ ‘ಲಾಪತಾ ಲೇಡೀಸ್​’ ಸಿನಿಮಾ ಆಯ್ಕೆ ಆದ ಸುದ್ದಿ ಕೇಳಿಬಂದಾಗ ಎಲ್ಲರೂ ಖುಷಿಪಟ್ಟರು. ಅದರ ಬೆನ್ನಲ್ಲೇ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ತಂಡದವರು ಕೂಡ ಇನ್ನೊಂದು ಸುದ್ದಿ ಹರಿಬಿಟ್ಟರು. ‘2025ರ ಆಸ್ಪರ್​ ಪ್ರಶಸ್ತಿಯ ಸ್ಪರ್ಧೆಗೆ ನಮ್ಮ ಸಿನಿಮಾ ಅಧಿಕೃತವಾಗಿ ಸಲ್ಲಿಕೆ ಆಗಿದೆ. ಮೆಚ್ಚುಗೆ ನೀಡಿದ್ದಕ್ಕೆ ಫಿಲ್ಮ್​ ಫೆಡರೇಷನ್​ ಆಫ್ ಇಂಡಿಯಾಗೆ ಧನ್ಯವಾದಗಳು’ ಎಂದು ನಿರ್ಮಾಪಕರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

ನಿರ್ಮಾಪಕರು ಹಂಚಿಕೊಂಡ ಮಾಹಿತಿ ನಿಜ ಎಂದು ತಿಳಿದ ಅನೇಕರು ಅಭಿನಂದನೆಗಳನ್ನು ತಿಳಿಸಲು ಆರಂಭಿಸಿದರು. ಇದರಿಂದಾಗಿ ಅನೇಕರಿಗೆ ಗೊಂದಲ ಮೂಡಿತು. ಒಂದು ದೇಶದಿಂದ 2 ಸಿನಿಮಾವನ್ನು ಅಧಿಕೃತವಾಗಿ ಆಯ್ಕೆ ಮಾಡಲು ಹೇಗೆ ಸಾಧ್ಯ ಎಂದು ಹಲವರು ಪ್ರಶ್ನಿಸಲು ಶುರು ಮಾಡಿದರು. ಕಡೆಗೆ ತಿಳಿದ ವಿಚಾರ ಏನೆಂದರೆ, ‘ಫಿಲ್ಮ್​ ಫೆಡರೇಷನ್​ ಆಫ್ ಇಂಡಿಯಾ’ ವತಿಯಿಂದ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ಆಯ್ಕೆಯೇ ಆಗಿಲ್ಲ!

ಇದನ್ನೂ ಓದಿ: ‘ಹನುಮಾನ್’, ‘ಕಲ್ಕಿ 2898 ಎಡಿ’, ‘ಅನಿಮಲ್’ ಮುಂತಾದ ಸಿನಿಮಾಗಳನ್ನು ಹಿಂದಿಕ್ಕಿದ ‘ಲಾಪತಾ ಲೇಡೀಸ್​’

ಒಂದು ದೇಶದಿಂದ ಒಂದು ಸಿನಿಮಾವನ್ನು ಮಾತ್ರ ಅಧಿಕೃತವಾಗಿ ಆಸ್ಕರ್​ ಸ್ಪರ್ಧೆಗೆ ಕಳಿಸಬಹುದು. ಆದರೆ ಇನ್ನುಳಿದ ಸಿನಿಮಾ ತಂಡಗಳು ಪ್ರತ್ಯೇಕವಾಗಿ ಬೇಕಿದ್ದರೆ ಆಸ್ಕರ್​ಗೆ ಸ್ಪರ್ಧೆ ನೀಡಬಹುದು. ಆದರೆ ಆ ರೀತಿ ಮಾಡಲು ಬಹುಕೋಟಿ ರೂಪಾಯಿ ಖರ್ಚು ಆಗುತ್ತದೆ. ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ತಂಡ ಕೂಡ ಆ ದಾರಿ ಅನುಸರಿಸಬಹುದು. ಹಾಗಿದ್ದರೆ, ‘ಫಿಲ್ಮ್​ ಫೆಡರೇಷನ್​ ಆಫ್ ಇಂಡಿಯಾ’ದ ಹೆಸರನ್ನು ಎಳೆದು ತರುವ ಅಗತ್ಯ ಇಲ್ಲ.

ಒಟ್ಟಿನಲ್ಲಿ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಚಿತ್ರದ ನಿರ್ಮಾಪಕರ ಎಡವಟ್ಟಿನಿಂದ ಅನಗತ್ಯವಾಗಿ ಗೊಂದಲ ಉಂಟಾಯಿತು. ಅಸಲಿ ವಿಷಯ ತಿಳಿದ ನಂತರ ನೆಟ್ಟಿಗರು ಈ ತಂಡಕ್ಕೆ ಛೀಮಾರಿ ಹಾಕುತ್ತಿದ್ದಾರೆ. ಈ ಸಿನಿಮಾದಲ್ಲಿ ರಣದೀಪ್ ಹೂಡಾ ಅವರು ಸಾವರ್ಕರ್​ ಪಾತ್ರವನ್ನು ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ