AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ಆಯ್ಕೆ ಬಗ್ಗೆ ಸುಳ್ಳು ಹೇಳಿ ನಗೆಪಾಟಲಿಗೆ ಒಳಗಾದ ‘ಸಾವರ್ಕರ್’ ಚಿತ್ರತಂಡ

ಬಾಲಿವುಡ್​ ನಟ ರಣದೀಪ್​ ಹೂಡಾ ಅವರು ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಆಸ್ಕರ್​ ಸ್ಪರ್ಧೆಯ ವಿಚಾರದಲ್ಲಿ ಈ ಚಿತ್ರದ ನಿರ್ಮಾಪಕರು ಮಾಡಿದ ಒಂದು ಪೋಸ್ಟ್​ನಿಂದ ಗೊಂದಲ ಏರ್ಪಟ್ಟಿತ್ತು. ನಿರ್ಮಾಪಕರು ನೀಡಿದ ಮಾಹಿತಿ ತಪ್ಪು ಎಂಬುದು ಈಗ ಬಯಲಾಗಿದೆ. ನೆಟ್ಟಿಗರು ಈ ಬಗ್ಗೆ ಟೀಕೆ ಮಾಡಿದ್ದಾರೆ.

ಆಸ್ಕರ್ ಆಯ್ಕೆ ಬಗ್ಗೆ ಸುಳ್ಳು ಹೇಳಿ ನಗೆಪಾಟಲಿಗೆ ಒಳಗಾದ ‘ಸಾವರ್ಕರ್’ ಚಿತ್ರತಂಡ
ಸ್ವಾತಂತ್ರ್ಯ ವೀರ್ ಸಾವರ್ಕರ್
ಮದನ್​ ಕುಮಾರ್​
|

Updated on: Sep 25, 2024 | 3:32 PM

Share

ಆಸ್ಕರ್​ ಸ್ಪರ್ಧೆಗೆ ಪ್ರತಿ ವರ್ಷ ಭಾರತದಿಂದ ಒಂದು ಸಿನಿಮಾವನ್ನು ಅಧಿಕೃತವಾಗಿ ಆಯ್ಕೆ ಮಾಡಿ ಕಳಿಸಲಾಗುತ್ತದೆ. ‘ಫಿಲ್ಮ್​ ಫೆಡರೇಷನ್​ ಆಫ್​ ಇಂಡಿಯಾ’ ಮೂಲಕ ಈ ಆಯ್ಕೆ ನಡೆಯುತ್ತದೆ. ಈ ವರ್ಷ ಕಿರಣ್ ರಾವ್​ ನಿರ್ದೇಶನ ಮಾಡಿದ ‘ಲಾಪತಾ ಲೇಡೀಸ್​’ ಸಿನಿಮಾ ಆಯ್ಕೆ ಆಗಿದೆ. ಆದರೆ ತಮ್ಮ ಸಿನಿಮಾ ಕೂಡ ಅಧಿಕೃತವಾಗಿ ಸಲ್ಲಿಕೆ ಆಗಿದೆ ಎಂದು ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಚಿತ್ರತಂಡದವರು ಸುಳ್ಳು ಹೇಳಿದ್ದಾರೆ. ಇದರಿಂದ ಚಿತ್ರತಂಡದವರು ನಗೆಪಾಟಲಿಗೆ ಒಳಗಾಗಿದ್ದಾರೆ.

ಸೋಮವಾರ (ಸೆ.23) ಆಸ್ಕರ್​ ಸ್ಪರ್ಧೆಗೆ ‘ಲಾಪತಾ ಲೇಡೀಸ್​’ ಸಿನಿಮಾ ಆಯ್ಕೆ ಆದ ಸುದ್ದಿ ಕೇಳಿಬಂದಾಗ ಎಲ್ಲರೂ ಖುಷಿಪಟ್ಟರು. ಅದರ ಬೆನ್ನಲ್ಲೇ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ತಂಡದವರು ಕೂಡ ಇನ್ನೊಂದು ಸುದ್ದಿ ಹರಿಬಿಟ್ಟರು. ‘2025ರ ಆಸ್ಪರ್​ ಪ್ರಶಸ್ತಿಯ ಸ್ಪರ್ಧೆಗೆ ನಮ್ಮ ಸಿನಿಮಾ ಅಧಿಕೃತವಾಗಿ ಸಲ್ಲಿಕೆ ಆಗಿದೆ. ಮೆಚ್ಚುಗೆ ನೀಡಿದ್ದಕ್ಕೆ ಫಿಲ್ಮ್​ ಫೆಡರೇಷನ್​ ಆಫ್ ಇಂಡಿಯಾಗೆ ಧನ್ಯವಾದಗಳು’ ಎಂದು ನಿರ್ಮಾಪಕರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

ನಿರ್ಮಾಪಕರು ಹಂಚಿಕೊಂಡ ಮಾಹಿತಿ ನಿಜ ಎಂದು ತಿಳಿದ ಅನೇಕರು ಅಭಿನಂದನೆಗಳನ್ನು ತಿಳಿಸಲು ಆರಂಭಿಸಿದರು. ಇದರಿಂದಾಗಿ ಅನೇಕರಿಗೆ ಗೊಂದಲ ಮೂಡಿತು. ಒಂದು ದೇಶದಿಂದ 2 ಸಿನಿಮಾವನ್ನು ಅಧಿಕೃತವಾಗಿ ಆಯ್ಕೆ ಮಾಡಲು ಹೇಗೆ ಸಾಧ್ಯ ಎಂದು ಹಲವರು ಪ್ರಶ್ನಿಸಲು ಶುರು ಮಾಡಿದರು. ಕಡೆಗೆ ತಿಳಿದ ವಿಚಾರ ಏನೆಂದರೆ, ‘ಫಿಲ್ಮ್​ ಫೆಡರೇಷನ್​ ಆಫ್ ಇಂಡಿಯಾ’ ವತಿಯಿಂದ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ಆಯ್ಕೆಯೇ ಆಗಿಲ್ಲ!

ಇದನ್ನೂ ಓದಿ: ‘ಹನುಮಾನ್’, ‘ಕಲ್ಕಿ 2898 ಎಡಿ’, ‘ಅನಿಮಲ್’ ಮುಂತಾದ ಸಿನಿಮಾಗಳನ್ನು ಹಿಂದಿಕ್ಕಿದ ‘ಲಾಪತಾ ಲೇಡೀಸ್​’

ಒಂದು ದೇಶದಿಂದ ಒಂದು ಸಿನಿಮಾವನ್ನು ಮಾತ್ರ ಅಧಿಕೃತವಾಗಿ ಆಸ್ಕರ್​ ಸ್ಪರ್ಧೆಗೆ ಕಳಿಸಬಹುದು. ಆದರೆ ಇನ್ನುಳಿದ ಸಿನಿಮಾ ತಂಡಗಳು ಪ್ರತ್ಯೇಕವಾಗಿ ಬೇಕಿದ್ದರೆ ಆಸ್ಕರ್​ಗೆ ಸ್ಪರ್ಧೆ ನೀಡಬಹುದು. ಆದರೆ ಆ ರೀತಿ ಮಾಡಲು ಬಹುಕೋಟಿ ರೂಪಾಯಿ ಖರ್ಚು ಆಗುತ್ತದೆ. ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ತಂಡ ಕೂಡ ಆ ದಾರಿ ಅನುಸರಿಸಬಹುದು. ಹಾಗಿದ್ದರೆ, ‘ಫಿಲ್ಮ್​ ಫೆಡರೇಷನ್​ ಆಫ್ ಇಂಡಿಯಾ’ದ ಹೆಸರನ್ನು ಎಳೆದು ತರುವ ಅಗತ್ಯ ಇಲ್ಲ.

ಒಟ್ಟಿನಲ್ಲಿ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಚಿತ್ರದ ನಿರ್ಮಾಪಕರ ಎಡವಟ್ಟಿನಿಂದ ಅನಗತ್ಯವಾಗಿ ಗೊಂದಲ ಉಂಟಾಯಿತು. ಅಸಲಿ ವಿಷಯ ತಿಳಿದ ನಂತರ ನೆಟ್ಟಿಗರು ಈ ತಂಡಕ್ಕೆ ಛೀಮಾರಿ ಹಾಕುತ್ತಿದ್ದಾರೆ. ಈ ಸಿನಿಮಾದಲ್ಲಿ ರಣದೀಪ್ ಹೂಡಾ ಅವರು ಸಾವರ್ಕರ್​ ಪಾತ್ರವನ್ನು ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ