AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ಆಯ್ಕೆ ಬಗ್ಗೆ ಸುಳ್ಳು ಹೇಳಿ ನಗೆಪಾಟಲಿಗೆ ಒಳಗಾದ ‘ಸಾವರ್ಕರ್’ ಚಿತ್ರತಂಡ

ಬಾಲಿವುಡ್​ ನಟ ರಣದೀಪ್​ ಹೂಡಾ ಅವರು ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಆಸ್ಕರ್​ ಸ್ಪರ್ಧೆಯ ವಿಚಾರದಲ್ಲಿ ಈ ಚಿತ್ರದ ನಿರ್ಮಾಪಕರು ಮಾಡಿದ ಒಂದು ಪೋಸ್ಟ್​ನಿಂದ ಗೊಂದಲ ಏರ್ಪಟ್ಟಿತ್ತು. ನಿರ್ಮಾಪಕರು ನೀಡಿದ ಮಾಹಿತಿ ತಪ್ಪು ಎಂಬುದು ಈಗ ಬಯಲಾಗಿದೆ. ನೆಟ್ಟಿಗರು ಈ ಬಗ್ಗೆ ಟೀಕೆ ಮಾಡಿದ್ದಾರೆ.

ಆಸ್ಕರ್ ಆಯ್ಕೆ ಬಗ್ಗೆ ಸುಳ್ಳು ಹೇಳಿ ನಗೆಪಾಟಲಿಗೆ ಒಳಗಾದ ‘ಸಾವರ್ಕರ್’ ಚಿತ್ರತಂಡ
ಸ್ವಾತಂತ್ರ್ಯ ವೀರ್ ಸಾವರ್ಕರ್
ಮದನ್​ ಕುಮಾರ್​
|

Updated on: Sep 25, 2024 | 3:32 PM

Share

ಆಸ್ಕರ್​ ಸ್ಪರ್ಧೆಗೆ ಪ್ರತಿ ವರ್ಷ ಭಾರತದಿಂದ ಒಂದು ಸಿನಿಮಾವನ್ನು ಅಧಿಕೃತವಾಗಿ ಆಯ್ಕೆ ಮಾಡಿ ಕಳಿಸಲಾಗುತ್ತದೆ. ‘ಫಿಲ್ಮ್​ ಫೆಡರೇಷನ್​ ಆಫ್​ ಇಂಡಿಯಾ’ ಮೂಲಕ ಈ ಆಯ್ಕೆ ನಡೆಯುತ್ತದೆ. ಈ ವರ್ಷ ಕಿರಣ್ ರಾವ್​ ನಿರ್ದೇಶನ ಮಾಡಿದ ‘ಲಾಪತಾ ಲೇಡೀಸ್​’ ಸಿನಿಮಾ ಆಯ್ಕೆ ಆಗಿದೆ. ಆದರೆ ತಮ್ಮ ಸಿನಿಮಾ ಕೂಡ ಅಧಿಕೃತವಾಗಿ ಸಲ್ಲಿಕೆ ಆಗಿದೆ ಎಂದು ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಚಿತ್ರತಂಡದವರು ಸುಳ್ಳು ಹೇಳಿದ್ದಾರೆ. ಇದರಿಂದ ಚಿತ್ರತಂಡದವರು ನಗೆಪಾಟಲಿಗೆ ಒಳಗಾಗಿದ್ದಾರೆ.

ಸೋಮವಾರ (ಸೆ.23) ಆಸ್ಕರ್​ ಸ್ಪರ್ಧೆಗೆ ‘ಲಾಪತಾ ಲೇಡೀಸ್​’ ಸಿನಿಮಾ ಆಯ್ಕೆ ಆದ ಸುದ್ದಿ ಕೇಳಿಬಂದಾಗ ಎಲ್ಲರೂ ಖುಷಿಪಟ್ಟರು. ಅದರ ಬೆನ್ನಲ್ಲೇ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ತಂಡದವರು ಕೂಡ ಇನ್ನೊಂದು ಸುದ್ದಿ ಹರಿಬಿಟ್ಟರು. ‘2025ರ ಆಸ್ಪರ್​ ಪ್ರಶಸ್ತಿಯ ಸ್ಪರ್ಧೆಗೆ ನಮ್ಮ ಸಿನಿಮಾ ಅಧಿಕೃತವಾಗಿ ಸಲ್ಲಿಕೆ ಆಗಿದೆ. ಮೆಚ್ಚುಗೆ ನೀಡಿದ್ದಕ್ಕೆ ಫಿಲ್ಮ್​ ಫೆಡರೇಷನ್​ ಆಫ್ ಇಂಡಿಯಾಗೆ ಧನ್ಯವಾದಗಳು’ ಎಂದು ನಿರ್ಮಾಪಕರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

ನಿರ್ಮಾಪಕರು ಹಂಚಿಕೊಂಡ ಮಾಹಿತಿ ನಿಜ ಎಂದು ತಿಳಿದ ಅನೇಕರು ಅಭಿನಂದನೆಗಳನ್ನು ತಿಳಿಸಲು ಆರಂಭಿಸಿದರು. ಇದರಿಂದಾಗಿ ಅನೇಕರಿಗೆ ಗೊಂದಲ ಮೂಡಿತು. ಒಂದು ದೇಶದಿಂದ 2 ಸಿನಿಮಾವನ್ನು ಅಧಿಕೃತವಾಗಿ ಆಯ್ಕೆ ಮಾಡಲು ಹೇಗೆ ಸಾಧ್ಯ ಎಂದು ಹಲವರು ಪ್ರಶ್ನಿಸಲು ಶುರು ಮಾಡಿದರು. ಕಡೆಗೆ ತಿಳಿದ ವಿಚಾರ ಏನೆಂದರೆ, ‘ಫಿಲ್ಮ್​ ಫೆಡರೇಷನ್​ ಆಫ್ ಇಂಡಿಯಾ’ ವತಿಯಿಂದ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ಆಯ್ಕೆಯೇ ಆಗಿಲ್ಲ!

ಇದನ್ನೂ ಓದಿ: ‘ಹನುಮಾನ್’, ‘ಕಲ್ಕಿ 2898 ಎಡಿ’, ‘ಅನಿಮಲ್’ ಮುಂತಾದ ಸಿನಿಮಾಗಳನ್ನು ಹಿಂದಿಕ್ಕಿದ ‘ಲಾಪತಾ ಲೇಡೀಸ್​’

ಒಂದು ದೇಶದಿಂದ ಒಂದು ಸಿನಿಮಾವನ್ನು ಮಾತ್ರ ಅಧಿಕೃತವಾಗಿ ಆಸ್ಕರ್​ ಸ್ಪರ್ಧೆಗೆ ಕಳಿಸಬಹುದು. ಆದರೆ ಇನ್ನುಳಿದ ಸಿನಿಮಾ ತಂಡಗಳು ಪ್ರತ್ಯೇಕವಾಗಿ ಬೇಕಿದ್ದರೆ ಆಸ್ಕರ್​ಗೆ ಸ್ಪರ್ಧೆ ನೀಡಬಹುದು. ಆದರೆ ಆ ರೀತಿ ಮಾಡಲು ಬಹುಕೋಟಿ ರೂಪಾಯಿ ಖರ್ಚು ಆಗುತ್ತದೆ. ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ತಂಡ ಕೂಡ ಆ ದಾರಿ ಅನುಸರಿಸಬಹುದು. ಹಾಗಿದ್ದರೆ, ‘ಫಿಲ್ಮ್​ ಫೆಡರೇಷನ್​ ಆಫ್ ಇಂಡಿಯಾ’ದ ಹೆಸರನ್ನು ಎಳೆದು ತರುವ ಅಗತ್ಯ ಇಲ್ಲ.

ಒಟ್ಟಿನಲ್ಲಿ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಚಿತ್ರದ ನಿರ್ಮಾಪಕರ ಎಡವಟ್ಟಿನಿಂದ ಅನಗತ್ಯವಾಗಿ ಗೊಂದಲ ಉಂಟಾಯಿತು. ಅಸಲಿ ವಿಷಯ ತಿಳಿದ ನಂತರ ನೆಟ್ಟಿಗರು ಈ ತಂಡಕ್ಕೆ ಛೀಮಾರಿ ಹಾಕುತ್ತಿದ್ದಾರೆ. ಈ ಸಿನಿಮಾದಲ್ಲಿ ರಣದೀಪ್ ಹೂಡಾ ಅವರು ಸಾವರ್ಕರ್​ ಪಾತ್ರವನ್ನು ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದಯವಿಟ್ಟು ನಮ್ಮನ್ನು ಬೇಗ ಇಲ್ಲಿಂದ ಕರೆದುಕೊಂಡು ಹೋಗಿ
ದಯವಿಟ್ಟು ನಮ್ಮನ್ನು ಬೇಗ ಇಲ್ಲಿಂದ ಕರೆದುಕೊಂಡು ಹೋಗಿ
ದೇವಸ್ಥಾನ ನಿರ್ಮಾಣಕ್ಕೆ ಗ್ಯಾರಂಟಿ ಹಣ ದೇಣಿಗೆ ನೀಡಿದ ನೂರಾರು ಮಹಿಳೆಯರು
ದೇವಸ್ಥಾನ ನಿರ್ಮಾಣಕ್ಕೆ ಗ್ಯಾರಂಟಿ ಹಣ ದೇಣಿಗೆ ನೀಡಿದ ನೂರಾರು ಮಹಿಳೆಯರು
ಆಕಾಶದಿಂದ ಬಿದ್ದ ಕ್ಷಿಪಣಿ, ಕತಾರ್‌ನಲ್ಲಿ ಬೆಂಕಿಯ ಜ್ವಾಲೆ
ಆಕಾಶದಿಂದ ಬಿದ್ದ ಕ್ಷಿಪಣಿ, ಕತಾರ್‌ನಲ್ಲಿ ಬೆಂಕಿಯ ಜ್ವಾಲೆ
11 ವರ್ಷಗಳ ಬಳಿಕ ಬೌಲಿಂಗ್ ಮಾಡಿದ ರಾಹುಲ್; ವಿಕೆಟ್ ಜಸ್ಟ್ ಮಿಸ್
11 ವರ್ಷಗಳ ಬಳಿಕ ಬೌಲಿಂಗ್ ಮಾಡಿದ ರಾಹುಲ್; ವಿಕೆಟ್ ಜಸ್ಟ್ ಮಿಸ್
ಇರಾನ್ ಮೇಲಿನ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್
ಇರಾನ್ ಮೇಲಿನ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಮಾ.3 ಸಂಪೂರ್ಣ ಚಂದ್ರಗ್ರಹಣ;ಕರ್ನಾಟಕದಲ್ಲಿ ಎಷ್ಟು ನಿಮಿಷ ಗೋಚರಿಸಲಿದೆ?
ಮಾ.3 ಸಂಪೂರ್ಣ ಚಂದ್ರಗ್ರಹಣ;ಕರ್ನಾಟಕದಲ್ಲಿ ಎಷ್ಟು ನಿಮಿಷ ಗೋಚರಿಸಲಿದೆ?
ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್
ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?